Homeಚಳವಳಿನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ಒಂದು ತಿಂಗಳೊಳಗೆ ಮನೆ ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದಿದ್ದಲ್ಲಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು...

- Advertisement -
- Advertisement -

ಇದೇ ಜುಲೈ 26ಕ್ಕೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 2 ವರ್ಷ ತುಂಬಿತ್ತು. ಈ ಸಂಭ್ರಮಕ್ಕಾಗಿ ಬಿಜೆಪಿಯು ಎರಡು ವರ್ಷದ ಸಾಧನೆಯ ಪುಸ್ತಕ ಹೊರತಂದಿತ್ತು. ಎಲ್ಲಾ ಪ್ರಮುಖ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡಿತ್ತು. ಅಲ್ಲದೇ ಎಲ್ಲಾ ವೆಬ್‌ಸೈಟ್‌ಗಳನ್ನು ತಲುಪುವುದಕ್ಕಾಗಿ ಕೋಟ್ಯಾಂತರ ರೂ ಖರ್ಚು ಮಾಡಿ ಗೂಗಲ್ ಜಾಹೀರಾತನ್ನು ಸಹ ನೀಡಿತ್ತು. ಆದರೆ ಈ ಜಾಹೀರಾತು ನೋಡಿದ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಿದರಹಳ್ಳಿ ಗ್ರಾಮದ ನೆರೆ ಸಂತ್ರಸ್ತರು ಕೆಂಡಾಮಂಡಲವಾಗಿದ್ದಾರೆ. ನೆರೆ ಬಂದು ಮನೆ ಕೊಚ್ಚಿ ಎರಡು ವರ್ಷವಾದರೂ ಯಾವುದೇ ಮನೆ ಪಡೆಯದ ಅವರು ಬೀದಿಯಲ್ಲಿದ್ದರೆ ಸರ್ಕಾರ ಮಾತ್ರ ಅವರಿಗೆ ಮನೆ ಕಟ್ಟಿಸಿಕೊಟ್ಟಿರುವುದಾಗಿ ದೊಡ್ಡ ದೊಡ್ಡ ಜಾಹೀರಾತು ಹಾಕಿಕೊಂಡಿರುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ.

2019ರ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾ ಮಳೆಯಿಂದಾಗಿ ಕಬಿನಿ ನದಿ ಪ್ರವಾಹದಿಂದಾಗಿ ಕಬಿನಿ ಜಲಾಶಯದ ಪಕ್ಕದಲ್ಲೇ ಇರುವ ಸರಗೂರು ತಾಲ್ಲೂಕಿನ ಬಿದರಹಳ್ಳಿ ಸರ್ಕಲ್ ಗ್ರಾಮದ ಮನೆಗಳು ಜಲಾವೃತವಾಗಿದ್ದವು. ಬಹುತೇಕ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಕುಸಿದು ಹಾನಿಗೊಳಗಾಗಿದ್ದು, ವಾಸಿಸಲು ಯೋಗ್ಯವಾಗಿಲ್ಲ. ಅಲ್ಲಿನ ಸಂತ್ರಸ್ತರಿಗೆ ಸ್ವಲ್ಪ ದಿನಗಳ ಮಟ್ಟಿಗೆ ಕಾಳಜಿ ಕೇಂದ್ರದಲ್ಲಿ ವಾಸದ ವ್ಯವಸ್ಥೆ ಮಾಡಲಾಗಿದ್ದರೂ ನಂತರ ಅಲ್ಲಿಂದಲೂ ಯಾವುದೇ ಪರಿಹಾರ ನೀಡದೇ ಖಾಲಿ ಮಾಡಿಸಲಾಯಿತು.

ಅಂದಿನ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಸತಿ ಸಚಿವರಾದ ವಿ.ಸೋಮಣ್ಣರವರು ಭೇಟಿ ನೀಡಿ, ತಗ್ಗಿನಲ್ಲಿರುವ ನಮ್ಮ ಊರನ್ನು ಸ್ಥಳಾಂತರಿಸಿ, ಮೂರು ತಿಂಗಳ ಒಳಗಾಗಿ 42 ಹೊಸ ಮನೆಗಳ ನಿರ್ಮಾಣ ಮಾಡಿಕೊಡುವುದಾಗಿ ಹೇಳಿ, ಪರ್ಯಾಯ ಜಾಗವನ್ನೂ ಗುರುತಿಸಿ ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಮ್ಮ ಬದುಕು ಅತಂತ್ರವಾಗಿದೆ. ಇದುವರೆಗೆ ನಮಗೆ ಯಾವುದೇ ಪರಿಹಾರವಾಗಲಿ, ಪುನರ್ವಸತಿಯಾಗಲಿ ದೊರಕಿಲ್ಲ. ಕಾಡುಪ್ರಾಣಿಗಳ, ಹಾವುಗಳ ಭಯದಿಂದ ಸಂಬಂಧಿಕರ ಮನೆಗಳಲ್ಲಿ ದಿನದೂಡುವಂತಾಗಿದೆ. ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದೇವೆ. ಮಳೆಯಿಂದ ರಕ್ಷಿಸಿಕೊಳ್ಳಲು ಟರ್ಪಾಲು, ಷೀಟಿನಂತಹ ತಾತ್ಕಾಲಿಕ ವ್ಯವಸ್ಥೆಯನ್ನೂ ನಾವೇ ಮಾಡಿಕೊಂಡಿದ್ದೇವೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

