Homeಮುಖಪುಟಬಿಜೆಪಿ 120, ಕಾಂಗ್ರೆಸ್ 6, ಎಎಪಿ 0: ಗುಜರಾತ್‌ ಚುನಾವಣಾ ಜಾಹೀರಾತಿನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್- ನ್ಯೂಸ್‌ಲಾಂಡ್ರಿ...

ಬಿಜೆಪಿ 120, ಕಾಂಗ್ರೆಸ್ 6, ಎಎಪಿ 0: ಗುಜರಾತ್‌ ಚುನಾವಣಾ ಜಾಹೀರಾತಿನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್- ನ್ಯೂಸ್‌ಲಾಂಡ್ರಿ ವರದಿ

- Advertisement -
- Advertisement -

ಬಿಜೆಪಿ: 120, ಕಾಂಗ್ರೆಸ್: 6, ಎಎಪಿ: 0. – ಇದು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮೂರು ಪ್ರಮುಖ ಪಕ್ಷಗಳು ಗೆದ್ದಿರುವ ಸ್ಥಾನಗಳ ಸಂಖ್ಯೆ ಅಲ್ಲ. ಇದು ಕಳೆದ 15 ದಿನಗಳಲ್ಲಿ ಈ ಪಕ್ಷಗಳು ಗುಜರಾತ್‌ನ ಮೂರು ಪ್ರಮುಖ ದಿನಪತ್ರಿಕೆಗಳಾದ ‘ಸಂದೇಶ್, ದಿವ್ಯ ಭಾಸ್ಕರ್ ಮತ್ತು ಗುಜರಾತ್ ಸಮಾಚಾರ’ದಲ್ಲಿ ನೀಡಿದ ಜಾಹೀರಾತುಗಳ ಸಂಖ್ಯೆಯಾಗಿದೆ.

ನವೆಂಬರ್ 21ರಿಂದ ಹಿಡಿದು ಡಿಸೆಂಬರ್ 5ರವರೆಗೆ ಅಹಮದಾಬಾದ್ ಆವೃತ್ತಿಗಳಲ್ಲಿ ಬಂದ ಜಾಹೀರಾತುಗಳನ್ನು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವಿಶ್ಲೇಷಣೆ ಮಾಡಿದೆ. ಸರಾಸರಿಯಾಗಿ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಮೂರು ಪತ್ರಿಕೆಗಳಲ್ಲಿ ಪ್ರತಿದಿನ ಎಂಟು ಜಾಹೀರಾತುಗಳನ್ನು ನೀಡಿದೆ ಎಂದು ಜಾಲತಾಣ ವರದಿ ಮಾಡಿದೆ.

ಈ ಅವಧಿಯಲ್ಲಿ ಮೂರು ಪತ್ರಿಕೆಗಳು ತಮ್ಮ ಮೊದಲ ಹಾಗೂ ಕೊನೆಯ ಪುಟಗಳಲ್ಲಿ ಬಿಜೆಪಿಯ ಒಟ್ಟು 72 ಜಾಹೀರಾತುಗಳನ್ನು ಪ್ರಕಟಿಸಿದವು. ಡಿಸೆಂಬರ್ 1 ರಂದು ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರೋಡ್‌ಶೋ ನಡೆಸಲಿರುವ ಕುರಿತು ಪೂರ್ಣಪುಟದ ಜಾಹೀರಾತುಗಳನ್ನು ನೀಡಲಾಗಿತ್ತು. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಒಂದು ದಿನದ ನಂತರ ನವೆಂಬರ್ 27ರಂದು ಪೂರ್ಣ ಪುಟ ಜಾಹೀರಾತುಗಳು ಕಾಣಿಸಿಕೊಂಡವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ಹೆಚ್ಚಿನ ಜಾಹೀರಾತುಗಳು ಗುಜರಾತ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲಿರುವ ಪಕ್ಷದ ನಾಯಕರ ಕುರಿತು ಇರುತ್ತಿದ್ದವು. ಮೋದಿಯವರ ವೇಳಾಪಟ್ಟಿಯೇ ಮೊದಲ ಪುಟದ ಅರ್ಧದಷ್ಟು ಭಾಗವನ್ನು ಆಕ್ರಮಿಸಿಕೊಂಡಿದ್ದನ್ನು ಗಮನಿಸಬಹುದು. ಪ್ರಮುಖವಾಗಿ ಪ್ರಚಾರ ಮಾಡಲಾದ ಇತರ ವೇಳಾಪಟ್ಟಿಗಳು ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮೃತಿ ಇರಾನಿ, ಪರ್ಷೋತ್ತಮ್ ರೂಪಾಲಾ, ಮನ್ಸುಖ್ ಮಾಂಡವಿಯಾ ಮುಖ್ಯಮಂತ್ರಿಗಳಾದ ಭೂಪೇಂದ್ರ ಪಟೇಲ್, ಹಿಮಂತ ಬಿಸ್ವಾ ಶರ್ಮಾ, ಜೈರಾಮ್ ಠಾಕೂರ್, ಯೋಗಿ ಆದಿತ್ಯನಾಥ್ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮೊದಲಾದವರಿಗೆ ಸೇರಿದ್ದವು.

