Homeಮುಖಪುಟ'ಕರಾಚಿ ಬೇಕರಿ' ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಹೆಸರು ಬದಲಿಸಲು ಒತ್ತಡ

‘ಕರಾಚಿ ಬೇಕರಿ’ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಹೆಸರು ಬದಲಿಸಲು ಒತ್ತಡ

- Advertisement -
- Advertisement -

ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಹೈದರಾಬಾದ್‌ನ ‘ಕರಾಚಿ ಬೇಕರಿ’ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ಕಾರ್ಯಕರ್ತರ ಗುಂಪು ‘ಭಾರತ್ ಮಾತಾಕಿ ಜೈ’ ಎಂಬ ಘೋಷಣೆ ಕೂಗುತ್ತಾ ಹೈದರಾಬಾದ್‌ನ ಶಂಶಾಬಾದ್‌ನಲ್ಲಿರುವ ಕರಾಚಿ ಬೇಕರಿಯ ಶಾಖೆ ಮೇಲೆ ದಾಳಿ ಮಾಡಿದ್ದಾರೆ. ಮೇ. 10, ಶನಿವಾರ ಈ ಘಟನೆ ನಡೆದಿದೆ.

ಪಾಕಿಸ್ತಾನದ ನಗರ ಕರಾಚಿಯ ಹೆಸರನ್ನು ಹೊಂದಿರುವ ಕರಾಚಿ ಬೇಕರಿಯನ್ನು 1953ರಲ್ಲಿ ಖಾನ್‌ಚಂದ್ ರಾಮನಾನಿ ಎಂಬ ಸಿಂಧಿ ಹಿಂದೂ ವ್ಯಕ್ತಿ ಸ್ಥಾಪಿಸಿದರು, ಅವರು ದೇಶ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದವರು. ಪ್ರಸ್ತುತ ರಾಮನಾನಿ ಅವರ ಮೊಮ್ಮಕ್ಕಳಾದ ಹರೀಶ್ ಮತ್ತು ರಾಜೇಶ್ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.

ಕೇಸರಿ ಶಾಲು ಧರಿಸಿ, ಕೈಯಲ್ಲಿ ಭಾರತದ ರಾಷ್ಟ್ರಧ್ವಜ ಹಿಡಿದುಕೊಂಡ ಪುರುಷರ ಗುಂಪೊಂದು ಕೋಲುಗಳಿಂದ ‘ಕರಾಚಿ ಬೇಕರಿ’ಯ ಸೈನ್‌ ಬೋರ್ಡ್‌ಗೆ ಹೊಡೆದು ಹಾನಿಗೊಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ.

“ಭಾರತ್ ಮಾತಾಕಿ ಜೈ”, “ಪಾಕಿಸ್ತಾನ್ ಮುರ್ದಾಬಾದ್” ಮತ್ತು “ಜೈ ಜವಾನ್” ಎಂಬ ಘೋಷಣೆಗಳನ್ನು ದಾಳಿ ನಡೆಸಿದವರು ಕೂಗಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಶಂಶಾಬಾದ್ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ (ಆರ್‌ಜಿಐ) ವಿಮಾನ ನಿಲ್ದಾಣ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೆ. ಬಾಲರಾಜು, “ಬೇಕರಿ ಮೇಲೆ ದಾಳಿ ಮಾಡಿದವರು ಬಿಜೆಪಿ ಬೆಂಬಲಿಗರು. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಹೆಚ್ಚಿನ ದಾಳಿ ತಡೆದಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 126 ಮತ್ತು ಆಸ್ತಿ ಹಾನಿಗೆ ಸಂಬಂಧಿಸಿದ ಇತರ ಸೆಕ್ಷನ್‌ಗಳಡಿಯಲ್ಲಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಕರಾಚಿ ಬೇಕರಿ’ಯನ್ನು ಬಲಪಂಥೀಯರು ಈ ಹಿಂದೆಯೂ ಗುರಿ ಮಾಡಿದ್ದರು. ಪಾಕಿಸ್ತಾನದ ಹೆಸರನ್ನು ಬದಲಾಯಿಸುವಂತೆ ಅದರ ಮಾಲೀಕರಿಗೆ ಒತ್ತಡ ಹೇರುತ್ತಿದ್ದರು. ಇತ್ತೀಚೆಗೆ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಉಂಟಾದ ಬಳಿಕ, ತಮ್ಮ ಸಂಸ್ಥೆಗೆ ರಕ್ಷಣೆ ಒದಗಿಸುವಂತೆ ಕರಾಚಿ ಬೇಕರಿಯ ಮಾಲೀಕರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಜಿತೇಂದರ್ ಅವರಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಬೇಕರಿ ಮೇಲೆ ದಾಳಿ ನಡೆದಿದೆ.

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಸೃಷ್ಟಿಯಾದ ಬಳಿಕ ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹೇಳಿಕೆಯೊಂದನ್ನು ನೀಡಿದ್ದ ಕರಾಚಿ ಬೇಕರಿ, “ನಾವು ಹೆಮ್ಮೆಯಿಂದ ಭಾರತೀಯರು. ನಮ್ಮ ಹೆಸರು ನಮ್ಮ ಇತಿಹಾಸದ ಭಾಗವಾಗಿದೆ, ನಮ್ಮ ರಾಷ್ಟ್ರೀಯತೆಯಲ್ಲ” ಎಂದು ಹೇಳಿಕೊಂಡಿತ್ತು.

 

View this post on Instagram

 

A post shared by Karachi Bakery (@karachibakery)

ಹೈದರಾಬಾದ್ ಸೇರಿದಂತೆ ತೆಲಂಗಾಣದ ಪ್ರಮುಖ ನಗರಗಳು ಮತ್ತು ಇತರ ರಾಜ್ಯಗಳಲ್ಲಿ ವ್ಯಾಪಿಸಿರುವ ಕರಾಚಿ ಬೇಕರಿ, ಬಿಸ್ಕೇಟ್‌ ಮತ್ತು ಇತರ ಕರಿದ ತಿಂಡಿಗಳಿಗೆ ಪ್ರಸಿದ್ದಿಯನ್ನು ಪಡೆದಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಹೈದರಾಬಾದ್‌ನ ಬಲಪಂಥೀಯ ಗುಂಪುಗಳ ಸದಸ್ಯರು ಹಲವಾರು ಕರಾಚಿ ಬೇಕರಿ ಮಳಿಗೆಗಳ ಸೈನ್‌ಬೋರ್ಡ್‌ಗಳಲ್ಲಿ ಭಾರತದ ರಾಷ್ಟ್ರ ಧ್ವಜವನ್ನು ಹಾಕುತ್ತಿದ್ದಾರೆ. ವಿಶಾಖಪಟ್ಟಣಂನ ಬಲಪಂಥೀಯ ಗುಂಪು ಕೂಡ ಮೇ 6 ರಂದು ಅಂಗಡಿಯೊಂದರಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು, ಸಂಸ್ಥೆಯು ಕರಾಚಿ ಎಂಬ ಹೆಸರನ್ನು ಬದಲಾಯಿಸಲು ಒತ್ತಾಯಿಸಿತ್ತು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕುರಿತ ಟ್ರೋಲ್ ವಿರೋಧಿಸಿದ ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...