Homeಕರ್ನಾಟಕಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನು ಕಾಂಗ್ರೆಸ್ ಇನ್ನೂ ಮುಂದುವರೆಸಿದೆ: ನೂರ್ ಶ್ರೀಧರ್ ಆಕ್ರೋಶ

ಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನು ಕಾಂಗ್ರೆಸ್ ಇನ್ನೂ ಮುಂದುವರೆಸಿದೆ: ನೂರ್ ಶ್ರೀಧರ್ ಆಕ್ರೋಶ

- Advertisement -
- Advertisement -

ಕೇಂದ್ರ ಬಜೆಟ್‌ ಸಂಪೂರ್ಣವಾಗಿ ಜನ ವಿರೋಧಿ ಹಾಗೂ ಕಾರ್ಪೊರೇಟ್‌ ಪರವಾಗಿದ್ದು, ರಾಜ್ಯದ ಹಕ್ಕುಗಳನ್ನು ಹರಣ ಮಾಡುವಂಥದ್ದಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್‌ ಶ್ರೀಧರ್‌ ಆಕ್ರೋಶ ಗುರುವಾರ ವ್ಯಕ್ತಪಡಿಸಿದರು. ಬೆಂಗಳೂರಿನ ಗಾಂಧಿಭವನದಲ್ಲಿ ಆಯೋಜಿಸಿದ್ದ ಜನಚಳವಳಿ ಬಜೆಟ್‌ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರಬದಲಾಗಿದ್ದರೂ ನೀತಿಗಳು ಬದಲಾಗಿಲ್ಲ. ಹಳೆಯ ನೀತಿಗಳನ್ನು ತಿರಸ್ಕರಿಸದೆಯೇ ಹೊಸ ಹಾದಿಯನ್ನು ತುಳಿಯುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರೆ ಅದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ತಂದಿದ್ದ

ಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನೂ ಮುಂದುವರೆಸುವ ಮೂಲಕ ಕಾಂಗ್ರೆಸ್‌ ನೀತಿಗೂ ಬಿಜೆಪಿ ನೀತಿಗೂ ಆರ್ಥಿಕ ವಿಚಾರದಲ್ಲಿ ಬದಲಾವಣೆ ಇಲ್ಲ ಎಂಬುದನ್ನು ಸರಕಾರ ಸ್ಪಷ್ಟವಾಗಿ ತೋರಿಸಿಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ಕೃಷಿಯನ್ನು ಸಂಪೂರ್ಣವಾಗಿ ಖಾಸಗಿ ಕಾರ್ಪೋರೇಟುಗಳಿಗೆ ಒಪ್ಪಿಸಲು ಹಾತೊರೆಯುತ್ತಿದೆ. ಅಲ್ಲದೆ ಕಾರ್ಮಿಕ ವರ್ಗದ ಎಲ್ಲ ಹಕ್ಕುಗಳನ್ನು ಕಸಿದು ಗುಲಾಮಿ ಕಾರ್ಮಿಕರನ್ನು ಸೃಷ್ಟಿಸಲು ಬಯಸುತ್ತಿದೆ. ಜಿಎಸ್‌ಟಿ ಎಂಬುದು ಜನಸಾಮಾನ್ಯರನ್ನು ಸುಲಿಯುವ ಹಾಗೂ ರಾಜ್ಯದ ಸಂಪನ್ಮೂಲಗಳನ್ನೆಲ್ಲಾ ಸೂರೆಗೈದು ಅವನ್ನು ದೈನೇಸಿಯಾಗಿಸಿ ಬೇಡುವ ಸ್ಥಿತಿಗೆ ತಳ್ಳುವ ಲೂಟಿಕೋರ ಪದ್ದತಿಯಾಗಿದೆ. ಸೆಸ್‌ ಹಣವನ್ನೆಲ್ಲಾ ಕೇಂದ್ರವೇ ಕಬಳಿಸಿ ರಾಜ್ಯಗಳಿಗೆ ದ್ರೋಹಬಗೆಯಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಬಜೆಟ್‌ ಮತ್ತು ನೀತಿಗಳು ಖಾಸಗೀಕರಣವನ್ನು ವೇಗಗೊಳಿಸುವ ಮತ್ತು ಕಲ್ಯಾಣ ಕ್ರಮಗಳಿಗೆ ಕತ್ತರಿ ಹಾಕುವ ಗುರಿಯನ್ನು ಹೊಂದಿವೆ. ಇವು ಶೋಷಿತ ಸಮುದಾಯಗಳ ಸಬಲೀಕರಣಕ್ಕೆ ಇದ್ದ ಎಲ್ಲ ಮಾರ್ಗಗಳನ್ನು ಮುಚ್ಚಿಹಾಕಿ, ಮೀಸಲಾತಿಯನ್ನು ಅಘೋಷಿತವಾಗಿ ರದ್ದುಮಾಡಿ, ಅವರನ್ನು ಮತ್ತೆ ಕತ್ತಲಕೂಪಕ್ಕೆ ತಳ್ಳುವ ಇರಾದೆಯನ್ನು ಹೊಂದಿವೆ ಎಂದರು.

