Homeಕರ್ನಾಟಕಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನು ಕಾಂಗ್ರೆಸ್ ಇನ್ನೂ ಮುಂದುವರೆಸಿದೆ: ನೂರ್ ಶ್ರೀಧರ್ ಆಕ್ರೋಶ

ಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನು ಕಾಂಗ್ರೆಸ್ ಇನ್ನೂ ಮುಂದುವರೆಸಿದೆ: ನೂರ್ ಶ್ರೀಧರ್ ಆಕ್ರೋಶ

- Advertisement -
- Advertisement -

ಕೇಂದ್ರ ಬಜೆಟ್‌ ಸಂಪೂರ್ಣವಾಗಿ ಜನ ವಿರೋಧಿ ಹಾಗೂ ಕಾರ್ಪೊರೇಟ್‌ ಪರವಾಗಿದ್ದು, ರಾಜ್ಯದ ಹಕ್ಕುಗಳನ್ನು ಹರಣ ಮಾಡುವಂಥದ್ದಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್‌ ಶ್ರೀಧರ್‌ ಆಕ್ರೋಶ ಗುರುವಾರ ವ್ಯಕ್ತಪಡಿಸಿದರು. ಬೆಂಗಳೂರಿನ ಗಾಂಧಿಭವನದಲ್ಲಿ ಆಯೋಜಿಸಿದ್ದ ಜನಚಳವಳಿ ಬಜೆಟ್‌ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರಬದಲಾಗಿದ್ದರೂ ನೀತಿಗಳು ಬದಲಾಗಿಲ್ಲ. ಹಳೆಯ ನೀತಿಗಳನ್ನು ತಿರಸ್ಕರಿಸದೆಯೇ ಹೊಸ ಹಾದಿಯನ್ನು ತುಳಿಯುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರೆ ಅದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ತಂದಿದ್ದ

ಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನೂ ಮುಂದುವರೆಸುವ ಮೂಲಕ ಕಾಂಗ್ರೆಸ್‌ ನೀತಿಗೂ ಬಿಜೆಪಿ ನೀತಿಗೂ ಆರ್ಥಿಕ ವಿಚಾರದಲ್ಲಿ ಬದಲಾವಣೆ ಇಲ್ಲ ಎಂಬುದನ್ನು ಸರಕಾರ ಸ್ಪಷ್ಟವಾಗಿ ತೋರಿಸಿಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ಕೃಷಿಯನ್ನು ಸಂಪೂರ್ಣವಾಗಿ ಖಾಸಗಿ ಕಾರ್ಪೋರೇಟುಗಳಿಗೆ ಒಪ್ಪಿಸಲು ಹಾತೊರೆಯುತ್ತಿದೆ. ಅಲ್ಲದೆ ಕಾರ್ಮಿಕ ವರ್ಗದ ಎಲ್ಲ ಹಕ್ಕುಗಳನ್ನು ಕಸಿದು ಗುಲಾಮಿ ಕಾರ್ಮಿಕರನ್ನು ಸೃಷ್ಟಿಸಲು ಬಯಸುತ್ತಿದೆ. ಜಿಎಸ್‌ಟಿ ಎಂಬುದು ಜನಸಾಮಾನ್ಯರನ್ನು ಸುಲಿಯುವ ಹಾಗೂ ರಾಜ್ಯದ ಸಂಪನ್ಮೂಲಗಳನ್ನೆಲ್ಲಾ ಸೂರೆಗೈದು ಅವನ್ನು ದೈನೇಸಿಯಾಗಿಸಿ ಬೇಡುವ ಸ್ಥಿತಿಗೆ ತಳ್ಳುವ ಲೂಟಿಕೋರ ಪದ್ದತಿಯಾಗಿದೆ. ಸೆಸ್‌ ಹಣವನ್ನೆಲ್ಲಾ ಕೇಂದ್ರವೇ ಕಬಳಿಸಿ ರಾಜ್ಯಗಳಿಗೆ ದ್ರೋಹಬಗೆಯಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಬಜೆಟ್‌ ಮತ್ತು ನೀತಿಗಳು ಖಾಸಗೀಕರಣವನ್ನು ವೇಗಗೊಳಿಸುವ ಮತ್ತು ಕಲ್ಯಾಣ ಕ್ರಮಗಳಿಗೆ ಕತ್ತರಿ ಹಾಕುವ ಗುರಿಯನ್ನು ಹೊಂದಿವೆ. ಇವು ಶೋಷಿತ ಸಮುದಾಯಗಳ ಸಬಲೀಕರಣಕ್ಕೆ ಇದ್ದ ಎಲ್ಲ ಮಾರ್ಗಗಳನ್ನು ಮುಚ್ಚಿಹಾಕಿ, ಮೀಸಲಾತಿಯನ್ನು ಅಘೋಷಿತವಾಗಿ ರದ್ದುಮಾಡಿ, ಅವರನ್ನು ಮತ್ತೆ ಕತ್ತಲಕೂಪಕ್ಕೆ ತಳ್ಳುವ ಇರಾದೆಯನ್ನು ಹೊಂದಿವೆ ಎಂದರು.

