Homeಕರ್ನಾಟಕಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ - ಡಾ. ಮೀನಾ ಕಂದಸಾಮಿ

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ – ಡಾ. ಮೀನಾ ಕಂದಸಾಮಿ

- Advertisement -
- Advertisement -

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ ಎಂದು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಡಾ. ಮೀನಾ ಕಂದಸಾಮಿ ಮಂಗಳವಾರ ಹೇಳಿದ್ದಾರೆ. ಅವರು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಐದನೇ ಪಿ.ಪಿ.ಗೋಮತಿ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪ್ರತಿರೋಧಕ್ಕಾಗಿ ಬರವಣಿಗೆ’ ಕುರಿತು ಮಾತನಾಡುತ್ತಿದ್ದರು.

ಕರ್ನಾಟಕ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಪಿ.ಪಿ.ಗೋಮತಿ ಸ್ಮಾರಕ ಶಿಕ್ಷಣ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಲೇಖಕಿ, ಕವಯಿತ್ರಿ, ಜಾತಿ ವಿರೋಧಿ ಹೋರಾಟಗಾರ್ತಿಯು ಆಗಿರುವ ಮೀನಾ ಕಂದಸಾಮಿ ಅವರು ಮಾತನಾಡುತ್ತಾ, ಯೂನಿವರ್ಸಿಟಿಗಳಲ್ಲಿ ದೊಡ್ಡ ಮಟ್ಟದಲ್ಲಿ ತಳಸಮುದಾಯಗಳ ವಿದ್ಯಾರ್ಥಿಗಳು ಮಾನಸಿಕ, ಹಾಗೂ ದೈಹಿಕ ಶೋಷಣೆ ಅನುಭವಿಸುತ್ತಿರುವುದನ್ನು ಪ್ರತಿನಿತ್ಯ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಒಂದು ವ್ಯವಸ್ಥೆಯಾಗಿ ಯೂನಿವರ್ಸಿಟಿಗಳು ಬ್ರಾಹ್ಮಣವಾದದ ಅಡ್ಡೆಗಳಾಗಿವೆ. ದೇವಸ್ಥಾನಗಳಲ್ಲಿ ಪುರೋಹಿತರು ಸನಾತನಾವಾದಿಗಳಾಗಿರದೇ ಇರಬಹುದು, ಆದರೆ ಯೂನಿವರ್ಸಿಟಿಗಳಲ್ಲಿ ಇರುವ ಸನಾತನವಾದ ಬಹುಜನರನ್ನು ಉಸಿರುಗಟ್ಟಿಸುವ ಮಟ್ಟಿಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಭಾರತದಲ್ಲಿ ಬರವಣಿಗೆ, ಪ್ರತಿರೋಧ ಮತ್ತು ಸೆನ್ಸಾರ್‌ಶಿಪ್‌ಗಳ ಅಪಾಯಗಳ ಬಗ್ಗೆ ಮಾತನಾಡಿದ ಅವರು, ಅಹಿತಕರ ಸತ್ಯಗಳನ್ನು ಮಾತನಾಡಲು ಮುಂದೆ ಬರುತ್ತಿರುವ ಬರಹಗಾರರು ಎದುರಿಸುತ್ತಿರುವ ಹೋರಾಟಗಳತ್ತ ಅವರು ಗಮನ ಸೆಳೆದರು. ”ಸಾಹಿತಿಗಳಾದ ಎಂ.ಎಂ. ಕಲ್ಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರಿಬ್ಬರೂ ತಮ್ಮ ನಿರ್ಭೀತ ಮಾತುಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಹತ್ಯೆಯಾದರು. ನೀವು ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ” ಎಂದು ಅವರು ಟೀಕಿಸಿದರು.