ನವೆಂಬರ್ 22 ರಂದು ಅತಿ ಹೆಚ್ಚಿನದಾಗಿ ಬಿಜೆಪಿ ಜಾಹೀರಾತುಗಳನ್ನು ಪ್ರಕಟಿಸಲಾಗಿದೆ.  ರೂಪಲಾ, ಫಡ್ನವಿಸ್, ಮಾಂಡವಿಯಾ, ಶರ್ಮಾ ಮತ್ತು ಠಾಕೂರ್ ಅವರನ್ನು ಒಳಗೊಂಡ ಸಾರ್ವಜನಿಕ ಸಭೆಗಳ ವಿವರಗಳನ್ನು ಪ್ರತಿ ಪತ್ರಿಕೆಯಲ್ಲಿ ಎಂಟು ಜಾಹೀರಾತುಗಳನ್ನು ಪ್ರಕಟಿಸಲಾಗಿದೆ. ಕೊನೆಯ ಪುಟದಲ್ಲಿ ಮೂರು ಮತ್ತು ಒಳಪುಟಗಳಲ್ಲಿ ಐದು ಜಾಹೀರಾತುಗಳು ಕಾಣಿಸಿಕೊಂಡಿವೆ. ಪ್ರತಿ ಪತ್ರಿಕೆಯ ಕೊನೆಯ ಪುಟದ ಕಾಲುಭಾಗವು ಸಾರ್ವಜನಿಕ ಸಭೆಯ ವಿವರಗಳನ್ನು ಒಳಗೊಂಡಿದ್ದವು. ಬನಸ್ಕಾಂತ, ಅಹಮದಾಬಾದ್ ಮತ್ತು ಆನಂದ್‌ನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಗಳ ಕುರಿತು ವಿವರಗಳನ್ನು ನೀಡಲಾಗಿತ್ತು. ಅಮಿತ್ ಶಾ ಅವರ ಚಿತ್ರಗಳೊಂದಿಗೆ ಜಾಹೀರಾತು ಪ್ರಕಟಗೊಂಡಿದ್ದವು. ಭೂಪೇಂದ್ರ ಪಟೇಲ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಇಲ್ಲಿ ಒಳಗೊಳ್ಳಲಾಗಿತ್ತು.

ಇದನ್ನೂ ಓದಿರಿ: ವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

ಮೂರು ಪತ್ರಿಕೆಗಳಲ್ಲಿ ಬಿಜೆಪಿಯ ಏಕೈಕ ಜಾಕೆಟ್ ಜಾಹೀರಾತು ಡಿಸೆಂಬರ್ 1 ರಂದು ಪ್ರಕಟಗೊಂಡಿತ್ತು. ಅಹಮದಾಬಾದ್‌ನಲ್ಲಿ ಮೋದಿಯವರು 50-ಕಿಮೀಯಷ್ಟು ರೋಡ್‌ಶೋ ನಡೆಸಲಿರುವುದನ್ನು ಇಲ್ಲಿ ನೀಡಲಾಗಿತ್ತು. ಮೂರು ಗಂಟೆಗಳಲ್ಲಿ 16 ವಿಧಾನಸಭಾ ಕ್ಷೇತ್ರಗಳನ್ನು 35 ನಿಲುಗಡೆಗಳೊಂದಿಗೆ ಮೋದಿ ಕ್ರಮಿಸಲಿರುವ ವಿವರಗಳನ್ನು ಜಾಹೀರಾತಿನಲ್ಲಿ ನೀಡಲಾಗಿತ್ತು.

