Homeಕರ್ನಾಟಕಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

- Advertisement -
- Advertisement -

ರಾಜ್ಯ ಪೊಲೀಸ್ ಇಲಾಖೆಯು ಬಿಟ್ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದೆ. ನಾಲ್ಕು ಪುಟಗಳ ಪತ್ರಿಕಾ ಹೇಳಿಕೆಯನ್ನು ನೀಡಿರುವ ಪೊಲೀಸ್ ಇಲಾಖೆ, ಬಿಟ್‌ ಕಾಯಿನ್‌ ವರ್ಗಾವಣೆ ಆರೋಪವನ್ನು ಅಲ್ಲಗಳೆದಿದೆ. ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯು ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ ಮಾಡಿದ್ದಾನೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ವರದಿಗಳು ಅಪೂರ್ಣವಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಪ್ರತಿಕ್ರಿಯೆ ಹೀಗಿದೆ:

ಬಿಟ್‌ಕಾಯಿನ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ತಿರುಚಿದ ವರದಿಗಳು ಪ್ರಕಟವಾಗುತ್ತಿವೆ. ಸಿಸಿಬಿ ತನಿಖೆಯು ನ್ಯಾಯಯುತ ಹಾಗೂ ವೃತ್ತಿಪರತೆಯಿಂದ ಕೂಡಿದೆ. ಅಪೂರ್ಣ ಅಥವಾ ತಿರುಚಿದ ಸಂಗತಿಗಳಿಂದ ತಪ್ಪುದಾರಿಗೆಳೆಯುವ ವರದಿಗಳನ್ನು ತೇಲಿಬಿಡಲಾಗುತ್ತಿದೆ. ಇಂತಹ ಎಲ್ಲಾ ವರದಿಗಳನ್ನು ನಿರಾಕರಿಸಬೇಕು.

ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುವನ್ನು ಖರೀದಿಸಿದ ಬಗ್ಗೆ ಬಂದ ಖಚಿತ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ಒಬ್ಬ ಆರೋಪಿಯನ್ನು 04.11.2020ರಂದು ಬಂಧಿಸಿ 500 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೆ.ಜಿ.ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ತನಿಖೆಯ ಸಮಯದಲ್ಲಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಸೇರಿದಂತೆ ಇತರ ಹತ್ತು ಆರೋಪಿಗಳನ್ನು ಬಂಧಿಸಲಾಯಿತು.

ಆರೋಪಿ ಶ್ರೀಕೃಷ್ಣನ ವಿಚಾರಣೆಯ ಸಮಯದಲ್ಲಿ, ಆತ ಅನೇಕ ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದರಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡನು. ಇದರ ಆಧಾರದಲ್ಲಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ 153/2020ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಹ್ಯಾಕರ್ ಶ್ರೀಕೃಷ್ಣನ ಖಾತೆಯಿಂದ ಯಾವುದೇ ಬಿಟ್‌ಕಾಯಿನ್‌ಗಳು ವರ್ಗಾವಣೆಯಾಗಿಲ್ಲ ಅಥವಾ ಯಾವುದೇ ಬಿಟ್‌ಕಾಯಿನ್ ಕಳೆದುಹೋಗಿಲ್ಲ.

ಇದನ್ನೂ ಓದಿರಿ: ಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

ಕ್ರಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ, ಬಿಟ್‌ಕಾಯಿನ್ ಖಾತೆಯನ್ನು ತೆರೆಯುವುದು ಅಗತ್ಯವೆಂದು ಭಾವಿಸಲಾಯಿತು. ಅದರಂತೆ ಬಿಟ್ ಕಾಯಿನ್ ಖಾತೆಯನ್ನು ತೆರೆಯಲು ಸರ್ಕಾರವು ಆದೇಶಿಸಿದೆ. ಬಿಟ್‌ಕಾಯಿನ್‌ಗಳನ್ನು ಗುರುತಿಸುವ ಮತ್ತು ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಆರೋಪಿ ಶ್ರೀಕಿ ಬಿಟಿಸಿ ವ್ಯಾಲೆಟ್ ತೋರಿಸಿದನು. ಅದರಲ್ಲಿ 31.8 ಬಿಟಿಸಿ ಇತ್ತು. ಸೈಬರ್ ತಜ್ಞರ ಸಮ್ಮುಖದಲ್ಲಿ ವ್ಯಾಲೆಟ್ ಪಾಸ್‌ವರ್ಡ್ ಬದಲಾಯಿಸಲಾಯಿತು. ಸಂಪೂರ್ಣ ಕಾರ್ಯವಿಧಾನವನ್ನು ಮಹಜರ್ ಮಾಡಲಾಗಿದೆ. ಎಲ್ಲವನ್ನೂ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ತರುವಾಯ, ಈ ಬಿಟ್ ಕಾಯಿನ್‌ಗಳನ್ನು ಪೊಲೀಸ್ ವ್ಯಾಲೆಟ್ ಖಾತೆಗೆ ವರ್ಗಾಯಿಸಲು ಪಾಸ್‌ವರ್ಡ್ ಬಳಸಲು ನ್ಯಾಯಾಲಯ ಅನುಮತಿ ನೀಡಿತು. ಆರೋಪಿ ಶ್ರೀಕೃಷ್ಣನ ವಾಲೆಟ್ ತೆರೆದಾಗ ಅದರಲ್ಲಿ 186.811 ಬಿಟ್‌ಕಾಯಿನ್‌ಗಳು ಕಂಡುಬಂದಿವೆ. ಆರೋಪಿಯು ಇದು ತನ್ನ ವೈಯಕ್ತಿಕ ವಾಲೆಟ್‌ ಎಂದು ಹೇಳಿಕೊಂಡಿದ್ದಾನೆ. ಆರೋಪಿಯ ಬಳಿ ಖಾಸಗಿ ಕೀ ಇರಲಿಲ್ಲ ಎಂದು ಸೈಬರ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ, ಪೊಲೀಸ್ ವ್ಯಾಲೆಟ್‌ಗೆ ಯಾವುದೇ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿಲ್ಲ. ಈ ಎಲ್ಲ ಸಂಬಂಧಿತ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಚಾರ್ಜ್‌‌ಶೀಟ್‌ ಸಲ್ಲಿಸಲಾಗಿದೆ.

