Homeಕರ್ನಾಟಕಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

- Advertisement -
- Advertisement -

ರಾಜ್ಯ ಪೊಲೀಸ್ ಇಲಾಖೆಯು ಬಿಟ್ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದೆ. ನಾಲ್ಕು ಪುಟಗಳ ಪತ್ರಿಕಾ ಹೇಳಿಕೆಯನ್ನು ನೀಡಿರುವ ಪೊಲೀಸ್ ಇಲಾಖೆ, ಬಿಟ್‌ ಕಾಯಿನ್‌ ವರ್ಗಾವಣೆ ಆರೋಪವನ್ನು ಅಲ್ಲಗಳೆದಿದೆ. ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯು ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ ಮಾಡಿದ್ದಾನೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ವರದಿಗಳು ಅಪೂರ್ಣವಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಪ್ರತಿಕ್ರಿಯೆ ಹೀಗಿದೆ:

ಬಿಟ್‌ಕಾಯಿನ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ತಿರುಚಿದ ವರದಿಗಳು ಪ್ರಕಟವಾಗುತ್ತಿವೆ. ಸಿಸಿಬಿ ತನಿಖೆಯು ನ್ಯಾಯಯುತ ಹಾಗೂ ವೃತ್ತಿಪರತೆಯಿಂದ ಕೂಡಿದೆ. ಅಪೂರ್ಣ ಅಥವಾ ತಿರುಚಿದ ಸಂಗತಿಗಳಿಂದ ತಪ್ಪುದಾರಿಗೆಳೆಯುವ ವರದಿಗಳನ್ನು ತೇಲಿಬಿಡಲಾಗುತ್ತಿದೆ. ಇಂತಹ ಎಲ್ಲಾ ವರದಿಗಳನ್ನು ನಿರಾಕರಿಸಬೇಕು.

ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುವನ್ನು ಖರೀದಿಸಿದ ಬಗ್ಗೆ ಬಂದ ಖಚಿತ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ಒಬ್ಬ ಆರೋಪಿಯನ್ನು 04.11.2020ರಂದು ಬಂಧಿಸಿ 500 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೆ.ಜಿ.ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ತನಿಖೆಯ ಸಮಯದಲ್ಲಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಸೇರಿದಂತೆ ಇತರ ಹತ್ತು ಆರೋಪಿಗಳನ್ನು ಬಂಧಿಸಲಾಯಿತು.

ಆರೋಪಿ ಶ್ರೀಕೃಷ್ಣನ ವಿಚಾರಣೆಯ ಸಮಯದಲ್ಲಿ, ಆತ ಅನೇಕ ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದರಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡನು. ಇದರ ಆಧಾರದಲ್ಲಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ 153/2020ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಹ್ಯಾಕರ್ ಶ್ರೀಕೃಷ್ಣನ ಖಾತೆಯಿಂದ ಯಾವುದೇ ಬಿಟ್‌ಕಾಯಿನ್‌ಗಳು ವರ್ಗಾವಣೆಯಾಗಿಲ್ಲ ಅಥವಾ ಯಾವುದೇ ಬಿಟ್‌ಕಾಯಿನ್ ಕಳೆದುಹೋಗಿಲ್ಲ.

ಇದನ್ನೂ ಓದಿರಿ: ಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

ಕ್ರಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ, ಬಿಟ್‌ಕಾಯಿನ್ ಖಾತೆಯನ್ನು ತೆರೆಯುವುದು ಅಗತ್ಯವೆಂದು ಭಾವಿಸಲಾಯಿತು. ಅದರಂತೆ ಬಿಟ್ ಕಾಯಿನ್ ಖಾತೆಯನ್ನು ತೆರೆಯಲು ಸರ್ಕಾರವು ಆದೇಶಿಸಿದೆ. ಬಿಟ್‌ಕಾಯಿನ್‌ಗಳನ್ನು ಗುರುತಿಸುವ ಮತ್ತು ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಆರೋಪಿ ಶ್ರೀಕಿ ಬಿಟಿಸಿ ವ್ಯಾಲೆಟ್ ತೋರಿಸಿದನು. ಅದರಲ್ಲಿ 31.8 ಬಿಟಿಸಿ ಇತ್ತು. ಸೈಬರ್ ತಜ್ಞರ ಸಮ್ಮುಖದಲ್ಲಿ ವ್ಯಾಲೆಟ್ ಪಾಸ್‌ವರ್ಡ್ ಬದಲಾಯಿಸಲಾಯಿತು. ಸಂಪೂರ್ಣ ಕಾರ್ಯವಿಧಾನವನ್ನು ಮಹಜರ್ ಮಾಡಲಾಗಿದೆ. ಎಲ್ಲವನ್ನೂ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ತರುವಾಯ, ಈ ಬಿಟ್ ಕಾಯಿನ್‌ಗಳನ್ನು ಪೊಲೀಸ್ ವ್ಯಾಲೆಟ್ ಖಾತೆಗೆ ವರ್ಗಾಯಿಸಲು ಪಾಸ್‌ವರ್ಡ್ ಬಳಸಲು ನ್ಯಾಯಾಲಯ ಅನುಮತಿ ನೀಡಿತು. ಆರೋಪಿ ಶ್ರೀಕೃಷ್ಣನ ವಾಲೆಟ್ ತೆರೆದಾಗ ಅದರಲ್ಲಿ 186.811 ಬಿಟ್‌ಕಾಯಿನ್‌ಗಳು ಕಂಡುಬಂದಿವೆ. ಆರೋಪಿಯು ಇದು ತನ್ನ ವೈಯಕ್ತಿಕ ವಾಲೆಟ್‌ ಎಂದು ಹೇಳಿಕೊಂಡಿದ್ದಾನೆ. ಆರೋಪಿಯ ಬಳಿ ಖಾಸಗಿ ಕೀ ಇರಲಿಲ್ಲ ಎಂದು ಸೈಬರ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ, ಪೊಲೀಸ್ ವ್ಯಾಲೆಟ್‌ಗೆ ಯಾವುದೇ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿಲ್ಲ. ಈ ಎಲ್ಲ ಸಂಬಂಧಿತ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಚಾರ್ಜ್‌‌ಶೀಟ್‌ ಸಲ್ಲಿಸಲಾಗಿದೆ.

