Homeಮುಖಪುಟಅಧಿಕಾರ ದಾಹ: ಬಹುಮತವಿಲ್ಲದಿದ್ದರೂ 6 ವರ್ಷಗಳಲ್ಲಿ 11 ನೇ ಭಾರಿ ಅಧಿಕಾರ ಕಸಿಯಲು ಪ್ರಯತ್ನಿಸುತ್ತಿರುವ ಬಿಜೆಪಿ

ಅಧಿಕಾರ ದಾಹ: ಬಹುಮತವಿಲ್ಲದಿದ್ದರೂ 6 ವರ್ಷಗಳಲ್ಲಿ 11 ನೇ ಭಾರಿ ಅಧಿಕಾರ ಕಸಿಯಲು ಪ್ರಯತ್ನಿಸುತ್ತಿರುವ ಬಿಜೆಪಿ

ಬಿಜೆಪಿ ಇದುವರೆಗೂ ಹಣದ ಆಮಿಷ, ಬೆದರಿಕೆಗಳು, ಸ್ನೇಹಪರ ಗವರ್ನರ್‌ಗಳು, ಕುದುರೆ ವ್ಯಾಪಾರ, ಸಿಬಿಐ-ಐಟಿ ಹಾಗೂ ಇಡಿಯಂತಹ ಇಲಾಖೆಯ ದುರ್ಬಳಕೆ ಅಥವಾ ಪೊಲೀಸ್ ಪ್ರಕರಣಗಳು ಹೀಗೆ ಮುಂತಾದ ಮಾರ್ಗದಿಂದ ಅಧಿಕಾರ ಕಸಿದುಕೊಳ್ಳಲು ಸಾಕಷ್ಟು ಹೀನ ತಂತ್ರಗಳನ್ನು ಬಳಸಿದೆ

- Advertisement -
- Advertisement -

ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಬೆಂಬಲಿಗರಾದ ಮೂವರ ವ್ಯಕ್ತಿಗಳಿಗೆ ಸಂಬಂದಿಸಿದ 43 ಮನೆಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡುವವರನ್ನು ಭಯಪಡಿಸುವ ಹಾಗೂ ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂದು ಹೊರಟ ಬಿಜೆಪಿಯ ಜನವಿರೋಧಿ ನಡೆಯಾಗಿದೆ ಎಂದು ಹಲವಾರು ಜನರು ಅಭಿಪ್ರಾಯ ಪಟ್ಟಿದ್ದಾರೆ.

ಕಳೆದ ಆರು ವರ್ಷಗಳಲ್ಲಿ ಬಿಜೆಪಿಯು 11 ನೇ ಬಾರಿಗೆ ಚುನಾವಣೆಯಲ್ಲಿ ಬಹುಮತವನ್ನು ಪಡೆಯದೆ ಅಧಿಕಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ.

ಈ ಸರಣಿಯಲ್ಲಿ ರಾಜಸ್ಥಾನ ಹನ್ನೊಂದನೆಯದಾಗಿದ್ದು, ಬಿಜೆಪಿ ಇದುವರೆಗೂ ಹಣದ ಆಮಿಷ, ಬೆದರಿಕೆಗಳು, ಸ್ನೇಹಪರ ಗವರ್ನರ್‌ಗಳು, ಕುದುರೆ ವ್ಯಾಪಾರ, ಸಿಬಿಐ-ಐಟಿ ಹಾಗೂ ಇಡಿಯಂತಹ ಇಲಾಖೆಯ ದುರ್ಬಳಕೆ ಅಥವಾ ಪೊಲೀಸ್ ಪ್ರಕರಣಗಳು ಹೀಗೆ ಮುಂತಾದ ಮಾರ್ಗದಿಂದ ಅಧಿಕಾರ ಕಸಿದುಕೊಳ್ಳಲು ಸಾಕಷ್ಟು ಹೀನ ತಂತ್ರಗಳನ್ನು ಬಳಸಿದೆ ಎಂದು ಸುಬೋದ್ ವರ್ಮಾರವರ ಲೇಖನವನ್ನು ನ್ಯೂಸ್ ಕ್ಲಿಕ್ ವರದಿ ಮಾಡಿದೆ. ಅದರ ಕನ್ನಡ ಅನುವಾದ ಇಲ್ಲಿದೆ.

