Homeಮುಖಪುಟರಾಜ್ಯದ ಬೊಕ್ಕಸ ಬರಿದಾಗಿಸಿರುವುದನ್ನು ಸ್ವತಃ ಒಪ್ಪಿಕೊಂಡ ಬಿಜೆಪಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

ರಾಜ್ಯದ ಬೊಕ್ಕಸ ಬರಿದಾಗಿಸಿರುವುದನ್ನು ಸ್ವತಃ ಒಪ್ಪಿಕೊಂಡ ಬಿಜೆಪಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

- Advertisement -
- Advertisement -

ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಲು ಹೋಗಿ ಹಿಂದೆ ಆಡಳಿತ ನಡೆಸಿದ್ದ ಬಿಜೆಪಿ ಪಕ್ಷ ಪೇಚಿಗೆ ಸಿಲುಕಿಕೊಂಡಿದೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ರಾಜ್ಯದ ಬೊಕ್ಕಸದಲ್ಲಿ ದುಡ್ಡಿಲ್ಲ, ಎಲ್ಲವೂ ಮುಳುಗುವ ಹಾದಿಯಲ್ಲಿವೆ ಎಂದು ಫೇಸ್‌ಬುಕ್ ಪೋಸ್ಟ್ ಹಾಕುವ ಮೂಲಕ ತನ್ನ ಕೆಟ್ಟ ಆಡಳಿತವನ್ನು ಒಪ್ಪಿಕೊಂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

“ರಾಜ್ಯದಲ್ಲಿ ಅವಾಸ್ತವಿಕ ಗ್ಯಾರಂಟಿಗಳ ಅನುಷ್ಠಾನಕ್ಕೆ ಪತರುಗುಟ್ಟುತ್ತಿರುವ ಸಿದ್ದರಾಮಯ್ಯ ಅವರ ಸರ್ಕಾರ ಸಿಕ್ಕ ಸಿಕ್ಕ ಇಲಾಖೆಗೆ ‘ಕೈ’ ಹಾಕಿ ಆರ್ಥಿಕ ದಿವಾಳಿ ಎಬ್ಬಿಸುತ್ತಿದೆ.
ಬಿಎಂಟಿಸಿ- ಆರ್ಥಿಕ ಇಂಧನವಿಲ್ಲ
ಜಲಮಂಡಳಿ- ಹಣಕಾಸಿನ ಹಾಹಾಕಾರ
ಕೆಎಸ್‌ಆರ್‌ಟಿಸಿ – ನಷ್ಟದ ಹೆದ್ದಾರಿಯಲ್ಲಿ
ವಿದ್ಯುತ್ ಸರಬರಾಜು ಕಂಪೆನಿಗಳು – ಮುಳುಗುವ ಹಾದಿಯಲ್ಲಿ
ಇನ್ನು ಹಲವು ಇಲಾಖೆಗಳ ಸಂಸ್ಥೆಗಳು ಅಧಃಪತನದ ಪಟ್ಟಿಯಲ್ಲಿದ್ದು,
‘ಅರ್ಥ’ವಿಲ್ಲದ #ATMSarkara ಸೃಷ್ಟಿಸಿರುವ ಅರಾಜಕತೆಗೆ ಬಲಿಯಾಗಲು ‘ಸಿದ್ದ’ವಾಗಿವೆ” ಎಂದು ಬಿಜೆಪಿ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಕಾಂಗ್ರೆಸ್ ಸರಕಾರ ಬಂದು ಎಷ್ಟು ದಿನ ಆಯಿತು. ಈ ಬಿಜೆಪಿಯವರು ಎಷ್ಟು ವರ್ಷ ಇದ್ದರು? ಇನ್ನೂ ಬಜೆಟೇ ಆಗಿಲ್ಲ! ಅಷ್ಟರಲ್ಲೇ ಸರಕಾರವನ್ನು ದೂರುವ ಭರದಲ್ಲಿ ತಮ್ಮ ವೈಫಲ್ಯವನ್ನೇ ಹರಾಜು ಹಾಕಿದ್ದಾರೆ ಈ ಬಿಜೆಪಿ ಮೂರ್ಖರು! ಮಹಾನ್ ಬುದ್ಧಿವಂತಿಕೆ ತೋರಲು ಹೋಗಿ ಶತಮೂರ್ಖರಾಗುವುದು ಹೀಗೆಯೇ! ಎಂದು ಹಿರಿಯ ಪತ್ರಕರ್ತ ನಿಖಿಲ್ ಕೋಲ್ಪೆ ಅಭಿಪ್ರಾಯಪಟ್ಟಿದ್ದಾರೆ.

