Homeಕರ್ನಾಟಕಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

- Advertisement -
- Advertisement -

ರಾಜ್ಯ ಪೊಲೀಸ್ ಇಲಾಖೆಯು ಬಿಟ್ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದೆ. ನಾಲ್ಕು ಪುಟಗಳ ಪತ್ರಿಕಾ ಹೇಳಿಕೆಯನ್ನು ನೀಡಿರುವ ಪೊಲೀಸ್ ಇಲಾಖೆ, ಬಿಟ್‌ ಕಾಯಿನ್‌ ವರ್ಗಾವಣೆ ಆರೋಪವನ್ನು ಅಲ್ಲಗಳೆದಿದೆ. ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯು ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ ಮಾಡಿದ್ದಾನೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ವರದಿಗಳು ಅಪೂರ್ಣವಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಪ್ರತಿಕ್ರಿಯೆ ಹೀಗಿದೆ:

ಬಿಟ್‌ಕಾಯಿನ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ತಿರುಚಿದ ವರದಿಗಳು ಪ್ರಕಟವಾಗುತ್ತಿವೆ. ಸಿಸಿಬಿ ತನಿಖೆಯು ನ್ಯಾಯಯುತ ಹಾಗೂ ವೃತ್ತಿಪರತೆಯಿಂದ ಕೂಡಿದೆ. ಅಪೂರ್ಣ ಅಥವಾ ತಿರುಚಿದ ಸಂಗತಿಗಳಿಂದ ತಪ್ಪುದಾರಿಗೆಳೆಯುವ ವರದಿಗಳನ್ನು ತೇಲಿಬಿಡಲಾಗುತ್ತಿದೆ. ಇಂತಹ ಎಲ್ಲಾ ವರದಿಗಳನ್ನು ನಿರಾಕರಿಸಬೇಕು.

ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುವನ್ನು ಖರೀದಿಸಿದ ಬಗ್ಗೆ ಬಂದ ಖಚಿತ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ಒಬ್ಬ ಆರೋಪಿಯನ್ನು 04.11.2020ರಂದು ಬಂಧಿಸಿ 500 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೆ.ಜಿ.ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ತನಿಖೆಯ ಸಮಯದಲ್ಲಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಸೇರಿದಂತೆ ಇತರ ಹತ್ತು ಆರೋಪಿಗಳನ್ನು ಬಂಧಿಸಲಾಯಿತು.

ಆರೋಪಿ ಶ್ರೀಕೃಷ್ಣನ ವಿಚಾರಣೆಯ ಸಮಯದಲ್ಲಿ, ಆತ ಅನೇಕ ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದರಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡನು. ಇದರ ಆಧಾರದಲ್ಲಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ 153/2020ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಹ್ಯಾಕರ್ ಶ್ರೀಕೃಷ್ಣನ ಖಾತೆಯಿಂದ ಯಾವುದೇ ಬಿಟ್‌ಕಾಯಿನ್‌ಗಳು ವರ್ಗಾವಣೆಯಾಗಿಲ್ಲ ಅಥವಾ ಯಾವುದೇ ಬಿಟ್‌ಕಾಯಿನ್ ಕಳೆದುಹೋಗಿಲ್ಲ.

ಇದನ್ನೂ ಓದಿರಿ: ಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

ಕ್ರಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ, ಬಿಟ್‌ಕಾಯಿನ್ ಖಾತೆಯನ್ನು ತೆರೆಯುವುದು ಅಗತ್ಯವೆಂದು ಭಾವಿಸಲಾಯಿತು. ಅದರಂತೆ ಬಿಟ್ ಕಾಯಿನ್ ಖಾತೆಯನ್ನು ತೆರೆಯಲು ಸರ್ಕಾರವು ಆದೇಶಿಸಿದೆ. ಬಿಟ್‌ಕಾಯಿನ್‌ಗಳನ್ನು ಗುರುತಿಸುವ ಮತ್ತು ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಆರೋಪಿ ಶ್ರೀಕಿ ಬಿಟಿಸಿ ವ್ಯಾಲೆಟ್ ತೋರಿಸಿದನು. ಅದರಲ್ಲಿ 31.8 ಬಿಟಿಸಿ ಇತ್ತು. ಸೈಬರ್ ತಜ್ಞರ ಸಮ್ಮುಖದಲ್ಲಿ ವ್ಯಾಲೆಟ್ ಪಾಸ್‌ವರ್ಡ್ ಬದಲಾಯಿಸಲಾಯಿತು. ಸಂಪೂರ್ಣ ಕಾರ್ಯವಿಧಾನವನ್ನು ಮಹಜರ್ ಮಾಡಲಾಗಿದೆ. ಎಲ್ಲವನ್ನೂ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ತರುವಾಯ, ಈ ಬಿಟ್ ಕಾಯಿನ್‌ಗಳನ್ನು ಪೊಲೀಸ್ ವ್ಯಾಲೆಟ್ ಖಾತೆಗೆ ವರ್ಗಾಯಿಸಲು ಪಾಸ್‌ವರ್ಡ್ ಬಳಸಲು ನ್ಯಾಯಾಲಯ ಅನುಮತಿ ನೀಡಿತು. ಆರೋಪಿ ಶ್ರೀಕೃಷ್ಣನ ವಾಲೆಟ್ ತೆರೆದಾಗ ಅದರಲ್ಲಿ 186.811 ಬಿಟ್‌ಕಾಯಿನ್‌ಗಳು ಕಂಡುಬಂದಿವೆ. ಆರೋಪಿಯು ಇದು ತನ್ನ ವೈಯಕ್ತಿಕ ವಾಲೆಟ್‌ ಎಂದು ಹೇಳಿಕೊಂಡಿದ್ದಾನೆ. ಆರೋಪಿಯ ಬಳಿ ಖಾಸಗಿ ಕೀ ಇರಲಿಲ್ಲ ಎಂದು ಸೈಬರ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ, ಪೊಲೀಸ್ ವ್ಯಾಲೆಟ್‌ಗೆ ಯಾವುದೇ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿಲ್ಲ. ಈ ಎಲ್ಲ ಸಂಬಂಧಿತ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಚಾರ್ಜ್‌‌ಶೀಟ್‌ ಸಲ್ಲಿಸಲಾಗಿದೆ.

