Homeಮುಖಪುಟಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣೆಯ ನಡುವೆ ಬಿಟ್ ಕಾಯಿನ್ ಸದ್ದು ಮಾಡಿದೆ. ಪ್ರತಿಪಕ್ಷಗಳ ನಾಯಕರಾದ ಕಾಂಗ್ರೆಸ್‌ನ ನಾನಾ ಪಟೋಲೆ ಮತ್ತು ಬಿಜೆಪಿಯ ಸುಪ್ರಿಯಾ ಸುಳೆ ಅವರು ಚುನಾವಣೆಗೆ ಹಣ ನೀಡಲು ಅಕ್ರಮವಾಗಿ ಬಿಟ್‌ಕಾಯಿನ್‌ಗಳನ್ನು ಬಳಸಿರುವುದಾಗಿ ಬಿಜೆಪಿ ಆರೋಪಿಸಿದೆ.

ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನೂ ಗುರಿಯಾಗಿಸಿದ್ದಾರೆ. ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸುವಂತೆ ಸವಾಲು ಹಾಕಿದ್ದಾರೆ.

ಚುನಾವಣೆಯ ಹಿನ್ನೆಲೆ ಬಿಜೆಪಿ ತಮ್ಮ ವಿರುದ್ದ ಷಡ್ಯಂತ್ರ ಮಾಡುತ್ತಿದೆ ಎಂಬ ಪ್ರತಿಪಕ್ಷ ನಾಯಕರ ಆರೋಪಗಳನ್ನು ಅಲ್ಲಗಳೆದಿರುವ ಸಂಬಿತ್ ಪಾತ್ರ, “ಶಂಕಿತ ಕ್ರಿಪ್ಟೋ ಕರೆನ್ಸಿ ವಂಚನೆ ವರ್ಷಗಳ ಹಿಂದೆಯೇ ನಡೆದಿದೆ. ಪ್ರತಿಪಕ್ಷಗಳ ಒಕ್ಕೂಟ ಈ ಹಿಂದಿನ ಚುನಾವಣೆಯಲ್ಲೂ ಅದರ ಹಣ ಬಳಸಿದೆ” ಎಂದಿದ್ದಾರೆ. ಈ ಹಗರಣದಲ್ಲಿ ಇದುವರೆಗೆ ಒಳಗೊಂಡಿರುವ ಹಣ 235 ಕೋಟಿ ರೂ. ಎಂದು ಸಂಬಿತ್ ಪಾತ್ರ ಹೇಳಿದ್ದಾರೆ.

ಸುಪ್ರಿಯಾ ಸುಳೆ ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿದ್ದು, ಅವರ ಧ್ವನಿಯಲ್ಲಿರುವ ಆಡಿಯೋ ನಕಲಿ ಎಂದಿದ್ದಾರೆ. ಚುನಾವಣಾ ಆಯೋಗ ಮತ್ತು ಮಹಾರಾಷ್ಟ್ರ ಪೊಲೀಸರಿಗೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

“ಅಮಾಯಕ ಮತದಾರರನ್ನು ಕುತಂತ್ರ ಮೂಲಕ ಸೆಳೆಯಲು ಸುಳ್ಳು ಮಾಹಿತಿಯನ್ನು ಹರಡುತ್ತಿರುವುದು ಗೊತ್ತಿರುವ ವಿಷಯ” ಎಂದು ಸುಳೆ ಹೇಳಿದ್ದಾರೆ.

ಕ್ರಿಪ್ಟೋ ಕರೆನ್ಸಿ ಟ್ರೇಡ್‌ನಲ್ಲಿ ಭಾಗಿಯಾಗಿರುವ ಗೌರವ್ ಮೆಹ್ತಾ ಎಂಬ ವ್ಯಕ್ತಿ ಪ್ರತಿಪಕ್ಷ ನಾಯಕರಿಗೆ ಸಹಾಯ ಮಾಡಲು ಬಿಟ್‌ಕಾಯಿನ್‌ಗಳನ್ನು ಎನ್‌ಕ್ಯಾಶ್ ಮಾಡಿದ ನಂತರ ತನ್ನ ಜೀವಕ್ಕೆ ಅಪಾಯದ ಭಯದಿಂದ ಸಾರ್ವಜನಿಕವಾಗಿ ಹೋಗಲು ನಿರ್ಧರಿಸಿದ್ದಾರೆ. ಈ ಮೂಲಕ ಈ ವಿಷಯ ಬೆಳಕಿಗೆ ಬಂದಿದೆ ಎಂದು ಸಂಬಿತ್ ಪಾತ್ರಾ ಆರೋಪಿಸಿದ್ದಾರೆ.

