Homeಕರ್ನಾಟಕಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

- Advertisement -
- Advertisement -

ರಾಜ್ಯ ಪೊಲೀಸ್ ಇಲಾಖೆಯು ಬಿಟ್ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದೆ. ನಾಲ್ಕು ಪುಟಗಳ ಪತ್ರಿಕಾ ಹೇಳಿಕೆಯನ್ನು ನೀಡಿರುವ ಪೊಲೀಸ್ ಇಲಾಖೆ, ಬಿಟ್‌ ಕಾಯಿನ್‌ ವರ್ಗಾವಣೆ ಆರೋಪವನ್ನು ಅಲ್ಲಗಳೆದಿದೆ. ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯು ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ ಮಾಡಿದ್ದಾನೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ವರದಿಗಳು ಅಪೂರ್ಣವಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಪ್ರತಿಕ್ರಿಯೆ ಹೀಗಿದೆ:

ಬಿಟ್‌ಕಾಯಿನ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ತಿರುಚಿದ ವರದಿಗಳು ಪ್ರಕಟವಾಗುತ್ತಿವೆ. ಸಿಸಿಬಿ ತನಿಖೆಯು ನ್ಯಾಯಯುತ ಹಾಗೂ ವೃತ್ತಿಪರತೆಯಿಂದ ಕೂಡಿದೆ. ಅಪೂರ್ಣ ಅಥವಾ ತಿರುಚಿದ ಸಂಗತಿಗಳಿಂದ ತಪ್ಪುದಾರಿಗೆಳೆಯುವ ವರದಿಗಳನ್ನು ತೇಲಿಬಿಡಲಾಗುತ್ತಿದೆ. ಇಂತಹ ಎಲ್ಲಾ ವರದಿಗಳನ್ನು ನಿರಾಕರಿಸಬೇಕು.

ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುವನ್ನು ಖರೀದಿಸಿದ ಬಗ್ಗೆ ಬಂದ ಖಚಿತ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ಒಬ್ಬ ಆರೋಪಿಯನ್ನು 04.11.2020ರಂದು ಬಂಧಿಸಿ 500 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೆ.ಜಿ.ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ತನಿಖೆಯ ಸಮಯದಲ್ಲಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಸೇರಿದಂತೆ ಇತರ ಹತ್ತು ಆರೋಪಿಗಳನ್ನು ಬಂಧಿಸಲಾಯಿತು.

ಆರೋಪಿ ಶ್ರೀಕೃಷ್ಣನ ವಿಚಾರಣೆಯ ಸಮಯದಲ್ಲಿ, ಆತ ಅನೇಕ ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದರಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡನು. ಇದರ ಆಧಾರದಲ್ಲಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ 153/2020ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಹ್ಯಾಕರ್ ಶ್ರೀಕೃಷ್ಣನ ಖಾತೆಯಿಂದ ಯಾವುದೇ ಬಿಟ್‌ಕಾಯಿನ್‌ಗಳು ವರ್ಗಾವಣೆಯಾಗಿಲ್ಲ ಅಥವಾ ಯಾವುದೇ ಬಿಟ್‌ಕಾಯಿನ್ ಕಳೆದುಹೋಗಿಲ್ಲ.

ಇದನ್ನೂ ಓದಿರಿ: ಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

ಕ್ರಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ, ಬಿಟ್‌ಕಾಯಿನ್ ಖಾತೆಯನ್ನು ತೆರೆಯುವುದು ಅಗತ್ಯವೆಂದು ಭಾವಿಸಲಾಯಿತು. ಅದರಂತೆ ಬಿಟ್ ಕಾಯಿನ್ ಖಾತೆಯನ್ನು ತೆರೆಯಲು ಸರ್ಕಾರವು ಆದೇಶಿಸಿದೆ. ಬಿಟ್‌ಕಾಯಿನ್‌ಗಳನ್ನು ಗುರುತಿಸುವ ಮತ್ತು ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಆರೋಪಿ ಶ್ರೀಕಿ ಬಿಟಿಸಿ ವ್ಯಾಲೆಟ್ ತೋರಿಸಿದನು. ಅದರಲ್ಲಿ 31.8 ಬಿಟಿಸಿ ಇತ್ತು. ಸೈಬರ್ ತಜ್ಞರ ಸಮ್ಮುಖದಲ್ಲಿ ವ್ಯಾಲೆಟ್ ಪಾಸ್‌ವರ್ಡ್ ಬದಲಾಯಿಸಲಾಯಿತು. ಸಂಪೂರ್ಣ ಕಾರ್ಯವಿಧಾನವನ್ನು ಮಹಜರ್ ಮಾಡಲಾಗಿದೆ. ಎಲ್ಲವನ್ನೂ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ತರುವಾಯ, ಈ ಬಿಟ್ ಕಾಯಿನ್‌ಗಳನ್ನು ಪೊಲೀಸ್ ವ್ಯಾಲೆಟ್ ಖಾತೆಗೆ ವರ್ಗಾಯಿಸಲು ಪಾಸ್‌ವರ್ಡ್ ಬಳಸಲು ನ್ಯಾಯಾಲಯ ಅನುಮತಿ ನೀಡಿತು. ಆರೋಪಿ ಶ್ರೀಕೃಷ್ಣನ ವಾಲೆಟ್ ತೆರೆದಾಗ ಅದರಲ್ಲಿ 186.811 ಬಿಟ್‌ಕಾಯಿನ್‌ಗಳು ಕಂಡುಬಂದಿವೆ. ಆರೋಪಿಯು ಇದು ತನ್ನ ವೈಯಕ್ತಿಕ ವಾಲೆಟ್‌ ಎಂದು ಹೇಳಿಕೊಂಡಿದ್ದಾನೆ. ಆರೋಪಿಯ ಬಳಿ ಖಾಸಗಿ ಕೀ ಇರಲಿಲ್ಲ ಎಂದು ಸೈಬರ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ, ಪೊಲೀಸ್ ವ್ಯಾಲೆಟ್‌ಗೆ ಯಾವುದೇ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿಲ್ಲ. ಈ ಎಲ್ಲ ಸಂಬಂಧಿತ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಚಾರ್ಜ್‌‌ಶೀಟ್‌ ಸಲ್ಲಿಸಲಾಗಿದೆ.

