Homeಮುಖಪುಟಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ 'ಬಿಟ್ಟು ಬಜರಂಗಿ'

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

- Advertisement -
- Advertisement -

ಹರಿಯಾಣದಲ್ಲಿ “ಲವ್ ಜಿಹಾದ್” ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ ಕಲ್ಪನೆಯೇ ಇರಲಿಲ್ಲವೇನೊ.

ಬಿಟ್ಟು ಬಜರಂಗಿ “ಗೋ ರಕ್ಷಾ ಬಜರಂಗ್ ಫೋರ್ಸ್” ಸಂಘಟನೆಯ ಸಂಸ್ಥಾಪಕನಾಗಿದ್ದು, 2023ರ ನುಹ್ ಕೋಮು ಗಲಭೆ ಪ್ರಕರಣದ ಪ್ರಮುಖ ಆರೋಪಿಯಾಗಿ ದೇಶದಾದ್ಯಂತ ಸುದ್ದಿಯಾಗಿದ್ದ ಈ 48 ವರ್ಷದ ವ್ಯಕ್ತಿ, ತಾನು ನಕಲಿ ಮದುವೆ ದಂಧೆಯ ಜಾಲಕ್ಕೆ ಸಿಲುಕಿ ವಂಚನೆಗೊಳಗಾಗಿದ್ದೇನೆ ಎಂದು ಕೆಲವು ತಿಂಗಳ ಹಿಂದೆ ಪೊಲೀಸರಿಗೆ ದೂರು ನೀಡಿದ್ದರು.

ನುಹ್ ಪ್ರದೇಶದ ಹಳೆಯ ಚಿತ್ರ. | ಕೃಪೆ: ದಿ ಪ್ರಿಂಟ್

ಕಳೆದ ಸೆಪ್ಟೆಂಬರ್‌ನಲ್ಲಿ ತನಗೆ ವಧುವನ್ನು ಹುಡುಕಿಕೊಡುವುದಾಗಿ ನಂಬಿಸಿ ಈ ಗ್ಯಾಂಗ್ ₹41,000 ವಂಚಿಸಿದೆ ಎಂದು ಅವರು ಆರೋಪಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫರೀದಾಬಾದ್ ಪೊಲೀಸರ ಅಪರಾಧ ವಿಭಾಗವು ಐದು ಜನರನ್ನು ಬಂಧಿಸಿದೆ. ಬಂಧಿತರನ್ನು ಅಲಿಗಢದ ನಿವಾಸಿಗಳಾದ ದಾನಿಶ್ ಚಮನ್ (35), ಆತನ ಪತ್ನಿ ಮಹಾವಿಶ್ ದಾನಿಶ್ (27), ಸಚಿನ್ (27), ಸಂಜೀವ್ (52) ಮತ್ತು ಬುಲಂದ್‌ಶಹರ್‌ನ ಪ್ರದೀಪ್ (34) ಎಂದು ಗುರುತಿಸಲಾಗಿದೆ. ಇವರೆಲ್ಲರನ್ನೂ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಬಿಟ್ಟು ಬಜರಂಗಿ ಸರಾಯ್ ಖ್ವಾಜಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ, ಬಂಟು ಅಲಿಯಾಸ್ ಅವಿನಾಶ್ ಎಂಬ ಪರಿಚಯಸ್ಥನ ಮೂಲಕ ಅವರಿಗೆ ಈ ಗ್ಯಾಂಗ್‌ನ ಸಂಪರ್ಕ ಸಿಕ್ಕಿತ್ತು. ಫರೀದಾಬಾದ್‌ನ ಸಂಜಯ್ ಎನ್‌ಕ್ಲೇವ್ ನಿವಾಸಿಯಾದ ಬಜರಂಗಿ, ತನಗೆ ಮದುವೆಯಾಗಲು ಹುಡುಗಿಯನ್ನು ಹುಡುಕುವಂತೆ ಬಂಟುಗೆ ತಿಳಿಸಿದ್ದರು. ಬಂಟು ಅವರನ್ನು ರಾಣಿ ಅಲಿಯಾಸ್ ಲಕ್ಷ್ಮಿ ಎಂಬ ಮಹಿಳೆಗೆ ಪರಿಚಯಿಸಿದ್ದನು. ಆಕೆ ತಾನು ಮದುವೆ ಸಂಬಂಧಗಳನ್ನು ಕುದುರಿಸುವ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದಳು. ವಧುವನ್ನು ನೋಡಲು ಬಜರಂಗಿ ಅವರನ್ನು ಎರಡು ಮೂರು ಬಾರಿ ಅಲಿಗಢಕ್ಕೆ ಕರೆಯಿಸಲಾಗಿದ್ದರೂ, ಅವರಿಗೆ ಯಾವುದೇ ಹುಡುಗಿ ಇಷ್ಟವಾಗಿರಲಿಲ್ಲ. ಕೊನೆಗೆ ಅವರ ಮೊಬೈಲ್‌ಗೆ “ಪೂಜಾ” ಎಂಬಾಕೆಯ ಫೋಟೋ ಕಳುಹಿಸಲಾಗಿದ್ದು, ಬಿಟ್ಟು ಬಜರಂಗಿ ಆ ಸಂಬಂಧಕ್ಕೆ ಒಪ್ಪಿಗೆ ನೀಡಿದ್ದರು ಎನ್ನಲಾಗಿದೆ.