2014 ರಿಂದ ಬಹುಮತವನ್ನು ಗಳಿಸದೆ ಹಲವು ರಾಜ್ಯಗಳಲ್ಲಿ ಬಿಜೆಪಿಯು ಅಧಿಕಾರವನ್ನು ಹೇಗೆ ಪಡೆದುಕೊಂಡಿದೆ ಎಂಬುದು ಇಲ್ಲಿದೆ:

1. ಅರುಣಾಚಲ ಪ್ರದೇಶ (2014):

60 ವಿಧಾನ ಸಭಾ ಕ್ಷೇತ್ರಗಳಿರು ಅರುಣಾಚಲದಲ್ಲಿ 2014ರಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ 42, ಬಿಜೆಪಿ 11, ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ 5 ಮತ್ತು ಪಕ್ಷೇತರರು 2 ಸ್ಥಾನಗಳನ್ನು ಗೆದ್ದಿದ್ದರು. ಎರಡು ವರ್ಷಗಳ ಪ್ರಕ್ಷುಬ್ಧತೆಯ ನಂತರ: ಬಿಜೆಪಿ 48; ಕಾಂಗ್ರೆಸ್ 1; ಪಿಪಿಎ 9; ಪಕ್ಷೇತರರು 2! ಹೀಗೆ ಎಲ್ಲವೂ ಅದಲು ಬದಲಾದವು. ಹೋಲ್ ಸೇಲ್ ಪಕ್ಷಾಂತರಗಳು, ರಾಷ್ಟ್ರಪತಿ ಆಡಳಿತ ಹೇರಿಕೆ, ಮಾಜಿ ಮುಖ್ಯಮಂತ್ರಿಯ ಸಾವು, ಸುಪ್ರೀಂ ಕೋರ್ಟ್‌ನ ಹಸ್ತಕ್ಷೇಪ ಹೀಗೆ ಬಿಜೆಪಿ ಅಂತಿಮವಾಗಿ ಅಧಿಕಾರವನ್ನು ಪಡೆದುಕೊಂಡಿತು!

2. ಜಾರ್ಖಂಡ್ (2014):

81 ಸದಸ್ಯರ ಸಂಖ್ಯಾ ಬಲವಿದ್ದ ವಿಧಾನಸಭೆಯಲ್ಲಿ ಬಿಜೆಪಿ 35 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷವಾದ ಆಲ್ ಜಾರ್ಖಂಡ್ ವಿದ್ಯಾರ್ಥಿ ಸಂಘ 5 ಸ್ಥಾನಗಳನ್ನು ಗೆದ್ದಿದ್ದವು. ಸರಳ ಬಹುಮತಕ್ಕಿಂತ ಕಡಿಮೆ ಸ್ಥಾನಗಳನ್ನು ಹೊಂದಿದ್ದರಿಂದ, ಕೆಲವು ಪಕ್ಷೇತರ ಹಾಗೂ ಜಾರ್ಖಂಡ್ ವಿಕಾಸ್ ಮೋರ್ಚಾದ 8 ಶಾಸಕರಲ್ಲಿ 6 ಜನರನ್ನು ಸೆಳೆದು ಬಹುಮತ ಗಳಿಸಿದರು.

3. ಬಿಹಾರ (2015):

243 ಸದಸ್ಯ ಬಲವಿರುವ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ ಗಳಿಸಿದ್ದು ಕೇವಲ 53 ಸ್ಥಾನಗಳು. ಚುನಾವಣಾ ಪೂರ್ವ ಮೈತ್ರಿ ಮಾಡಿದ್ದ ಆರ್‌ಜೆಡಿ ಹಾಗೂ ಜೆಡಿಯು ಒಟ್ಟು 178 ಸ್ಥಾನಗಳನ್ನು ಗಳಿಸಿದ್ದವಾದ್ದರಿಂದ ಸರ್ಕಾರ ರಚಿಸಿತು. ಆದರೆ ಬಿಜೆಪಿ ಈ ಮೈತ್ರಿಯನ್ನು ಮುರಿದು ಜೆಡಿಯು ಮತ್ತು ಅದರ ನಾಯಕ ನಿತೀಶ್ ಕುಮಾರ್ ಅವರಿಗೆ ಆಮಿಷವೊಡ್ಡಿ ಜುಲೈ 2017 ರಲ್ಲಿ ಸಮ್ಮಿಶ್ರ ಸರ್ಕಾರ ರಚಿಸಿ ಅಧಿಕಾರ ಹಿಡಿಯಿತು.

