Homeಕರ್ನಾಟಕಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

- Advertisement -
- Advertisement -

ರಾಜ್ಯ ಪೊಲೀಸ್ ಇಲಾಖೆಯು ಬಿಟ್ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದೆ. ನಾಲ್ಕು ಪುಟಗಳ ಪತ್ರಿಕಾ ಹೇಳಿಕೆಯನ್ನು ನೀಡಿರುವ ಪೊಲೀಸ್ ಇಲಾಖೆ, ಬಿಟ್‌ ಕಾಯಿನ್‌ ವರ್ಗಾವಣೆ ಆರೋಪವನ್ನು ಅಲ್ಲಗಳೆದಿದೆ. ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯು ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ ಮಾಡಿದ್ದಾನೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ವರದಿಗಳು ಅಪೂರ್ಣವಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಪ್ರತಿಕ್ರಿಯೆ ಹೀಗಿದೆ:

ಬಿಟ್‌ಕಾಯಿನ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ತಿರುಚಿದ ವರದಿಗಳು ಪ್ರಕಟವಾಗುತ್ತಿವೆ. ಸಿಸಿಬಿ ತನಿಖೆಯು ನ್ಯಾಯಯುತ ಹಾಗೂ ವೃತ್ತಿಪರತೆಯಿಂದ ಕೂಡಿದೆ. ಅಪೂರ್ಣ ಅಥವಾ ತಿರುಚಿದ ಸಂಗತಿಗಳಿಂದ ತಪ್ಪುದಾರಿಗೆಳೆಯುವ ವರದಿಗಳನ್ನು ತೇಲಿಬಿಡಲಾಗುತ್ತಿದೆ. ಇಂತಹ ಎಲ್ಲಾ ವರದಿಗಳನ್ನು ನಿರಾಕರಿಸಬೇಕು.

ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುವನ್ನು ಖರೀದಿಸಿದ ಬಗ್ಗೆ ಬಂದ ಖಚಿತ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ಒಬ್ಬ ಆರೋಪಿಯನ್ನು 04.11.2020ರಂದು ಬಂಧಿಸಿ 500 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೆ.ಜಿ.ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ತನಿಖೆಯ ಸಮಯದಲ್ಲಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಸೇರಿದಂತೆ ಇತರ ಹತ್ತು ಆರೋಪಿಗಳನ್ನು ಬಂಧಿಸಲಾಯಿತು.

ಆರೋಪಿ ಶ್ರೀಕೃಷ್ಣನ ವಿಚಾರಣೆಯ ಸಮಯದಲ್ಲಿ, ಆತ ಅನೇಕ ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದರಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡನು. ಇದರ ಆಧಾರದಲ್ಲಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ 153/2020ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಹ್ಯಾಕರ್ ಶ್ರೀಕೃಷ್ಣನ ಖಾತೆಯಿಂದ ಯಾವುದೇ ಬಿಟ್‌ಕಾಯಿನ್‌ಗಳು ವರ್ಗಾವಣೆಯಾಗಿಲ್ಲ ಅಥವಾ ಯಾವುದೇ ಬಿಟ್‌ಕಾಯಿನ್ ಕಳೆದುಹೋಗಿಲ್ಲ.

ಇದನ್ನೂ ಓದಿರಿ: ಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

ಕ್ರಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ, ಬಿಟ್‌ಕಾಯಿನ್ ಖಾತೆಯನ್ನು ತೆರೆಯುವುದು ಅಗತ್ಯವೆಂದು ಭಾವಿಸಲಾಯಿತು. ಅದರಂತೆ ಬಿಟ್ ಕಾಯಿನ್ ಖಾತೆಯನ್ನು ತೆರೆಯಲು ಸರ್ಕಾರವು ಆದೇಶಿಸಿದೆ. ಬಿಟ್‌ಕಾಯಿನ್‌ಗಳನ್ನು ಗುರುತಿಸುವ ಮತ್ತು ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಆರೋಪಿ ಶ್ರೀಕಿ ಬಿಟಿಸಿ ವ್ಯಾಲೆಟ್ ತೋರಿಸಿದನು. ಅದರಲ್ಲಿ 31.8 ಬಿಟಿಸಿ ಇತ್ತು. ಸೈಬರ್ ತಜ್ಞರ ಸಮ್ಮುಖದಲ್ಲಿ ವ್ಯಾಲೆಟ್ ಪಾಸ್‌ವರ್ಡ್ ಬದಲಾಯಿಸಲಾಯಿತು. ಸಂಪೂರ್ಣ ಕಾರ್ಯವಿಧಾನವನ್ನು ಮಹಜರ್ ಮಾಡಲಾಗಿದೆ. ಎಲ್ಲವನ್ನೂ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ತರುವಾಯ, ಈ ಬಿಟ್ ಕಾಯಿನ್‌ಗಳನ್ನು ಪೊಲೀಸ್ ವ್ಯಾಲೆಟ್ ಖಾತೆಗೆ ವರ್ಗಾಯಿಸಲು ಪಾಸ್‌ವರ್ಡ್ ಬಳಸಲು ನ್ಯಾಯಾಲಯ ಅನುಮತಿ ನೀಡಿತು. ಆರೋಪಿ ಶ್ರೀಕೃಷ್ಣನ ವಾಲೆಟ್ ತೆರೆದಾಗ ಅದರಲ್ಲಿ 186.811 ಬಿಟ್‌ಕಾಯಿನ್‌ಗಳು ಕಂಡುಬಂದಿವೆ. ಆರೋಪಿಯು ಇದು ತನ್ನ ವೈಯಕ್ತಿಕ ವಾಲೆಟ್‌ ಎಂದು ಹೇಳಿಕೊಂಡಿದ್ದಾನೆ. ಆರೋಪಿಯ ಬಳಿ ಖಾಸಗಿ ಕೀ ಇರಲಿಲ್ಲ ಎಂದು ಸೈಬರ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ, ಪೊಲೀಸ್ ವ್ಯಾಲೆಟ್‌ಗೆ ಯಾವುದೇ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿಲ್ಲ. ಈ ಎಲ್ಲ ಸಂಬಂಧಿತ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಚಾರ್ಜ್‌‌ಶೀಟ್‌ ಸಲ್ಲಿಸಲಾಗಿದೆ.

