Homeಮುಖಪುಟಅಧಿಕಾರ ದಾಹ: ಬಹುಮತವಿಲ್ಲದಿದ್ದರೂ 6 ವರ್ಷಗಳಲ್ಲಿ 11 ನೇ ಭಾರಿ ಅಧಿಕಾರ ಕಸಿಯಲು ಪ್ರಯತ್ನಿಸುತ್ತಿರುವ ಬಿಜೆಪಿ

ಅಧಿಕಾರ ದಾಹ: ಬಹುಮತವಿಲ್ಲದಿದ್ದರೂ 6 ವರ್ಷಗಳಲ್ಲಿ 11 ನೇ ಭಾರಿ ಅಧಿಕಾರ ಕಸಿಯಲು ಪ್ರಯತ್ನಿಸುತ್ತಿರುವ ಬಿಜೆಪಿ

ಬಿಜೆಪಿ ಇದುವರೆಗೂ ಹಣದ ಆಮಿಷ, ಬೆದರಿಕೆಗಳು, ಸ್ನೇಹಪರ ಗವರ್ನರ್‌ಗಳು, ಕುದುರೆ ವ್ಯಾಪಾರ, ಸಿಬಿಐ-ಐಟಿ ಹಾಗೂ ಇಡಿಯಂತಹ ಇಲಾಖೆಯ ದುರ್ಬಳಕೆ ಅಥವಾ ಪೊಲೀಸ್ ಪ್ರಕರಣಗಳು ಹೀಗೆ ಮುಂತಾದ ಮಾರ್ಗದಿಂದ ಅಧಿಕಾರ ಕಸಿದುಕೊಳ್ಳಲು ಸಾಕಷ್ಟು ಹೀನ ತಂತ್ರಗಳನ್ನು ಬಳಸಿದೆ

- Advertisement -
- Advertisement -

ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಬೆಂಬಲಿಗರಾದ ಮೂವರ ವ್ಯಕ್ತಿಗಳಿಗೆ ಸಂಬಂದಿಸಿದ 43 ಮನೆಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡುವವರನ್ನು ಭಯಪಡಿಸುವ ಹಾಗೂ ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂದು ಹೊರಟ ಬಿಜೆಪಿಯ ಜನವಿರೋಧಿ ನಡೆಯಾಗಿದೆ ಎಂದು ಹಲವಾರು ಜನರು ಅಭಿಪ್ರಾಯ ಪಟ್ಟಿದ್ದಾರೆ.

ಕಳೆದ ಆರು ವರ್ಷಗಳಲ್ಲಿ ಬಿಜೆಪಿಯು 11 ನೇ ಬಾರಿಗೆ ಚುನಾವಣೆಯಲ್ಲಿ ಬಹುಮತವನ್ನು ಪಡೆಯದೆ ಅಧಿಕಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ.

ಈ ಸರಣಿಯಲ್ಲಿ ರಾಜಸ್ಥಾನ ಹನ್ನೊಂದನೆಯದಾಗಿದ್ದು, ಬಿಜೆಪಿ ಇದುವರೆಗೂ ಹಣದ ಆಮಿಷ, ಬೆದರಿಕೆಗಳು, ಸ್ನೇಹಪರ ಗವರ್ನರ್‌ಗಳು, ಕುದುರೆ ವ್ಯಾಪಾರ, ಸಿಬಿಐ-ಐಟಿ ಹಾಗೂ ಇಡಿಯಂತಹ ಇಲಾಖೆಯ ದುರ್ಬಳಕೆ ಅಥವಾ ಪೊಲೀಸ್ ಪ್ರಕರಣಗಳು ಹೀಗೆ ಮುಂತಾದ ಮಾರ್ಗದಿಂದ ಅಧಿಕಾರ ಕಸಿದುಕೊಳ್ಳಲು ಸಾಕಷ್ಟು ಹೀನ ತಂತ್ರಗಳನ್ನು ಬಳಸಿದೆ ಎಂದು ಸುಬೋದ್ ವರ್ಮಾರವರ ಲೇಖನವನ್ನು ನ್ಯೂಸ್ ಕ್ಲಿಕ್ ವರದಿ ಮಾಡಿದೆ. ಅದರ ಕನ್ನಡ ಅನುವಾದ ಇಲ್ಲಿದೆ.

