Homeಕರ್ನಾಟಕಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ - ಡಾ. ಮೀನಾ ಕಂದಸಾಮಿ

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ – ಡಾ. ಮೀನಾ ಕಂದಸಾಮಿ

- Advertisement -
- Advertisement -

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ ಎಂದು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಡಾ. ಮೀನಾ ಕಂದಸಾಮಿ ಮಂಗಳವಾರ ಹೇಳಿದ್ದಾರೆ. ಅವರು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಐದನೇ ಪಿ.ಪಿ.ಗೋಮತಿ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪ್ರತಿರೋಧಕ್ಕಾಗಿ ಬರವಣಿಗೆ’ ಕುರಿತು ಮಾತನಾಡುತ್ತಿದ್ದರು.

ಕರ್ನಾಟಕ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಪಿ.ಪಿ.ಗೋಮತಿ ಸ್ಮಾರಕ ಶಿಕ್ಷಣ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಲೇಖಕಿ, ಕವಯಿತ್ರಿ, ಜಾತಿ ವಿರೋಧಿ ಹೋರಾಟಗಾರ್ತಿಯು ಆಗಿರುವ ಮೀನಾ ಕಂದಸಾಮಿ ಅವರು ಮಾತನಾಡುತ್ತಾ, ಯೂನಿವರ್ಸಿಟಿಗಳಲ್ಲಿ ದೊಡ್ಡ ಮಟ್ಟದಲ್ಲಿ ತಳಸಮುದಾಯಗಳ ವಿದ್ಯಾರ್ಥಿಗಳು ಮಾನಸಿಕ, ಹಾಗೂ ದೈಹಿಕ ಶೋಷಣೆ ಅನುಭವಿಸುತ್ತಿರುವುದನ್ನು ಪ್ರತಿನಿತ್ಯ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಒಂದು ವ್ಯವಸ್ಥೆಯಾಗಿ ಯೂನಿವರ್ಸಿಟಿಗಳು ಬ್ರಾಹ್ಮಣವಾದದ ಅಡ್ಡೆಗಳಾಗಿವೆ. ದೇವಸ್ಥಾನಗಳಲ್ಲಿ ಪುರೋಹಿತರು ಸನಾತನಾವಾದಿಗಳಾಗಿರದೇ ಇರಬಹುದು, ಆದರೆ ಯೂನಿವರ್ಸಿಟಿಗಳಲ್ಲಿ ಇರುವ ಸನಾತನವಾದ ಬಹುಜನರನ್ನು ಉಸಿರುಗಟ್ಟಿಸುವ ಮಟ್ಟಿಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಭಾರತದಲ್ಲಿ ಬರವಣಿಗೆ, ಪ್ರತಿರೋಧ ಮತ್ತು ಸೆನ್ಸಾರ್‌ಶಿಪ್‌ಗಳ ಅಪಾಯಗಳ ಬಗ್ಗೆ ಮಾತನಾಡಿದ ಅವರು, ಅಹಿತಕರ ಸತ್ಯಗಳನ್ನು ಮಾತನಾಡಲು ಮುಂದೆ ಬರುತ್ತಿರುವ ಬರಹಗಾರರು ಎದುರಿಸುತ್ತಿರುವ ಹೋರಾಟಗಳತ್ತ ಅವರು ಗಮನ ಸೆಳೆದರು. ”ಸಾಹಿತಿಗಳಾದ ಎಂ.ಎಂ. ಕಲ್ಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರಿಬ್ಬರೂ ತಮ್ಮ ನಿರ್ಭೀತ ಮಾತುಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಹತ್ಯೆಯಾದರು. ನೀವು ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ” ಎಂದು ಅವರು ಟೀಕಿಸಿದರು.