4. ಗೋವಾ (2017):

ಒಟ್ಟು 40 ಸ್ಥಾನಗಳಲ್ಲಿ ಬಿಜೆಪಿ ಕೇವಲ 13 ಸ್ಥಾನಗಳನ್ನು ಗೆದ್ದಿತ್ತು. ಚುನಾವಣೆಯ ನಂತರ ಅವರ ವಿರುದ್ದವೆ ಸ್ಪರ್ಧಿಸಿದ್ದ ಸ್ಥಳೀಯ ಸಣ್ಣ ಪಕ್ಷಗಳೊಂದಿಗೆ ಒಕ್ಕೂಟ ರಚಿಸಿ ಸರ್ಕಾರವನ್ನು ರಚಿಸಿತು. ಕಾಂಗ್ರೆಸ್ 17 ಸ್ಥಾನ ಗಳಿಸಿದ್ದರೂ ಸಹ ವಿರೋಧ ಪಕ್ಷವಾಯಿತು.

5. ಮಣಿಪುರ (2017):

60 ಸ್ಥಾನಗಳಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 28 ಸ್ಥಾನಗಳನ್ನು ಗಳಿಸಿತ್ತು. ಆದರೆ ಬಿಜೆಪಿ ತನ್ನ ಮಿತ್ರ ಪಕ್ಷವಾದ ಲೋಕ ಜನಶಕ್ತಿ ಪಕ್ಷದ ಜೊತೆಗೆ, ಎರಡು ಸ್ಥಳೀಯ ಪಕ್ಷಗಳಾದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮತ್ತು ನಾಗಾ ಪೀಪಲ್ಸ್ ಫ್ರಂಟ್ ಜೊತೆ ಸೇರಿಕೊಂಡು ಅಧಿಕಾರಕ್ಕೆ ಮುನ್ನುಗ್ಗಿತು. ಇದಕ್ಕೆ ಬಿಜೆಪಿ ಮಾಜಿ ಸಂಸದರಾದ ರಾಜ್ಯಪಾಲ ನಜ್ಮಾ ಹೆಪ್ತುಲ್ಲಾ ಕೂಡಾ ಸರ್ಕಾರ ರಚಿಸಲು ಮೊದಲು ಬಿಜೆಪಿ ನೇತೃತ್ವದ ಮೈತ್ರಿಕೂಟವನ್ನು ಆಹ್ವಾನಿಸಿ ಸಹಾಯ ಮಾಡಿದರು.

6. ಮೇಘಾಲಯ (2018):

ಈ ಚುನಾವಣೆಯಲ್ಲಿ 60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ಗಳಿಸಿದ್ದು ಕೇವಲ ಎರಡು ಸ್ಥಾನಗಳನ್ನು ಮಾತ್ರ. ಆದರೆ ತನ್ನ ಸರ್ಕಾರ ರಚಿಸಲು ನ್ಯಾಷನಲ್ ಪೀಪಲ್ಸ್ ಪಕ್ಷದೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಂಡಿತು. ಇಲ್ಲಿ ಕೂಡಾ ಬಿಹಾರದ ಮಾಜಿ ಬಿಜೆಪಿ ಎಂಎಲ್ಸಿ ಗಂಗಾ ಪ್ರಸಾದ್ ಮೇಘಾಲಯದ ರಾಜ್ಯಪಾಲರಾಗಿದ್ದರು ಹಾಗೂ ಸರ್ಕಾರ ರಚಿಸಲು ಸಹಾಯ ಮಾಡಿದರು.

7. ಕರ್ನಾಟಕ (2018-19):

ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಎರಡು ಭಾರಿ ಪ್ರಯತ್ನಿಸಿದೆ.

ಭಾಗ 1 (ವಿಫಲ ಪ್ರಯತ್ನ) – 2018: 224 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 104 ಶಾಸಕರನ್ನು ಗೆದ್ದುಕೊಂಡಿತ್ತಾದರೂ ಬಹುಮತ ಪಡೆಯುವಲ್ಲಿ ವಿಫಲವಾಯಿತು. ಕಾಂಗ್ರೆಸ್ 80 ಮತ್ತು ಜೆಡಿಎಸ್ 39 ಸ್ಥಾನಗಳನ್ನು ಗೆದ್ದು ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾದರು. ಆದರೆ ಆಗ ಗವರ್ನರ್‌ ಆಗಿದ್ದ ಮಾಜಿ ಗುಜರಾತ್ ಬಿಜೆಪಿ ಶಾಸಕ ವಾಜುಭಾಯ್ ವಾಲಾ ಅವರು ಕಾಂಗ್ರೆಸ್-ಜನತಾದಳ (ಜಾತ್ಯತೀತ) ಪಕ್ಷಗಳ ಮೈತ್ರಿಯನ್ನು ಕಡೆಗಣಿಸಿ ಸರ್ಕಾರ ರಚಿಸಲು ಬಿಜೆಪಿ ನಾಯಕ ಬಿ.ಎಸ್.ಯಡಿಯುರಪ್ಪ ಅವರನ್ನು ಆಹ್ವಾನಿಸಿದರು.

