Homeಮುಖಪುಟ'ಕರಾಚಿ ಬೇಕರಿ' ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಹೆಸರು ಬದಲಿಸಲು ಒತ್ತಡ

‘ಕರಾಚಿ ಬೇಕರಿ’ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಹೆಸರು ಬದಲಿಸಲು ಒತ್ತಡ

- Advertisement -
- Advertisement -

ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಹೈದರಾಬಾದ್‌ನ ‘ಕರಾಚಿ ಬೇಕರಿ’ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ಕಾರ್ಯಕರ್ತರ ಗುಂಪು ‘ಭಾರತ್ ಮಾತಾಕಿ ಜೈ’ ಎಂಬ ಘೋಷಣೆ ಕೂಗುತ್ತಾ ಹೈದರಾಬಾದ್‌ನ ಶಂಶಾಬಾದ್‌ನಲ್ಲಿರುವ ಕರಾಚಿ ಬೇಕರಿಯ ಶಾಖೆ ಮೇಲೆ ದಾಳಿ ಮಾಡಿದ್ದಾರೆ. ಮೇ. 10, ಶನಿವಾರ ಈ ಘಟನೆ ನಡೆದಿದೆ.

ಪಾಕಿಸ್ತಾನದ ನಗರ ಕರಾಚಿಯ ಹೆಸರನ್ನು ಹೊಂದಿರುವ ಕರಾಚಿ ಬೇಕರಿಯನ್ನು 1953ರಲ್ಲಿ ಖಾನ್‌ಚಂದ್ ರಾಮನಾನಿ ಎಂಬ ಸಿಂಧಿ ಹಿಂದೂ ವ್ಯಕ್ತಿ ಸ್ಥಾಪಿಸಿದರು, ಅವರು ದೇಶ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದವರು. ಪ್ರಸ್ತುತ ರಾಮನಾನಿ ಅವರ ಮೊಮ್ಮಕ್ಕಳಾದ ಹರೀಶ್ ಮತ್ತು ರಾಜೇಶ್ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.

ಕೇಸರಿ ಶಾಲು ಧರಿಸಿ, ಕೈಯಲ್ಲಿ ಭಾರತದ ರಾಷ್ಟ್ರಧ್ವಜ ಹಿಡಿದುಕೊಂಡ ಪುರುಷರ ಗುಂಪೊಂದು ಕೋಲುಗಳಿಂದ ‘ಕರಾಚಿ ಬೇಕರಿ’ಯ ಸೈನ್‌ ಬೋರ್ಡ್‌ಗೆ ಹೊಡೆದು ಹಾನಿಗೊಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ.

“ಭಾರತ್ ಮಾತಾಕಿ ಜೈ”, “ಪಾಕಿಸ್ತಾನ್ ಮುರ್ದಾಬಾದ್” ಮತ್ತು “ಜೈ ಜವಾನ್” ಎಂಬ ಘೋಷಣೆಗಳನ್ನು ದಾಳಿ ನಡೆಸಿದವರು ಕೂಗಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಶಂಶಾಬಾದ್ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ (ಆರ್‌ಜಿಐ) ವಿಮಾನ ನಿಲ್ದಾಣ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೆ. ಬಾಲರಾಜು, “ಬೇಕರಿ ಮೇಲೆ ದಾಳಿ ಮಾಡಿದವರು ಬಿಜೆಪಿ ಬೆಂಬಲಿಗರು. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಹೆಚ್ಚಿನ ದಾಳಿ ತಡೆದಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 126 ಮತ್ತು ಆಸ್ತಿ ಹಾನಿಗೆ ಸಂಬಂಧಿಸಿದ ಇತರ ಸೆಕ್ಷನ್‌ಗಳಡಿಯಲ್ಲಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಕರಾಚಿ ಬೇಕರಿ’ಯನ್ನು ಬಲಪಂಥೀಯರು ಈ ಹಿಂದೆಯೂ ಗುರಿ ಮಾಡಿದ್ದರು. ಪಾಕಿಸ್ತಾನದ ಹೆಸರನ್ನು ಬದಲಾಯಿಸುವಂತೆ ಅದರ ಮಾಲೀಕರಿಗೆ ಒತ್ತಡ ಹೇರುತ್ತಿದ್ದರು. ಇತ್ತೀಚೆಗೆ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಉಂಟಾದ ಬಳಿಕ, ತಮ್ಮ ಸಂಸ್ಥೆಗೆ ರಕ್ಷಣೆ ಒದಗಿಸುವಂತೆ ಕರಾಚಿ ಬೇಕರಿಯ ಮಾಲೀಕರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಜಿತೇಂದರ್ ಅವರಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಬೇಕರಿ ಮೇಲೆ ದಾಳಿ ನಡೆದಿದೆ.

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಸೃಷ್ಟಿಯಾದ ಬಳಿಕ ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹೇಳಿಕೆಯೊಂದನ್ನು ನೀಡಿದ್ದ ಕರಾಚಿ ಬೇಕರಿ, “ನಾವು ಹೆಮ್ಮೆಯಿಂದ ಭಾರತೀಯರು. ನಮ್ಮ ಹೆಸರು ನಮ್ಮ ಇತಿಹಾಸದ ಭಾಗವಾಗಿದೆ, ನಮ್ಮ ರಾಷ್ಟ್ರೀಯತೆಯಲ್ಲ” ಎಂದು ಹೇಳಿಕೊಂಡಿತ್ತು.

 

View this post on Instagram

 

A post shared by Karachi Bakery (@karachibakery)

ಹೈದರಾಬಾದ್ ಸೇರಿದಂತೆ ತೆಲಂಗಾಣದ ಪ್ರಮುಖ ನಗರಗಳು ಮತ್ತು ಇತರ ರಾಜ್ಯಗಳಲ್ಲಿ ವ್ಯಾಪಿಸಿರುವ ಕರಾಚಿ ಬೇಕರಿ, ಬಿಸ್ಕೇಟ್‌ ಮತ್ತು ಇತರ ಕರಿದ ತಿಂಡಿಗಳಿಗೆ ಪ್ರಸಿದ್ದಿಯನ್ನು ಪಡೆದಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಹೈದರಾಬಾದ್‌ನ ಬಲಪಂಥೀಯ ಗುಂಪುಗಳ ಸದಸ್ಯರು ಹಲವಾರು ಕರಾಚಿ ಬೇಕರಿ ಮಳಿಗೆಗಳ ಸೈನ್‌ಬೋರ್ಡ್‌ಗಳಲ್ಲಿ ಭಾರತದ ರಾಷ್ಟ್ರ ಧ್ವಜವನ್ನು ಹಾಕುತ್ತಿದ್ದಾರೆ. ವಿಶಾಖಪಟ್ಟಣಂನ ಬಲಪಂಥೀಯ ಗುಂಪು ಕೂಡ ಮೇ 6 ರಂದು ಅಂಗಡಿಯೊಂದರಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು, ಸಂಸ್ಥೆಯು ಕರಾಚಿ ಎಂಬ ಹೆಸರನ್ನು ಬದಲಾಯಿಸಲು ಒತ್ತಾಯಿಸಿತ್ತು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕುರಿತ ಟ್ರೋಲ್ ವಿರೋಧಿಸಿದ ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....