2014 ರಿಂದ ಬಹುಮತವನ್ನು ಗಳಿಸದೆ ಹಲವು ರಾಜ್ಯಗಳಲ್ಲಿ ಬಿಜೆಪಿಯು ಅಧಿಕಾರವನ್ನು ಹೇಗೆ ಪಡೆದುಕೊಂಡಿದೆ ಎಂಬುದು ಇಲ್ಲಿದೆ:

1. ಅರುಣಾಚಲ ಪ್ರದೇಶ (2014):

60 ವಿಧಾನ ಸಭಾ ಕ್ಷೇತ್ರಗಳಿರು ಅರುಣಾಚಲದಲ್ಲಿ 2014ರಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ 42, ಬಿಜೆಪಿ 11, ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ 5 ಮತ್ತು ಪಕ್ಷೇತರರು 2 ಸ್ಥಾನಗಳನ್ನು ಗೆದ್ದಿದ್ದರು. ಎರಡು ವರ್ಷಗಳ ಪ್ರಕ್ಷುಬ್ಧತೆಯ ನಂತರ: ಬಿಜೆಪಿ 48; ಕಾಂಗ್ರೆಸ್ 1; ಪಿಪಿಎ 9; ಪಕ್ಷೇತರರು 2! ಹೀಗೆ ಎಲ್ಲವೂ ಅದಲು ಬದಲಾದವು. ಹೋಲ್ ಸೇಲ್ ಪಕ್ಷಾಂತರಗಳು, ರಾಷ್ಟ್ರಪತಿ ಆಡಳಿತ ಹೇರಿಕೆ, ಮಾಜಿ ಮುಖ್ಯಮಂತ್ರಿಯ ಸಾವು, ಸುಪ್ರೀಂ ಕೋರ್ಟ್‌ನ ಹಸ್ತಕ್ಷೇಪ ಹೀಗೆ ಬಿಜೆಪಿ ಅಂತಿಮವಾಗಿ ಅಧಿಕಾರವನ್ನು ಪಡೆದುಕೊಂಡಿತು!

2. ಜಾರ್ಖಂಡ್ (2014):

81 ಸದಸ್ಯರ ಸಂಖ್ಯಾ ಬಲವಿದ್ದ ವಿಧಾನಸಭೆಯಲ್ಲಿ ಬಿಜೆಪಿ 35 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷವಾದ ಆಲ್ ಜಾರ್ಖಂಡ್ ವಿದ್ಯಾರ್ಥಿ ಸಂಘ 5 ಸ್ಥಾನಗಳನ್ನು ಗೆದ್ದಿದ್ದವು. ಸರಳ ಬಹುಮತಕ್ಕಿಂತ ಕಡಿಮೆ ಸ್ಥಾನಗಳನ್ನು ಹೊಂದಿದ್ದರಿಂದ, ಕೆಲವು ಪಕ್ಷೇತರ ಹಾಗೂ ಜಾರ್ಖಂಡ್ ವಿಕಾಸ್ ಮೋರ್ಚಾದ 8 ಶಾಸಕರಲ್ಲಿ 6 ಜನರನ್ನು ಸೆಳೆದು ಬಹುಮತ ಗಳಿಸಿದರು.

3. ಬಿಹಾರ (2015):

243 ಸದಸ್ಯ ಬಲವಿರುವ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ ಗಳಿಸಿದ್ದು ಕೇವಲ 53 ಸ್ಥಾನಗಳು. ಚುನಾವಣಾ ಪೂರ್ವ ಮೈತ್ರಿ ಮಾಡಿದ್ದ ಆರ್‌ಜೆಡಿ ಹಾಗೂ ಜೆಡಿಯು ಒಟ್ಟು 178 ಸ್ಥಾನಗಳನ್ನು ಗಳಿಸಿದ್ದವಾದ್ದರಿಂದ ಸರ್ಕಾರ ರಚಿಸಿತು. ಆದರೆ ಬಿಜೆಪಿ ಈ ಮೈತ್ರಿಯನ್ನು ಮುರಿದು ಜೆಡಿಯು ಮತ್ತು ಅದರ ನಾಯಕ ನಿತೀಶ್ ಕುಮಾರ್ ಅವರಿಗೆ ಆಮಿಷವೊಡ್ಡಿ ಜುಲೈ 2017 ರಲ್ಲಿ ಸಮ್ಮಿಶ್ರ ಸರ್ಕಾರ ರಚಿಸಿ ಅಧಿಕಾರ ಹಿಡಿಯಿತು.

