Homeಕರ್ನಾಟಕಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ - ಡಾ. ಮೀನಾ ಕಂದಸಾಮಿ

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ – ಡಾ. ಮೀನಾ ಕಂದಸಾಮಿ

- Advertisement -
- Advertisement -

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ ಎಂದು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಡಾ. ಮೀನಾ ಕಂದಸಾಮಿ ಮಂಗಳವಾರ ಹೇಳಿದ್ದಾರೆ. ಅವರು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಐದನೇ ಪಿ.ಪಿ.ಗೋಮತಿ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪ್ರತಿರೋಧಕ್ಕಾಗಿ ಬರವಣಿಗೆ’ ಕುರಿತು ಮಾತನಾಡುತ್ತಿದ್ದರು.

ಕರ್ನಾಟಕ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಪಿ.ಪಿ.ಗೋಮತಿ ಸ್ಮಾರಕ ಶಿಕ್ಷಣ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಲೇಖಕಿ, ಕವಯಿತ್ರಿ, ಜಾತಿ ವಿರೋಧಿ ಹೋರಾಟಗಾರ್ತಿಯು ಆಗಿರುವ ಮೀನಾ ಕಂದಸಾಮಿ ಅವರು ಮಾತನಾಡುತ್ತಾ, ಯೂನಿವರ್ಸಿಟಿಗಳಲ್ಲಿ ದೊಡ್ಡ ಮಟ್ಟದಲ್ಲಿ ತಳಸಮುದಾಯಗಳ ವಿದ್ಯಾರ್ಥಿಗಳು ಮಾನಸಿಕ, ಹಾಗೂ ದೈಹಿಕ ಶೋಷಣೆ ಅನುಭವಿಸುತ್ತಿರುವುದನ್ನು ಪ್ರತಿನಿತ್ಯ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಒಂದು ವ್ಯವಸ್ಥೆಯಾಗಿ ಯೂನಿವರ್ಸಿಟಿಗಳು ಬ್ರಾಹ್ಮಣವಾದದ ಅಡ್ಡೆಗಳಾಗಿವೆ. ದೇವಸ್ಥಾನಗಳಲ್ಲಿ ಪುರೋಹಿತರು ಸನಾತನಾವಾದಿಗಳಾಗಿರದೇ ಇರಬಹುದು, ಆದರೆ ಯೂನಿವರ್ಸಿಟಿಗಳಲ್ಲಿ ಇರುವ ಸನಾತನವಾದ ಬಹುಜನರನ್ನು ಉಸಿರುಗಟ್ಟಿಸುವ ಮಟ್ಟಿಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಭಾರತದಲ್ಲಿ ಬರವಣಿಗೆ, ಪ್ರತಿರೋಧ ಮತ್ತು ಸೆನ್ಸಾರ್‌ಶಿಪ್‌ಗಳ ಅಪಾಯಗಳ ಬಗ್ಗೆ ಮಾತನಾಡಿದ ಅವರು, ಅಹಿತಕರ ಸತ್ಯಗಳನ್ನು ಮಾತನಾಡಲು ಮುಂದೆ ಬರುತ್ತಿರುವ ಬರಹಗಾರರು ಎದುರಿಸುತ್ತಿರುವ ಹೋರಾಟಗಳತ್ತ ಅವರು ಗಮನ ಸೆಳೆದರು. ”ಸಾಹಿತಿಗಳಾದ ಎಂ.ಎಂ. ಕಲ್ಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರಿಬ್ಬರೂ ತಮ್ಮ ನಿರ್ಭೀತ ಮಾತುಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಹತ್ಯೆಯಾದರು. ನೀವು ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ” ಎಂದು ಅವರು ಟೀಕಿಸಿದರು.

