Homeಕರ್ನಾಟಕಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ - ಡಾ. ಮೀನಾ ಕಂದಸಾಮಿ

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ – ಡಾ. ಮೀನಾ ಕಂದಸಾಮಿ

- Advertisement -
- Advertisement -

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ ಎಂದು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಡಾ. ಮೀನಾ ಕಂದಸಾಮಿ ಮಂಗಳವಾರ ಹೇಳಿದ್ದಾರೆ. ಅವರು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಐದನೇ ಪಿ.ಪಿ.ಗೋಮತಿ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪ್ರತಿರೋಧಕ್ಕಾಗಿ ಬರವಣಿಗೆ’ ಕುರಿತು ಮಾತನಾಡುತ್ತಿದ್ದರು.

ಕರ್ನಾಟಕ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಪಿ.ಪಿ.ಗೋಮತಿ ಸ್ಮಾರಕ ಶಿಕ್ಷಣ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಲೇಖಕಿ, ಕವಯಿತ್ರಿ, ಜಾತಿ ವಿರೋಧಿ ಹೋರಾಟಗಾರ್ತಿಯು ಆಗಿರುವ ಮೀನಾ ಕಂದಸಾಮಿ ಅವರು ಮಾತನಾಡುತ್ತಾ, ಯೂನಿವರ್ಸಿಟಿಗಳಲ್ಲಿ ದೊಡ್ಡ ಮಟ್ಟದಲ್ಲಿ ತಳಸಮುದಾಯಗಳ ವಿದ್ಯಾರ್ಥಿಗಳು ಮಾನಸಿಕ, ಹಾಗೂ ದೈಹಿಕ ಶೋಷಣೆ ಅನುಭವಿಸುತ್ತಿರುವುದನ್ನು ಪ್ರತಿನಿತ್ಯ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಒಂದು ವ್ಯವಸ್ಥೆಯಾಗಿ ಯೂನಿವರ್ಸಿಟಿಗಳು ಬ್ರಾಹ್ಮಣವಾದದ ಅಡ್ಡೆಗಳಾಗಿವೆ. ದೇವಸ್ಥಾನಗಳಲ್ಲಿ ಪುರೋಹಿತರು ಸನಾತನಾವಾದಿಗಳಾಗಿರದೇ ಇರಬಹುದು, ಆದರೆ ಯೂನಿವರ್ಸಿಟಿಗಳಲ್ಲಿ ಇರುವ ಸನಾತನವಾದ ಬಹುಜನರನ್ನು ಉಸಿರುಗಟ್ಟಿಸುವ ಮಟ್ಟಿಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಭಾರತದಲ್ಲಿ ಬರವಣಿಗೆ, ಪ್ರತಿರೋಧ ಮತ್ತು ಸೆನ್ಸಾರ್‌ಶಿಪ್‌ಗಳ ಅಪಾಯಗಳ ಬಗ್ಗೆ ಮಾತನಾಡಿದ ಅವರು, ಅಹಿತಕರ ಸತ್ಯಗಳನ್ನು ಮಾತನಾಡಲು ಮುಂದೆ ಬರುತ್ತಿರುವ ಬರಹಗಾರರು ಎದುರಿಸುತ್ತಿರುವ ಹೋರಾಟಗಳತ್ತ ಅವರು ಗಮನ ಸೆಳೆದರು. ”ಸಾಹಿತಿಗಳಾದ ಎಂ.ಎಂ. ಕಲ್ಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರಿಬ್ಬರೂ ತಮ್ಮ ನಿರ್ಭೀತ ಮಾತುಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಹತ್ಯೆಯಾದರು. ನೀವು ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ” ಎಂದು ಅವರು ಟೀಕಿಸಿದರು.

