Homeಕರ್ನಾಟಕಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

- Advertisement -
- Advertisement -

ರಾಜ್ಯ ಪೊಲೀಸ್ ಇಲಾಖೆಯು ಬಿಟ್ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದೆ. ನಾಲ್ಕು ಪುಟಗಳ ಪತ್ರಿಕಾ ಹೇಳಿಕೆಯನ್ನು ನೀಡಿರುವ ಪೊಲೀಸ್ ಇಲಾಖೆ, ಬಿಟ್‌ ಕಾಯಿನ್‌ ವರ್ಗಾವಣೆ ಆರೋಪವನ್ನು ಅಲ್ಲಗಳೆದಿದೆ. ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯು ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ ಮಾಡಿದ್ದಾನೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ವರದಿಗಳು ಅಪೂರ್ಣವಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಪ್ರತಿಕ್ರಿಯೆ ಹೀಗಿದೆ:

ಬಿಟ್‌ಕಾಯಿನ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ತಿರುಚಿದ ವರದಿಗಳು ಪ್ರಕಟವಾಗುತ್ತಿವೆ. ಸಿಸಿಬಿ ತನಿಖೆಯು ನ್ಯಾಯಯುತ ಹಾಗೂ ವೃತ್ತಿಪರತೆಯಿಂದ ಕೂಡಿದೆ. ಅಪೂರ್ಣ ಅಥವಾ ತಿರುಚಿದ ಸಂಗತಿಗಳಿಂದ ತಪ್ಪುದಾರಿಗೆಳೆಯುವ ವರದಿಗಳನ್ನು ತೇಲಿಬಿಡಲಾಗುತ್ತಿದೆ. ಇಂತಹ ಎಲ್ಲಾ ವರದಿಗಳನ್ನು ನಿರಾಕರಿಸಬೇಕು.

ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುವನ್ನು ಖರೀದಿಸಿದ ಬಗ್ಗೆ ಬಂದ ಖಚಿತ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ಒಬ್ಬ ಆರೋಪಿಯನ್ನು 04.11.2020ರಂದು ಬಂಧಿಸಿ 500 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೆ.ಜಿ.ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ತನಿಖೆಯ ಸಮಯದಲ್ಲಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಸೇರಿದಂತೆ ಇತರ ಹತ್ತು ಆರೋಪಿಗಳನ್ನು ಬಂಧಿಸಲಾಯಿತು.

ಆರೋಪಿ ಶ್ರೀಕೃಷ್ಣನ ವಿಚಾರಣೆಯ ಸಮಯದಲ್ಲಿ, ಆತ ಅನೇಕ ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದರಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡನು. ಇದರ ಆಧಾರದಲ್ಲಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ 153/2020ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಹ್ಯಾಕರ್ ಶ್ರೀಕೃಷ್ಣನ ಖಾತೆಯಿಂದ ಯಾವುದೇ ಬಿಟ್‌ಕಾಯಿನ್‌ಗಳು ವರ್ಗಾವಣೆಯಾಗಿಲ್ಲ ಅಥವಾ ಯಾವುದೇ ಬಿಟ್‌ಕಾಯಿನ್ ಕಳೆದುಹೋಗಿಲ್ಲ.

ಇದನ್ನೂ ಓದಿರಿ: ಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

ಕ್ರಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ, ಬಿಟ್‌ಕಾಯಿನ್ ಖಾತೆಯನ್ನು ತೆರೆಯುವುದು ಅಗತ್ಯವೆಂದು ಭಾವಿಸಲಾಯಿತು. ಅದರಂತೆ ಬಿಟ್ ಕಾಯಿನ್ ಖಾತೆಯನ್ನು ತೆರೆಯಲು ಸರ್ಕಾರವು ಆದೇಶಿಸಿದೆ. ಬಿಟ್‌ಕಾಯಿನ್‌ಗಳನ್ನು ಗುರುತಿಸುವ ಮತ್ತು ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಆರೋಪಿ ಶ್ರೀಕಿ ಬಿಟಿಸಿ ವ್ಯಾಲೆಟ್ ತೋರಿಸಿದನು. ಅದರಲ್ಲಿ 31.8 ಬಿಟಿಸಿ ಇತ್ತು. ಸೈಬರ್ ತಜ್ಞರ ಸಮ್ಮುಖದಲ್ಲಿ ವ್ಯಾಲೆಟ್ ಪಾಸ್‌ವರ್ಡ್ ಬದಲಾಯಿಸಲಾಯಿತು. ಸಂಪೂರ್ಣ ಕಾರ್ಯವಿಧಾನವನ್ನು ಮಹಜರ್ ಮಾಡಲಾಗಿದೆ. ಎಲ್ಲವನ್ನೂ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ತರುವಾಯ, ಈ ಬಿಟ್ ಕಾಯಿನ್‌ಗಳನ್ನು ಪೊಲೀಸ್ ವ್ಯಾಲೆಟ್ ಖಾತೆಗೆ ವರ್ಗಾಯಿಸಲು ಪಾಸ್‌ವರ್ಡ್ ಬಳಸಲು ನ್ಯಾಯಾಲಯ ಅನುಮತಿ ನೀಡಿತು. ಆರೋಪಿ ಶ್ರೀಕೃಷ್ಣನ ವಾಲೆಟ್ ತೆರೆದಾಗ ಅದರಲ್ಲಿ 186.811 ಬಿಟ್‌ಕಾಯಿನ್‌ಗಳು ಕಂಡುಬಂದಿವೆ. ಆರೋಪಿಯು ಇದು ತನ್ನ ವೈಯಕ್ತಿಕ ವಾಲೆಟ್‌ ಎಂದು ಹೇಳಿಕೊಂಡಿದ್ದಾನೆ. ಆರೋಪಿಯ ಬಳಿ ಖಾಸಗಿ ಕೀ ಇರಲಿಲ್ಲ ಎಂದು ಸೈಬರ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ, ಪೊಲೀಸ್ ವ್ಯಾಲೆಟ್‌ಗೆ ಯಾವುದೇ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿಲ್ಲ. ಈ ಎಲ್ಲ ಸಂಬಂಧಿತ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಚಾರ್ಜ್‌‌ಶೀಟ್‌ ಸಲ್ಲಿಸಲಾಗಿದೆ.

