Homeಕರ್ನಾಟಕಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

ಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಆಮ್‌‌ ಆದ್ಮಿ ಪಕ್ಷ(ಎಎಪಿ)ದ ಕಾರ್ಯಕರ್ತರ ಮೇಲೆ ಬೆಂಗಳೂರಿನ ಜೀವನ್‌ ಭೀಮಾ ನಗರದ ಪೊಲೀಸ್‌ ಠಾಣೆಗೆ ನುಗ್ಗಿ ಪೊಲೀಸರ ಸಮ್ಮುಖದಲ್ಲೇ ಸಿ.ವಿ. ರಾಮನ್‌‌‌ ನಗರದ ಬಿಜೆಪಿ ಶಾಸಕ ರಘು ಅವರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬಳಿ ನಡೆದಿದೆ ಎಂದು ಆರೋಪಿಸಲಾಗಿದೆ.

ಕಾಮಗಾರಿಗಳ ಗುತ್ತಿಗೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಎಎಪಿ ಕಾರ್ಯಕರ್ತರು ನಿನ್ನೆ ಪಕ್ಷದ ವತಿಯಿಂದ ತಿಪ್ಪಸಂದ್ರದ ಮಹಾದ್ವಾರದ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ, ಈ ವೇಳೆ ಠಾಣೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತರು ಗೂಂಡಾಗಿರಿ ಮಾಡಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಕೊರೊನಾ ಮೃತದೇಹಗಳು ಪತ್ತೆ ಪ್ರಕರಣ: ಸಚಿವ ಸುರೇಶ್ ಕುಮಾರ್ ವಿರುದ್ಧ ಎಎಪಿ ಆಕ್ರೋಶ

ಬಿಜೆಪಿ ಕಾರ್ಯಕರ್ತರು ಎಎಪಿ ಕಾರ್ಯಕರ್ತರಿಗೆ ಮಾತ್ರವಲ್ಲದೆ ಎಎಪಿ ಮಾಧ್ಯಮದಲ್ಲಿ ಕೆಲಸ ಮಾಡುವರಿಗೆ ಮತ್ತು ನಾಗರೀಕರ ಮೇಲೆ ಕೂಡಾ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಚರಣ್‌ ಐವರ್ನಾಡ್‌ ಹೇಳಿದ್ದಾರೆ.

“ಬಿಜೆಪಿ ಶಾಸಕ ರಘು ಗೂಂಡಗಳು ಆಪ್‌ನ ಕಾರ್ಯಕರ್ತರು ಸೇರಿ ನಾಗರಿಕರ ಮೇಲೆ, ನನ್ನ ಮೇಲೆ ಪೊಲೀಸ್ ಸಮಕ್ಷಮದಲ್ಲಿ ಹಿಗ್ಗಾಮಗ್ಗ ಹೊಡೆದು ಅವ್ಯಾಚ್ಯವಾಗಿ ಬೆದರಿಕೆ ಹಾಕಿದ್ದಾರೆ. ನನ್ನ ಫೋನ್ ಎಳೆದಾಡಿ ಅದರಲ್ಲಿನ ಡೇಟಾ ಎಲ್ಲಾ ಅಳಿಸಿ ಹಾಕಿದ್ದಾರೆ. ಇದೊಂದು ಸರ್ಕಾರಿ ಕೃಪಾಪೋಷಿತ ಅಪ್ಪಟ ಮಾಬ್ ಲಿಂಚ್‌” ಎಂದು ಚರಣ್‌ ಐವರ್ನಾಡ್‌ ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ರಸ್ತೆ ಗುಂಡಿಗಳಿಗೆ ಹೂವು, ರಂಗೋಲಿ ಹಾಕಿ ಪ್ರತಿಭಟನೆ ಮಾಡಿದ ಎಎಪಿ

ಈ ಬಗ್ಗೆ ಬುಧವಾರದಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಎಚ್‌.ಡಿ.ಬಸವರಾಜು, “ತಿಪ್ಪಸಂದ್ರ ಮುಖ್ಯರಸ್ತೆಯ ಮಹಾದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದವರ ಪೈಕಿ ಐವರು ಆಮ್‌ ಆದ್ಮಿ ಪಾರ್ಟಿ ಮುಖಂಡರನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ ಜೀವನ್‌ ಭಿಮಾ ಪೊಲೀಸ್‌ ಠಾಣೆಗೆ ಆಗಮಿಸಿದ ಮಾಜಿ ಕಾರ್ಪೊರೇಟರ್ ಚಂದ್ರಪ್ಪ ರೆಡ್ಡಿ, ಶಾಸಕ ರಘು ಆಪ್ತ ಸಹಾಯಕ ಉನ್ನಿಕೃಷ್ಣನ್ ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರುಗಳು ಪೊಲೀಸ್‌ ಸಿಬ್ಬಂದಿಗಳೇ ಹೆದರುವಂತೆ ದಾಂಧಲೆ ಮಾಡಿದ್ದಾರೆ. ಠಾಣೆಯೊಳಗೆ ತೆರಳುತ್ತಿದ್ದ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಘಟನೆ ನಡೆದು ಒಂದು ದಿನವಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ರಘು ಬೆಂಬಲಿಗರ ಗೂಂಡಾಗಿರಿಯು ಪೊಲೀಸ್‌ ಸಿಬ್ಬಂದಿಯ ಫೋನ್‌ಗಳಲ್ಲಿ ರೆಕಾರ್ಡ್‌ ಆಗಿದ್ದು, ಅವುಗಳನ್ನು ಸಾಕ್ಷಿಯಾಗಿ ಬಳಸಿಕೊಂಡು ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಪೊಲೀಸ್‌ ಠಾಣೆಯಲ್ಲಿ ನಡೆದ ದಾಂಧಲೆಗೆ ಶಾಸಕ ರಘುರವರೇ ನೇರ ಹೊಣೆ. ಭ್ರಷ್ಟಾಚಾರವು ಜನರಿಗೆ ತಿಳಿಯುತ್ತದೆ ಎಂದು ಹೆದರಿದ ಅವರು ನಮ್ಮ ಮೇಲೆ ಗೂಂಡಾ ಬೆಂಬಲಿಗರನ್ನು ಛೂ ಬಿಟ್ಟಿದ್ದಾರೆ. ರಾಜ್ಯ ಸರ್ಕಾರ ಹಾಗೂ ಶಾಸಕರ ಪ್ರಭಾವದಿಂದಾಗಿ ಪೊಲೀಸ್‌ ಸಿಬ್ಬಂದಿಯು ಅಸಹಾಯಕತೆಯಿಂದ ಸುಮ್ಮನಿರಬೇಕಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....