ಭಿನ್ನಾಭಿಪ್ರಾಯವನ್ನು ನಿಗ್ರಹಿಸುವ ಪ್ರಸ್ತುತ ವಾತಾವರಣದ ಬಗ್ಗೆ ಅವರು ವಿಷಾದಿಸಿದ ಅವರು, “ವಿಮರ್ಶಾತ್ಮಕ ಧ್ವನಿಗಳನ್ನು ರಾಷ್ಟ್ರಕ್ಕೆ ಬೆದರಿಕೆ ಎಂದು ಹೇಳಲಾಗುತ್ತದೆ. ಲೇಖಕರನ್ನು ಯಾಕೆ ಕೊಲ್ಲಲಾಗುತ್ತದೆ ಅಥವಾ ಜೈಲಿಗೆ ಹಾಕಲಾಗುತ್ತಿದೆ?. ಇಂತಹ ಜನರನ್ನು ಅರ್ಬನ್ ನಕ್ಸಲರು ಎಂದು ಬ್ರಾಂಡ್ ಮಾಡುವ ಮೂಲಕ ಸರ್ಕಾರವು ಹೋರಾಟಗಾರರು ಮತ್ತು ಬರಹಗಾರರ ಲೇಖನಿಗಳನ್ನು ಹಾಗೂ ದಂಗೆಕೋರರ ಬಂದೂಕುಗಳಿಗೆ ಸಮೀಕರಿಸುತ್ತಿದೆ. ಅಂತಹ ಹೋಲಿಕೆಗಳು ಭಿನ್ನಾಭಿಪ್ರಾಯದ ಧ್ವನಿಗಳಿಗೆ ಸರ್ಕಾರಿ ಕಿರುಕುಳವನ್ನು ಕಾನೂನುಬದ್ಧಗೊಳಿಸುತ್ತವೆ” ಎಂದು ಅವರು ಎಚ್ಚರಿಸಿದ್ದಾರೆ.

“ರಾಜಕೀಯ ವ್ಯಕ್ತಿಗಳು ಮತ್ತು ಹೋರಾಟಗಾರರನ್ನು ಮೌನಗೊಳಿಸಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಂತಹ ಸರ್ಕಾರಿ ಯಂತ್ರಗಳ ದುರುಪಯೋಗ ಮಾಡಲಾಗುತ್ತಿದೆ. ಮೂಲತಃ ನ್ಯಾಯವನ್ನು ಎತ್ತಿಹಿಡಿಯಲು ರಚಿಸಲಾಗಿರುವ ಈ ಏಜೆನ್ಸಿಗಳು ಜನರ ನಿಗ್ರಹದ ಸಾಧನಗಳಾಗಿ ಮಾರ್ಪಟ್ಟಿವೆ. ಬರಹಗಾರರು ಸೆನ್ಸಾರ್‌ಶಿಪ್‌ನ ಬಲಿಪಶುಗಳಾಗಿದ್ದಾರೆ. ಈ ದೇಶದಲ್ಲಿ, ಕೇವಲ ಬರವಣಿಗೆ ಮಾತ್ರವಲ್ಲ, ಓದುವುದು ಸಹ ಪ್ರತಿರೋಧವಾಗಿದೆ. ವ್ಯಾಪಕವಾದ ದಮನದ ಸಮಯದಲ್ಲಿ ಸಾಹಿತ್ಯದೊಂದಿಗೆ ವಿಮರ್ಶಾತ್ಮಕವಾಗಿ ತೊಡಗಿಸಿಕೊಳ್ಳಬೇಕು” ಎಂದು ಮೀನಾ ಕಂದಸಾಮಿ ಅವರು ಪ್ರೇಕ್ಷಕರನ್ನು ಒತ್ತಾಯಿಸಿದ್ದಾರೆ.

ದ್ವೇಷ ಭಾಷಣವನ್ನು ಬಹಿರಂಗಪಡಿಸುವುದಕ್ಕಾಗಿ ಅನೇಕ ಕಾನೂನು ಸವಾಲುಗಳನ್ನು ಎದುರಿಸುತ್ತಿರುವ ಪತ್ರಕರ್ತ ಮತ್ತು ಫ್ಯಾಕ್ಟ್‌ ಚೆಕ್ಕರ್‌ ಮೊಹಮ್ಮದ್ ಜುಬೈರ್ ಅವರ ಉದಾಹರಣೆಯನ್ನು ಅವರು ಉಲ್ಲೇಖಿಸಿದ ಅವರು, ಸತ್ಯ ಹೇಳುವವರನ್ನು ದೇಶದ ಶತ್ರುಗಳಾಗಿ ಬಿಂಬಿಸುವ ಪ್ರವೃತ್ತಿಯು ಬೆಳೆಯುತ್ತಿರುವ ಬಗ್ಗೆ ಎತ್ತಿತೋರಿಸಿದ್ದಾರೆ. ಸತ್ಯ ಮಾತನಾಡುವ, ಅನ್ಯಾಯವನ್ನು ಬಯಲಿಗೆಳೆದು, ಶೋಷಿತರಿಗೆ ಸಾಂತ್ವನ ಹೇಳುವವರೇ ನಿಜವಾದ ದೇಶಭಕ್ತರೆಂದು ಗುರುತಿಸಲ್ಪಡುತ್ತಾರೆ ಎಂದು ಡಾ.ಕಂದಸಾಮಿ ಆಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...