ಆದರೆ ಮಧ್ಯಪ್ರವೇಶಿಸಿದ ಸುಪ್ರೀಂ ಕೋರ್ಟ್ ಮರುದಿನ ವಿಶ್ವಾಸ ಮತ ಯಾಚನೆಗೆ ಆದೇಶ ನೀಡಿತು. ಬಹುಮತವಿಲ್ಲವಾದ್ದರಿಂದ ವಿಶ್ವಾಸಮತಕ್ಕೆ ಹೋಗದೆ ಯಡಿಯೂರಪ್ಪ ರಾಜೀನಾಮೆ ನೀಡಿದರು. ಇದರ ನಂತರ ಹೊಸ ಕಾಂಗ್ರೆಸ್-ಜೆಡಿ (ಎಸ್) ಸರ್ಕಾರ ರಚಿಲಾಯಿತು.

ಭಾಗ 2 – 2019 (ಯಶಸ್ವಿ): ಅಧಿಕಾರ ಹಿಡಿಯಲು ಹೊಸ ಮಾದರಿಯನ್ನು ಅನುಸರಿಸಿದ ಬಿಜೆಪಿಯು 13 ಕಾಂಗ್ರೆಸ್, 3 ಜೆಡಿ (ಎಸ್), ಮತ್ತು ಇತರ ಪಕ್ಷೇತರ ಶಾಸಕರನ್ನು ರಾಜಿನಾಮೆ ಕೊಡಿಸಿ, ಸರ್ಕಾರವನ್ನು ಅಲ್ಪಮತಕ್ಕೆ ದೂಡಿದರು. ವಿಶ್ವಾಸಮತ ಕಳೆದುಕೊಂಡು ಸರ್ಕಾರ ಬಿದ್ದುಹೋದಾಗ ಯಡಿಯೂರಪ್ಪ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರವನ್ನು ಪಡೆದುಕೊಂಡಿತು. ರಾಜೀನಾಮೆ ಕೊಟ್ಟಿದ್ದವರನ್ನು ಬಿಜೆಪಿ ಸೇರಿಸಿಕೊಂಡು ಬಹುತೇಕರನ್ನು ಗೆಲ್ಲಿಸಿ ಸಚಿವ ಸ್ಥಾನಗಳನ್ನು ನೀಡಲಾಯಿತು.

8. ಹರಿಯಾಣ (2019):

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಬಹುಮತ ಕಳೆದುಕೊಂಡು 90 ಸದಸ್ಯರ ಸದನದಲ್ಲಿ 40 ಸ್ಥಾನಗಳನ್ನು ಪಡೆಯಿತು. ಜೆಜೆಪಿ ಪಕ್ಷ ತನ್ನ ಚುನಾವಣಾ ಪ್ರಚಾರದಲ್ಲಿ ಬಿಜೆಪಿಯ ವಿರುದ್ದ ತೀವ್ರವಾಗಿ ಟೀಕೆ ಮಾಡಿದ್ದರೂ, ಜೆಜೆಪಿ ಮುಖಂಡ ದುಶ್ಯಂತ್ ಚೌತಲಾ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿತು.

9. ಮಹಾರಾಷ್ಟ್ರ (ವಿಫಲ ಪ್ರಯತ್ನ) (2019):

ಇಲ್ಲಿ ಕೂಡ ಎರಡು ಭಾರಿ ಅಧಿಕಾರಗಳನ್ನು ಹಿಡಿಯಲು ಪ್ರಯತ್ನಿಸಿದೆ.