ನವೆಂಬರ್ 27 ರಂದು, ಬಿಜೆಪಿಯು ಪ್ರತಿ ಮೂರು ಪತ್ರಿಕೆಗಳ ಒಳಪುಟಗಳಲ್ಲಿ ಪೂರ್ಣ ಪುಟದ ಜಾಹೀರಾತುಗಳನ್ನು ನೀಡಿತ್ತು. ಪಕ್ಷದ ಪ್ರಣಾಳಿಕೆಯ ಪ್ರಮುಖ ಅಂಶಗಳನ್ನು ಪಟ್ಟಿ ಮಾಡಲಾಗಿತ್ತು. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದು, ‘ಆಂಟಿ ರ್‍ಯಾಡಿಕಲ್‌’ ಕೋಶವನ್ನು ಸ್ಥಾಪಿಸುವುದು, 2036ರ ಒಲಂಪಿಕ್ಸ್ ಅನ್ನು ಆಯೋಜಿಸಲು ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸುವುದು, 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದು, ಏಮ್ಸ್ ತರಹದ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸುವುದು – ಸೇರಿದಂತೆ ಮೊದಲಾದ ಭರವಸೆಗಳನ್ನು ನೀಡಲಾಗಿತ್ತು.

ಕಳೆದ 15 ದಿನಗಳಲ್ಲಿ ಮೋದಿಯವರ ಸಾರ್ವಜನಿಕ ಸಭೆಗಳ ಕುರಿತ 18 ಮುಖಪುಟದ ಜಾಹೀರಾತುಗಳನ್ನು ‘ನ್ಯೂಸ್‌ಲಾಂಡ್ರಿ’ ಪಟ್ಟಿ ಮಾಡಿದೆ. ಮೋದಿಯವರ ರೋಡ್‌ಶೋ ಕುರಿತ ಜಾಹೀರಾತು ಹೊರತುಪಡಿಸಿ ಉಳಿದೆಲ್ಲವೂ ಮೊದಲ ಪುಟದ ಅರ್ಧದಷ್ಟು ಭಾಗವನ್ನು ಆಕ್ರಮಿಸಿಕೊಂಡಿವೆ. ಉದಾಹರಣೆಗೆ ನವೆಂಬರ್ 24ರಂದು, ಎಲ್ಲಾ ಮೂರು ಪತ್ರಿಕೆಗಳ ಮುಖಪುಟಗಳಲ್ಲಿ ಜಾಹೀರಾತು ನೀಡಿ, ‘ಅರಾವಳಿ, ಬನಸ್ಕಾಂತ, ಗಾಂಧಿನಗರ ಮತ್ತು ಅಹಮದಾಬಾದ್‌’ನಲ್ಲಿ ಮೋದಿಯವರು ಪಾಲ್ಗೊಳ್ಳಲಿರುವ ಸಾರ್ವಜನಿಕ ಸಭೆಗಳ ಮಾಹಿತಿಗಳನ್ನು ನೀಡಲಾಗಿತ್ತು. ಷಾ ಅವರ ಸಾರ್ವಜನಿಕ ಸಭೆಗಳ ಜಾಹೀರಾತುಗಳು ಸಾಮಾನ್ಯವಾಗಿ ಕೊನೆಯ ಪುಟದಲ್ಲಿ ಕಾಣಿಸಿಕೊಳ್ಳುತ್ತಿದ್ದವು. ಮೂರು ಪತ್ರಿಕೆಗಳಲ್ಲಿ ಸಾಮಾನ್ಯವಾಗಿ ಕಾಲುಪುಟದ ಒಟ್ಟು 24 ಜಾಹೀರಾತುಗಳನ್ನು ನೀಡಲಾಗಿತ್ತು.