4. ಗೋವಾ (2017):

ಒಟ್ಟು 40 ಸ್ಥಾನಗಳಲ್ಲಿ ಬಿಜೆಪಿ ಕೇವಲ 13 ಸ್ಥಾನಗಳನ್ನು ಗೆದ್ದಿತ್ತು. ಚುನಾವಣೆಯ ನಂತರ ಅವರ ವಿರುದ್ದವೆ ಸ್ಪರ್ಧಿಸಿದ್ದ ಸ್ಥಳೀಯ ಸಣ್ಣ ಪಕ್ಷಗಳೊಂದಿಗೆ ಒಕ್ಕೂಟ ರಚಿಸಿ ಸರ್ಕಾರವನ್ನು ರಚಿಸಿತು. ಕಾಂಗ್ರೆಸ್ 17 ಸ್ಥಾನ ಗಳಿಸಿದ್ದರೂ ಸಹ ವಿರೋಧ ಪಕ್ಷವಾಯಿತು.

5. ಮಣಿಪುರ (2017):

60 ಸ್ಥಾನಗಳಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 28 ಸ್ಥಾನಗಳನ್ನು ಗಳಿಸಿತ್ತು. ಆದರೆ ಬಿಜೆಪಿ ತನ್ನ ಮಿತ್ರ ಪಕ್ಷವಾದ ಲೋಕ ಜನಶಕ್ತಿ ಪಕ್ಷದ ಜೊತೆಗೆ, ಎರಡು ಸ್ಥಳೀಯ ಪಕ್ಷಗಳಾದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮತ್ತು ನಾಗಾ ಪೀಪಲ್ಸ್ ಫ್ರಂಟ್ ಜೊತೆ ಸೇರಿಕೊಂಡು ಅಧಿಕಾರಕ್ಕೆ ಮುನ್ನುಗ್ಗಿತು. ಇದಕ್ಕೆ ಬಿಜೆಪಿ ಮಾಜಿ ಸಂಸದರಾದ ರಾಜ್ಯಪಾಲ ನಜ್ಮಾ ಹೆಪ್ತುಲ್ಲಾ ಕೂಡಾ ಸರ್ಕಾರ ರಚಿಸಲು ಮೊದಲು ಬಿಜೆಪಿ ನೇತೃತ್ವದ ಮೈತ್ರಿಕೂಟವನ್ನು ಆಹ್ವಾನಿಸಿ ಸಹಾಯ ಮಾಡಿದರು.

6. ಮೇಘಾಲಯ (2018):

ಈ ಚುನಾವಣೆಯಲ್ಲಿ 60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ಗಳಿಸಿದ್ದು ಕೇವಲ ಎರಡು ಸ್ಥಾನಗಳನ್ನು ಮಾತ್ರ. ಆದರೆ ತನ್ನ ಸರ್ಕಾರ ರಚಿಸಲು ನ್ಯಾಷನಲ್ ಪೀಪಲ್ಸ್ ಪಕ್ಷದೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಂಡಿತು. ಇಲ್ಲಿ ಕೂಡಾ ಬಿಹಾರದ ಮಾಜಿ ಬಿಜೆಪಿ ಎಂಎಲ್ಸಿ ಗಂಗಾ ಪ್ರಸಾದ್ ಮೇಘಾಲಯದ ರಾಜ್ಯಪಾಲರಾಗಿದ್ದರು ಹಾಗೂ ಸರ್ಕಾರ ರಚಿಸಲು ಸಹಾಯ ಮಾಡಿದರು.

7. ಕರ್ನಾಟಕ (2018-19):

ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಎರಡು ಭಾರಿ ಪ್ರಯತ್ನಿಸಿದೆ.

ಭಾಗ 1 (ವಿಫಲ ಪ್ರಯತ್ನ) – 2018: 224 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 104 ಶಾಸಕರನ್ನು ಗೆದ್ದುಕೊಂಡಿತ್ತಾದರೂ ಬಹುಮತ ಪಡೆಯುವಲ್ಲಿ ವಿಫಲವಾಯಿತು. ಕಾಂಗ್ರೆಸ್ 80 ಮತ್ತು ಜೆಡಿಎಸ್ 39 ಸ್ಥಾನಗಳನ್ನು ಗೆದ್ದು ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾದರು. ಆದರೆ ಆಗ ಗವರ್ನರ್‌ ಆಗಿದ್ದ ಮಾಜಿ ಗುಜರಾತ್ ಬಿಜೆಪಿ ಶಾಸಕ ವಾಜುಭಾಯ್ ವಾಲಾ ಅವರು ಕಾಂಗ್ರೆಸ್-ಜನತಾದಳ (ಜಾತ್ಯತೀತ) ಪಕ್ಷಗಳ ಮೈತ್ರಿಯನ್ನು ಕಡೆಗಣಿಸಿ ಸರ್ಕಾರ ರಚಿಸಲು ಬಿಜೆಪಿ ನಾಯಕ ಬಿ.ಎಸ್.ಯಡಿಯುರಪ್ಪ ಅವರನ್ನು ಆಹ್ವಾನಿಸಿದರು.