ಕಳೆದ ವರ್ಷ ಸೆಪ್ಟೆಂಬರ್ 5 ರಂದು ರಾಣಿ, ವಧು ಪೂಜಾ ಸೋಗಿನಲ್ಲಿದ್ದ ಮಹಾವಿಶ್ ದಾನಿಶ್ ಮತ್ತು ಆಕೆಯ ಕುಟುಂಬದವರೆಂದು ಹೇಳಿಕೊಂಡ ಇತರರು ಅಲಿಗಢದಿಂದ ಫರೀದಾಬಾದ್‌ನಲ್ಲಿರುವ ಬಜರಂಗಿ ಮನೆಗೆ ಬಂದು, ನಿಶ್ಚಿತಾರ್ಥದ ಶಾಸ್ತ್ರಕ್ಕಾಗಿ ₹11,000 ಹಣ ಪಡೆದಿದ್ದರು. ಮರುದಿನವೇ ಮದುವೆಯ ಖರ್ಚುಗಳಿಗಾಗಿ ಎಂದು ಮತ್ತೊಮ್ಮೆ ₹30,000 ಪಡೆದು, ಸೆಪ್ಟೆಂಬರ್ 7, 2025 ರಂದು ಅಲಿಗಢದ ದೇವಸ್ಥಾನವೊಂದರಲ್ಲಿ ಮದುವೆ ಮುಹೂರ್ತ ನಿಗದಿಪಡಿಸಿದ್ದರು. ಆದರೆ ನಿಗದಿತ ದಿನದಂದು ಬಜರಂಗಿ ದೇವಸ್ಥಾನಕ್ಕೆ ತಲುಪಿದಾಗ, ವಧುವಿನ ಕಡೆಯಿಂದ ಯಾರೊಬ್ಬರೂ ಅಲ್ಲಿಗೆ ಬಂದಿರಲಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ.