ವಿವಿಧ ದಿನಗಳಲ್ಲಿ, ಒಳಪುಟಗಳಲ್ಲಿ ಬಿಜೆಪಿಯ ಸಾಧನೆಗಳ ಕುರಿತು ಅನೇಕ ಜಾಹೀರಾತುಗಳು ಇದ್ದವು. ಈ ಜಾಹೀರಾತುಗಳು “ಭಾಜ್ಪ್ ಎಟ್ಲೆ ಭರೋಸೋ” ( ಬಿಜೆಪಿ ಎಂದರೆ ನಂಬಿಕೆ) ಎಂಬ ಪಠ್ಯದೊಂದಿಗೆ ಸಾಮಾನ್ಯವಾಗಿ ಪ್ರಾರಂಭವಾಗುತ್ತಿತ್ತು ಅಥವಾ ಕೊನೆಗೊಳ್ಳುತ್ತಿತ್ತು. ನವೆಂಬರ್ 24ರಂದು ಒಂದು ಜಾಹೀರಾತಿನಲ್ಲಿ, “ಬಿಜೆಪಿ ಎಂದರೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ, ರಾಜ್ಯದಲ್ಲಿ ಶಾಂತಿಯನ್ನು ಖಾತ್ರಿಪಡಿಸುವ, ಮಾ ಶಕ್ತಿಯ ಭದ್ರತೆಯನ್ನು ಖಾತ್ರಿಪಡಿಸುವ, ಮಹಿಳೆಯರಿಗೆ ಸುರಕ್ಷೆ ನೀಡುವ ಪಕ್ಷವಾಗಿದೆ. ಬಿಜೆಪಿಗೆ ಮತ ನೀಡಿ ಅಧಿಕಾರ ದೊರಕಿಸಬೇಕು” ಎಂದು ಮನವಿ ಮಾಡಲಾಗಿತ್ತು.

ಮತ್ತೊಂದು ಜಾಹೀರಾತಿನಲ್ಲಿ ಕೋವಿಡ್ ಸಮಯದಲ್ಲಿ ಬಿಜೆಪಿ ಮಾಡಿರುವ ಸಾಧನೆಗಳೆಂದು ಪಟ್ಟಿ ಮಾಡಲಾಗಿತ್ತು. ಬಡವರಿಗೆ ಉಚಿತ ಪಡಿತರ, ಗ್ಯಾರಂಟಿ ಇಲ್ಲದೆ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ, ಕಾರ್ಮಿಕರಿಗೆ ಪೌಷ್ಟಿಕ ಆಹಾರ ಮೊದಲಾದ ವಿಚಾರಗಳನ್ನು ಪ್ರಸ್ತಾಪಿಸಲಾಗಿತ್ತು.

ಡಿಸೆಂಬರ್ 5 ರಂದು ಎಲ್ಲಾ ಮೂರು ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿ, ಎರಡನೇ ಹಂತದ ಮತದಾನದತ್ತ ಗಮನ ಸೆಳೆಯಲಾಯಿತು. “ಗುಜರಾತ್‌ನ ಹೆಮ್ಮೆ”, “ಗುಜರಾತ್ ವಿರೋಧಿಗಳ ವಿರುದ್ಧ ಹೋರಾಡುವ ಮತ್ತು ಭಯೋತ್ಪಾದಕರನ್ನು ಪ್ರವೇಶಿಸದಂತೆ ತಡೆಯುವ ಒಬ್ಬರಿಗೆ ಮತ ಚಲಾಯಿಸಬೇಕು” ಎಂದು ಕೋರಲಾಗಿತ್ತು. “ಏಕರೂಪ ನಾಗರಿಕ ಸಂಹಿತೆಯ ಪ್ರಕ್ರಿಯೆಯನ್ನು ಆರಂಭಿಸಿದ ರಾಜ್ಯ, ಜಗತ್ತೇ ಗುಜರಾತ್‌ಗೆ ಜಯಕಾರ ಹಾಕಿದೆ” ಎಂದು ಪ್ರಕಟಿಸಲಾಗಿತ್ತು. ಅಮಿತ್ ಷಾ, ನಡ್ಡಾ, ಭೂಪೇಂದ್ರ ಪಟೇಲ್ ಮತ್ತು ಸಿಆರ್ ಪಾಟೀಲ್ ಅವರ ಸಣ್ಣ ಭಾವಚಿತ್ರಗಳ ಜೊತೆಗೆ ಮೋದಿಯವರ ಕಟೌಟ್‌ ಬಳಿಸಲಾಗಿತ್ತು. ಮೊದಲ ಪುಟದ ಅರ್ಧದಷ್ಟು ಭಾಗವನ್ನು ಜಾಹೀರಾತು ಆಕ್ರಮಿಸಿಕೊಂಡಿತ್ತು.