ಪೊಲೀಸರು ಹಾಗೂ ಹೊರಗಿನ ಡೊಮೇನ್ ತಜ್ಞರನ್ನು ಒಳಗೊಂಡಂತೆ ಅತ್ಯಂತ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸೂಕ್ತವಾಗಿ ದಾಖಲಿಸಲಾಗಿದೆ. ಯಾವುದೇ ಹಂತದಲ್ಲೂ ನ್ಯಾಯಯುತ ತನಿಖೆ ಮತ್ತು ಕಾನೂನಿನ ಪ್ರಕ್ರಿಯೆಗೆ ಧಕ್ಕೆ ತರುವಂತಹ ಕೆಲಸವನ್ನು ಮಾಡಿಲ್ಲ. ಯಾವುದೇ ಬಾಹ್ಯ ಪ್ರಭಾವ ಅಥವಾ ಹಸ್ತಕ್ಷೇಪವಿಲ್ಲದೆ ವೃತ್ತಿಪರರು ತನಿಖೆ ನಡೆಸಿದ್ದಾರೆ.

14,682 ಬಿಟ್‌ಫೈನೆಕ್ಸ್ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿದೆ ಎಂದು ಪ್ರತಿಪಾದಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಆರೋಪಿಗಳ ಬಂಧನಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಸಿಕ್ಕಿದ್ದರೂ ಇಲ್ಲಿಯವರೆಗೆ ಯಾವುದೇ ವಿದೇಶಿ ಕಾನೂನು ಜಾರಿ ಸಂಸ್ಥೆಗಳು, ಯಾವುದೇ ವಿದೇಶಿ ಕಂಪನಿಗಳು ಯಾವುದೇ ಹ್ಯಾಕಿಂಗ್ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂಬುದು ಸತ್ಯ. 

ಬಿಟ್‌ಫೈನೆಕ್ಸ್ ಕಂಪನಿಯ ಪ್ರತಿನಿಧಿಗಳು ಸಹ ಹ್ಯಾಕಿಂಗ್‌ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಆಪಾದಿತ ನಡೆಸಿರುವ 15 ವಹಿವಾಟಿನ ನಂತರ ಸುಮಾರು ಒಂದು ವರ್ಷ ಕಳೆದಿದ್ದರೂ, ಬಿಟ್‌ಫೈನೆಕ್ಸ್/ ಕಾನೂನು ಜಾರಿ ಏಜೆನ್ಸಿಗಳ ಯಾವುದೇ ಪ್ರತಿನಿಧಿಗಳು ಪೊಲೀಸರು ಅಥವಾ ಯಾವುದೇ ಸಂಬಂಧಪಟ್ಟ ಏಜೆನ್ಸಿಯನ್ನು ಸಂಪರ್ಕಿಸಿಲ್ಲ.

ಆರೋಪಿಯು ತನ್ನ ಸ್ವಯಂಪ್ರೇರಿತ ಹೇಳಿಕೆಯ ಸಮಯದಲ್ಲಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದೆ ವೆಬ್‌ಸೈಟ್‌ಗಳ ಹ್ಯಾಕಿಂಗ್‌ ಸಂಬಂಧ ಹೇಳಿದ್ದಾನೆ. ಇದನ್ನು ಖಚಿತಪಡಿಸಿಕೊಳ್ಳಲು ಪ್ರಾಥಮಿಕ ತನಿಖೆಯನ್ನು ನಡೆಸಲಾಯಿತು. ಸೈಬರ್ ತಜ್ಞರು ಡಿಜಿಟಲ್ ಸಾಕ್ಷ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಆರೋಪಿಯ ಹೆಚ್ಚಿನ ಪ್ರತಿಪಾದನೆಗಳು ಆಧಾರರಹಿತವಾಗಿವೆ ಎಂದು ತಿಳಿದುಬಂದಿದೆ.


ಇದನ್ನೂ ಓದಿರಿ: ಶ್ರೀಕೃಷ್ಣ ತಂದ ಬಿಟ್‌ಕಾಯಿನ್ ಬಿರುಗಾಳಿ! ಬ್ಲಾಕ್ ಚೈನ್ ಮತ್ತು ಬಿಟ್‌ಕಾಯಿನ್ ಬಗ್ಗೆ ಒಂದಿಷ್ಟು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...