ಪೊಲೀಸರು ಹಾಗೂ ಹೊರಗಿನ ಡೊಮೇನ್ ತಜ್ಞರನ್ನು ಒಳಗೊಂಡಂತೆ ಅತ್ಯಂತ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸೂಕ್ತವಾಗಿ ದಾಖಲಿಸಲಾಗಿದೆ. ಯಾವುದೇ ಹಂತದಲ್ಲೂ ನ್ಯಾಯಯುತ ತನಿಖೆ ಮತ್ತು ಕಾನೂನಿನ ಪ್ರಕ್ರಿಯೆಗೆ ಧಕ್ಕೆ ತರುವಂತಹ ಕೆಲಸವನ್ನು ಮಾಡಿಲ್ಲ. ಯಾವುದೇ ಬಾಹ್ಯ ಪ್ರಭಾವ ಅಥವಾ ಹಸ್ತಕ್ಷೇಪವಿಲ್ಲದೆ ವೃತ್ತಿಪರರು ತನಿಖೆ ನಡೆಸಿದ್ದಾರೆ.

14,682 ಬಿಟ್‌ಫೈನೆಕ್ಸ್ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿದೆ ಎಂದು ಪ್ರತಿಪಾದಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಆರೋಪಿಗಳ ಬಂಧನಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಸಿಕ್ಕಿದ್ದರೂ ಇಲ್ಲಿಯವರೆಗೆ ಯಾವುದೇ ವಿದೇಶಿ ಕಾನೂನು ಜಾರಿ ಸಂಸ್ಥೆಗಳು, ಯಾವುದೇ ವಿದೇಶಿ ಕಂಪನಿಗಳು ಯಾವುದೇ ಹ್ಯಾಕಿಂಗ್ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂಬುದು ಸತ್ಯ. 

ಬಿಟ್‌ಫೈನೆಕ್ಸ್ ಕಂಪನಿಯ ಪ್ರತಿನಿಧಿಗಳು ಸಹ ಹ್ಯಾಕಿಂಗ್‌ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಆಪಾದಿತ ನಡೆಸಿರುವ 15 ವಹಿವಾಟಿನ ನಂತರ ಸುಮಾರು ಒಂದು ವರ್ಷ ಕಳೆದಿದ್ದರೂ, ಬಿಟ್‌ಫೈನೆಕ್ಸ್/ ಕಾನೂನು ಜಾರಿ ಏಜೆನ್ಸಿಗಳ ಯಾವುದೇ ಪ್ರತಿನಿಧಿಗಳು ಪೊಲೀಸರು ಅಥವಾ ಯಾವುದೇ ಸಂಬಂಧಪಟ್ಟ ಏಜೆನ್ಸಿಯನ್ನು ಸಂಪರ್ಕಿಸಿಲ್ಲ.

ಆರೋಪಿಯು ತನ್ನ ಸ್ವಯಂಪ್ರೇರಿತ ಹೇಳಿಕೆಯ ಸಮಯದಲ್ಲಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದೆ ವೆಬ್‌ಸೈಟ್‌ಗಳ ಹ್ಯಾಕಿಂಗ್‌ ಸಂಬಂಧ ಹೇಳಿದ್ದಾನೆ. ಇದನ್ನು ಖಚಿತಪಡಿಸಿಕೊಳ್ಳಲು ಪ್ರಾಥಮಿಕ ತನಿಖೆಯನ್ನು ನಡೆಸಲಾಯಿತು. ಸೈಬರ್ ತಜ್ಞರು ಡಿಜಿಟಲ್ ಸಾಕ್ಷ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಆರೋಪಿಯ ಹೆಚ್ಚಿನ ಪ್ರತಿಪಾದನೆಗಳು ಆಧಾರರಹಿತವಾಗಿವೆ ಎಂದು ತಿಳಿದುಬಂದಿದೆ.


ಇದನ್ನೂ ಓದಿರಿ: ಶ್ರೀಕೃಷ್ಣ ತಂದ ಬಿಟ್‌ಕಾಯಿನ್ ಬಿರುಗಾಳಿ! ಬ್ಲಾಕ್ ಚೈನ್ ಮತ್ತು ಬಿಟ್‌ಕಾಯಿನ್ ಬಗ್ಗೆ ಒಂದಿಷ್ಟು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...