Homeಮುಖಪುಟಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣೆಯ ನಡುವೆ ಬಿಟ್ ಕಾಯಿನ್ ಸದ್ದು ಮಾಡಿದೆ. ಪ್ರತಿಪಕ್ಷಗಳ ನಾಯಕರಾದ ಕಾಂಗ್ರೆಸ್‌ನ ನಾನಾ ಪಟೋಲೆ ಮತ್ತು ಬಿಜೆಪಿಯ ಸುಪ್ರಿಯಾ ಸುಳೆ ಅವರು ಚುನಾವಣೆಗೆ ಹಣ ನೀಡಲು ಅಕ್ರಮವಾಗಿ ಬಿಟ್‌ಕಾಯಿನ್‌ಗಳನ್ನು ಬಳಸಿರುವುದಾಗಿ ಬಿಜೆಪಿ ಆರೋಪಿಸಿದೆ.

ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನೂ ಗುರಿಯಾಗಿಸಿದ್ದಾರೆ. ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸುವಂತೆ ಸವಾಲು ಹಾಕಿದ್ದಾರೆ.

ಚುನಾವಣೆಯ ಹಿನ್ನೆಲೆ ಬಿಜೆಪಿ ತಮ್ಮ ವಿರುದ್ದ ಷಡ್ಯಂತ್ರ ಮಾಡುತ್ತಿದೆ ಎಂಬ ಪ್ರತಿಪಕ್ಷ ನಾಯಕರ ಆರೋಪಗಳನ್ನು ಅಲ್ಲಗಳೆದಿರುವ ಸಂಬಿತ್ ಪಾತ್ರ, “ಶಂಕಿತ ಕ್ರಿಪ್ಟೋ ಕರೆನ್ಸಿ ವಂಚನೆ ವರ್ಷಗಳ ಹಿಂದೆಯೇ ನಡೆದಿದೆ. ಪ್ರತಿಪಕ್ಷಗಳ ಒಕ್ಕೂಟ ಈ ಹಿಂದಿನ ಚುನಾವಣೆಯಲ್ಲೂ ಅದರ ಹಣ ಬಳಸಿದೆ” ಎಂದಿದ್ದಾರೆ. ಈ ಹಗರಣದಲ್ಲಿ ಇದುವರೆಗೆ ಒಳಗೊಂಡಿರುವ ಹಣ 235 ಕೋಟಿ ರೂ. ಎಂದು ಸಂಬಿತ್ ಪಾತ್ರ ಹೇಳಿದ್ದಾರೆ.

ಸುಪ್ರಿಯಾ ಸುಳೆ ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿದ್ದು, ಅವರ ಧ್ವನಿಯಲ್ಲಿರುವ ಆಡಿಯೋ ನಕಲಿ ಎಂದಿದ್ದಾರೆ. ಚುನಾವಣಾ ಆಯೋಗ ಮತ್ತು ಮಹಾರಾಷ್ಟ್ರ ಪೊಲೀಸರಿಗೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

“ಅಮಾಯಕ ಮತದಾರರನ್ನು ಕುತಂತ್ರ ಮೂಲಕ ಸೆಳೆಯಲು ಸುಳ್ಳು ಮಾಹಿತಿಯನ್ನು ಹರಡುತ್ತಿರುವುದು ಗೊತ್ತಿರುವ ವಿಷಯ” ಎಂದು ಸುಳೆ ಹೇಳಿದ್ದಾರೆ.

ಕ್ರಿಪ್ಟೋ ಕರೆನ್ಸಿ ಟ್ರೇಡ್‌ನಲ್ಲಿ ಭಾಗಿಯಾಗಿರುವ ಗೌರವ್ ಮೆಹ್ತಾ ಎಂಬ ವ್ಯಕ್ತಿ ಪ್ರತಿಪಕ್ಷ ನಾಯಕರಿಗೆ ಸಹಾಯ ಮಾಡಲು ಬಿಟ್‌ಕಾಯಿನ್‌ಗಳನ್ನು ಎನ್‌ಕ್ಯಾಶ್ ಮಾಡಿದ ನಂತರ ತನ್ನ ಜೀವಕ್ಕೆ ಅಪಾಯದ ಭಯದಿಂದ ಸಾರ್ವಜನಿಕವಾಗಿ ಹೋಗಲು ನಿರ್ಧರಿಸಿದ್ದಾರೆ. ಈ ಮೂಲಕ ಈ ವಿಷಯ ಬೆಳಕಿಗೆ ಬಂದಿದೆ ಎಂದು ಸಂಬಿತ್ ಪಾತ್ರಾ ಆರೋಪಿಸಿದ್ದಾರೆ.

