Homeಮುಖಪುಟಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣೆಯ ನಡುವೆ ಬಿಟ್ ಕಾಯಿನ್ ಸದ್ದು ಮಾಡಿದೆ. ಪ್ರತಿಪಕ್ಷಗಳ ನಾಯಕರಾದ ಕಾಂಗ್ರೆಸ್‌ನ ನಾನಾ ಪಟೋಲೆ ಮತ್ತು ಬಿಜೆಪಿಯ ಸುಪ್ರಿಯಾ ಸುಳೆ ಅವರು ಚುನಾವಣೆಗೆ ಹಣ ನೀಡಲು ಅಕ್ರಮವಾಗಿ ಬಿಟ್‌ಕಾಯಿನ್‌ಗಳನ್ನು ಬಳಸಿರುವುದಾಗಿ ಬಿಜೆಪಿ ಆರೋಪಿಸಿದೆ.

ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನೂ ಗುರಿಯಾಗಿಸಿದ್ದಾರೆ. ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸುವಂತೆ ಸವಾಲು ಹಾಕಿದ್ದಾರೆ.

ಚುನಾವಣೆಯ ಹಿನ್ನೆಲೆ ಬಿಜೆಪಿ ತಮ್ಮ ವಿರುದ್ದ ಷಡ್ಯಂತ್ರ ಮಾಡುತ್ತಿದೆ ಎಂಬ ಪ್ರತಿಪಕ್ಷ ನಾಯಕರ ಆರೋಪಗಳನ್ನು ಅಲ್ಲಗಳೆದಿರುವ ಸಂಬಿತ್ ಪಾತ್ರ, “ಶಂಕಿತ ಕ್ರಿಪ್ಟೋ ಕರೆನ್ಸಿ ವಂಚನೆ ವರ್ಷಗಳ ಹಿಂದೆಯೇ ನಡೆದಿದೆ. ಪ್ರತಿಪಕ್ಷಗಳ ಒಕ್ಕೂಟ ಈ ಹಿಂದಿನ ಚುನಾವಣೆಯಲ್ಲೂ ಅದರ ಹಣ ಬಳಸಿದೆ” ಎಂದಿದ್ದಾರೆ. ಈ ಹಗರಣದಲ್ಲಿ ಇದುವರೆಗೆ ಒಳಗೊಂಡಿರುವ ಹಣ 235 ಕೋಟಿ ರೂ. ಎಂದು ಸಂಬಿತ್ ಪಾತ್ರ ಹೇಳಿದ್ದಾರೆ.

ಸುಪ್ರಿಯಾ ಸುಳೆ ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿದ್ದು, ಅವರ ಧ್ವನಿಯಲ್ಲಿರುವ ಆಡಿಯೋ ನಕಲಿ ಎಂದಿದ್ದಾರೆ. ಚುನಾವಣಾ ಆಯೋಗ ಮತ್ತು ಮಹಾರಾಷ್ಟ್ರ ಪೊಲೀಸರಿಗೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

“ಅಮಾಯಕ ಮತದಾರರನ್ನು ಕುತಂತ್ರ ಮೂಲಕ ಸೆಳೆಯಲು ಸುಳ್ಳು ಮಾಹಿತಿಯನ್ನು ಹರಡುತ್ತಿರುವುದು ಗೊತ್ತಿರುವ ವಿಷಯ” ಎಂದು ಸುಳೆ ಹೇಳಿದ್ದಾರೆ.

ಕ್ರಿಪ್ಟೋ ಕರೆನ್ಸಿ ಟ್ರೇಡ್‌ನಲ್ಲಿ ಭಾಗಿಯಾಗಿರುವ ಗೌರವ್ ಮೆಹ್ತಾ ಎಂಬ ವ್ಯಕ್ತಿ ಪ್ರತಿಪಕ್ಷ ನಾಯಕರಿಗೆ ಸಹಾಯ ಮಾಡಲು ಬಿಟ್‌ಕಾಯಿನ್‌ಗಳನ್ನು ಎನ್‌ಕ್ಯಾಶ್ ಮಾಡಿದ ನಂತರ ತನ್ನ ಜೀವಕ್ಕೆ ಅಪಾಯದ ಭಯದಿಂದ ಸಾರ್ವಜನಿಕವಾಗಿ ಹೋಗಲು ನಿರ್ಧರಿಸಿದ್ದಾರೆ. ಈ ಮೂಲಕ ಈ ವಿಷಯ ಬೆಳಕಿಗೆ ಬಂದಿದೆ ಎಂದು ಸಂಬಿತ್ ಪಾತ್ರಾ ಆರೋಪಿಸಿದ್ದಾರೆ.