ಈಗ ನಡೆದಿರುವ ಹಗರಣದ ಮೂಲ 2018ರಲ್ಲಿ ನಡೆದ ಕ್ರಿಪ್ಟೋ ಕರೆನ್ಸಿ ವಂಚನೆಗೆ ಸಂಬಂಧಿಸಿದೆ. ಈ ಹಿಂದೆ ಮಾಜಿ ಐಪಿಎಸ್‌ ಅಧಿಕಾರಿ ರವೀಂದ್ರನಾಥ್ ಪಾಟೀಲ್ ತನಿಖೆಗೆ ಸಹಾಯ ಮಾಡಲು ಕ್ರಿಪ್ಟೋ ತಜ್ಞರಾಗಿ ಹೋಗಿದ್ದರು. ಬಳಿಕ ಅವರು ಕ್ರಿಪ್ಟೋ ಕರೆನ್ಸಿ ವ್ಯಾಲೆಟ್ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಬಂಧಿತರಾದರು ಎಂದು ಹೇಳಿದ್ದಾರೆ.

ಪಾಟೀಲ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ ಪಾತ್ರಾ, ವ್ಯಾಲೆಟ್‌ ನಾಪತ್ತೆ ಪ್ರಕರಣದಲ್ಲಿ ಇತರ ಇಬ್ಬರು ಐಪಿಎಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಮೆಹ್ತಾ ಅವರು ಪಾಟೀಲ್ ವಿರುದ್ಧ ಸಾಕ್ಷ್ಯವನ್ನು ನೀಡಿದ್ದಾರೆ. ಸುಳೆ ಮತ್ತು ಪಟೋಲೆ ಅವರ ಧ್ವನಿ ದಾಖಲೆಗಳನ್ನು ಹಂಚಿಕೊಂಡಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕ ನಾನಾ ಪಟೋಲೆ ತನ್ನ ವಿರುದ್ದ ಆರೋಪಗಳನ್ನು ಅಲ್ಲಗಳೆದಿದ್ದು, “ರಾಜ್ಯ ಚುನಾವಣೆಯ ಮೇಲೆ ಪ್ರಭಾವ ಬೀರಲು ಬಿಟ್‌ಕಾಯಿನ್ ದುರುಪಯೋಗದ ಈ ಆರೋಪ ಹೊರಿಸಲಾಗಿದೆ. ನನ್ನ ವಿರುದ್ದದ ಸುಳ್ಳಾರೋಪದ ವಿರುದ್ದ ಕಾನೂನು ಹೋರಾಟ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಂಡಾರಾ ಜಿಲ್ಲೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಲೆ, “ತಾನೊಬ್ಬ ರೈತ, ಬಿಟ್‌ಕಾಯಿನ್‌ಗೆ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ರಾಜ್ಯ ಚುನಾವಣೆಗಾಗಿ ಪ್ರತಿಪಕ್ಷ ನಾಯಕರು ಬಿಟ್‌ಕಾಯಿನ್ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮಂಗಳವಾರ ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಅವರದ್ದು ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿದೆ.

ಇಬ್ಬರು ಪ್ರತಿಪಕ್ಷ ನಾಯಕರಿಗೆ ಸೇರಿದ್ದು ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿರುವ ಬಿಜೆಪಿ ನಾಯಕ ಸುಧಾಂಶು ತ್ರಿವೇದಿ, “ಎಂವಿಎ ತನ್ನ ಸೋಲನ್ನು ಗೋಡೆಯ ಮೇಲಿನ ಬರಹದಂತೆ ನೋಡುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ | FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...