ಪೊಲೀಸರು ಹಾಗೂ ಹೊರಗಿನ ಡೊಮೇನ್ ತಜ್ಞರನ್ನು ಒಳಗೊಂಡಂತೆ ಅತ್ಯಂತ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸೂಕ್ತವಾಗಿ ದಾಖಲಿಸಲಾಗಿದೆ. ಯಾವುದೇ ಹಂತದಲ್ಲೂ ನ್ಯಾಯಯುತ ತನಿಖೆ ಮತ್ತು ಕಾನೂನಿನ ಪ್ರಕ್ರಿಯೆಗೆ ಧಕ್ಕೆ ತರುವಂತಹ ಕೆಲಸವನ್ನು ಮಾಡಿಲ್ಲ. ಯಾವುದೇ ಬಾಹ್ಯ ಪ್ರಭಾವ ಅಥವಾ ಹಸ್ತಕ್ಷೇಪವಿಲ್ಲದೆ ವೃತ್ತಿಪರರು ತನಿಖೆ ನಡೆಸಿದ್ದಾರೆ.

14,682 ಬಿಟ್‌ಫೈನೆಕ್ಸ್ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿದೆ ಎಂದು ಪ್ರತಿಪಾದಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಆರೋಪಿಗಳ ಬಂಧನಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಸಿಕ್ಕಿದ್ದರೂ ಇಲ್ಲಿಯವರೆಗೆ ಯಾವುದೇ ವಿದೇಶಿ ಕಾನೂನು ಜಾರಿ ಸಂಸ್ಥೆಗಳು, ಯಾವುದೇ ವಿದೇಶಿ ಕಂಪನಿಗಳು ಯಾವುದೇ ಹ್ಯಾಕಿಂಗ್ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂಬುದು ಸತ್ಯ. 

ಬಿಟ್‌ಫೈನೆಕ್ಸ್ ಕಂಪನಿಯ ಪ್ರತಿನಿಧಿಗಳು ಸಹ ಹ್ಯಾಕಿಂಗ್‌ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಆಪಾದಿತ ನಡೆಸಿರುವ 15 ವಹಿವಾಟಿನ ನಂತರ ಸುಮಾರು ಒಂದು ವರ್ಷ ಕಳೆದಿದ್ದರೂ, ಬಿಟ್‌ಫೈನೆಕ್ಸ್/ ಕಾನೂನು ಜಾರಿ ಏಜೆನ್ಸಿಗಳ ಯಾವುದೇ ಪ್ರತಿನಿಧಿಗಳು ಪೊಲೀಸರು ಅಥವಾ ಯಾವುದೇ ಸಂಬಂಧಪಟ್ಟ ಏಜೆನ್ಸಿಯನ್ನು ಸಂಪರ್ಕಿಸಿಲ್ಲ.

ಆರೋಪಿಯು ತನ್ನ ಸ್ವಯಂಪ್ರೇರಿತ ಹೇಳಿಕೆಯ ಸಮಯದಲ್ಲಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದೆ ವೆಬ್‌ಸೈಟ್‌ಗಳ ಹ್ಯಾಕಿಂಗ್‌ ಸಂಬಂಧ ಹೇಳಿದ್ದಾನೆ. ಇದನ್ನು ಖಚಿತಪಡಿಸಿಕೊಳ್ಳಲು ಪ್ರಾಥಮಿಕ ತನಿಖೆಯನ್ನು ನಡೆಸಲಾಯಿತು. ಸೈಬರ್ ತಜ್ಞರು ಡಿಜಿಟಲ್ ಸಾಕ್ಷ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಆರೋಪಿಯ ಹೆಚ್ಚಿನ ಪ್ರತಿಪಾದನೆಗಳು ಆಧಾರರಹಿತವಾಗಿವೆ ಎಂದು ತಿಳಿದುಬಂದಿದೆ.


ಇದನ್ನೂ ಓದಿರಿ: ಶ್ರೀಕೃಷ್ಣ ತಂದ ಬಿಟ್‌ಕಾಯಿನ್ ಬಿರುಗಾಳಿ! ಬ್ಲಾಕ್ ಚೈನ್ ಮತ್ತು ಬಿಟ್‌ಕಾಯಿನ್ ಬಗ್ಗೆ ಒಂದಿಷ್ಟು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...