ಭಿನ್ನಾಭಿಪ್ರಾಯವನ್ನು ನಿಗ್ರಹಿಸುವ ಪ್ರಸ್ತುತ ವಾತಾವರಣದ ಬಗ್ಗೆ ಅವರು ವಿಷಾದಿಸಿದ ಅವರು, “ವಿಮರ್ಶಾತ್ಮಕ ಧ್ವನಿಗಳನ್ನು ರಾಷ್ಟ್ರಕ್ಕೆ ಬೆದರಿಕೆ ಎಂದು ಹೇಳಲಾಗುತ್ತದೆ. ಲೇಖಕರನ್ನು ಯಾಕೆ ಕೊಲ್ಲಲಾಗುತ್ತದೆ ಅಥವಾ ಜೈಲಿಗೆ ಹಾಕಲಾಗುತ್ತಿದೆ?. ಇಂತಹ ಜನರನ್ನು ಅರ್ಬನ್ ನಕ್ಸಲರು ಎಂದು ಬ್ರಾಂಡ್ ಮಾಡುವ ಮೂಲಕ ಸರ್ಕಾರವು ಹೋರಾಟಗಾರರು ಮತ್ತು ಬರಹಗಾರರ ಲೇಖನಿಗಳನ್ನು ಹಾಗೂ ದಂಗೆಕೋರರ ಬಂದೂಕುಗಳಿಗೆ ಸಮೀಕರಿಸುತ್ತಿದೆ. ಅಂತಹ ಹೋಲಿಕೆಗಳು ಭಿನ್ನಾಭಿಪ್ರಾಯದ ಧ್ವನಿಗಳಿಗೆ ಸರ್ಕಾರಿ ಕಿರುಕುಳವನ್ನು ಕಾನೂನುಬದ್ಧಗೊಳಿಸುತ್ತವೆ” ಎಂದು ಅವರು ಎಚ್ಚರಿಸಿದ್ದಾರೆ.

“ರಾಜಕೀಯ ವ್ಯಕ್ತಿಗಳು ಮತ್ತು ಹೋರಾಟಗಾರರನ್ನು ಮೌನಗೊಳಿಸಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಂತಹ ಸರ್ಕಾರಿ ಯಂತ್ರಗಳ ದುರುಪಯೋಗ ಮಾಡಲಾಗುತ್ತಿದೆ. ಮೂಲತಃ ನ್ಯಾಯವನ್ನು ಎತ್ತಿಹಿಡಿಯಲು ರಚಿಸಲಾಗಿರುವ ಈ ಏಜೆನ್ಸಿಗಳು ಜನರ ನಿಗ್ರಹದ ಸಾಧನಗಳಾಗಿ ಮಾರ್ಪಟ್ಟಿವೆ. ಬರಹಗಾರರು ಸೆನ್ಸಾರ್‌ಶಿಪ್‌ನ ಬಲಿಪಶುಗಳಾಗಿದ್ದಾರೆ. ಈ ದೇಶದಲ್ಲಿ, ಕೇವಲ ಬರವಣಿಗೆ ಮಾತ್ರವಲ್ಲ, ಓದುವುದು ಸಹ ಪ್ರತಿರೋಧವಾಗಿದೆ. ವ್ಯಾಪಕವಾದ ದಮನದ ಸಮಯದಲ್ಲಿ ಸಾಹಿತ್ಯದೊಂದಿಗೆ ವಿಮರ್ಶಾತ್ಮಕವಾಗಿ ತೊಡಗಿಸಿಕೊಳ್ಳಬೇಕು” ಎಂದು ಮೀನಾ ಕಂದಸಾಮಿ ಅವರು ಪ್ರೇಕ್ಷಕರನ್ನು ಒತ್ತಾಯಿಸಿದ್ದಾರೆ.

ದ್ವೇಷ ಭಾಷಣವನ್ನು ಬಹಿರಂಗಪಡಿಸುವುದಕ್ಕಾಗಿ ಅನೇಕ ಕಾನೂನು ಸವಾಲುಗಳನ್ನು ಎದುರಿಸುತ್ತಿರುವ ಪತ್ರಕರ್ತ ಮತ್ತು ಫ್ಯಾಕ್ಟ್‌ ಚೆಕ್ಕರ್‌ ಮೊಹಮ್ಮದ್ ಜುಬೈರ್ ಅವರ ಉದಾಹರಣೆಯನ್ನು ಅವರು ಉಲ್ಲೇಖಿಸಿದ ಅವರು, ಸತ್ಯ ಹೇಳುವವರನ್ನು ದೇಶದ ಶತ್ರುಗಳಾಗಿ ಬಿಂಬಿಸುವ ಪ್ರವೃತ್ತಿಯು ಬೆಳೆಯುತ್ತಿರುವ ಬಗ್ಗೆ ಎತ್ತಿತೋರಿಸಿದ್ದಾರೆ. ಸತ್ಯ ಮಾತನಾಡುವ, ಅನ್ಯಾಯವನ್ನು ಬಯಲಿಗೆಳೆದು, ಶೋಷಿತರಿಗೆ ಸಾಂತ್ವನ ಹೇಳುವವರೇ ನಿಜವಾದ ದೇಶಭಕ್ತರೆಂದು ಗುರುತಿಸಲ್ಪಡುತ್ತಾರೆ ಎಂದು ಡಾ.ಕಂದಸಾಮಿ ಆಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...