Homeಕರ್ನಾಟಕಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

ಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಆಮ್‌‌ ಆದ್ಮಿ ಪಕ್ಷ(ಎಎಪಿ)ದ ಕಾರ್ಯಕರ್ತರ ಮೇಲೆ ಬೆಂಗಳೂರಿನ ಜೀವನ್‌ ಭೀಮಾ ನಗರದ ಪೊಲೀಸ್‌ ಠಾಣೆಗೆ ನುಗ್ಗಿ ಪೊಲೀಸರ ಸಮ್ಮುಖದಲ್ಲೇ ಸಿ.ವಿ. ರಾಮನ್‌‌‌ ನಗರದ ಬಿಜೆಪಿ ಶಾಸಕ ರಘು ಅವರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬಳಿ ನಡೆದಿದೆ ಎಂದು ಆರೋಪಿಸಲಾಗಿದೆ.

ಕಾಮಗಾರಿಗಳ ಗುತ್ತಿಗೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಎಎಪಿ ಕಾರ್ಯಕರ್ತರು ನಿನ್ನೆ ಪಕ್ಷದ ವತಿಯಿಂದ ತಿಪ್ಪಸಂದ್ರದ ಮಹಾದ್ವಾರದ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ, ಈ ವೇಳೆ ಠಾಣೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತರು ಗೂಂಡಾಗಿರಿ ಮಾಡಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಕೊರೊನಾ ಮೃತದೇಹಗಳು ಪತ್ತೆ ಪ್ರಕರಣ: ಸಚಿವ ಸುರೇಶ್ ಕುಮಾರ್ ವಿರುದ್ಧ ಎಎಪಿ ಆಕ್ರೋಶ

ಬಿಜೆಪಿ ಕಾರ್ಯಕರ್ತರು ಎಎಪಿ ಕಾರ್ಯಕರ್ತರಿಗೆ ಮಾತ್ರವಲ್ಲದೆ ಎಎಪಿ ಮಾಧ್ಯಮದಲ್ಲಿ ಕೆಲಸ ಮಾಡುವರಿಗೆ ಮತ್ತು ನಾಗರೀಕರ ಮೇಲೆ ಕೂಡಾ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಚರಣ್‌ ಐವರ್ನಾಡ್‌ ಹೇಳಿದ್ದಾರೆ.

“ಬಿಜೆಪಿ ಶಾಸಕ ರಘು ಗೂಂಡಗಳು ಆಪ್‌ನ ಕಾರ್ಯಕರ್ತರು ಸೇರಿ ನಾಗರಿಕರ ಮೇಲೆ, ನನ್ನ ಮೇಲೆ ಪೊಲೀಸ್ ಸಮಕ್ಷಮದಲ್ಲಿ ಹಿಗ್ಗಾಮಗ್ಗ ಹೊಡೆದು ಅವ್ಯಾಚ್ಯವಾಗಿ ಬೆದರಿಕೆ ಹಾಕಿದ್ದಾರೆ. ನನ್ನ ಫೋನ್ ಎಳೆದಾಡಿ ಅದರಲ್ಲಿನ ಡೇಟಾ ಎಲ್ಲಾ ಅಳಿಸಿ ಹಾಕಿದ್ದಾರೆ. ಇದೊಂದು ಸರ್ಕಾರಿ ಕೃಪಾಪೋಷಿತ ಅಪ್ಪಟ ಮಾಬ್ ಲಿಂಚ್‌” ಎಂದು ಚರಣ್‌ ಐವರ್ನಾಡ್‌ ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ರಸ್ತೆ ಗುಂಡಿಗಳಿಗೆ ಹೂವು, ರಂಗೋಲಿ ಹಾಕಿ ಪ್ರತಿಭಟನೆ ಮಾಡಿದ ಎಎಪಿ

ಈ ಬಗ್ಗೆ ಬುಧವಾರದಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಎಚ್‌.ಡಿ.ಬಸವರಾಜು, “ತಿಪ್ಪಸಂದ್ರ ಮುಖ್ಯರಸ್ತೆಯ ಮಹಾದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದವರ ಪೈಕಿ ಐವರು ಆಮ್‌ ಆದ್ಮಿ ಪಾರ್ಟಿ ಮುಖಂಡರನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ ಜೀವನ್‌ ಭಿಮಾ ಪೊಲೀಸ್‌ ಠಾಣೆಗೆ ಆಗಮಿಸಿದ ಮಾಜಿ ಕಾರ್ಪೊರೇಟರ್ ಚಂದ್ರಪ್ಪ ರೆಡ್ಡಿ, ಶಾಸಕ ರಘು ಆಪ್ತ ಸಹಾಯಕ ಉನ್ನಿಕೃಷ್ಣನ್ ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರುಗಳು ಪೊಲೀಸ್‌ ಸಿಬ್ಬಂದಿಗಳೇ ಹೆದರುವಂತೆ ದಾಂಧಲೆ ಮಾಡಿದ್ದಾರೆ. ಠಾಣೆಯೊಳಗೆ ತೆರಳುತ್ತಿದ್ದ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಘಟನೆ ನಡೆದು ಒಂದು ದಿನವಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ರಘು ಬೆಂಬಲಿಗರ ಗೂಂಡಾಗಿರಿಯು ಪೊಲೀಸ್‌ ಸಿಬ್ಬಂದಿಯ ಫೋನ್‌ಗಳಲ್ಲಿ ರೆಕಾರ್ಡ್‌ ಆಗಿದ್ದು, ಅವುಗಳನ್ನು ಸಾಕ್ಷಿಯಾಗಿ ಬಳಸಿಕೊಂಡು ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಪೊಲೀಸ್‌ ಠಾಣೆಯಲ್ಲಿ ನಡೆದ ದಾಂಧಲೆಗೆ ಶಾಸಕ ರಘುರವರೇ ನೇರ ಹೊಣೆ. ಭ್ರಷ್ಟಾಚಾರವು ಜನರಿಗೆ ತಿಳಿಯುತ್ತದೆ ಎಂದು ಹೆದರಿದ ಅವರು ನಮ್ಮ ಮೇಲೆ ಗೂಂಡಾ ಬೆಂಬಲಿಗರನ್ನು ಛೂ ಬಿಟ್ಟಿದ್ದಾರೆ. ರಾಜ್ಯ ಸರ್ಕಾರ ಹಾಗೂ ಶಾಸಕರ ಪ್ರಭಾವದಿಂದಾಗಿ ಪೊಲೀಸ್‌ ಸಿಬ್ಬಂದಿಯು ಅಸಹಾಯಕತೆಯಿಂದ ಸುಮ್ಮನಿರಬೇಕಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...