ಕಾಂಗ್ರೆಸ್‌ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಮರೆತಿದೆ. 5 ಗ್ಯಾರಂಟಿಗಳ ಗುಂಗಿನಲ್ಲೇ ಸರಕಾರ ತೇಲುತ್ತಿದೆ. ಜನ ವರ್ಗಗಗಳಿಗೆ ಕೊಟ್ಟಿದ್ದ ಭರವಸೆಗಳಲ್ಲಿ ಒಂದೇ ಒಂದು ಭರವಸೆಯನ್ನೂ ಈಡೇರಿಸದೆ, ಈಡೇರಿಸುವ ಸೂಚನೆಯನ್ನೂ ನೀಡದೆ ದ್ರೋಹ ಬಗೆದಿದೆ. ಯಾವುದೇ ಸ್ಪಷ್ಟ ನೀತಿ ಮತ್ತು ದಿಕ್ಕು ಇಲ್ಲದ ಬಜೆಟ್‌ ಇದಾಗಿದೆ. ಜನಪರ ಅಭಿವೃದ್ದಿಯ ರೋಡ್‌ ಮ್ಯಾಪ್‌ ಇಲ್ಲದ ಬಜೆಟ್‌ ಇದಾಗಿದೆ ಎಂದು ನೂರ್‌ ಶ್ರೀಧರ್ ಅವರು ಹೇಳಿದರು.

ರಾಜ್ಯ ಸರ್ಕಾರದ ಬೆಂಗಳೂರು ಮತ್ತು ಕಾರ್ಪೋರೇಟ್‌ ಕೇಂದ್ರಿತ ಬಜೆಟ್‌ ಆಗಿದೆ. ಕೃಷಿ ಬಿಕ್ಕಟ್ಟನ್ನು ಬಗೆಹರಿಸಲಿಕ್ಕಾಗಲೀ, ರೈತರನ್ನು ಋಣಮುಕ್ತರನ್ನಾಗಿಸಲಿಕ್ಕಾಗಲೀ, ರೈತರ ಬೆಳೆಗೆ ನ್ಯಾಯಸಮ್ಮತ ಬೆಲೆ ದಕ್ಕಿಸಿಕೊಡಲಿಕ್ಕಾಗಲೀ, ಕಾರ್ಮಿಕರಿಗೆ ಘನತೆಯ ವೇತನ ಖಾತ್ರಿ ಪಡಿಸಲಿಕ್ಕಾಗಲೀ, ಉದ್ಯೋಗ ಸೃಷ್ಟಿಸಲಿಕ್ಕಾಗಲೀ, ಕನಿಷ್ಟ ವೇತನವನ್ನು ಖಾತ್ರಿಪಡಿಸಲಿಕ್ಕಾಗಲೀ, ತಳ ಸಮುದಾಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಾಗಲೀ, ಬಡವರಿಗೆ ಭೂಮಿ ಮತ್ತು ವಸತಿ ಒದಗಿಸಲಿಕ್ಕಾಗಲೀ ಯಾವುದೇ ನಿರ್ಧಿಷ್ಟ ಕ್ರಮಗಳಿಲ್ಲ ಎಂದು ಅವರು ಹೇಳಿದರು.

ಎರಡು ದಿನಗಳ ಕಾಲ ನಡೆದ ಜನಚಳವಳಿಗಳ ಅಧಿವೇಶನದಲ್ಲಿ ಸಂಯುಕ್ತ ಹೋರಾಟದ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ಯಶ್ವಂತ ಟಿ., ಕೆ.ವಿ.ಭಟ್‌, ವರಲಕ್ಷ್ಮೀ, ಚಾಮರಸ ಪಾಟೀಲ್‌, ಮಾವಳ್ಳಿ ಶಂಕರ್‌, ಗುರುಪ್ರಸಾದ್‌ ಕೆರಗೋಡು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್ ಅಧಿಕಾರಿಯಿಂದ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಟೀಕಿಸಿದ ಮುಸ್ಲಿಂ ಯುವಕನ ಬಂಧನ

ಸಂಭಾಲ್ ಅಧಿಕಾರಿಯಿಂದ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಟೀಕಿಸಿದ ಮುಸ್ಲಿಂ ಯುವಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ)...

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...