Homeಮುಖಪುಟರಾಜ್ಯದ ಬೊಕ್ಕಸ ಬರಿದಾಗಿಸಿರುವುದನ್ನು ಸ್ವತಃ ಒಪ್ಪಿಕೊಂಡ ಬಿಜೆಪಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

ರಾಜ್ಯದ ಬೊಕ್ಕಸ ಬರಿದಾಗಿಸಿರುವುದನ್ನು ಸ್ವತಃ ಒಪ್ಪಿಕೊಂಡ ಬಿಜೆಪಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

- Advertisement -
- Advertisement -

ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಲು ಹೋಗಿ ಹಿಂದೆ ಆಡಳಿತ ನಡೆಸಿದ್ದ ಬಿಜೆಪಿ ಪಕ್ಷ ಪೇಚಿಗೆ ಸಿಲುಕಿಕೊಂಡಿದೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ರಾಜ್ಯದ ಬೊಕ್ಕಸದಲ್ಲಿ ದುಡ್ಡಿಲ್ಲ, ಎಲ್ಲವೂ ಮುಳುಗುವ ಹಾದಿಯಲ್ಲಿವೆ ಎಂದು ಫೇಸ್‌ಬುಕ್ ಪೋಸ್ಟ್ ಹಾಕುವ ಮೂಲಕ ತನ್ನ ಕೆಟ್ಟ ಆಡಳಿತವನ್ನು ಒಪ್ಪಿಕೊಂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

“ರಾಜ್ಯದಲ್ಲಿ ಅವಾಸ್ತವಿಕ ಗ್ಯಾರಂಟಿಗಳ ಅನುಷ್ಠಾನಕ್ಕೆ ಪತರುಗುಟ್ಟುತ್ತಿರುವ ಸಿದ್ದರಾಮಯ್ಯ ಅವರ ಸರ್ಕಾರ ಸಿಕ್ಕ ಸಿಕ್ಕ ಇಲಾಖೆಗೆ ‘ಕೈ’ ಹಾಕಿ ಆರ್ಥಿಕ ದಿವಾಳಿ ಎಬ್ಬಿಸುತ್ತಿದೆ.
ಬಿಎಂಟಿಸಿ- ಆರ್ಥಿಕ ಇಂಧನವಿಲ್ಲ
ಜಲಮಂಡಳಿ- ಹಣಕಾಸಿನ ಹಾಹಾಕಾರ
ಕೆಎಸ್‌ಆರ್‌ಟಿಸಿ – ನಷ್ಟದ ಹೆದ್ದಾರಿಯಲ್ಲಿ
ವಿದ್ಯುತ್ ಸರಬರಾಜು ಕಂಪೆನಿಗಳು – ಮುಳುಗುವ ಹಾದಿಯಲ್ಲಿ
ಇನ್ನು ಹಲವು ಇಲಾಖೆಗಳ ಸಂಸ್ಥೆಗಳು ಅಧಃಪತನದ ಪಟ್ಟಿಯಲ್ಲಿದ್ದು,
‘ಅರ್ಥ’ವಿಲ್ಲದ #ATMSarkara ಸೃಷ್ಟಿಸಿರುವ ಅರಾಜಕತೆಗೆ ಬಲಿಯಾಗಲು ‘ಸಿದ್ದ’ವಾಗಿವೆ” ಎಂದು ಬಿಜೆಪಿ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಕಾಂಗ್ರೆಸ್ ಸರಕಾರ ಬಂದು ಎಷ್ಟು ದಿನ ಆಯಿತು. ಈ ಬಿಜೆಪಿಯವರು ಎಷ್ಟು ವರ್ಷ ಇದ್ದರು? ಇನ್ನೂ ಬಜೆಟೇ ಆಗಿಲ್ಲ! ಅಷ್ಟರಲ್ಲೇ ಸರಕಾರವನ್ನು ದೂರುವ ಭರದಲ್ಲಿ ತಮ್ಮ ವೈಫಲ್ಯವನ್ನೇ ಹರಾಜು ಹಾಕಿದ್ದಾರೆ ಈ ಬಿಜೆಪಿ ಮೂರ್ಖರು! ಮಹಾನ್ ಬುದ್ಧಿವಂತಿಕೆ ತೋರಲು ಹೋಗಿ ಶತಮೂರ್ಖರಾಗುವುದು ಹೀಗೆಯೇ! ಎಂದು ಹಿರಿಯ ಪತ್ರಕರ್ತ ನಿಖಿಲ್ ಕೋಲ್ಪೆ ಅಭಿಪ್ರಾಯಪಟ್ಟಿದ್ದಾರೆ.

