Homeಕರ್ನಾಟಕಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

- Advertisement -
- Advertisement -

ರಾಜ್ಯ ಪೊಲೀಸ್ ಇಲಾಖೆಯು ಬಿಟ್ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದೆ. ನಾಲ್ಕು ಪುಟಗಳ ಪತ್ರಿಕಾ ಹೇಳಿಕೆಯನ್ನು ನೀಡಿರುವ ಪೊಲೀಸ್ ಇಲಾಖೆ, ಬಿಟ್‌ ಕಾಯಿನ್‌ ವರ್ಗಾವಣೆ ಆರೋಪವನ್ನು ಅಲ್ಲಗಳೆದಿದೆ. ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯು ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ ಮಾಡಿದ್ದಾನೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ವರದಿಗಳು ಅಪೂರ್ಣವಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಪ್ರತಿಕ್ರಿಯೆ ಹೀಗಿದೆ:

ಬಿಟ್‌ಕಾಯಿನ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ತಿರುಚಿದ ವರದಿಗಳು ಪ್ರಕಟವಾಗುತ್ತಿವೆ. ಸಿಸಿಬಿ ತನಿಖೆಯು ನ್ಯಾಯಯುತ ಹಾಗೂ ವೃತ್ತಿಪರತೆಯಿಂದ ಕೂಡಿದೆ. ಅಪೂರ್ಣ ಅಥವಾ ತಿರುಚಿದ ಸಂಗತಿಗಳಿಂದ ತಪ್ಪುದಾರಿಗೆಳೆಯುವ ವರದಿಗಳನ್ನು ತೇಲಿಬಿಡಲಾಗುತ್ತಿದೆ. ಇಂತಹ ಎಲ್ಲಾ ವರದಿಗಳನ್ನು ನಿರಾಕರಿಸಬೇಕು.

ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುವನ್ನು ಖರೀದಿಸಿದ ಬಗ್ಗೆ ಬಂದ ಖಚಿತ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ಒಬ್ಬ ಆರೋಪಿಯನ್ನು 04.11.2020ರಂದು ಬಂಧಿಸಿ 500 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೆ.ಜಿ.ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ತನಿಖೆಯ ಸಮಯದಲ್ಲಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಸೇರಿದಂತೆ ಇತರ ಹತ್ತು ಆರೋಪಿಗಳನ್ನು ಬಂಧಿಸಲಾಯಿತು.

ಆರೋಪಿ ಶ್ರೀಕೃಷ್ಣನ ವಿಚಾರಣೆಯ ಸಮಯದಲ್ಲಿ, ಆತ ಅನೇಕ ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದರಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡನು. ಇದರ ಆಧಾರದಲ್ಲಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ 153/2020ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಹ್ಯಾಕರ್ ಶ್ರೀಕೃಷ್ಣನ ಖಾತೆಯಿಂದ ಯಾವುದೇ ಬಿಟ್‌ಕಾಯಿನ್‌ಗಳು ವರ್ಗಾವಣೆಯಾಗಿಲ್ಲ ಅಥವಾ ಯಾವುದೇ ಬಿಟ್‌ಕಾಯಿನ್ ಕಳೆದುಹೋಗಿಲ್ಲ.

ಇದನ್ನೂ ಓದಿರಿ: ಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

ಕ್ರಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ, ಬಿಟ್‌ಕಾಯಿನ್ ಖಾತೆಯನ್ನು ತೆರೆಯುವುದು ಅಗತ್ಯವೆಂದು ಭಾವಿಸಲಾಯಿತು. ಅದರಂತೆ ಬಿಟ್ ಕಾಯಿನ್ ಖಾತೆಯನ್ನು ತೆರೆಯಲು ಸರ್ಕಾರವು ಆದೇಶಿಸಿದೆ. ಬಿಟ್‌ಕಾಯಿನ್‌ಗಳನ್ನು ಗುರುತಿಸುವ ಮತ್ತು ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಆರೋಪಿ ಶ್ರೀಕಿ ಬಿಟಿಸಿ ವ್ಯಾಲೆಟ್ ತೋರಿಸಿದನು. ಅದರಲ್ಲಿ 31.8 ಬಿಟಿಸಿ ಇತ್ತು. ಸೈಬರ್ ತಜ್ಞರ ಸಮ್ಮುಖದಲ್ಲಿ ವ್ಯಾಲೆಟ್ ಪಾಸ್‌ವರ್ಡ್ ಬದಲಾಯಿಸಲಾಯಿತು. ಸಂಪೂರ್ಣ ಕಾರ್ಯವಿಧಾನವನ್ನು ಮಹಜರ್ ಮಾಡಲಾಗಿದೆ. ಎಲ್ಲವನ್ನೂ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ತರುವಾಯ, ಈ ಬಿಟ್ ಕಾಯಿನ್‌ಗಳನ್ನು ಪೊಲೀಸ್ ವ್ಯಾಲೆಟ್ ಖಾತೆಗೆ ವರ್ಗಾಯಿಸಲು ಪಾಸ್‌ವರ್ಡ್ ಬಳಸಲು ನ್ಯಾಯಾಲಯ ಅನುಮತಿ ನೀಡಿತು. ಆರೋಪಿ ಶ್ರೀಕೃಷ್ಣನ ವಾಲೆಟ್ ತೆರೆದಾಗ ಅದರಲ್ಲಿ 186.811 ಬಿಟ್‌ಕಾಯಿನ್‌ಗಳು ಕಂಡುಬಂದಿವೆ. ಆರೋಪಿಯು ಇದು ತನ್ನ ವೈಯಕ್ತಿಕ ವಾಲೆಟ್‌ ಎಂದು ಹೇಳಿಕೊಂಡಿದ್ದಾನೆ. ಆರೋಪಿಯ ಬಳಿ ಖಾಸಗಿ ಕೀ ಇರಲಿಲ್ಲ ಎಂದು ಸೈಬರ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ, ಪೊಲೀಸ್ ವ್ಯಾಲೆಟ್‌ಗೆ ಯಾವುದೇ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿಲ್ಲ. ಈ ಎಲ್ಲ ಸಂಬಂಧಿತ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಚಾರ್ಜ್‌‌ಶೀಟ್‌ ಸಲ್ಲಿಸಲಾಗಿದೆ.