ಈಗ ನಡೆದಿರುವ ಹಗರಣದ ಮೂಲ 2018ರಲ್ಲಿ ನಡೆದ ಕ್ರಿಪ್ಟೋ ಕರೆನ್ಸಿ ವಂಚನೆಗೆ ಸಂಬಂಧಿಸಿದೆ. ಈ ಹಿಂದೆ ಮಾಜಿ ಐಪಿಎಸ್‌ ಅಧಿಕಾರಿ ರವೀಂದ್ರನಾಥ್ ಪಾಟೀಲ್ ತನಿಖೆಗೆ ಸಹಾಯ ಮಾಡಲು ಕ್ರಿಪ್ಟೋ ತಜ್ಞರಾಗಿ ಹೋಗಿದ್ದರು. ಬಳಿಕ ಅವರು ಕ್ರಿಪ್ಟೋ ಕರೆನ್ಸಿ ವ್ಯಾಲೆಟ್ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಬಂಧಿತರಾದರು ಎಂದು ಹೇಳಿದ್ದಾರೆ.

ಪಾಟೀಲ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ ಪಾತ್ರಾ, ವ್ಯಾಲೆಟ್‌ ನಾಪತ್ತೆ ಪ್ರಕರಣದಲ್ಲಿ ಇತರ ಇಬ್ಬರು ಐಪಿಎಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಮೆಹ್ತಾ ಅವರು ಪಾಟೀಲ್ ವಿರುದ್ಧ ಸಾಕ್ಷ್ಯವನ್ನು ನೀಡಿದ್ದಾರೆ. ಸುಳೆ ಮತ್ತು ಪಟೋಲೆ ಅವರ ಧ್ವನಿ ದಾಖಲೆಗಳನ್ನು ಹಂಚಿಕೊಂಡಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕ ನಾನಾ ಪಟೋಲೆ ತನ್ನ ವಿರುದ್ದ ಆರೋಪಗಳನ್ನು ಅಲ್ಲಗಳೆದಿದ್ದು, “ರಾಜ್ಯ ಚುನಾವಣೆಯ ಮೇಲೆ ಪ್ರಭಾವ ಬೀರಲು ಬಿಟ್‌ಕಾಯಿನ್ ದುರುಪಯೋಗದ ಈ ಆರೋಪ ಹೊರಿಸಲಾಗಿದೆ. ನನ್ನ ವಿರುದ್ದದ ಸುಳ್ಳಾರೋಪದ ವಿರುದ್ದ ಕಾನೂನು ಹೋರಾಟ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಂಡಾರಾ ಜಿಲ್ಲೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಲೆ, “ತಾನೊಬ್ಬ ರೈತ, ಬಿಟ್‌ಕಾಯಿನ್‌ಗೆ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ರಾಜ್ಯ ಚುನಾವಣೆಗಾಗಿ ಪ್ರತಿಪಕ್ಷ ನಾಯಕರು ಬಿಟ್‌ಕಾಯಿನ್ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮಂಗಳವಾರ ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಅವರದ್ದು ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿದೆ.

ಇಬ್ಬರು ಪ್ರತಿಪಕ್ಷ ನಾಯಕರಿಗೆ ಸೇರಿದ್ದು ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿರುವ ಬಿಜೆಪಿ ನಾಯಕ ಸುಧಾಂಶು ತ್ರಿವೇದಿ, “ಎಂವಿಎ ತನ್ನ ಸೋಲನ್ನು ಗೋಡೆಯ ಮೇಲಿನ ಬರಹದಂತೆ ನೋಡುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ | FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...