ಭಿನ್ನಾಭಿಪ್ರಾಯವನ್ನು ನಿಗ್ರಹಿಸುವ ಪ್ರಸ್ತುತ ವಾತಾವರಣದ ಬಗ್ಗೆ ಅವರು ವಿಷಾದಿಸಿದ ಅವರು, “ವಿಮರ್ಶಾತ್ಮಕ ಧ್ವನಿಗಳನ್ನು ರಾಷ್ಟ್ರಕ್ಕೆ ಬೆದರಿಕೆ ಎಂದು ಹೇಳಲಾಗುತ್ತದೆ. ಲೇಖಕರನ್ನು ಯಾಕೆ ಕೊಲ್ಲಲಾಗುತ್ತದೆ ಅಥವಾ ಜೈಲಿಗೆ ಹಾಕಲಾಗುತ್ತಿದೆ?. ಇಂತಹ ಜನರನ್ನು ಅರ್ಬನ್ ನಕ್ಸಲರು ಎಂದು ಬ್ರಾಂಡ್ ಮಾಡುವ ಮೂಲಕ ಸರ್ಕಾರವು ಹೋರಾಟಗಾರರು ಮತ್ತು ಬರಹಗಾರರ ಲೇಖನಿಗಳನ್ನು ಹಾಗೂ ದಂಗೆಕೋರರ ಬಂದೂಕುಗಳಿಗೆ ಸಮೀಕರಿಸುತ್ತಿದೆ. ಅಂತಹ ಹೋಲಿಕೆಗಳು ಭಿನ್ನಾಭಿಪ್ರಾಯದ ಧ್ವನಿಗಳಿಗೆ ಸರ್ಕಾರಿ ಕಿರುಕುಳವನ್ನು ಕಾನೂನುಬದ್ಧಗೊಳಿಸುತ್ತವೆ” ಎಂದು ಅವರು ಎಚ್ಚರಿಸಿದ್ದಾರೆ.

“ರಾಜಕೀಯ ವ್ಯಕ್ತಿಗಳು ಮತ್ತು ಹೋರಾಟಗಾರರನ್ನು ಮೌನಗೊಳಿಸಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಂತಹ ಸರ್ಕಾರಿ ಯಂತ್ರಗಳ ದುರುಪಯೋಗ ಮಾಡಲಾಗುತ್ತಿದೆ. ಮೂಲತಃ ನ್ಯಾಯವನ್ನು ಎತ್ತಿಹಿಡಿಯಲು ರಚಿಸಲಾಗಿರುವ ಈ ಏಜೆನ್ಸಿಗಳು ಜನರ ನಿಗ್ರಹದ ಸಾಧನಗಳಾಗಿ ಮಾರ್ಪಟ್ಟಿವೆ. ಬರಹಗಾರರು ಸೆನ್ಸಾರ್‌ಶಿಪ್‌ನ ಬಲಿಪಶುಗಳಾಗಿದ್ದಾರೆ. ಈ ದೇಶದಲ್ಲಿ, ಕೇವಲ ಬರವಣಿಗೆ ಮಾತ್ರವಲ್ಲ, ಓದುವುದು ಸಹ ಪ್ರತಿರೋಧವಾಗಿದೆ. ವ್ಯಾಪಕವಾದ ದಮನದ ಸಮಯದಲ್ಲಿ ಸಾಹಿತ್ಯದೊಂದಿಗೆ ವಿಮರ್ಶಾತ್ಮಕವಾಗಿ ತೊಡಗಿಸಿಕೊಳ್ಳಬೇಕು” ಎಂದು ಮೀನಾ ಕಂದಸಾಮಿ ಅವರು ಪ್ರೇಕ್ಷಕರನ್ನು ಒತ್ತಾಯಿಸಿದ್ದಾರೆ.

ದ್ವೇಷ ಭಾಷಣವನ್ನು ಬಹಿರಂಗಪಡಿಸುವುದಕ್ಕಾಗಿ ಅನೇಕ ಕಾನೂನು ಸವಾಲುಗಳನ್ನು ಎದುರಿಸುತ್ತಿರುವ ಪತ್ರಕರ್ತ ಮತ್ತು ಫ್ಯಾಕ್ಟ್‌ ಚೆಕ್ಕರ್‌ ಮೊಹಮ್ಮದ್ ಜುಬೈರ್ ಅವರ ಉದಾಹರಣೆಯನ್ನು ಅವರು ಉಲ್ಲೇಖಿಸಿದ ಅವರು, ಸತ್ಯ ಹೇಳುವವರನ್ನು ದೇಶದ ಶತ್ರುಗಳಾಗಿ ಬಿಂಬಿಸುವ ಪ್ರವೃತ್ತಿಯು ಬೆಳೆಯುತ್ತಿರುವ ಬಗ್ಗೆ ಎತ್ತಿತೋರಿಸಿದ್ದಾರೆ. ಸತ್ಯ ಮಾತನಾಡುವ, ಅನ್ಯಾಯವನ್ನು ಬಯಲಿಗೆಳೆದು, ಶೋಷಿತರಿಗೆ ಸಾಂತ್ವನ ಹೇಳುವವರೇ ನಿಜವಾದ ದೇಶಭಕ್ತರೆಂದು ಗುರುತಿಸಲ್ಪಡುತ್ತಾರೆ ಎಂದು ಡಾ.ಕಂದಸಾಮಿ ಆಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...