ತನಿಖಾಧಿಕಾರಿಗಳ ಪ್ರಕಾರ, ಬಜರಂಗಿ ಮನೆಗೆ ಭೇಟಿ ನೀಡಿದ್ದ ಇಡೀ “ಕುಟುಂಬ”ವೇ ನಕಲಿಯಾಗಿತ್ತು ಮತ್ತು ಯೋಜಿತವಾಗಿಯೇ ಈ ವಂಚನೆ ನಡೆದಿತ್ತು. ಮಹಾವಿಶ್ ದಾನಿಶ್ ವಧು “ಪೂಜಾ” ಪಾತ್ರ ಮಾಡಿದ್ದರೆ, ಪ್ರದೀಪ್ ಆಕೆಯ ಚಿಕ್ಕಪ್ಪನಾಗಿ, ಸಂಜೀವ್ ಮತ್ತೊಬ್ಬ ಸಂಬಂಧಿಯಾಗಿ, ಸಚಿನ್ ಮಧ್ಯವರ್ತಿಯಾಗಿ ಮತ್ತು ದಾನಿಶ್ ಚಮನ್ ವಧುವಿನ ಸಹೋದರನಾಗಿ ನಟಿಸಿದ್ದರು. ಈ ತಂಡ ಈ ಹಿಂದೆಯೂ ಇಂತಹದೇ ವಂಚನೆಗಳನ್ನು ಮಾಡಿರುವುದು ಪೊಲೀಸರ ಗಮನಕ್ಕೆ ಬಂದಿದೆ.

ಮಹಾವಿಶ್ ದಾನಿಶ್ ಈಗಾಗಲೇ ಇಂತಹದೇ ಎರಡು ವಂಚನೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದು, ಪ್ರದೀಪ್ ಕೂಡ ಮದುವೆ ಹೆಸರಿನಲ್ಲಿ ಜನ ವಂಚಿಸಿದ ಆರೋಪದ ಮೇಲೆ ಅಲಿಗಢ ಮತ್ತು ದಾಸ್ನಾ (ನೋಯ್ಡಾ) ಜೈಲುಗಳಲ್ಲಿದ್ದನು. ಈ ಜಾಲವು ಹರಿಯಾಣ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಕಳೆದ ಹಲವು ವರ್ಷಗಳಿಂದ ಈ ನಕಲಿ ಮದುವೆ ದಂಧೆ ನಡೆಸುತ್ತಿದ್ದು, ಇದರ ಸಂಪೂರ್ಣ ಆಳವನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದಂಧೆಯ ಸೂತ್ರಧಾರಿ ಎನ್ನಲಾದ ರಾಣಿ ಅಲಿಯಾಸ್ ಲಕ್ಷ್ಮಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ ಎಂದು ಫರೀದಾಬಾದ್ ಪೊಲೀಸ್ ವಕ್ತಾರ ಯಶ್‌ಪಾಲ್ ತಿಳಿಸಿದ್ದಾರೆ.

ಬಿಟ್ಟು ಬಜರಂಗಿಯ ಅಸಲಿ ಹೆಸರು ರಾಜ್ ಕುಮಾರ್ ಪಾಂಚಾಲ್. ಫರೀದಾಬಾದ್‌ನ ಪಾರ್ವತಿಯಾ ಕಾಲೋನಿಯ ತರಕಾರಿ ವ್ಯಾಪಾರಿಯಾಗಿದ್ದ ಈತ, ನಂತರ ಸ್ವಯಂ ಘೋಷಿತ ಗೋರಕ್ಷಕನಾಗಿ ಬದಲಾಗಿದ್ದನು. ಈತನ ನೇತೃತ್ವದ “ಗೌರಕ್ಷಾ ಬಜರಂಗ್ ಫೋರ್ಸ್” ಸಂಘಟನೆಯು ಈ ಭಾಗದಲ್ಲಿ ಅಂತರ್ಧರ್ಮೀಯ ಸಂಬಂಧಗಳು ಮತ್ತು ಧರ್ಮ ಮತಾಂತರಗಳನ್ನು ತಡೆಯುವ ಕೆಲಸ ಮಾಡುತ್ತಿತ್ತು.

