Homeಕರ್ನಾಟಕಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

ಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಆಮ್‌‌ ಆದ್ಮಿ ಪಕ್ಷ(ಎಎಪಿ)ದ ಕಾರ್ಯಕರ್ತರ ಮೇಲೆ ಬೆಂಗಳೂರಿನ ಜೀವನ್‌ ಭೀಮಾ ನಗರದ ಪೊಲೀಸ್‌ ಠಾಣೆಗೆ ನುಗ್ಗಿ ಪೊಲೀಸರ ಸಮ್ಮುಖದಲ್ಲೇ ಸಿ.ವಿ. ರಾಮನ್‌‌‌ ನಗರದ ಬಿಜೆಪಿ ಶಾಸಕ ರಘು ಅವರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬಳಿ ನಡೆದಿದೆ ಎಂದು ಆರೋಪಿಸಲಾಗಿದೆ.

ಕಾಮಗಾರಿಗಳ ಗುತ್ತಿಗೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಎಎಪಿ ಕಾರ್ಯಕರ್ತರು ನಿನ್ನೆ ಪಕ್ಷದ ವತಿಯಿಂದ ತಿಪ್ಪಸಂದ್ರದ ಮಹಾದ್ವಾರದ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ, ಈ ವೇಳೆ ಠಾಣೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತರು ಗೂಂಡಾಗಿರಿ ಮಾಡಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಕೊರೊನಾ ಮೃತದೇಹಗಳು ಪತ್ತೆ ಪ್ರಕರಣ: ಸಚಿವ ಸುರೇಶ್ ಕುಮಾರ್ ವಿರುದ್ಧ ಎಎಪಿ ಆಕ್ರೋಶ

ಬಿಜೆಪಿ ಕಾರ್ಯಕರ್ತರು ಎಎಪಿ ಕಾರ್ಯಕರ್ತರಿಗೆ ಮಾತ್ರವಲ್ಲದೆ ಎಎಪಿ ಮಾಧ್ಯಮದಲ್ಲಿ ಕೆಲಸ ಮಾಡುವರಿಗೆ ಮತ್ತು ನಾಗರೀಕರ ಮೇಲೆ ಕೂಡಾ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಚರಣ್‌ ಐವರ್ನಾಡ್‌ ಹೇಳಿದ್ದಾರೆ.

“ಬಿಜೆಪಿ ಶಾಸಕ ರಘು ಗೂಂಡಗಳು ಆಪ್‌ನ ಕಾರ್ಯಕರ್ತರು ಸೇರಿ ನಾಗರಿಕರ ಮೇಲೆ, ನನ್ನ ಮೇಲೆ ಪೊಲೀಸ್ ಸಮಕ್ಷಮದಲ್ಲಿ ಹಿಗ್ಗಾಮಗ್ಗ ಹೊಡೆದು ಅವ್ಯಾಚ್ಯವಾಗಿ ಬೆದರಿಕೆ ಹಾಕಿದ್ದಾರೆ. ನನ್ನ ಫೋನ್ ಎಳೆದಾಡಿ ಅದರಲ್ಲಿನ ಡೇಟಾ ಎಲ್ಲಾ ಅಳಿಸಿ ಹಾಕಿದ್ದಾರೆ. ಇದೊಂದು ಸರ್ಕಾರಿ ಕೃಪಾಪೋಷಿತ ಅಪ್ಪಟ ಮಾಬ್ ಲಿಂಚ್‌” ಎಂದು ಚರಣ್‌ ಐವರ್ನಾಡ್‌ ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ರಸ್ತೆ ಗುಂಡಿಗಳಿಗೆ ಹೂವು, ರಂಗೋಲಿ ಹಾಕಿ ಪ್ರತಿಭಟನೆ ಮಾಡಿದ ಎಎಪಿ

ಈ ಬಗ್ಗೆ ಬುಧವಾರದಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಎಚ್‌.ಡಿ.ಬಸವರಾಜು, “ತಿಪ್ಪಸಂದ್ರ ಮುಖ್ಯರಸ್ತೆಯ ಮಹಾದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದವರ ಪೈಕಿ ಐವರು ಆಮ್‌ ಆದ್ಮಿ ಪಾರ್ಟಿ ಮುಖಂಡರನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ ಜೀವನ್‌ ಭಿಮಾ ಪೊಲೀಸ್‌ ಠಾಣೆಗೆ ಆಗಮಿಸಿದ ಮಾಜಿ ಕಾರ್ಪೊರೇಟರ್ ಚಂದ್ರಪ್ಪ ರೆಡ್ಡಿ, ಶಾಸಕ ರಘು ಆಪ್ತ ಸಹಾಯಕ ಉನ್ನಿಕೃಷ್ಣನ್ ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರುಗಳು ಪೊಲೀಸ್‌ ಸಿಬ್ಬಂದಿಗಳೇ ಹೆದರುವಂತೆ ದಾಂಧಲೆ ಮಾಡಿದ್ದಾರೆ. ಠಾಣೆಯೊಳಗೆ ತೆರಳುತ್ತಿದ್ದ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಘಟನೆ ನಡೆದು ಒಂದು ದಿನವಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ರಘು ಬೆಂಬಲಿಗರ ಗೂಂಡಾಗಿರಿಯು ಪೊಲೀಸ್‌ ಸಿಬ್ಬಂದಿಯ ಫೋನ್‌ಗಳಲ್ಲಿ ರೆಕಾರ್ಡ್‌ ಆಗಿದ್ದು, ಅವುಗಳನ್ನು ಸಾಕ್ಷಿಯಾಗಿ ಬಳಸಿಕೊಂಡು ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಪೊಲೀಸ್‌ ಠಾಣೆಯಲ್ಲಿ ನಡೆದ ದಾಂಧಲೆಗೆ ಶಾಸಕ ರಘುರವರೇ ನೇರ ಹೊಣೆ. ಭ್ರಷ್ಟಾಚಾರವು ಜನರಿಗೆ ತಿಳಿಯುತ್ತದೆ ಎಂದು ಹೆದರಿದ ಅವರು ನಮ್ಮ ಮೇಲೆ ಗೂಂಡಾ ಬೆಂಬಲಿಗರನ್ನು ಛೂ ಬಿಟ್ಟಿದ್ದಾರೆ. ರಾಜ್ಯ ಸರ್ಕಾರ ಹಾಗೂ ಶಾಸಕರ ಪ್ರಭಾವದಿಂದಾಗಿ ಪೊಲೀಸ್‌ ಸಿಬ್ಬಂದಿಯು ಅಸಹಾಯಕತೆಯಿಂದ ಸುಮ್ಮನಿರಬೇಕಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...