Homeಕರ್ನಾಟಕಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನು ಕಾಂಗ್ರೆಸ್ ಇನ್ನೂ ಮುಂದುವರೆಸಿದೆ: ನೂರ್ ಶ್ರೀಧರ್ ಆಕ್ರೋಶ

ಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನು ಕಾಂಗ್ರೆಸ್ ಇನ್ನೂ ಮುಂದುವರೆಸಿದೆ: ನೂರ್ ಶ್ರೀಧರ್ ಆಕ್ರೋಶ

- Advertisement -
- Advertisement -

ಕೇಂದ್ರ ಬಜೆಟ್‌ ಸಂಪೂರ್ಣವಾಗಿ ಜನ ವಿರೋಧಿ ಹಾಗೂ ಕಾರ್ಪೊರೇಟ್‌ ಪರವಾಗಿದ್ದು, ರಾಜ್ಯದ ಹಕ್ಕುಗಳನ್ನು ಹರಣ ಮಾಡುವಂಥದ್ದಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್‌ ಶ್ರೀಧರ್‌ ಆಕ್ರೋಶ ಗುರುವಾರ ವ್ಯಕ್ತಪಡಿಸಿದರು. ಬೆಂಗಳೂರಿನ ಗಾಂಧಿಭವನದಲ್ಲಿ ಆಯೋಜಿಸಿದ್ದ ಜನಚಳವಳಿ ಬಜೆಟ್‌ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರಬದಲಾಗಿದ್ದರೂ ನೀತಿಗಳು ಬದಲಾಗಿಲ್ಲ. ಹಳೆಯ ನೀತಿಗಳನ್ನು ತಿರಸ್ಕರಿಸದೆಯೇ ಹೊಸ ಹಾದಿಯನ್ನು ತುಳಿಯುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರೆ ಅದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ತಂದಿದ್ದ

ಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನೂ ಮುಂದುವರೆಸುವ ಮೂಲಕ ಕಾಂಗ್ರೆಸ್‌ ನೀತಿಗೂ ಬಿಜೆಪಿ ನೀತಿಗೂ ಆರ್ಥಿಕ ವಿಚಾರದಲ್ಲಿ ಬದಲಾವಣೆ ಇಲ್ಲ ಎಂಬುದನ್ನು ಸರಕಾರ ಸ್ಪಷ್ಟವಾಗಿ ತೋರಿಸಿಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ಕೃಷಿಯನ್ನು ಸಂಪೂರ್ಣವಾಗಿ ಖಾಸಗಿ ಕಾರ್ಪೋರೇಟುಗಳಿಗೆ ಒಪ್ಪಿಸಲು ಹಾತೊರೆಯುತ್ತಿದೆ. ಅಲ್ಲದೆ ಕಾರ್ಮಿಕ ವರ್ಗದ ಎಲ್ಲ ಹಕ್ಕುಗಳನ್ನು ಕಸಿದು ಗುಲಾಮಿ ಕಾರ್ಮಿಕರನ್ನು ಸೃಷ್ಟಿಸಲು ಬಯಸುತ್ತಿದೆ. ಜಿಎಸ್‌ಟಿ ಎಂಬುದು ಜನಸಾಮಾನ್ಯರನ್ನು ಸುಲಿಯುವ ಹಾಗೂ ರಾಜ್ಯದ ಸಂಪನ್ಮೂಲಗಳನ್ನೆಲ್ಲಾ ಸೂರೆಗೈದು ಅವನ್ನು ದೈನೇಸಿಯಾಗಿಸಿ ಬೇಡುವ ಸ್ಥಿತಿಗೆ ತಳ್ಳುವ ಲೂಟಿಕೋರ ಪದ್ದತಿಯಾಗಿದೆ. ಸೆಸ್‌ ಹಣವನ್ನೆಲ್ಲಾ ಕೇಂದ್ರವೇ ಕಬಳಿಸಿ ರಾಜ್ಯಗಳಿಗೆ ದ್ರೋಹಬಗೆಯಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಬಜೆಟ್‌ ಮತ್ತು ನೀತಿಗಳು ಖಾಸಗೀಕರಣವನ್ನು ವೇಗಗೊಳಿಸುವ ಮತ್ತು ಕಲ್ಯಾಣ ಕ್ರಮಗಳಿಗೆ ಕತ್ತರಿ ಹಾಕುವ ಗುರಿಯನ್ನು ಹೊಂದಿವೆ. ಇವು ಶೋಷಿತ ಸಮುದಾಯಗಳ ಸಬಲೀಕರಣಕ್ಕೆ ಇದ್ದ ಎಲ್ಲ ಮಾರ್ಗಗಳನ್ನು ಮುಚ್ಚಿಹಾಕಿ, ಮೀಸಲಾತಿಯನ್ನು ಅಘೋಷಿತವಾಗಿ ರದ್ದುಮಾಡಿ, ಅವರನ್ನು ಮತ್ತೆ ಕತ್ತಲಕೂಪಕ್ಕೆ ತಳ್ಳುವ ಇರಾದೆಯನ್ನು ಹೊಂದಿವೆ ಎಂದರು.