ಪತ್ರಿಕೆಗಳಲ್ಲಿ ಸರ್ಕಾರ ನೀಡಿರುವ ಜಾಹೀರಾತು

ಕಳೆದ ಎರಡು ವರ್ಷದ ಅವಧಿಯಲ್ಲಿ ನಾವು ಸಲ್ಲಿಸಿದ ಮನವಿಗಳಿಗೆ ಲೆಕ್ಕವಿಲ್ಲ. ಸರಗೂರಿನ ತಹಶೀಲ್ದಾರರಿಗೆ, ಅಂದಿನ ಜಿಲ್ಲಾಧಿಕಾರಿಗಳಿಗೆ, ಸ್ಥಳೀಯ ಶಾಸಕರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಕಳೆದ ವರ್ಷ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದೇವೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿ ಸಮಸ್ಯೆ ಹೇಳಿಕೊಂಡಿದ್ದೇವೆ. ಅಂದಿನ ನೀರಾವರಿ ಸಚಿವರಿಗೂ ಅಹವಾಲು ಸಲ್ಲಿಸಿದ್ದೇವೆ. ಆದರೆ ಇದುವರೆಗೆ ನಮಗೆ ಮನೆ ಸಿಕ್ಕಿಲ್ಲ. ನಮ್ಮ ಪುನರ್ವಸತಿಗೆ ಗುರುತಿಸಿರುವ ಕಪಿಲೇಶ್ವರ ಕಾಲೊನಿಯ ಜಾಗ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದು, ಅದು ಕಂದಾಯ ಇಲಾಖೆಗೆ ಹಸ್ತಾಂತರಗೊಳ್ಳದಿರುವುದರಿಂದ ನಾವು ಕಷ್ಟ ಅನುಭವಿಸಬೇಕಾಗಿದೆ ಎಂದು ಸಂತ್ರಸ್ತರು ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ಕಬಿನಿ ಅಣೆಕಟ್ಟು ಕಟ್ಟಲು ಆಗಮಿಸಿದ್ದ ನಮ್ಮ ಪೂರ್ವಜರು 50 ವರ್ಷಗಳ ಹಿಂದೆ ಇಲ್ಲೇ ನೆಲೆಸಿದರು. ನೀರಾವರಿ ಯೋಜನೆಗೆ ಬೆವರು ಸುರಿಸಿದ ನಮ್ಮ ಕುಟುಂಬಗಳನ್ನು ನೀರಾವರಿ ಇಲಾಖೆಯೇ ಅಕ್ಷರಶ ನಡುನೀರಿನಲ್ಲಿ ಕೈಬಿಟ್ಟಿದೆ. ಕೂಲಿಕಾರರಾದ ನಾವು ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಸರಿಯಾದ ಉದ್ಯೋಗವೂ ಲಭಿಸದೆ ಕಂಗಾಲಾಗಿದ್ದೇವೆ.
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಗಳ ಬಗ್ಗೆ ಇದೇ ಜುಲೈ 26ರಂದು ಪ್ರಕಟವಾಗಿದ್ದ ಜಾಹೀರಾತಿನಲ್ಲಿ ನೆರೆ ಸಂತ್ರಸ್ತರ ಪರಿಹಾರ, ಪುನರ್ವಸತಿ ಪೂರ್ಣಗೊಂಡಿರುವ ಊರುಗಳ ಪಟ್ಟಿಯಲ್ಲಿ ಬಿದರಹಳ್ಳಿಯ ಹೆಸರೂ ಇರುವುದನ್ನು ಕಂಡು ನಮಗೆ ದಿಗ್ಭ್ರಮೆಯಾಗಿದೆ” ಎನ್ನುತ್ತಾರೆ ನೆರೆಯಿಂದಾಗಿ ಮನೆ ಕಳೆದುಕೊಂಡ ಚೆಲುವಿ.

ಬಿದರಹಳ್ಳಿ ಪಕ್ಕದ ಕಪಿಲೇಶ್ವರ ಕಾಲೊನಿಯಲ್ಲಿ ಪುನರ್ವಸತಿಯ 42 ಮನೆಗಳ ಕಾಮಗಾರಿಯನ್ನು ತಕ್ಷಣವೇ ಆರಂಭಿಸಿ ಆರು ತಿಂಗಳೊಳಗೆ ಮನೆ ಕಟ್ಟಿಕೊಡಬೇಕು. ನೊಂದ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಮೈಸೂರಿನ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಸರ್ಕಾರ ಕೂಡಲೇ ಇತ್ತ ಗಮನೆ ಸೆಳೆಯಬೇಕೆಂದು ಆಗ್ರಹಿಸಲಾಗಿದೆ.

ಕೋವಿಡ್ ನಿಯಂತ್ರಣದ ತುರ್ತು ಕೆಲಸಗಳಲ್ಲಿ ಜಿಲ್ಲಾಡಳಿತ ಮುಳುಗಿ ಹೋಗಿದ್ದರಿಂದ ನಾವು ಇಷ್ಟು ಕಾಲ ಸಹನೆಯಿಂದ ಕಾದಿದ್ದೇವೆ. ಇನ್ನಾದರೂ ವಿಳಂಬ ಮಾಡದೆ ತಕ್ಷಣವೇ ನಮಗೆ ಪುನರ್ವಸತಿ ಒದಗಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇನ್ನು ಒಂದು ತಿಂಗಳ ಒಳಗೆ ಮನೆಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದೇ ಹೋದಲ್ಲಿ ನೆರೆ ಸಂತ್ರಸ್ತರ ಕುಟುಂಬಗಳ ಸಮೇತ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ರವಿ ಆಗ್ರಹಿಸಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ಸಂತ್ರಸ್ತರಾದ ಚೆಲುವಿ, ಪದ್ಮ, ಸತ್ಯಮೂರ್ತಿ ಮತ್ತು ಎಸ್‌ಯುಸಿಐನ ಮುಖಂಡರಾದ ಚಂದ್ರಶೇಖರ್ ಮೇಟಿ, ಸುನೀಲ್ ಟಿ ಆರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...