ಪೊಲೀಸರು ಹಾಗೂ ಹೊರಗಿನ ಡೊಮೇನ್ ತಜ್ಞರನ್ನು ಒಳಗೊಂಡಂತೆ ಅತ್ಯಂತ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸೂಕ್ತವಾಗಿ ದಾಖಲಿಸಲಾಗಿದೆ. ಯಾವುದೇ ಹಂತದಲ್ಲೂ ನ್ಯಾಯಯುತ ತನಿಖೆ ಮತ್ತು ಕಾನೂನಿನ ಪ್ರಕ್ರಿಯೆಗೆ ಧಕ್ಕೆ ತರುವಂತಹ ಕೆಲಸವನ್ನು ಮಾಡಿಲ್ಲ. ಯಾವುದೇ ಬಾಹ್ಯ ಪ್ರಭಾವ ಅಥವಾ ಹಸ್ತಕ್ಷೇಪವಿಲ್ಲದೆ ವೃತ್ತಿಪರರು ತನಿಖೆ ನಡೆಸಿದ್ದಾರೆ.

14,682 ಬಿಟ್‌ಫೈನೆಕ್ಸ್ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿದೆ ಎಂದು ಪ್ರತಿಪಾದಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಆರೋಪಿಗಳ ಬಂಧನಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಸಿಕ್ಕಿದ್ದರೂ ಇಲ್ಲಿಯವರೆಗೆ ಯಾವುದೇ ವಿದೇಶಿ ಕಾನೂನು ಜಾರಿ ಸಂಸ್ಥೆಗಳು, ಯಾವುದೇ ವಿದೇಶಿ ಕಂಪನಿಗಳು ಯಾವುದೇ ಹ್ಯಾಕಿಂಗ್ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂಬುದು ಸತ್ಯ. 

ಬಿಟ್‌ಫೈನೆಕ್ಸ್ ಕಂಪನಿಯ ಪ್ರತಿನಿಧಿಗಳು ಸಹ ಹ್ಯಾಕಿಂಗ್‌ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಆಪಾದಿತ ನಡೆಸಿರುವ 15 ವಹಿವಾಟಿನ ನಂತರ ಸುಮಾರು ಒಂದು ವರ್ಷ ಕಳೆದಿದ್ದರೂ, ಬಿಟ್‌ಫೈನೆಕ್ಸ್/ ಕಾನೂನು ಜಾರಿ ಏಜೆನ್ಸಿಗಳ ಯಾವುದೇ ಪ್ರತಿನಿಧಿಗಳು ಪೊಲೀಸರು ಅಥವಾ ಯಾವುದೇ ಸಂಬಂಧಪಟ್ಟ ಏಜೆನ್ಸಿಯನ್ನು ಸಂಪರ್ಕಿಸಿಲ್ಲ.

ಆರೋಪಿಯು ತನ್ನ ಸ್ವಯಂಪ್ರೇರಿತ ಹೇಳಿಕೆಯ ಸಮಯದಲ್ಲಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದೆ ವೆಬ್‌ಸೈಟ್‌ಗಳ ಹ್ಯಾಕಿಂಗ್‌ ಸಂಬಂಧ ಹೇಳಿದ್ದಾನೆ. ಇದನ್ನು ಖಚಿತಪಡಿಸಿಕೊಳ್ಳಲು ಪ್ರಾಥಮಿಕ ತನಿಖೆಯನ್ನು ನಡೆಸಲಾಯಿತು. ಸೈಬರ್ ತಜ್ಞರು ಡಿಜಿಟಲ್ ಸಾಕ್ಷ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಆರೋಪಿಯ ಹೆಚ್ಚಿನ ಪ್ರತಿಪಾದನೆಗಳು ಆಧಾರರಹಿತವಾಗಿವೆ ಎಂದು ತಿಳಿದುಬಂದಿದೆ.


ಇದನ್ನೂ ಓದಿರಿ: ಶ್ರೀಕೃಷ್ಣ ತಂದ ಬಿಟ್‌ಕಾಯಿನ್ ಬಿರುಗಾಳಿ! ಬ್ಲಾಕ್ ಚೈನ್ ಮತ್ತು ಬಿಟ್‌ಕಾಯಿನ್ ಬಗ್ಗೆ ಒಂದಿಷ್ಟು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...