ಭಿನ್ನಾಭಿಪ್ರಾಯವನ್ನು ನಿಗ್ರಹಿಸುವ ಪ್ರಸ್ತುತ ವಾತಾವರಣದ ಬಗ್ಗೆ ಅವರು ವಿಷಾದಿಸಿದ ಅವರು, “ವಿಮರ್ಶಾತ್ಮಕ ಧ್ವನಿಗಳನ್ನು ರಾಷ್ಟ್ರಕ್ಕೆ ಬೆದರಿಕೆ ಎಂದು ಹೇಳಲಾಗುತ್ತದೆ. ಲೇಖಕರನ್ನು ಯಾಕೆ ಕೊಲ್ಲಲಾಗುತ್ತದೆ ಅಥವಾ ಜೈಲಿಗೆ ಹಾಕಲಾಗುತ್ತಿದೆ?. ಇಂತಹ ಜನರನ್ನು ಅರ್ಬನ್ ನಕ್ಸಲರು ಎಂದು ಬ್ರಾಂಡ್ ಮಾಡುವ ಮೂಲಕ ಸರ್ಕಾರವು ಹೋರಾಟಗಾರರು ಮತ್ತು ಬರಹಗಾರರ ಲೇಖನಿಗಳನ್ನು ಹಾಗೂ ದಂಗೆಕೋರರ ಬಂದೂಕುಗಳಿಗೆ ಸಮೀಕರಿಸುತ್ತಿದೆ. ಅಂತಹ ಹೋಲಿಕೆಗಳು ಭಿನ್ನಾಭಿಪ್ರಾಯದ ಧ್ವನಿಗಳಿಗೆ ಸರ್ಕಾರಿ ಕಿರುಕುಳವನ್ನು ಕಾನೂನುಬದ್ಧಗೊಳಿಸುತ್ತವೆ” ಎಂದು ಅವರು ಎಚ್ಚರಿಸಿದ್ದಾರೆ.

“ರಾಜಕೀಯ ವ್ಯಕ್ತಿಗಳು ಮತ್ತು ಹೋರಾಟಗಾರರನ್ನು ಮೌನಗೊಳಿಸಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಂತಹ ಸರ್ಕಾರಿ ಯಂತ್ರಗಳ ದುರುಪಯೋಗ ಮಾಡಲಾಗುತ್ತಿದೆ. ಮೂಲತಃ ನ್ಯಾಯವನ್ನು ಎತ್ತಿಹಿಡಿಯಲು ರಚಿಸಲಾಗಿರುವ ಈ ಏಜೆನ್ಸಿಗಳು ಜನರ ನಿಗ್ರಹದ ಸಾಧನಗಳಾಗಿ ಮಾರ್ಪಟ್ಟಿವೆ. ಬರಹಗಾರರು ಸೆನ್ಸಾರ್‌ಶಿಪ್‌ನ ಬಲಿಪಶುಗಳಾಗಿದ್ದಾರೆ. ಈ ದೇಶದಲ್ಲಿ, ಕೇವಲ ಬರವಣಿಗೆ ಮಾತ್ರವಲ್ಲ, ಓದುವುದು ಸಹ ಪ್ರತಿರೋಧವಾಗಿದೆ. ವ್ಯಾಪಕವಾದ ದಮನದ ಸಮಯದಲ್ಲಿ ಸಾಹಿತ್ಯದೊಂದಿಗೆ ವಿಮರ್ಶಾತ್ಮಕವಾಗಿ ತೊಡಗಿಸಿಕೊಳ್ಳಬೇಕು” ಎಂದು ಮೀನಾ ಕಂದಸಾಮಿ ಅವರು ಪ್ರೇಕ್ಷಕರನ್ನು ಒತ್ತಾಯಿಸಿದ್ದಾರೆ.

ದ್ವೇಷ ಭಾಷಣವನ್ನು ಬಹಿರಂಗಪಡಿಸುವುದಕ್ಕಾಗಿ ಅನೇಕ ಕಾನೂನು ಸವಾಲುಗಳನ್ನು ಎದುರಿಸುತ್ತಿರುವ ಪತ್ರಕರ್ತ ಮತ್ತು ಫ್ಯಾಕ್ಟ್‌ ಚೆಕ್ಕರ್‌ ಮೊಹಮ್ಮದ್ ಜುಬೈರ್ ಅವರ ಉದಾಹರಣೆಯನ್ನು ಅವರು ಉಲ್ಲೇಖಿಸಿದ ಅವರು, ಸತ್ಯ ಹೇಳುವವರನ್ನು ದೇಶದ ಶತ್ರುಗಳಾಗಿ ಬಿಂಬಿಸುವ ಪ್ರವೃತ್ತಿಯು ಬೆಳೆಯುತ್ತಿರುವ ಬಗ್ಗೆ ಎತ್ತಿತೋರಿಸಿದ್ದಾರೆ. ಸತ್ಯ ಮಾತನಾಡುವ, ಅನ್ಯಾಯವನ್ನು ಬಯಲಿಗೆಳೆದು, ಶೋಷಿತರಿಗೆ ಸಾಂತ್ವನ ಹೇಳುವವರೇ ನಿಜವಾದ ದೇಶಭಕ್ತರೆಂದು ಗುರುತಿಸಲ್ಪಡುತ್ತಾರೆ ಎಂದು ಡಾ.ಕಂದಸಾಮಿ ಆಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...