Homeಮುಖಪುಟಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ತಿದ್ದುಪಡಿ: ಹಿಡನ್‌ ಅಜೆಂಡಾ ಬಿಚ್ಚಿಟ್ಟ ಬಿಜೆಪಿ ಸಂಸದ ಅನಂತ್‌...

ಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ತಿದ್ದುಪಡಿ: ಹಿಡನ್‌ ಅಜೆಂಡಾ ಬಿಚ್ಚಿಟ್ಟ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ

- Advertisement -
- Advertisement -

ಸದಾ ದ್ವೇಷದ ಹೇಳಿಕೆಗೆ ಸುದ್ದಿಯಾಗುತ್ತಿದ್ದ ಉತ್ತರಕನ್ನಡ ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನಕ್ಕೆ ತಿದ್ದುಪಡಿಯನ್ನು ತರುವ ಕುರಿತು ತನ್ನ ದುರಾಶೆಯನ್ನು ವ್ಯಕ್ತಪಡಿಸಿದ್ದು, ಸಂವಿಧಾನವನ್ನು ತಿದ್ದುಪಡಿ ಮಾಡಬೇಕಿದ್ರೆ, ಸಂವಿಧಾನವನ್ನು ಬದಲಾಯಿಸಬೇಕಿದ್ದರೆ ಲೋಕಸಭೆಯಲ್ಲಿ 400ಕ್ಕೂ ಅಧಿಕ ಸೀಟ್‌ ಗೆಲ್ಲಬೇಕು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದಾರೆ.

ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಸಂಸದ ಅನಂತ್‌ ಕುಮಾರ್‌ ಹೆಗಡೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. 400ಸೀಟ್‌ ಯಾಕೆ? ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ. ಅಲ್ಪ ಬಹುಮತ ಇದೆ. ರಾಜ್ಯ ಸರಕಾರಗಳಲ್ಲಿ ಬೇಕಾದ ಬಹುಮತ ಇಲ್ಲ. ಸಂವಿಧಾನ ತಿದ್ದುಪಡಿ ಮಾಡಬೇಕಿದ್ದರೆ, ಕಾಂಗ್ರೆಸ್​ನವರು ಅನತಗ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಸಂವಿಧಾನದ ಮೂಲರೂಪವನ್ನೇ ತಿರುಚಿದ್ದಾರೆ. ಸಂವಿಧಾನದಲ್ಲಿ ಬೇಡದೇ ಇರುವುದನ್ನೆಲ್ಲ ಸೇರಿಸಿದ್ದಾರೆ. ಇಡೀ ಹಿಂದೂ ಸಮಾಜವನ್ನು ದಮನಿಸುವ ರೀತಿ ಕಾನೂನು ತಂದಿದ್ದಾರೆ. ಇದೆಲ್ಲದರ ಬದಲಾವಣೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಹುಮತ ಪಡೆದರೆ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಶಾಸನ ಸಭೆಗಳಲ್ಲಿ ಕಾಂಗ್ರೆಸ್‌ನವರು ಹೆಚ್ಚು ಇದ್ದರೆ ಏನೇ ತಿದ್ದುಪಡಿ ತಂದರೂ ಪಾಸ್ ಆಗಲ್ಲ. ಸಿಎಎ ಜಾರಿಗೆ ರಾಜ್ಯಗಳಿಂದ ಒಪ್ಪಿಗೆ ಬಂದಿಲ್ಲ. ಸಿಎಎ ತರದಿದ್ದರೆ ದೇಶದಲ್ಲಿ ಕಾನೂನು ಸುವ್ಯವಸ್ಥೆ ನಮ್ಮ ಕೈಯಲ್ಲಿ ಇರಲ್ಲ. ಇದು ದೇಶದ್ರೋಹಿಗಳ ಆಡಂಬರ ಆಗುತ್ತದೆ. ದೇಶ ಸರಿ ಆಗಬೇಕೆಂದರೆ ನಮ್ಮವರಿಂದಲೇ ಹೊರತು ಬೇರೆ ಅವರಿಂದ ಆಗಲ್ಲ. ಎಲ್ಲೆಡೆ ಬಹುಮತ ಬರಲಿ, ಆ ಮೇಲೆ ನೋಡಿ ಮಾರಿಜಾತ್ರೆ ಹೇಗಿರುತ್ತೆ ಎಂದು, ಜಾತ್ರೆಗೆ ಒಂದು ಕಳೆ ಬರೋದು ಇದಾದ ನಂತರವೇ ಎಂದು ಅನಂತ್‌ ಕುಮಾರ್‌ ಹೆಗಡೆ ಬಾಯಿಗೆ ಬಂದಂತೆ ಮಾತನಾಡಿದ್ದು, ಸಂವಿಧಾನದ ಪ್ರಕಾರ ಲೋಕಸಭೆಗೆ ಆಯ್ಕೆಯಾಗಿ ಸಂಸದನಾಗಿದ್ದುಕೊಂಡು, ತನ್ನದೇ ಸ್ಥಾನಕ್ಕೆ ಧಕ್ಕೆ ಬರುವ ರೀತಿಯಲ್ಲಿ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯ ಬಳಿಕ 4 ವರ್ಷಗಳಿಂದ ತೆರೆಯ ಹಿಂದೆ ಸರಿದಿದ್ದ ಸಂಸದ ಅನಂತ್‌ ಕುಮಾರ್‌ ಹೆಗಡೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ವಿವಾದಾತ್ಮಕ ಮತ್ತು ದ್ವೇಷದ ಹೇಳಿಕೆ ಮೂಲಕ ಸುದ್ದಿಯಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಿಂದ ನಿಂದಿಸಿ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸರು ಇತ್ತೀಚೆಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಕೆಲವು ದಿನಗಳ ಹಿಂದೆಯಷ್ಟೇ ಕುಮಟಾದಲ್ಲಿ ನಡೆದ ಸಭೆಯಲ್ಲಿ ಅನಂತಕುಮಾರ್‌ ಹೆಗಡೆ ಪ್ರಚೋದನಕಾರಿ ಮಾತನಾಡಿದ್ದಕ್ಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಯೋಧ್ಯೆ ರಾಮಮಂದಿರ ವಿಚಾರವಾಗಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಅನಂತ್‌ ಕುಮಾರ್‌ ಹೆಗಡೆ ನಾಲಗೆ ಹರಿಯ ಬಿಟ್ಟಿದ್ದರು. ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬರಿ ಮಸೀದಿ ರೀತಿಯಲ್ಲಿ ಹೊಡೆಯಬೇಕು ಎಂದು ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದರು. ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆ ಜೊತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾತುಗಳನ್ನಾಡಿರುವುದರಿಂದ ಸೆಕ್ಷನ್ 153ಎ ಮತ್ತು 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನು ಓದಿ: ಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...