Homeಮುಖಪುಟಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ತಿದ್ದುಪಡಿ: ಹಿಡನ್‌ ಅಜೆಂಡಾ ಬಿಚ್ಚಿಟ್ಟ ಬಿಜೆಪಿ ಸಂಸದ ಅನಂತ್‌...

ಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ತಿದ್ದುಪಡಿ: ಹಿಡನ್‌ ಅಜೆಂಡಾ ಬಿಚ್ಚಿಟ್ಟ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ

- Advertisement -
- Advertisement -

ಸದಾ ದ್ವೇಷದ ಹೇಳಿಕೆಗೆ ಸುದ್ದಿಯಾಗುತ್ತಿದ್ದ ಉತ್ತರಕನ್ನಡ ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನಕ್ಕೆ ತಿದ್ದುಪಡಿಯನ್ನು ತರುವ ಕುರಿತು ತನ್ನ ದುರಾಶೆಯನ್ನು ವ್ಯಕ್ತಪಡಿಸಿದ್ದು, ಸಂವಿಧಾನವನ್ನು ತಿದ್ದುಪಡಿ ಮಾಡಬೇಕಿದ್ರೆ, ಸಂವಿಧಾನವನ್ನು ಬದಲಾಯಿಸಬೇಕಿದ್ದರೆ ಲೋಕಸಭೆಯಲ್ಲಿ 400ಕ್ಕೂ ಅಧಿಕ ಸೀಟ್‌ ಗೆಲ್ಲಬೇಕು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದಾರೆ.

ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಸಂಸದ ಅನಂತ್‌ ಕುಮಾರ್‌ ಹೆಗಡೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. 400ಸೀಟ್‌ ಯಾಕೆ? ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ. ಅಲ್ಪ ಬಹುಮತ ಇದೆ. ರಾಜ್ಯ ಸರಕಾರಗಳಲ್ಲಿ ಬೇಕಾದ ಬಹುಮತ ಇಲ್ಲ. ಸಂವಿಧಾನ ತಿದ್ದುಪಡಿ ಮಾಡಬೇಕಿದ್ದರೆ, ಕಾಂಗ್ರೆಸ್​ನವರು ಅನತಗ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಸಂವಿಧಾನದ ಮೂಲರೂಪವನ್ನೇ ತಿರುಚಿದ್ದಾರೆ. ಸಂವಿಧಾನದಲ್ಲಿ ಬೇಡದೇ ಇರುವುದನ್ನೆಲ್ಲ ಸೇರಿಸಿದ್ದಾರೆ. ಇಡೀ ಹಿಂದೂ ಸಮಾಜವನ್ನು ದಮನಿಸುವ ರೀತಿ ಕಾನೂನು ತಂದಿದ್ದಾರೆ. ಇದೆಲ್ಲದರ ಬದಲಾವಣೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಹುಮತ ಪಡೆದರೆ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಶಾಸನ ಸಭೆಗಳಲ್ಲಿ ಕಾಂಗ್ರೆಸ್‌ನವರು ಹೆಚ್ಚು ಇದ್ದರೆ ಏನೇ ತಿದ್ದುಪಡಿ ತಂದರೂ ಪಾಸ್ ಆಗಲ್ಲ. ಸಿಎಎ ಜಾರಿಗೆ ರಾಜ್ಯಗಳಿಂದ ಒಪ್ಪಿಗೆ ಬಂದಿಲ್ಲ. ಸಿಎಎ ತರದಿದ್ದರೆ ದೇಶದಲ್ಲಿ ಕಾನೂನು ಸುವ್ಯವಸ್ಥೆ ನಮ್ಮ ಕೈಯಲ್ಲಿ ಇರಲ್ಲ. ಇದು ದೇಶದ್ರೋಹಿಗಳ ಆಡಂಬರ ಆಗುತ್ತದೆ. ದೇಶ ಸರಿ ಆಗಬೇಕೆಂದರೆ ನಮ್ಮವರಿಂದಲೇ ಹೊರತು ಬೇರೆ ಅವರಿಂದ ಆಗಲ್ಲ. ಎಲ್ಲೆಡೆ ಬಹುಮತ ಬರಲಿ, ಆ ಮೇಲೆ ನೋಡಿ ಮಾರಿಜಾತ್ರೆ ಹೇಗಿರುತ್ತೆ ಎಂದು, ಜಾತ್ರೆಗೆ ಒಂದು ಕಳೆ ಬರೋದು ಇದಾದ ನಂತರವೇ ಎಂದು ಅನಂತ್‌ ಕುಮಾರ್‌ ಹೆಗಡೆ ಬಾಯಿಗೆ ಬಂದಂತೆ ಮಾತನಾಡಿದ್ದು, ಸಂವಿಧಾನದ ಪ್ರಕಾರ ಲೋಕಸಭೆಗೆ ಆಯ್ಕೆಯಾಗಿ ಸಂಸದನಾಗಿದ್ದುಕೊಂಡು, ತನ್ನದೇ ಸ್ಥಾನಕ್ಕೆ ಧಕ್ಕೆ ಬರುವ ರೀತಿಯಲ್ಲಿ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯ ಬಳಿಕ 4 ವರ್ಷಗಳಿಂದ ತೆರೆಯ ಹಿಂದೆ ಸರಿದಿದ್ದ ಸಂಸದ ಅನಂತ್‌ ಕುಮಾರ್‌ ಹೆಗಡೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ವಿವಾದಾತ್ಮಕ ಮತ್ತು ದ್ವೇಷದ ಹೇಳಿಕೆ ಮೂಲಕ ಸುದ್ದಿಯಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಿಂದ ನಿಂದಿಸಿ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸರು ಇತ್ತೀಚೆಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಕೆಲವು ದಿನಗಳ ಹಿಂದೆಯಷ್ಟೇ ಕುಮಟಾದಲ್ಲಿ ನಡೆದ ಸಭೆಯಲ್ಲಿ ಅನಂತಕುಮಾರ್‌ ಹೆಗಡೆ ಪ್ರಚೋದನಕಾರಿ ಮಾತನಾಡಿದ್ದಕ್ಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಯೋಧ್ಯೆ ರಾಮಮಂದಿರ ವಿಚಾರವಾಗಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಅನಂತ್‌ ಕುಮಾರ್‌ ಹೆಗಡೆ ನಾಲಗೆ ಹರಿಯ ಬಿಟ್ಟಿದ್ದರು. ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬರಿ ಮಸೀದಿ ರೀತಿಯಲ್ಲಿ ಹೊಡೆಯಬೇಕು ಎಂದು ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದರು. ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆ ಜೊತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾತುಗಳನ್ನಾಡಿರುವುದರಿಂದ ಸೆಕ್ಷನ್ 153ಎ ಮತ್ತು 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನು ಓದಿ: ಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...