Homeಚಳವಳಿನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ಒಂದು ತಿಂಗಳೊಳಗೆ ಮನೆ ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದಿದ್ದಲ್ಲಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು...

- Advertisement -
- Advertisement -

ಇದೇ ಜುಲೈ 26ಕ್ಕೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 2 ವರ್ಷ ತುಂಬಿತ್ತು. ಈ ಸಂಭ್ರಮಕ್ಕಾಗಿ ಬಿಜೆಪಿಯು ಎರಡು ವರ್ಷದ ಸಾಧನೆಯ ಪುಸ್ತಕ ಹೊರತಂದಿತ್ತು. ಎಲ್ಲಾ ಪ್ರಮುಖ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡಿತ್ತು. ಅಲ್ಲದೇ ಎಲ್ಲಾ ವೆಬ್‌ಸೈಟ್‌ಗಳನ್ನು ತಲುಪುವುದಕ್ಕಾಗಿ ಕೋಟ್ಯಾಂತರ ರೂ ಖರ್ಚು ಮಾಡಿ ಗೂಗಲ್ ಜಾಹೀರಾತನ್ನು ಸಹ ನೀಡಿತ್ತು. ಆದರೆ ಈ ಜಾಹೀರಾತು ನೋಡಿದ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಿದರಹಳ್ಳಿ ಗ್ರಾಮದ ನೆರೆ ಸಂತ್ರಸ್ತರು ಕೆಂಡಾಮಂಡಲವಾಗಿದ್ದಾರೆ. ನೆರೆ ಬಂದು ಮನೆ ಕೊಚ್ಚಿ ಎರಡು ವರ್ಷವಾದರೂ ಯಾವುದೇ ಮನೆ ಪಡೆಯದ ಅವರು ಬೀದಿಯಲ್ಲಿದ್ದರೆ ಸರ್ಕಾರ ಮಾತ್ರ ಅವರಿಗೆ ಮನೆ ಕಟ್ಟಿಸಿಕೊಟ್ಟಿರುವುದಾಗಿ ದೊಡ್ಡ ದೊಡ್ಡ ಜಾಹೀರಾತು ಹಾಕಿಕೊಂಡಿರುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ.

2019ರ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾ ಮಳೆಯಿಂದಾಗಿ ಕಬಿನಿ ನದಿ ಪ್ರವಾಹದಿಂದಾಗಿ ಕಬಿನಿ ಜಲಾಶಯದ ಪಕ್ಕದಲ್ಲೇ ಇರುವ ಸರಗೂರು ತಾಲ್ಲೂಕಿನ ಬಿದರಹಳ್ಳಿ ಸರ್ಕಲ್ ಗ್ರಾಮದ ಮನೆಗಳು ಜಲಾವೃತವಾಗಿದ್ದವು. ಬಹುತೇಕ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಕುಸಿದು ಹಾನಿಗೊಳಗಾಗಿದ್ದು, ವಾಸಿಸಲು ಯೋಗ್ಯವಾಗಿಲ್ಲ. ಅಲ್ಲಿನ ಸಂತ್ರಸ್ತರಿಗೆ ಸ್ವಲ್ಪ ದಿನಗಳ ಮಟ್ಟಿಗೆ ಕಾಳಜಿ ಕೇಂದ್ರದಲ್ಲಿ ವಾಸದ ವ್ಯವಸ್ಥೆ ಮಾಡಲಾಗಿದ್ದರೂ ನಂತರ ಅಲ್ಲಿಂದಲೂ ಯಾವುದೇ ಪರಿಹಾರ ನೀಡದೇ ಖಾಲಿ ಮಾಡಿಸಲಾಯಿತು.

ಅಂದಿನ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಸತಿ ಸಚಿವರಾದ ವಿ.ಸೋಮಣ್ಣರವರು ಭೇಟಿ ನೀಡಿ, ತಗ್ಗಿನಲ್ಲಿರುವ ನಮ್ಮ ಊರನ್ನು ಸ್ಥಳಾಂತರಿಸಿ, ಮೂರು ತಿಂಗಳ ಒಳಗಾಗಿ 42 ಹೊಸ ಮನೆಗಳ ನಿರ್ಮಾಣ ಮಾಡಿಕೊಡುವುದಾಗಿ ಹೇಳಿ, ಪರ್ಯಾಯ ಜಾಗವನ್ನೂ ಗುರುತಿಸಿ ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಮ್ಮ ಬದುಕು ಅತಂತ್ರವಾಗಿದೆ. ಇದುವರೆಗೆ ನಮಗೆ ಯಾವುದೇ ಪರಿಹಾರವಾಗಲಿ, ಪುನರ್ವಸತಿಯಾಗಲಿ ದೊರಕಿಲ್ಲ. ಕಾಡುಪ್ರಾಣಿಗಳ, ಹಾವುಗಳ ಭಯದಿಂದ ಸಂಬಂಧಿಕರ ಮನೆಗಳಲ್ಲಿ ದಿನದೂಡುವಂತಾಗಿದೆ. ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದೇವೆ. ಮಳೆಯಿಂದ ರಕ್ಷಿಸಿಕೊಳ್ಳಲು ಟರ್ಪಾಲು, ಷೀಟಿನಂತಹ ತಾತ್ಕಾಲಿಕ ವ್ಯವಸ್ಥೆಯನ್ನೂ ನಾವೇ ಮಾಡಿಕೊಂಡಿದ್ದೇವೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