ಆರ್ಥಿಕ ದಿವಾಳಿ ಎಬ್ಬಿಸಿ ಬಂದಿದ್ದೇವೆ, ಹೇಗೆಲ್ಲಾ ಗ್ಯಾರಂಟಿ ನೀಡ್ತಾರೆ ಅಂತ ತಲೆ ಕೆಡಿಸಿಕೊಂಡಿದ್ದ ಬಿಜೆಪಿಗೆ ಅವರ ಐಟಿ ಸೆಲ್ ಬಿಜೆಪಿ ಸರ್ಕಾರ #ATMSarkara ಆಗಿತ್ತು ಅಂತ ಎಸ್ಟು ಸಲೀಸಾಗಿ ಹೇಳಿದ್ದಾರೆ ನೋಡಿ ಎಂದು ರಾಮಚಂದ್ರ ಕಲ್ಲೇರ್ ಹೇಳಿದ್ದಾರೆ.

40% ಬ್ರಸ್ಟಾಚರವನ್ನು ನಾವು ಮಾಡಿದ್ದೊ ಅನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ ಎಂದು ಕೀಲಾರ ನಾಗೇಗೌಡ ಶಿವಲಿಂಗಯ್ಯ ಬರೆದಿದ್ದಾರೆ.

ನನಗೆ ಬಿಜೆಪಿಗರ ‘ಪ್ರಾಮಾಣಿಕತೆ’ ಬಹಳ ಇಷ್ಟ. 10 ದಿನಗಳಷ್ಟೆ ಮುಗಿಸಿರುವ ಕಾಂಗ್ರೇಸ್ ಸರ್ಕಾರವನ್ನು ಟೀಕಿಸಲು ಹೋಗಿ ಬಿಜೆಪಿ ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಿದೆ. ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಯಾವೆಲ್ಲಾ ಇಲಾಖೆಗಳನ್ನು ದಿವಾಳಿ ಮಾಡಿಟ್ಟಿದೆ ಎಂದು ಅವರದ್ದೇ ಮಾತಲ್ಲಿ ಓದಿ ಫ್ರೆಂಡ್ಸಾ! ಇವರ ಪೇಜ್ ಆಡ್ಮಿನ್ ಗಳು ಗುಂಡು ಹಾಕಿ ಕೊನೆಗೆ ತಮ್ಮದು ATM ಸರ್ಕಾರವಾಗಿತ್ತೆಂದೂ ಒಪ್ಕಂಡಿವೆ. ಡಬ್ಬಲ್ ಇಂಜಿನ್ ಸರ್ಕಾರದ ಬೊಕ್ಕಸ ಬರಿದಾಗಿಸಿರುವ ಅಮೋಘ ಸಾಧನೆಗಳನ್ನು ಸೇರ್ ಮಾಡುವ ಫ್ರೆಂಡ್ಸಾ.

ಹಲಾಲ್ ಹಿಜಾಬ್ ಗಳಲ್ಲಿ ಮುಳುಗಿದ್ದ ಬಿಜೆಪಿ ತನ್ನ ಸಾಧನೆಗಳ ಬಗ್ಗೆ ಕೊನೆಗೂ ಸತ್ಯ ಹೇಳಿದೆ ಎಂದು ಹಿರಿಯ ಲೇಖಕರಾದ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆರನೇ ಸಾಧನೆ .. ಕರ್ನಾಟಕವನ್ನು ಹಲಾಲ್, ಹಿಜಾಬ್, ಹರಿಯೋಂ ಅಂತ ಉಪಯೋಗವಿಲ್ಲದ ಭಜನೆಯಲ್ಲಿ ಮುಳುಗಿಸಿದ್ದ ಬಿಜೆಪಿಯನ್ನು ಮೇಲೆತ್ತಿ ರಿಯಲ್ ಸಮಸ್ಯೆಗಳ ಕುರಿತು ಮಾತನಾಡುವಂತೆ ಮಾಡಿದ್ದು. ಅಂದಹಾಗೆ ಕೆಳಗಿನ ಎಲ್ಲಾ ಸಮಸ್ಯೆಗಳು ಹಿಂದಿನ ಸರ್ಕಾರದಲ್ಲೇ ಇತ್ತು, ಈಗ ನೆನಪಾಯ್ತು ಅಷ್ಟೇ ಎಂದು ಗಣೇಶ್ ಬರೆದಿದ್ದಾರೆ.

ಇದನ್ನೂ ಓದಿ: ಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...