ಪೊಲೀಸರು ಹಾಗೂ ಹೊರಗಿನ ಡೊಮೇನ್ ತಜ್ಞರನ್ನು ಒಳಗೊಂಡಂತೆ ಅತ್ಯಂತ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸೂಕ್ತವಾಗಿ ದಾಖಲಿಸಲಾಗಿದೆ. ಯಾವುದೇ ಹಂತದಲ್ಲೂ ನ್ಯಾಯಯುತ ತನಿಖೆ ಮತ್ತು ಕಾನೂನಿನ ಪ್ರಕ್ರಿಯೆಗೆ ಧಕ್ಕೆ ತರುವಂತಹ ಕೆಲಸವನ್ನು ಮಾಡಿಲ್ಲ. ಯಾವುದೇ ಬಾಹ್ಯ ಪ್ರಭಾವ ಅಥವಾ ಹಸ್ತಕ್ಷೇಪವಿಲ್ಲದೆ ವೃತ್ತಿಪರರು ತನಿಖೆ ನಡೆಸಿದ್ದಾರೆ.

14,682 ಬಿಟ್‌ಫೈನೆಕ್ಸ್ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿದೆ ಎಂದು ಪ್ರತಿಪಾದಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಆರೋಪಿಗಳ ಬಂಧನಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಸಿಕ್ಕಿದ್ದರೂ ಇಲ್ಲಿಯವರೆಗೆ ಯಾವುದೇ ವಿದೇಶಿ ಕಾನೂನು ಜಾರಿ ಸಂಸ್ಥೆಗಳು, ಯಾವುದೇ ವಿದೇಶಿ ಕಂಪನಿಗಳು ಯಾವುದೇ ಹ್ಯಾಕಿಂಗ್ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂಬುದು ಸತ್ಯ. 

ಬಿಟ್‌ಫೈನೆಕ್ಸ್ ಕಂಪನಿಯ ಪ್ರತಿನಿಧಿಗಳು ಸಹ ಹ್ಯಾಕಿಂಗ್‌ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಆಪಾದಿತ ನಡೆಸಿರುವ 15 ವಹಿವಾಟಿನ ನಂತರ ಸುಮಾರು ಒಂದು ವರ್ಷ ಕಳೆದಿದ್ದರೂ, ಬಿಟ್‌ಫೈನೆಕ್ಸ್/ ಕಾನೂನು ಜಾರಿ ಏಜೆನ್ಸಿಗಳ ಯಾವುದೇ ಪ್ರತಿನಿಧಿಗಳು ಪೊಲೀಸರು ಅಥವಾ ಯಾವುದೇ ಸಂಬಂಧಪಟ್ಟ ಏಜೆನ್ಸಿಯನ್ನು ಸಂಪರ್ಕಿಸಿಲ್ಲ.

ಆರೋಪಿಯು ತನ್ನ ಸ್ವಯಂಪ್ರೇರಿತ ಹೇಳಿಕೆಯ ಸಮಯದಲ್ಲಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದೆ ವೆಬ್‌ಸೈಟ್‌ಗಳ ಹ್ಯಾಕಿಂಗ್‌ ಸಂಬಂಧ ಹೇಳಿದ್ದಾನೆ. ಇದನ್ನು ಖಚಿತಪಡಿಸಿಕೊಳ್ಳಲು ಪ್ರಾಥಮಿಕ ತನಿಖೆಯನ್ನು ನಡೆಸಲಾಯಿತು. ಸೈಬರ್ ತಜ್ಞರು ಡಿಜಿಟಲ್ ಸಾಕ್ಷ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಆರೋಪಿಯ ಹೆಚ್ಚಿನ ಪ್ರತಿಪಾದನೆಗಳು ಆಧಾರರಹಿತವಾಗಿವೆ ಎಂದು ತಿಳಿದುಬಂದಿದೆ.


ಇದನ್ನೂ ಓದಿರಿ: ಶ್ರೀಕೃಷ್ಣ ತಂದ ಬಿಟ್‌ಕಾಯಿನ್ ಬಿರುಗಾಳಿ! ಬ್ಲಾಕ್ ಚೈನ್ ಮತ್ತು ಬಿಟ್‌ಕಾಯಿನ್ ಬಗ್ಗೆ ಒಂದಿಷ್ಟು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...