ಕಾಂಗ್ರೆಸ್‌ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಮರೆತಿದೆ. 5 ಗ್ಯಾರಂಟಿಗಳ ಗುಂಗಿನಲ್ಲೇ ಸರಕಾರ ತೇಲುತ್ತಿದೆ. ಜನ ವರ್ಗಗಗಳಿಗೆ ಕೊಟ್ಟಿದ್ದ ಭರವಸೆಗಳಲ್ಲಿ ಒಂದೇ ಒಂದು ಭರವಸೆಯನ್ನೂ ಈಡೇರಿಸದೆ, ಈಡೇರಿಸುವ ಸೂಚನೆಯನ್ನೂ ನೀಡದೆ ದ್ರೋಹ ಬಗೆದಿದೆ. ಯಾವುದೇ ಸ್ಪಷ್ಟ ನೀತಿ ಮತ್ತು ದಿಕ್ಕು ಇಲ್ಲದ ಬಜೆಟ್‌ ಇದಾಗಿದೆ. ಜನಪರ ಅಭಿವೃದ್ದಿಯ ರೋಡ್‌ ಮ್ಯಾಪ್‌ ಇಲ್ಲದ ಬಜೆಟ್‌ ಇದಾಗಿದೆ ಎಂದು ನೂರ್‌ ಶ್ರೀಧರ್ ಅವರು ಹೇಳಿದರು.

ರಾಜ್ಯ ಸರ್ಕಾರದ ಬೆಂಗಳೂರು ಮತ್ತು ಕಾರ್ಪೋರೇಟ್‌ ಕೇಂದ್ರಿತ ಬಜೆಟ್‌ ಆಗಿದೆ. ಕೃಷಿ ಬಿಕ್ಕಟ್ಟನ್ನು ಬಗೆಹರಿಸಲಿಕ್ಕಾಗಲೀ, ರೈತರನ್ನು ಋಣಮುಕ್ತರನ್ನಾಗಿಸಲಿಕ್ಕಾಗಲೀ, ರೈತರ ಬೆಳೆಗೆ ನ್ಯಾಯಸಮ್ಮತ ಬೆಲೆ ದಕ್ಕಿಸಿಕೊಡಲಿಕ್ಕಾಗಲೀ, ಕಾರ್ಮಿಕರಿಗೆ ಘನತೆಯ ವೇತನ ಖಾತ್ರಿ ಪಡಿಸಲಿಕ್ಕಾಗಲೀ, ಉದ್ಯೋಗ ಸೃಷ್ಟಿಸಲಿಕ್ಕಾಗಲೀ, ಕನಿಷ್ಟ ವೇತನವನ್ನು ಖಾತ್ರಿಪಡಿಸಲಿಕ್ಕಾಗಲೀ, ತಳ ಸಮುದಾಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಾಗಲೀ, ಬಡವರಿಗೆ ಭೂಮಿ ಮತ್ತು ವಸತಿ ಒದಗಿಸಲಿಕ್ಕಾಗಲೀ ಯಾವುದೇ ನಿರ್ಧಿಷ್ಟ ಕ್ರಮಗಳಿಲ್ಲ ಎಂದು ಅವರು ಹೇಳಿದರು.

ಎರಡು ದಿನಗಳ ಕಾಲ ನಡೆದ ಜನಚಳವಳಿಗಳ ಅಧಿವೇಶನದಲ್ಲಿ ಸಂಯುಕ್ತ ಹೋರಾಟದ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ಯಶ್ವಂತ ಟಿ., ಕೆ.ವಿ.ಭಟ್‌, ವರಲಕ್ಷ್ಮೀ, ಚಾಮರಸ ಪಾಟೀಲ್‌, ಮಾವಳ್ಳಿ ಶಂಕರ್‌, ಗುರುಪ್ರಸಾದ್‌ ಕೆರಗೋಡು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್ ಅಧಿಕಾರಿಯಿಂದ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಟೀಕಿಸಿದ ಮುಸ್ಲಿಂ ಯುವಕನ ಬಂಧನ

ಸಂಭಾಲ್ ಅಧಿಕಾರಿಯಿಂದ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಟೀಕಿಸಿದ ಮುಸ್ಲಿಂ ಯುವಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...