ಆದರೆ ಮಧ್ಯಪ್ರವೇಶಿಸಿದ ಸುಪ್ರೀಂ ಕೋರ್ಟ್ ಮರುದಿನ ವಿಶ್ವಾಸ ಮತ ಯಾಚನೆಗೆ ಆದೇಶ ನೀಡಿತು. ಬಹುಮತವಿಲ್ಲವಾದ್ದರಿಂದ ವಿಶ್ವಾಸಮತಕ್ಕೆ ಹೋಗದೆ ಯಡಿಯೂರಪ್ಪ ರಾಜೀನಾಮೆ ನೀಡಿದರು. ಇದರ ನಂತರ ಹೊಸ ಕಾಂಗ್ರೆಸ್-ಜೆಡಿ (ಎಸ್) ಸರ್ಕಾರ ರಚಿಲಾಯಿತು.

ಭಾಗ 2 – 2019 (ಯಶಸ್ವಿ): ಅಧಿಕಾರ ಹಿಡಿಯಲು ಹೊಸ ಮಾದರಿಯನ್ನು ಅನುಸರಿಸಿದ ಬಿಜೆಪಿಯು 13 ಕಾಂಗ್ರೆಸ್, 3 ಜೆಡಿ (ಎಸ್), ಮತ್ತು ಇತರ ಪಕ್ಷೇತರ ಶಾಸಕರನ್ನು ರಾಜಿನಾಮೆ ಕೊಡಿಸಿ, ಸರ್ಕಾರವನ್ನು ಅಲ್ಪಮತಕ್ಕೆ ದೂಡಿದರು. ವಿಶ್ವಾಸಮತ ಕಳೆದುಕೊಂಡು ಸರ್ಕಾರ ಬಿದ್ದುಹೋದಾಗ ಯಡಿಯೂರಪ್ಪ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರವನ್ನು ಪಡೆದುಕೊಂಡಿತು. ರಾಜೀನಾಮೆ ಕೊಟ್ಟಿದ್ದವರನ್ನು ಬಿಜೆಪಿ ಸೇರಿಸಿಕೊಂಡು ಬಹುತೇಕರನ್ನು ಗೆಲ್ಲಿಸಿ ಸಚಿವ ಸ್ಥಾನಗಳನ್ನು ನೀಡಲಾಯಿತು.

8. ಹರಿಯಾಣ (2019):

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಬಹುಮತ ಕಳೆದುಕೊಂಡು 90 ಸದಸ್ಯರ ಸದನದಲ್ಲಿ 40 ಸ್ಥಾನಗಳನ್ನು ಪಡೆಯಿತು. ಜೆಜೆಪಿ ಪಕ್ಷ ತನ್ನ ಚುನಾವಣಾ ಪ್ರಚಾರದಲ್ಲಿ ಬಿಜೆಪಿಯ ವಿರುದ್ದ ತೀವ್ರವಾಗಿ ಟೀಕೆ ಮಾಡಿದ್ದರೂ, ಜೆಜೆಪಿ ಮುಖಂಡ ದುಶ್ಯಂತ್ ಚೌತಲಾ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿತು.

9. ಮಹಾರಾಷ್ಟ್ರ (ವಿಫಲ ಪ್ರಯತ್ನ) (2019):

ಇಲ್ಲಿ ಕೂಡ ಎರಡು ಭಾರಿ ಅಧಿಕಾರಗಳನ್ನು ಹಿಡಿಯಲು ಪ್ರಯತ್ನಿಸಿದೆ.

