Homeಮುಖಪುಟತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

- Advertisement -
- Advertisement -

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸುಮಾರು 200 ಬಿಜೆಪಿ ಕಾರ್ಯಕರ್ತರು ಗಂಗಾ ಜಲದಿಂದ ತಮ್ಮನ್ನು ಶುದ್ದೀಕರಿಸಿ ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಘಟನೆ ನಡೆದಿದೆ. ಈ ಹಿಂದೆ ಟಿಎಂಸಿಯಲ್ಲೇ ಇದ್ದ ಅವರು ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಸೇರಿದ್ದರು. ಇದೀಗ ಅವರು ತಾವು ಬಿಜೆಪಿಗೆ ಸೇರಿರುವುದು ತಪ್ಪು ಎಂದು ಪ್ರತಿಪಾದಿಸಿ ಟಿಎಂಸಿಗೆ ಮರಳಿದ್ದಾರೆ.

ಬಿಜೆಪಿಗೆ ಸೇರಿದ್ದಕ್ಕೆ ಪ್ರಾಯಶ್ಚಿತವಾಗಿ ಅವರು ತಲೆ ಬೋಳಿಸಿಕೊಂಡು, ಗಂಗಾಜಲವನ್ನು ಸಿಂಪಡಿಸಿ ತಮ್ಮನ್ನು ತಾವು ಶುದ್ದೀಕರಿಸಿ, ಅರಂಬಾಗ್ ಸಂಸದ ಅಪರೂಪಾ ಪೋದ್ದಾರ್ ಅವರ ಸಮ್ಮುಖದಲ್ಲಿ ಟಿಎಂಸಿ ಧ್ವಜವನ್ನು ಹಿಡಿದು ಪಕ್ಷಕ್ಕೆ ಮರಳಿದ್ದಾರೆ.

ಅರಂಬಾಗ್‌ನಲ್ಲಿರುವ ಬಡವರಿಗೆ ಉಚಿತ ಆಹಾರವನ್ನು ನೀಡುವ ನಿಟ್ಟಿನಲ್ಲಿ ಪಕ್ಷವು ಮಂಗಳವಾರ ಕಾರ್ಯಕ್ರಮವನ್ನು ಆಯೋಜಿಸಿತ್ತು ಎಂದು ಟಿಎಂಸಿ ಸಂಸದ ಅಪರೂಪಾ ಪೋದ್ದಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಈ ಕಾರ್ಯಕ್ರಮದ ಸಂದರ್ಭದಲ್ಲಿ ದಲಿತ ಸಮುದಾಯದ ಕೆಲವರು ಬಂದು ಬಿಜೆಪಿಗೆ ಸೇರುವ ಮೂಲಕ ತಪ್ಪು ಮಾಡಿದ್ದೇವೆ ಎಂದು ಹೇಳಿದ್ದಾರೆ. ಅವರು ಮಾಡಿದ ತಪ್ಪಿಗೆ ಪ್ರಾಯಶ್ಚಿತ ಮಾಡಿ ನಂತರ ಮತ್ತೆ ಟಿಎಂಸಿಗೆ ಸೇರಲು ಅವರು ಬಯಸಿದ್ದರು ಎಂದು ಅಪರೂಪಾ ಪೋದ್ದಾರ್ ಹೇಳಿದ್ದಾರೆ.

ಟಿಎಂಸಿ ಸೇರುತ್ತಿರುವ ಹಲವು ಬಿಜೆಪಿ ಕಾರ್ಯಕರ್ತರು

ಇತ್ತೀಚೆಗೆ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಜಯಗಳಿಸಿದಾಗಿನಿಂದ, ಪಶ್ಚಿಮ ಬಂಗಾಳದ ಹಲವಾರು ಜಿಲ್ಲೆಗಳಲ್ಲಿ ನೂರಾರು ಕಾರ್ಯಕರ್ತರು ಪಕ್ಷಕ್ಕೆ ಮರಳುತ್ತಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಪಶ್ಚಿಮ ಬಂಗಾಳದ ಬಿರ್ಭಂನಲ್ಲಿ 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ತಮ್ಮನ್ನು ಟಿಎಂಸಿಗೆ ಸೇರಿಸಿಕೊಳ್ಳಬೇಕು ಎಂದು ಪಕ್ಷದ ಕಚೇರಿಯ ಹೊರಗೆ ಧರಣಿ ನಡೆಸಿದ್ದರು. ನಂತರ ಅವರನ್ನು ಟಿಎಂಸಿಗೆ ಸೇರಿಸಿಕೊಳ್ಳಲಾಯಿತು. ಈ ಕಾರ್ಯಕರ್ತರು ತಾವು ಪಕ್ಷ ಬದಲಾಯಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದರು.

ರಾಜ್ಯದಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾದ ನಂತರ ಭುಗಿಲೆದ್ದ ಹಿಂಸಾಚಾರದ ಪರಿಣಾಮವಾಗಿ ಪಕ್ಷದ ಕಾರ್ಯಕರ್ತರು ಟಿಎಂಸಿಗೆ ವಲಸೆ ಹೋಗುತ್ತಿದ್ದಾರೆ ಎಂದು ಬಿಜೆಪಿ ಬಣ್ಣಿಸಿದೆ. ಈ ಕಾರ್ಯಕರ್ತರು ತಮ್ಮ ಮತ್ತು ತಮ್ಮ ಕುಟುಂಬದ ಭಯಕ್ಕಾಗಿ ಮತ್ತೆ ಆಡಳಿತ ಪಕ್ಷಕ್ಕೆ ಸೇರಲು ಬಯಸುತ್ತಿದ್ದಾರೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೊರೊನಾ ಲಸಿಕೆಯಿಂದ ‘ಬಂಜೆತನ’ ಉಂಟಾಗುವುದಿಲ್ಲ: ಒಕ್ಕೂಟ ಸರ್ಕಾರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....