ಪತ್ರಿಕೆಗಳಲ್ಲಿ ಸರ್ಕಾರ ನೀಡಿರುವ ಜಾಹೀರಾತು

ಕಳೆದ ಎರಡು ವರ್ಷದ ಅವಧಿಯಲ್ಲಿ ನಾವು ಸಲ್ಲಿಸಿದ ಮನವಿಗಳಿಗೆ ಲೆಕ್ಕವಿಲ್ಲ. ಸರಗೂರಿನ ತಹಶೀಲ್ದಾರರಿಗೆ, ಅಂದಿನ ಜಿಲ್ಲಾಧಿಕಾರಿಗಳಿಗೆ, ಸ್ಥಳೀಯ ಶಾಸಕರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಕಳೆದ ವರ್ಷ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದೇವೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿ ಸಮಸ್ಯೆ ಹೇಳಿಕೊಂಡಿದ್ದೇವೆ. ಅಂದಿನ ನೀರಾವರಿ ಸಚಿವರಿಗೂ ಅಹವಾಲು ಸಲ್ಲಿಸಿದ್ದೇವೆ. ಆದರೆ ಇದುವರೆಗೆ ನಮಗೆ ಮನೆ ಸಿಕ್ಕಿಲ್ಲ. ನಮ್ಮ ಪುನರ್ವಸತಿಗೆ ಗುರುತಿಸಿರುವ ಕಪಿಲೇಶ್ವರ ಕಾಲೊನಿಯ ಜಾಗ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದು, ಅದು ಕಂದಾಯ ಇಲಾಖೆಗೆ ಹಸ್ತಾಂತರಗೊಳ್ಳದಿರುವುದರಿಂದ ನಾವು ಕಷ್ಟ ಅನುಭವಿಸಬೇಕಾಗಿದೆ ಎಂದು ಸಂತ್ರಸ್ತರು ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ಕಬಿನಿ ಅಣೆಕಟ್ಟು ಕಟ್ಟಲು ಆಗಮಿಸಿದ್ದ ನಮ್ಮ ಪೂರ್ವಜರು 50 ವರ್ಷಗಳ ಹಿಂದೆ ಇಲ್ಲೇ ನೆಲೆಸಿದರು. ನೀರಾವರಿ ಯೋಜನೆಗೆ ಬೆವರು ಸುರಿಸಿದ ನಮ್ಮ ಕುಟುಂಬಗಳನ್ನು ನೀರಾವರಿ ಇಲಾಖೆಯೇ ಅಕ್ಷರಶ ನಡುನೀರಿನಲ್ಲಿ ಕೈಬಿಟ್ಟಿದೆ. ಕೂಲಿಕಾರರಾದ ನಾವು ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಸರಿಯಾದ ಉದ್ಯೋಗವೂ ಲಭಿಸದೆ ಕಂಗಾಲಾಗಿದ್ದೇವೆ.
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಗಳ ಬಗ್ಗೆ ಇದೇ ಜುಲೈ 26ರಂದು ಪ್ರಕಟವಾಗಿದ್ದ ಜಾಹೀರಾತಿನಲ್ಲಿ ನೆರೆ ಸಂತ್ರಸ್ತರ ಪರಿಹಾರ, ಪುನರ್ವಸತಿ ಪೂರ್ಣಗೊಂಡಿರುವ ಊರುಗಳ ಪಟ್ಟಿಯಲ್ಲಿ ಬಿದರಹಳ್ಳಿಯ ಹೆಸರೂ ಇರುವುದನ್ನು ಕಂಡು ನಮಗೆ ದಿಗ್ಭ್ರಮೆಯಾಗಿದೆ” ಎನ್ನುತ್ತಾರೆ ನೆರೆಯಿಂದಾಗಿ ಮನೆ ಕಳೆದುಕೊಂಡ ಚೆಲುವಿ.

ಬಿದರಹಳ್ಳಿ ಪಕ್ಕದ ಕಪಿಲೇಶ್ವರ ಕಾಲೊನಿಯಲ್ಲಿ ಪುನರ್ವಸತಿಯ 42 ಮನೆಗಳ ಕಾಮಗಾರಿಯನ್ನು ತಕ್ಷಣವೇ ಆರಂಭಿಸಿ ಆರು ತಿಂಗಳೊಳಗೆ ಮನೆ ಕಟ್ಟಿಕೊಡಬೇಕು. ನೊಂದ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಮೈಸೂರಿನ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಸರ್ಕಾರ ಕೂಡಲೇ ಇತ್ತ ಗಮನೆ ಸೆಳೆಯಬೇಕೆಂದು ಆಗ್ರಹಿಸಲಾಗಿದೆ.

ಕೋವಿಡ್ ನಿಯಂತ್ರಣದ ತುರ್ತು ಕೆಲಸಗಳಲ್ಲಿ ಜಿಲ್ಲಾಡಳಿತ ಮುಳುಗಿ ಹೋಗಿದ್ದರಿಂದ ನಾವು ಇಷ್ಟು ಕಾಲ ಸಹನೆಯಿಂದ ಕಾದಿದ್ದೇವೆ. ಇನ್ನಾದರೂ ವಿಳಂಬ ಮಾಡದೆ ತಕ್ಷಣವೇ ನಮಗೆ ಪುನರ್ವಸತಿ ಒದಗಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇನ್ನು ಒಂದು ತಿಂಗಳ ಒಳಗೆ ಮನೆಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದೇ ಹೋದಲ್ಲಿ ನೆರೆ ಸಂತ್ರಸ್ತರ ಕುಟುಂಬಗಳ ಸಮೇತ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ರವಿ ಆಗ್ರಹಿಸಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ಸಂತ್ರಸ್ತರಾದ ಚೆಲುವಿ, ಪದ್ಮ, ಸತ್ಯಮೂರ್ತಿ ಮತ್ತು ಎಸ್‌ಯುಸಿಐನ ಮುಖಂಡರಾದ ಚಂದ್ರಶೇಖರ್ ಮೇಟಿ, ಸುನೀಲ್ ಟಿ ಆರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...