ಕಾಂಗ್ರೆಸ್‌ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಮರೆತಿದೆ. 5 ಗ್ಯಾರಂಟಿಗಳ ಗುಂಗಿನಲ್ಲೇ ಸರಕಾರ ತೇಲುತ್ತಿದೆ. ಜನ ವರ್ಗಗಗಳಿಗೆ ಕೊಟ್ಟಿದ್ದ ಭರವಸೆಗಳಲ್ಲಿ ಒಂದೇ ಒಂದು ಭರವಸೆಯನ್ನೂ ಈಡೇರಿಸದೆ, ಈಡೇರಿಸುವ ಸೂಚನೆಯನ್ನೂ ನೀಡದೆ ದ್ರೋಹ ಬಗೆದಿದೆ. ಯಾವುದೇ ಸ್ಪಷ್ಟ ನೀತಿ ಮತ್ತು ದಿಕ್ಕು ಇಲ್ಲದ ಬಜೆಟ್‌ ಇದಾಗಿದೆ. ಜನಪರ ಅಭಿವೃದ್ದಿಯ ರೋಡ್‌ ಮ್ಯಾಪ್‌ ಇಲ್ಲದ ಬಜೆಟ್‌ ಇದಾಗಿದೆ ಎಂದು ನೂರ್‌ ಶ್ರೀಧರ್ ಅವರು ಹೇಳಿದರು.

ರಾಜ್ಯ ಸರ್ಕಾರದ ಬೆಂಗಳೂರು ಮತ್ತು ಕಾರ್ಪೋರೇಟ್‌ ಕೇಂದ್ರಿತ ಬಜೆಟ್‌ ಆಗಿದೆ. ಕೃಷಿ ಬಿಕ್ಕಟ್ಟನ್ನು ಬಗೆಹರಿಸಲಿಕ್ಕಾಗಲೀ, ರೈತರನ್ನು ಋಣಮುಕ್ತರನ್ನಾಗಿಸಲಿಕ್ಕಾಗಲೀ, ರೈತರ ಬೆಳೆಗೆ ನ್ಯಾಯಸಮ್ಮತ ಬೆಲೆ ದಕ್ಕಿಸಿಕೊಡಲಿಕ್ಕಾಗಲೀ, ಕಾರ್ಮಿಕರಿಗೆ ಘನತೆಯ ವೇತನ ಖಾತ್ರಿ ಪಡಿಸಲಿಕ್ಕಾಗಲೀ, ಉದ್ಯೋಗ ಸೃಷ್ಟಿಸಲಿಕ್ಕಾಗಲೀ, ಕನಿಷ್ಟ ವೇತನವನ್ನು ಖಾತ್ರಿಪಡಿಸಲಿಕ್ಕಾಗಲೀ, ತಳ ಸಮುದಾಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಾಗಲೀ, ಬಡವರಿಗೆ ಭೂಮಿ ಮತ್ತು ವಸತಿ ಒದಗಿಸಲಿಕ್ಕಾಗಲೀ ಯಾವುದೇ ನಿರ್ಧಿಷ್ಟ ಕ್ರಮಗಳಿಲ್ಲ ಎಂದು ಅವರು ಹೇಳಿದರು.

ಎರಡು ದಿನಗಳ ಕಾಲ ನಡೆದ ಜನಚಳವಳಿಗಳ ಅಧಿವೇಶನದಲ್ಲಿ ಸಂಯುಕ್ತ ಹೋರಾಟದ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ಯಶ್ವಂತ ಟಿ., ಕೆ.ವಿ.ಭಟ್‌, ವರಲಕ್ಷ್ಮೀ, ಚಾಮರಸ ಪಾಟೀಲ್‌, ಮಾವಳ್ಳಿ ಶಂಕರ್‌, ಗುರುಪ್ರಸಾದ್‌ ಕೆರಗೋಡು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್ ಅಧಿಕಾರಿಯಿಂದ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಟೀಕಿಸಿದ ಮುಸ್ಲಿಂ ಯುವಕನ ಬಂಧನ

ಸಂಭಾಲ್ ಅಧಿಕಾರಿಯಿಂದ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಟೀಕಿಸಿದ ಮುಸ್ಲಿಂ ಯುವಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...