Homeಕರ್ನಾಟಕಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

ಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಆಮ್‌‌ ಆದ್ಮಿ ಪಕ್ಷ(ಎಎಪಿ)ದ ಕಾರ್ಯಕರ್ತರ ಮೇಲೆ ಬೆಂಗಳೂರಿನ ಜೀವನ್‌ ಭೀಮಾ ನಗರದ ಪೊಲೀಸ್‌ ಠಾಣೆಗೆ ನುಗ್ಗಿ ಪೊಲೀಸರ ಸಮ್ಮುಖದಲ್ಲೇ ಸಿ.ವಿ. ರಾಮನ್‌‌‌ ನಗರದ ಬಿಜೆಪಿ ಶಾಸಕ ರಘು ಅವರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬಳಿ ನಡೆದಿದೆ ಎಂದು ಆರೋಪಿಸಲಾಗಿದೆ.

ಕಾಮಗಾರಿಗಳ ಗುತ್ತಿಗೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಎಎಪಿ ಕಾರ್ಯಕರ್ತರು ನಿನ್ನೆ ಪಕ್ಷದ ವತಿಯಿಂದ ತಿಪ್ಪಸಂದ್ರದ ಮಹಾದ್ವಾರದ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ, ಈ ವೇಳೆ ಠಾಣೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತರು ಗೂಂಡಾಗಿರಿ ಮಾಡಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಕೊರೊನಾ ಮೃತದೇಹಗಳು ಪತ್ತೆ ಪ್ರಕರಣ: ಸಚಿವ ಸುರೇಶ್ ಕುಮಾರ್ ವಿರುದ್ಧ ಎಎಪಿ ಆಕ್ರೋಶ

ಬಿಜೆಪಿ ಕಾರ್ಯಕರ್ತರು ಎಎಪಿ ಕಾರ್ಯಕರ್ತರಿಗೆ ಮಾತ್ರವಲ್ಲದೆ ಎಎಪಿ ಮಾಧ್ಯಮದಲ್ಲಿ ಕೆಲಸ ಮಾಡುವರಿಗೆ ಮತ್ತು ನಾಗರೀಕರ ಮೇಲೆ ಕೂಡಾ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಚರಣ್‌ ಐವರ್ನಾಡ್‌ ಹೇಳಿದ್ದಾರೆ.

“ಬಿಜೆಪಿ ಶಾಸಕ ರಘು ಗೂಂಡಗಳು ಆಪ್‌ನ ಕಾರ್ಯಕರ್ತರು ಸೇರಿ ನಾಗರಿಕರ ಮೇಲೆ, ನನ್ನ ಮೇಲೆ ಪೊಲೀಸ್ ಸಮಕ್ಷಮದಲ್ಲಿ ಹಿಗ್ಗಾಮಗ್ಗ ಹೊಡೆದು ಅವ್ಯಾಚ್ಯವಾಗಿ ಬೆದರಿಕೆ ಹಾಕಿದ್ದಾರೆ. ನನ್ನ ಫೋನ್ ಎಳೆದಾಡಿ ಅದರಲ್ಲಿನ ಡೇಟಾ ಎಲ್ಲಾ ಅಳಿಸಿ ಹಾಕಿದ್ದಾರೆ. ಇದೊಂದು ಸರ್ಕಾರಿ ಕೃಪಾಪೋಷಿತ ಅಪ್ಪಟ ಮಾಬ್ ಲಿಂಚ್‌” ಎಂದು ಚರಣ್‌ ಐವರ್ನಾಡ್‌ ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ರಸ್ತೆ ಗುಂಡಿಗಳಿಗೆ ಹೂವು, ರಂಗೋಲಿ ಹಾಕಿ ಪ್ರತಿಭಟನೆ ಮಾಡಿದ ಎಎಪಿ

ಈ ಬಗ್ಗೆ ಬುಧವಾರದಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಎಚ್‌.ಡಿ.ಬಸವರಾಜು, “ತಿಪ್ಪಸಂದ್ರ ಮುಖ್ಯರಸ್ತೆಯ ಮಹಾದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದವರ ಪೈಕಿ ಐವರು ಆಮ್‌ ಆದ್ಮಿ ಪಾರ್ಟಿ ಮುಖಂಡರನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ ಜೀವನ್‌ ಭಿಮಾ ಪೊಲೀಸ್‌ ಠಾಣೆಗೆ ಆಗಮಿಸಿದ ಮಾಜಿ ಕಾರ್ಪೊರೇಟರ್ ಚಂದ್ರಪ್ಪ ರೆಡ್ಡಿ, ಶಾಸಕ ರಘು ಆಪ್ತ ಸಹಾಯಕ ಉನ್ನಿಕೃಷ್ಣನ್ ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರುಗಳು ಪೊಲೀಸ್‌ ಸಿಬ್ಬಂದಿಗಳೇ ಹೆದರುವಂತೆ ದಾಂಧಲೆ ಮಾಡಿದ್ದಾರೆ. ಠಾಣೆಯೊಳಗೆ ತೆರಳುತ್ತಿದ್ದ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಘಟನೆ ನಡೆದು ಒಂದು ದಿನವಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ರಘು ಬೆಂಬಲಿಗರ ಗೂಂಡಾಗಿರಿಯು ಪೊಲೀಸ್‌ ಸಿಬ್ಬಂದಿಯ ಫೋನ್‌ಗಳಲ್ಲಿ ರೆಕಾರ್ಡ್‌ ಆಗಿದ್ದು, ಅವುಗಳನ್ನು ಸಾಕ್ಷಿಯಾಗಿ ಬಳಸಿಕೊಂಡು ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಪೊಲೀಸ್‌ ಠಾಣೆಯಲ್ಲಿ ನಡೆದ ದಾಂಧಲೆಗೆ ಶಾಸಕ ರಘುರವರೇ ನೇರ ಹೊಣೆ. ಭ್ರಷ್ಟಾಚಾರವು ಜನರಿಗೆ ತಿಳಿಯುತ್ತದೆ ಎಂದು ಹೆದರಿದ ಅವರು ನಮ್ಮ ಮೇಲೆ ಗೂಂಡಾ ಬೆಂಬಲಿಗರನ್ನು ಛೂ ಬಿಟ್ಟಿದ್ದಾರೆ. ರಾಜ್ಯ ಸರ್ಕಾರ ಹಾಗೂ ಶಾಸಕರ ಪ್ರಭಾವದಿಂದಾಗಿ ಪೊಲೀಸ್‌ ಸಿಬ್ಬಂದಿಯು ಅಸಹಾಯಕತೆಯಿಂದ ಸುಮ್ಮನಿರಬೇಕಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...