ಪೊಲೀಸರು ಹಾಗೂ ಹೊರಗಿನ ಡೊಮೇನ್ ತಜ್ಞರನ್ನು ಒಳಗೊಂಡಂತೆ ಅತ್ಯಂತ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸೂಕ್ತವಾಗಿ ದಾಖಲಿಸಲಾಗಿದೆ. ಯಾವುದೇ ಹಂತದಲ್ಲೂ ನ್ಯಾಯಯುತ ತನಿಖೆ ಮತ್ತು ಕಾನೂನಿನ ಪ್ರಕ್ರಿಯೆಗೆ ಧಕ್ಕೆ ತರುವಂತಹ ಕೆಲಸವನ್ನು ಮಾಡಿಲ್ಲ. ಯಾವುದೇ ಬಾಹ್ಯ ಪ್ರಭಾವ ಅಥವಾ ಹಸ್ತಕ್ಷೇಪವಿಲ್ಲದೆ ವೃತ್ತಿಪರರು ತನಿಖೆ ನಡೆಸಿದ್ದಾರೆ.

14,682 ಬಿಟ್‌ಫೈನೆಕ್ಸ್ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿದೆ ಎಂದು ಪ್ರತಿಪಾದಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಆರೋಪಿಗಳ ಬಂಧನಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಸಿಕ್ಕಿದ್ದರೂ ಇಲ್ಲಿಯವರೆಗೆ ಯಾವುದೇ ವಿದೇಶಿ ಕಾನೂನು ಜಾರಿ ಸಂಸ್ಥೆಗಳು, ಯಾವುದೇ ವಿದೇಶಿ ಕಂಪನಿಗಳು ಯಾವುದೇ ಹ್ಯಾಕಿಂಗ್ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂಬುದು ಸತ್ಯ. 

ಬಿಟ್‌ಫೈನೆಕ್ಸ್ ಕಂಪನಿಯ ಪ್ರತಿನಿಧಿಗಳು ಸಹ ಹ್ಯಾಕಿಂಗ್‌ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಆಪಾದಿತ ನಡೆಸಿರುವ 15 ವಹಿವಾಟಿನ ನಂತರ ಸುಮಾರು ಒಂದು ವರ್ಷ ಕಳೆದಿದ್ದರೂ, ಬಿಟ್‌ಫೈನೆಕ್ಸ್/ ಕಾನೂನು ಜಾರಿ ಏಜೆನ್ಸಿಗಳ ಯಾವುದೇ ಪ್ರತಿನಿಧಿಗಳು ಪೊಲೀಸರು ಅಥವಾ ಯಾವುದೇ ಸಂಬಂಧಪಟ್ಟ ಏಜೆನ್ಸಿಯನ್ನು ಸಂಪರ್ಕಿಸಿಲ್ಲ.

ಆರೋಪಿಯು ತನ್ನ ಸ್ವಯಂಪ್ರೇರಿತ ಹೇಳಿಕೆಯ ಸಮಯದಲ್ಲಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದೆ ವೆಬ್‌ಸೈಟ್‌ಗಳ ಹ್ಯಾಕಿಂಗ್‌ ಸಂಬಂಧ ಹೇಳಿದ್ದಾನೆ. ಇದನ್ನು ಖಚಿತಪಡಿಸಿಕೊಳ್ಳಲು ಪ್ರಾಥಮಿಕ ತನಿಖೆಯನ್ನು ನಡೆಸಲಾಯಿತು. ಸೈಬರ್ ತಜ್ಞರು ಡಿಜಿಟಲ್ ಸಾಕ್ಷ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಆರೋಪಿಯ ಹೆಚ್ಚಿನ ಪ್ರತಿಪಾದನೆಗಳು ಆಧಾರರಹಿತವಾಗಿವೆ ಎಂದು ತಿಳಿದುಬಂದಿದೆ.


ಇದನ್ನೂ ಓದಿರಿ: ಶ್ರೀಕೃಷ್ಣ ತಂದ ಬಿಟ್‌ಕಾಯಿನ್ ಬಿರುಗಾಳಿ! ಬ್ಲಾಕ್ ಚೈನ್ ಮತ್ತು ಬಿಟ್‌ಕಾಯಿನ್ ಬಗ್ಗೆ ಒಂದಿಷ್ಟು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...