ಭಾಗ 1: ಆಡಳಿತಾರೂಡ ಬಿಜೆಪಿ-ಶಿವಸೇನೆ ಮೈತ್ರಿಕೂಟವು ವಿಧಾನಸಭಾ ಚುನಾವಣೆಯಲ್ಲಿ ಬಹುಮತವನ್ನು ಗಳಿಸಿತು ಆದರೆ ಮುಖ್ಯಮಂತ್ರಿ ಸ್ಥಾನದ ಬಗ್ಗೆ ವಿವಾದಗಳಾಗಿ ಮೈತ್ರಿ ಮುರಿದು ಬಿತ್ತು. ವಾರಗಳವರೆಗೂ ನಡೆದ ರಾಜಕೀಯ ಆಟಗಳಲ್ಲಿ, ಶಾಸಕರನ್ನು ಹೋಟೆಲ್‌ಗಳಲ್ಲಿ ಇಡುವುದು ಹಾಗೂ ರಾಷ್ಟ್ರಪತಿ ಆಡಳಿತ ಹೇರಿಕೆಯ ನಂತರ, ಶಿವಸೇನಾ, ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಡುವೆ ಮೈತ್ರಿ ಏರ್ಪಟ್ಟಿತು. ಇದರ ನಡುವೆ ಎನ್‌ಸಿಪಿಯ ಅಜಿತ್ ಪವಾರ್ ಅವರನ್ನು ಸೆಳೆದ ಬಿಜೆಪಿ 54 ಎನ್‌ಸಿಪಿ ಶಾಸಕರು ಅವರ ಬೆಂಬಲ್ಕಕೆ ಇದ್ದಾರೆಂದು ಹೇಳಿ ಗವರ್ನರ್‌ ಬಿಎಸ್ ಕೋಶ್ಯಾರಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದರು.

ರಾಜ್ಯಪಾಲರು ಬಿಜೆಪಿಯ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಮತ್ತು ಎನ್‌ಸಿಪಿಯಿಂದ ಬಂಡಾಯವೆದ್ದಿದ್ದ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಬೆಳಿಗ್ಗೆ 5 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಸುಪ್ರೀಂ ಮತ್ತೆ ಬಹುಮತ ಸಾಬೀತುಪಡಿಸಲು ಕೇಳಿತು. ಅಜಿತ್ ಪವಾರ್ ಉಲ್ಟಾ ಹೊಡೆದರು. ಬಿಜೆಪಿಗೆ ಮುಖಭಂಗವಾಗಿ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದರು.

ಭಾಗ 2: ಆದರೆ ಅಜಿತ್ ಪವಾರ್ ಅವರೊಂದಿಗೆ ಯಾರೂ ಇಲ್ಲದ ಕಾರಣ ಕೆಲವೇ ಗಂಟೆಗಳಲ್ಲಿ ಈ ಸರ್ಕಾರ ಕುಸಿದು, ಅವರು ಮತ್ತೆ ಎನ್‌ಸಿಪಿಗೆ ಹೋದರು. ಇದರ ನಂತರ ಶಿವಸೇನೆಯ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಮೈತ್ರಿಯ ಹೊಸ ಸರ್ಕಾರ ಪ್ರಮಾಣವಚನ ಸ್ವೀಕರಿಸಿತು.

10. ಮಧ್ಯಪ್ರದೇಶ (2020):

ಇಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಿದ ಬಿಜೆಪಿ, ಕಾಂಗ್ರೆಸ್ ಶಾಸಕರನ್ನು ಪಕ್ಷ ತೊರೆಯುಂತೆ ಮಾಡಿತು. ನಂತರ ಅಲ್ಲಿ ಬಿಜೆಪಿ ಸರ್ಕಾರ ರಚಿಸಿತು. ಅತೃಪ್ತ ಕಾಂಗ್ರೆಸ್ ನಾಯಕರಾದ ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ನಂತರ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡರು.

11.ರಾಜಸ್ಥಾನ (2020):

ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕರ್ನಾಟಕ ಮತ್ತು ಮದ್ಯಪ್ರದೇಶದ ಮಾದರಿಯಲ್ಲೇ ಪದಚ್ಯುತಗೊಳಿಸುವ ಪ್ರಯತ್ನ ನಡೆಯುತ್ತಿದೆ.

– ಸುಬೋದ್ ವರ್ಮಾ( ನ್ಯೂಸ್ ಕ್ಲಿಕ್)


ಓದಿ: ನಾನು ಬಿಜೆಪಿ ಸೇರುವುದಿಲ್ಲ: ರಾಜಸ್ಥಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...