ಇದನ್ನೂ ಓದಿರಿ: ಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

ಕಾಂಗ್ರೆಸ್‌ ಪಾಡೇನು?

ಡಿಸೆಂಬರ್ 4 ಮತ್ತು 5ರಂದು ಎರಡನೇ ಹಂತದ ಮತದಾನಕ್ಕೆ ಒಂದು ದಿನ ಮೊದಲು ಮೂರು ಪತ್ರಿಕೆಗಳಲ್ಲಿ ಕಾಲುಪುಟದಷ್ಟು ಜಾಹೀರಾತುಗಳನ್ನು ಕಾಂಗ್ರೆಸ್ ನೀಡಿತ್ತು. ಮೊದಲ ಜಾಹೀರಾತಿನಲ್ಲಿ ಕಾಂಗ್ರೆಸ್‌ನ ಚುನಾವಣಾ ಭರವಸೆಗಳನ್ನು ಪ್ರಸ್ತಾಪಿಸಲಾಗಿತ್ತು. ಉಚಿತ ವಿದ್ಯುತ್, 500 ರೂ.ನಲ್ಲಿ ಗ್ಯಾಸ್ ಸಿಲಿಂಡರ್, ಹೆಚ್ಚಿನ ಉದ್ಯೋಗವಕಾಶ ಮತ್ತು ರೈತರ ಸಾಲ ಮನ್ನಾದ ಕುರಿತು ಕಾಂಗ್ರೆಸ್‌ ಮಾತನಾಡಿತ್ತು.

ಡಿಸೆಂಬರ್ 5 ರಂದು ಜಾಹೀರಾತಿನಲ್ಲಿ ಹೆಚ್ಚಿದ ಹಣದುಬ್ಬರ, ನಿರುದ್ಯೋಗ ಮತ್ತು “ವ್ಯಾಪಕ” ಭ್ರಷ್ಟಾಚಾರದ ಕುರಿತು ತಿಳಿಸಲಾಗಿತ್ತು. ಕಾಂಗ್ರೆಸ್‌ಗೆ ಮತ ಹಾಕಿದರೆ, ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲಾಗುತ್ತದೆ, ಯುವಕರಿಗೆ ಉದ್ಯೋಗಗಳನ್ನು ಒದಗಿಸಲಾಗುತ್ತದೆ, ಹಣದುಬ್ಬರವನ್ನು ತಡೆಯಲಾಗುತ್ತದೆ ಮತ್ತು ಗುಜರಾತ್ ಅನ್ನು ಡ್ರಗ್ ಮುಕ್ತ ಮಾಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. “ಬದಲಾವಣೆ ಒಂದೇ ಪರ್ಯಾಯ” ಎಂದು ಜಾಹೀರಾತು ಕೊನೆಗೊಂಡಿತ್ತು.

ನವೆಂಬರ್ 21 ರಿಂದ ಡಿಸೆಂಬರ್ 5 ರವರೆಗೆ ಈ ಮೂರು ಪತ್ರಿಕೆಗಳಲ್ಲಿ ಎಎಪಿ ಯಾವುದೇ ಜಾಹೀರಾತುಗಳನ್ನು ನೀಡಿಲ್ಲ.

(ಹೆಚ್ಚಿನ ವಿವರಗಳಿಗೆ ‘ನ್ಯೂಸ್‌ಲಾಂಡ್ರಿ’ ವರದಿ ಓದಬಹುದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...