ಪೊಲೀಸರು ಹಾಗೂ ಹೊರಗಿನ ಡೊಮೇನ್ ತಜ್ಞರನ್ನು ಒಳಗೊಂಡಂತೆ ಅತ್ಯಂತ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸೂಕ್ತವಾಗಿ ದಾಖಲಿಸಲಾಗಿದೆ. ಯಾವುದೇ ಹಂತದಲ್ಲೂ ನ್ಯಾಯಯುತ ತನಿಖೆ ಮತ್ತು ಕಾನೂನಿನ ಪ್ರಕ್ರಿಯೆಗೆ ಧಕ್ಕೆ ತರುವಂತಹ ಕೆಲಸವನ್ನು ಮಾಡಿಲ್ಲ. ಯಾವುದೇ ಬಾಹ್ಯ ಪ್ರಭಾವ ಅಥವಾ ಹಸ್ತಕ್ಷೇಪವಿಲ್ಲದೆ ವೃತ್ತಿಪರರು ತನಿಖೆ ನಡೆಸಿದ್ದಾರೆ.

14,682 ಬಿಟ್‌ಫೈನೆಕ್ಸ್ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿದೆ ಎಂದು ಪ್ರತಿಪಾದಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಆರೋಪಿಗಳ ಬಂಧನಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಸಿಕ್ಕಿದ್ದರೂ ಇಲ್ಲಿಯವರೆಗೆ ಯಾವುದೇ ವಿದೇಶಿ ಕಾನೂನು ಜಾರಿ ಸಂಸ್ಥೆಗಳು, ಯಾವುದೇ ವಿದೇಶಿ ಕಂಪನಿಗಳು ಯಾವುದೇ ಹ್ಯಾಕಿಂಗ್ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂಬುದು ಸತ್ಯ. 

ಬಿಟ್‌ಫೈನೆಕ್ಸ್ ಕಂಪನಿಯ ಪ್ರತಿನಿಧಿಗಳು ಸಹ ಹ್ಯಾಕಿಂಗ್‌ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಆಪಾದಿತ ನಡೆಸಿರುವ 15 ವಹಿವಾಟಿನ ನಂತರ ಸುಮಾರು ಒಂದು ವರ್ಷ ಕಳೆದಿದ್ದರೂ, ಬಿಟ್‌ಫೈನೆಕ್ಸ್/ ಕಾನೂನು ಜಾರಿ ಏಜೆನ್ಸಿಗಳ ಯಾವುದೇ ಪ್ರತಿನಿಧಿಗಳು ಪೊಲೀಸರು ಅಥವಾ ಯಾವುದೇ ಸಂಬಂಧಪಟ್ಟ ಏಜೆನ್ಸಿಯನ್ನು ಸಂಪರ್ಕಿಸಿಲ್ಲ.

ಆರೋಪಿಯು ತನ್ನ ಸ್ವಯಂಪ್ರೇರಿತ ಹೇಳಿಕೆಯ ಸಮಯದಲ್ಲಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದೆ ವೆಬ್‌ಸೈಟ್‌ಗಳ ಹ್ಯಾಕಿಂಗ್‌ ಸಂಬಂಧ ಹೇಳಿದ್ದಾನೆ. ಇದನ್ನು ಖಚಿತಪಡಿಸಿಕೊಳ್ಳಲು ಪ್ರಾಥಮಿಕ ತನಿಖೆಯನ್ನು ನಡೆಸಲಾಯಿತು. ಸೈಬರ್ ತಜ್ಞರು ಡಿಜಿಟಲ್ ಸಾಕ್ಷ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಆರೋಪಿಯ ಹೆಚ್ಚಿನ ಪ್ರತಿಪಾದನೆಗಳು ಆಧಾರರಹಿತವಾಗಿವೆ ಎಂದು ತಿಳಿದುಬಂದಿದೆ.


ಇದನ್ನೂ ಓದಿರಿ: ಶ್ರೀಕೃಷ್ಣ ತಂದ ಬಿಟ್‌ಕಾಯಿನ್ ಬಿರುಗಾಳಿ! ಬ್ಲಾಕ್ ಚೈನ್ ಮತ್ತು ಬಿಟ್‌ಕಾಯಿನ್ ಬಗ್ಗೆ ಒಂದಿಷ್ಟು..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...