ಡಿಸೆಂಬರ್ 2022 ರಲ್ಲಿ ಮುಸ್ಲಿಂ ನೆರೆಹೊರೆಯವನೊಂದಿಗೆ ಓಡಿಹೋಗಿದ್ದ ಯುವತಿಯ ತಂದೆಗೆ ಹರಿಯಾಣದ ಮತಾಂತರ ವಿರೋಧಿ ಕಾಯ್ದೆಯಡಿ ಮೊದಲ ಪ್ರಕರಣ ದಾಖಲಿಸಲು ಸಹಾಯ ಮಾಡಿದ ನಂತರ ಈತನಿಗೆ ದೊಡ್ಡ ಬೆಂಬಲಿಗರ ಬಳಗ ಸೃಷ್ಟಿಯಾಗಿತ್ತು. ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಜಾವೇದ್ ಖಾನ್ ಎಂಬಾತನನ್ನು ವಿವಾಹವಾಗಿದ್ದ ಸಂಸ್ಕೃತಿ ಶುಕ್ಲಾ ಮತ್ತು ಆಕೆಯ ಪತಿ, ಬಿಟ್ಟು ಬಜರಂಗಿ ಸಂಘಟನೆಯ ಬೆದರಿಕೆಯಿಂದಾಗಿ ಅಡಗಿಕೊಳ್ಳಬೇಕಾದ ಪರಿಸ್ಥಿತಿ ಬಂದಿತ್ತು. ನಂತರ ಸಂಸ್ಕೃತಿ ತಂದೆ ಡಿ.ಕೆ. ಶುಕ್ಲಾ ಅವರು ಜಾವೇದ್ ವಿರುದ್ಧ ಬಲವಂತದ ಮತಾಂತರದ ದೂರು ದಾಖಲಿಸಿದ್ದು, ಈ ಹೋರಾಟಕ್ಕೆ ಹಿಂದುತ್ವ ಸಂಘಟನೆಗಳು ಮತ್ತು ಬಜರಂಗಿ ಬೆಂಬಲ ನೀಡಿದ್ದರು ಎಂದು ಹೇಳಿಕೊಂಡಿದ್ದರು.

ಜುಲೈ 31, 2023 ರಂದು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಶೋಭಾ ಯಾತ್ರೆಯು ಮುಸ್ಲಿಂ ಬಹುಸಂಖ್ಯಾತ ಪ್ರದೇಶದಲ್ಲಿ ಸಾಗುತ್ತಿದ್ದಾಗ ನಡೆದ ನುಹ್ ಕೋಮು ಹಿಂಸಾಚಾರದಲ್ಲಿ ಬಿಟ್ಟು ಬಜರಂಗಿ ಪ್ರಮುಖ ಆರೋಪಿಯಾಗಿದ್ದನು. ಆ ಗಲಭೆಯಲ್ಲಿ ಆರು ಜನರು ಸಾವನ್ನಪ್ಪಿ, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೆರವಣಿಗೆಯ ಸಮಯದಲ್ಲಿ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸಿದ ಮತ್ತು ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪ ಈತನ ಮೇಲಿತ್ತು.

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಸಿಕ್ಕಿಬಿದ್ದು ಜೈಲು ಸೇರಿದ್ದ ಈತ ನಂತರ ಜಾಮೀನಿನ ಮೇಲೆ ಹೊರಬಂದಿದ್ದನು. ಸೆಪ್ಟೆಂಬರ್ 2024 ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಫರೀದಾಬಾದ್ ಎನ್‌ಐಟಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಬಿಟ್ಟು ಬಜರಂಗಿ, ನಂತರ ಸ್ಪರ್ಧೆಯಿಂದ ಹಿಂದೆ ಸರಿದು ಬಿಜೆಪಿ ಅಭ್ಯರ್ಥಿ ಸತೀಶ್ ಕುಮಾರ್ ಫಾಗ್ನಾ ಅವರಿಗೆ ಬೆಂಬಲ ಘೋಷಿಸಿದ್ದರು. ಆ ಚುನಾವಣೆಯಲ್ಲಿ ಫಾಗ್ನಾ ಅವರು 33,000ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದರು.

ಕೃಪೆ: ದಿ ಪ್ರಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...