ಈಗ ನಡೆದಿರುವ ಹಗರಣದ ಮೂಲ 2018ರಲ್ಲಿ ನಡೆದ ಕ್ರಿಪ್ಟೋ ಕರೆನ್ಸಿ ವಂಚನೆಗೆ ಸಂಬಂಧಿಸಿದೆ. ಈ ಹಿಂದೆ ಮಾಜಿ ಐಪಿಎಸ್‌ ಅಧಿಕಾರಿ ರವೀಂದ್ರನಾಥ್ ಪಾಟೀಲ್ ತನಿಖೆಗೆ ಸಹಾಯ ಮಾಡಲು ಕ್ರಿಪ್ಟೋ ತಜ್ಞರಾಗಿ ಹೋಗಿದ್ದರು. ಬಳಿಕ ಅವರು ಕ್ರಿಪ್ಟೋ ಕರೆನ್ಸಿ ವ್ಯಾಲೆಟ್ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಬಂಧಿತರಾದರು ಎಂದು ಹೇಳಿದ್ದಾರೆ.

ಪಾಟೀಲ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ ಪಾತ್ರಾ, ವ್ಯಾಲೆಟ್‌ ನಾಪತ್ತೆ ಪ್ರಕರಣದಲ್ಲಿ ಇತರ ಇಬ್ಬರು ಐಪಿಎಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಮೆಹ್ತಾ ಅವರು ಪಾಟೀಲ್ ವಿರುದ್ಧ ಸಾಕ್ಷ್ಯವನ್ನು ನೀಡಿದ್ದಾರೆ. ಸುಳೆ ಮತ್ತು ಪಟೋಲೆ ಅವರ ಧ್ವನಿ ದಾಖಲೆಗಳನ್ನು ಹಂಚಿಕೊಂಡಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕ ನಾನಾ ಪಟೋಲೆ ತನ್ನ ವಿರುದ್ದ ಆರೋಪಗಳನ್ನು ಅಲ್ಲಗಳೆದಿದ್ದು, “ರಾಜ್ಯ ಚುನಾವಣೆಯ ಮೇಲೆ ಪ್ರಭಾವ ಬೀರಲು ಬಿಟ್‌ಕಾಯಿನ್ ದುರುಪಯೋಗದ ಈ ಆರೋಪ ಹೊರಿಸಲಾಗಿದೆ. ನನ್ನ ವಿರುದ್ದದ ಸುಳ್ಳಾರೋಪದ ವಿರುದ್ದ ಕಾನೂನು ಹೋರಾಟ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಂಡಾರಾ ಜಿಲ್ಲೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಲೆ, “ತಾನೊಬ್ಬ ರೈತ, ಬಿಟ್‌ಕಾಯಿನ್‌ಗೆ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ರಾಜ್ಯ ಚುನಾವಣೆಗಾಗಿ ಪ್ರತಿಪಕ್ಷ ನಾಯಕರು ಬಿಟ್‌ಕಾಯಿನ್ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮಂಗಳವಾರ ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಅವರದ್ದು ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿದೆ.

ಇಬ್ಬರು ಪ್ರತಿಪಕ್ಷ ನಾಯಕರಿಗೆ ಸೇರಿದ್ದು ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿರುವ ಬಿಜೆಪಿ ನಾಯಕ ಸುಧಾಂಶು ತ್ರಿವೇದಿ, “ಎಂವಿಎ ತನ್ನ ಸೋಲನ್ನು ಗೋಡೆಯ ಮೇಲಿನ ಬರಹದಂತೆ ನೋಡುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ | FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...