ಆರ್ಥಿಕ ದಿವಾಳಿ ಎಬ್ಬಿಸಿ ಬಂದಿದ್ದೇವೆ, ಹೇಗೆಲ್ಲಾ ಗ್ಯಾರಂಟಿ ನೀಡ್ತಾರೆ ಅಂತ ತಲೆ ಕೆಡಿಸಿಕೊಂಡಿದ್ದ ಬಿಜೆಪಿಗೆ ಅವರ ಐಟಿ ಸೆಲ್ ಬಿಜೆಪಿ ಸರ್ಕಾರ #ATMSarkara ಆಗಿತ್ತು ಅಂತ ಎಸ್ಟು ಸಲೀಸಾಗಿ ಹೇಳಿದ್ದಾರೆ ನೋಡಿ ಎಂದು ರಾಮಚಂದ್ರ ಕಲ್ಲೇರ್ ಹೇಳಿದ್ದಾರೆ.

40% ಬ್ರಸ್ಟಾಚರವನ್ನು ನಾವು ಮಾಡಿದ್ದೊ ಅನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ ಎಂದು ಕೀಲಾರ ನಾಗೇಗೌಡ ಶಿವಲಿಂಗಯ್ಯ ಬರೆದಿದ್ದಾರೆ.

ನನಗೆ ಬಿಜೆಪಿಗರ ‘ಪ್ರಾಮಾಣಿಕತೆ’ ಬಹಳ ಇಷ್ಟ. 10 ದಿನಗಳಷ್ಟೆ ಮುಗಿಸಿರುವ ಕಾಂಗ್ರೇಸ್ ಸರ್ಕಾರವನ್ನು ಟೀಕಿಸಲು ಹೋಗಿ ಬಿಜೆಪಿ ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಿದೆ. ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಯಾವೆಲ್ಲಾ ಇಲಾಖೆಗಳನ್ನು ದಿವಾಳಿ ಮಾಡಿಟ್ಟಿದೆ ಎಂದು ಅವರದ್ದೇ ಮಾತಲ್ಲಿ ಓದಿ ಫ್ರೆಂಡ್ಸಾ! ಇವರ ಪೇಜ್ ಆಡ್ಮಿನ್ ಗಳು ಗುಂಡು ಹಾಕಿ ಕೊನೆಗೆ ತಮ್ಮದು ATM ಸರ್ಕಾರವಾಗಿತ್ತೆಂದೂ ಒಪ್ಕಂಡಿವೆ. ಡಬ್ಬಲ್ ಇಂಜಿನ್ ಸರ್ಕಾರದ ಬೊಕ್ಕಸ ಬರಿದಾಗಿಸಿರುವ ಅಮೋಘ ಸಾಧನೆಗಳನ್ನು ಸೇರ್ ಮಾಡುವ ಫ್ರೆಂಡ್ಸಾ.

ಹಲಾಲ್ ಹಿಜಾಬ್ ಗಳಲ್ಲಿ ಮುಳುಗಿದ್ದ ಬಿಜೆಪಿ ತನ್ನ ಸಾಧನೆಗಳ ಬಗ್ಗೆ ಕೊನೆಗೂ ಸತ್ಯ ಹೇಳಿದೆ ಎಂದು ಹಿರಿಯ ಲೇಖಕರಾದ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆರನೇ ಸಾಧನೆ .. ಕರ್ನಾಟಕವನ್ನು ಹಲಾಲ್, ಹಿಜಾಬ್, ಹರಿಯೋಂ ಅಂತ ಉಪಯೋಗವಿಲ್ಲದ ಭಜನೆಯಲ್ಲಿ ಮುಳುಗಿಸಿದ್ದ ಬಿಜೆಪಿಯನ್ನು ಮೇಲೆತ್ತಿ ರಿಯಲ್ ಸಮಸ್ಯೆಗಳ ಕುರಿತು ಮಾತನಾಡುವಂತೆ ಮಾಡಿದ್ದು. ಅಂದಹಾಗೆ ಕೆಳಗಿನ ಎಲ್ಲಾ ಸಮಸ್ಯೆಗಳು ಹಿಂದಿನ ಸರ್ಕಾರದಲ್ಲೇ ಇತ್ತು, ಈಗ ನೆನಪಾಯ್ತು ಅಷ್ಟೇ ಎಂದು ಗಣೇಶ್ ಬರೆದಿದ್ದಾರೆ.

ಇದನ್ನೂ ಓದಿ: ಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...