ಭಾಗ 1: ಆಡಳಿತಾರೂಡ ಬಿಜೆಪಿ-ಶಿವಸೇನೆ ಮೈತ್ರಿಕೂಟವು ವಿಧಾನಸಭಾ ಚುನಾವಣೆಯಲ್ಲಿ ಬಹುಮತವನ್ನು ಗಳಿಸಿತು ಆದರೆ ಮುಖ್ಯಮಂತ್ರಿ ಸ್ಥಾನದ ಬಗ್ಗೆ ವಿವಾದಗಳಾಗಿ ಮೈತ್ರಿ ಮುರಿದು ಬಿತ್ತು. ವಾರಗಳವರೆಗೂ ನಡೆದ ರಾಜಕೀಯ ಆಟಗಳಲ್ಲಿ, ಶಾಸಕರನ್ನು ಹೋಟೆಲ್‌ಗಳಲ್ಲಿ ಇಡುವುದು ಹಾಗೂ ರಾಷ್ಟ್ರಪತಿ ಆಡಳಿತ ಹೇರಿಕೆಯ ನಂತರ, ಶಿವಸೇನಾ, ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಡುವೆ ಮೈತ್ರಿ ಏರ್ಪಟ್ಟಿತು. ಇದರ ನಡುವೆ ಎನ್‌ಸಿಪಿಯ ಅಜಿತ್ ಪವಾರ್ ಅವರನ್ನು ಸೆಳೆದ ಬಿಜೆಪಿ 54 ಎನ್‌ಸಿಪಿ ಶಾಸಕರು ಅವರ ಬೆಂಬಲ್ಕಕೆ ಇದ್ದಾರೆಂದು ಹೇಳಿ ಗವರ್ನರ್‌ ಬಿಎಸ್ ಕೋಶ್ಯಾರಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದರು.

ರಾಜ್ಯಪಾಲರು ಬಿಜೆಪಿಯ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಮತ್ತು ಎನ್‌ಸಿಪಿಯಿಂದ ಬಂಡಾಯವೆದ್ದಿದ್ದ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಬೆಳಿಗ್ಗೆ 5 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಸುಪ್ರೀಂ ಮತ್ತೆ ಬಹುಮತ ಸಾಬೀತುಪಡಿಸಲು ಕೇಳಿತು. ಅಜಿತ್ ಪವಾರ್ ಉಲ್ಟಾ ಹೊಡೆದರು. ಬಿಜೆಪಿಗೆ ಮುಖಭಂಗವಾಗಿ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದರು.

ಭಾಗ 2: ಆದರೆ ಅಜಿತ್ ಪವಾರ್ ಅವರೊಂದಿಗೆ ಯಾರೂ ಇಲ್ಲದ ಕಾರಣ ಕೆಲವೇ ಗಂಟೆಗಳಲ್ಲಿ ಈ ಸರ್ಕಾರ ಕುಸಿದು, ಅವರು ಮತ್ತೆ ಎನ್‌ಸಿಪಿಗೆ ಹೋದರು. ಇದರ ನಂತರ ಶಿವಸೇನೆಯ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಮೈತ್ರಿಯ ಹೊಸ ಸರ್ಕಾರ ಪ್ರಮಾಣವಚನ ಸ್ವೀಕರಿಸಿತು.

10. ಮಧ್ಯಪ್ರದೇಶ (2020):

ಇಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಿದ ಬಿಜೆಪಿ, ಕಾಂಗ್ರೆಸ್ ಶಾಸಕರನ್ನು ಪಕ್ಷ ತೊರೆಯುಂತೆ ಮಾಡಿತು. ನಂತರ ಅಲ್ಲಿ ಬಿಜೆಪಿ ಸರ್ಕಾರ ರಚಿಸಿತು. ಅತೃಪ್ತ ಕಾಂಗ್ರೆಸ್ ನಾಯಕರಾದ ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ನಂತರ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡರು.

11.ರಾಜಸ್ಥಾನ (2020):

ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕರ್ನಾಟಕ ಮತ್ತು ಮದ್ಯಪ್ರದೇಶದ ಮಾದರಿಯಲ್ಲೇ ಪದಚ್ಯುತಗೊಳಿಸುವ ಪ್ರಯತ್ನ ನಡೆಯುತ್ತಿದೆ.

– ಸುಬೋದ್ ವರ್ಮಾ( ನ್ಯೂಸ್ ಕ್ಲಿಕ್)


ಓದಿ: ನಾನು ಬಿಜೆಪಿ ಸೇರುವುದಿಲ್ಲ: ರಾಜಸ್ಥಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...