Homeಮುಖಪುಟ'ಕರಾಚಿ ಬೇಕರಿ' ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಹೆಸರು ಬದಲಿಸಲು ಒತ್ತಡ

‘ಕರಾಚಿ ಬೇಕರಿ’ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಹೆಸರು ಬದಲಿಸಲು ಒತ್ತಡ

- Advertisement -
- Advertisement -

ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಹೈದರಾಬಾದ್‌ನ ‘ಕರಾಚಿ ಬೇಕರಿ’ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ಕಾರ್ಯಕರ್ತರ ಗುಂಪು ‘ಭಾರತ್ ಮಾತಾಕಿ ಜೈ’ ಎಂಬ ಘೋಷಣೆ ಕೂಗುತ್ತಾ ಹೈದರಾಬಾದ್‌ನ ಶಂಶಾಬಾದ್‌ನಲ್ಲಿರುವ ಕರಾಚಿ ಬೇಕರಿಯ ಶಾಖೆ ಮೇಲೆ ದಾಳಿ ಮಾಡಿದ್ದಾರೆ. ಮೇ. 10, ಶನಿವಾರ ಈ ಘಟನೆ ನಡೆದಿದೆ.

ಪಾಕಿಸ್ತಾನದ ನಗರ ಕರಾಚಿಯ ಹೆಸರನ್ನು ಹೊಂದಿರುವ ಕರಾಚಿ ಬೇಕರಿಯನ್ನು 1953ರಲ್ಲಿ ಖಾನ್‌ಚಂದ್ ರಾಮನಾನಿ ಎಂಬ ಸಿಂಧಿ ಹಿಂದೂ ವ್ಯಕ್ತಿ ಸ್ಥಾಪಿಸಿದರು, ಅವರು ದೇಶ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದವರು. ಪ್ರಸ್ತುತ ರಾಮನಾನಿ ಅವರ ಮೊಮ್ಮಕ್ಕಳಾದ ಹರೀಶ್ ಮತ್ತು ರಾಜೇಶ್ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.

ಕೇಸರಿ ಶಾಲು ಧರಿಸಿ, ಕೈಯಲ್ಲಿ ಭಾರತದ ರಾಷ್ಟ್ರಧ್ವಜ ಹಿಡಿದುಕೊಂಡ ಪುರುಷರ ಗುಂಪೊಂದು ಕೋಲುಗಳಿಂದ ‘ಕರಾಚಿ ಬೇಕರಿ’ಯ ಸೈನ್‌ ಬೋರ್ಡ್‌ಗೆ ಹೊಡೆದು ಹಾನಿಗೊಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ.

“ಭಾರತ್ ಮಾತಾಕಿ ಜೈ”, “ಪಾಕಿಸ್ತಾನ್ ಮುರ್ದಾಬಾದ್” ಮತ್ತು “ಜೈ ಜವಾನ್” ಎಂಬ ಘೋಷಣೆಗಳನ್ನು ದಾಳಿ ನಡೆಸಿದವರು ಕೂಗಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಶಂಶಾಬಾದ್ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ (ಆರ್‌ಜಿಐ) ವಿಮಾನ ನಿಲ್ದಾಣ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೆ. ಬಾಲರಾಜು, “ಬೇಕರಿ ಮೇಲೆ ದಾಳಿ ಮಾಡಿದವರು ಬಿಜೆಪಿ ಬೆಂಬಲಿಗರು. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಹೆಚ್ಚಿನ ದಾಳಿ ತಡೆದಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 126 ಮತ್ತು ಆಸ್ತಿ ಹಾನಿಗೆ ಸಂಬಂಧಿಸಿದ ಇತರ ಸೆಕ್ಷನ್‌ಗಳಡಿಯಲ್ಲಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಕರಾಚಿ ಬೇಕರಿ’ಯನ್ನು ಬಲಪಂಥೀಯರು ಈ ಹಿಂದೆಯೂ ಗುರಿ ಮಾಡಿದ್ದರು. ಪಾಕಿಸ್ತಾನದ ಹೆಸರನ್ನು ಬದಲಾಯಿಸುವಂತೆ ಅದರ ಮಾಲೀಕರಿಗೆ ಒತ್ತಡ ಹೇರುತ್ತಿದ್ದರು. ಇತ್ತೀಚೆಗೆ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಉಂಟಾದ ಬಳಿಕ, ತಮ್ಮ ಸಂಸ್ಥೆಗೆ ರಕ್ಷಣೆ ಒದಗಿಸುವಂತೆ ಕರಾಚಿ ಬೇಕರಿಯ ಮಾಲೀಕರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಜಿತೇಂದರ್ ಅವರಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಬೇಕರಿ ಮೇಲೆ ದಾಳಿ ನಡೆದಿದೆ.

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಸೃಷ್ಟಿಯಾದ ಬಳಿಕ ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹೇಳಿಕೆಯೊಂದನ್ನು ನೀಡಿದ್ದ ಕರಾಚಿ ಬೇಕರಿ, “ನಾವು ಹೆಮ್ಮೆಯಿಂದ ಭಾರತೀಯರು. ನಮ್ಮ ಹೆಸರು ನಮ್ಮ ಇತಿಹಾಸದ ಭಾಗವಾಗಿದೆ, ನಮ್ಮ ರಾಷ್ಟ್ರೀಯತೆಯಲ್ಲ” ಎಂದು ಹೇಳಿಕೊಂಡಿತ್ತು.

 

View this post on Instagram

 

A post shared by Karachi Bakery (@karachibakery)

ಹೈದರಾಬಾದ್ ಸೇರಿದಂತೆ ತೆಲಂಗಾಣದ ಪ್ರಮುಖ ನಗರಗಳು ಮತ್ತು ಇತರ ರಾಜ್ಯಗಳಲ್ಲಿ ವ್ಯಾಪಿಸಿರುವ ಕರಾಚಿ ಬೇಕರಿ, ಬಿಸ್ಕೇಟ್‌ ಮತ್ತು ಇತರ ಕರಿದ ತಿಂಡಿಗಳಿಗೆ ಪ್ರಸಿದ್ದಿಯನ್ನು ಪಡೆದಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಹೈದರಾಬಾದ್‌ನ ಬಲಪಂಥೀಯ ಗುಂಪುಗಳ ಸದಸ್ಯರು ಹಲವಾರು ಕರಾಚಿ ಬೇಕರಿ ಮಳಿಗೆಗಳ ಸೈನ್‌ಬೋರ್ಡ್‌ಗಳಲ್ಲಿ ಭಾರತದ ರಾಷ್ಟ್ರ ಧ್ವಜವನ್ನು ಹಾಕುತ್ತಿದ್ದಾರೆ. ವಿಶಾಖಪಟ್ಟಣಂನ ಬಲಪಂಥೀಯ ಗುಂಪು ಕೂಡ ಮೇ 6 ರಂದು ಅಂಗಡಿಯೊಂದರಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು, ಸಂಸ್ಥೆಯು ಕರಾಚಿ ಎಂಬ ಹೆಸರನ್ನು ಬದಲಾಯಿಸಲು ಒತ್ತಾಯಿಸಿತ್ತು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕುರಿತ ಟ್ರೋಲ್ ವಿರೋಧಿಸಿದ ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...