Homeಚಳವಳಿನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ಒಂದು ತಿಂಗಳೊಳಗೆ ಮನೆ ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದಿದ್ದಲ್ಲಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು...

- Advertisement -
- Advertisement -

ಇದೇ ಜುಲೈ 26ಕ್ಕೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 2 ವರ್ಷ ತುಂಬಿತ್ತು. ಈ ಸಂಭ್ರಮಕ್ಕಾಗಿ ಬಿಜೆಪಿಯು ಎರಡು ವರ್ಷದ ಸಾಧನೆಯ ಪುಸ್ತಕ ಹೊರತಂದಿತ್ತು. ಎಲ್ಲಾ ಪ್ರಮುಖ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡಿತ್ತು. ಅಲ್ಲದೇ ಎಲ್ಲಾ ವೆಬ್‌ಸೈಟ್‌ಗಳನ್ನು ತಲುಪುವುದಕ್ಕಾಗಿ ಕೋಟ್ಯಾಂತರ ರೂ ಖರ್ಚು ಮಾಡಿ ಗೂಗಲ್ ಜಾಹೀರಾತನ್ನು ಸಹ ನೀಡಿತ್ತು. ಆದರೆ ಈ ಜಾಹೀರಾತು ನೋಡಿದ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಿದರಹಳ್ಳಿ ಗ್ರಾಮದ ನೆರೆ ಸಂತ್ರಸ್ತರು ಕೆಂಡಾಮಂಡಲವಾಗಿದ್ದಾರೆ. ನೆರೆ ಬಂದು ಮನೆ ಕೊಚ್ಚಿ ಎರಡು ವರ್ಷವಾದರೂ ಯಾವುದೇ ಮನೆ ಪಡೆಯದ ಅವರು ಬೀದಿಯಲ್ಲಿದ್ದರೆ ಸರ್ಕಾರ ಮಾತ್ರ ಅವರಿಗೆ ಮನೆ ಕಟ್ಟಿಸಿಕೊಟ್ಟಿರುವುದಾಗಿ ದೊಡ್ಡ ದೊಡ್ಡ ಜಾಹೀರಾತು ಹಾಕಿಕೊಂಡಿರುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ.

2019ರ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾ ಮಳೆಯಿಂದಾಗಿ ಕಬಿನಿ ನದಿ ಪ್ರವಾಹದಿಂದಾಗಿ ಕಬಿನಿ ಜಲಾಶಯದ ಪಕ್ಕದಲ್ಲೇ ಇರುವ ಸರಗೂರು ತಾಲ್ಲೂಕಿನ ಬಿದರಹಳ್ಳಿ ಸರ್ಕಲ್ ಗ್ರಾಮದ ಮನೆಗಳು ಜಲಾವೃತವಾಗಿದ್ದವು. ಬಹುತೇಕ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಕುಸಿದು ಹಾನಿಗೊಳಗಾಗಿದ್ದು, ವಾಸಿಸಲು ಯೋಗ್ಯವಾಗಿಲ್ಲ. ಅಲ್ಲಿನ ಸಂತ್ರಸ್ತರಿಗೆ ಸ್ವಲ್ಪ ದಿನಗಳ ಮಟ್ಟಿಗೆ ಕಾಳಜಿ ಕೇಂದ್ರದಲ್ಲಿ ವಾಸದ ವ್ಯವಸ್ಥೆ ಮಾಡಲಾಗಿದ್ದರೂ ನಂತರ ಅಲ್ಲಿಂದಲೂ ಯಾವುದೇ ಪರಿಹಾರ ನೀಡದೇ ಖಾಲಿ ಮಾಡಿಸಲಾಯಿತು.

ಅಂದಿನ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಸತಿ ಸಚಿವರಾದ ವಿ.ಸೋಮಣ್ಣರವರು ಭೇಟಿ ನೀಡಿ, ತಗ್ಗಿನಲ್ಲಿರುವ ನಮ್ಮ ಊರನ್ನು ಸ್ಥಳಾಂತರಿಸಿ, ಮೂರು ತಿಂಗಳ ಒಳಗಾಗಿ 42 ಹೊಸ ಮನೆಗಳ ನಿರ್ಮಾಣ ಮಾಡಿಕೊಡುವುದಾಗಿ ಹೇಳಿ, ಪರ್ಯಾಯ ಜಾಗವನ್ನೂ ಗುರುತಿಸಿ ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಮ್ಮ ಬದುಕು ಅತಂತ್ರವಾಗಿದೆ. ಇದುವರೆಗೆ ನಮಗೆ ಯಾವುದೇ ಪರಿಹಾರವಾಗಲಿ, ಪುನರ್ವಸತಿಯಾಗಲಿ ದೊರಕಿಲ್ಲ. ಕಾಡುಪ್ರಾಣಿಗಳ, ಹಾವುಗಳ ಭಯದಿಂದ ಸಂಬಂಧಿಕರ ಮನೆಗಳಲ್ಲಿ ದಿನದೂಡುವಂತಾಗಿದೆ. ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದೇವೆ. ಮಳೆಯಿಂದ ರಕ್ಷಿಸಿಕೊಳ್ಳಲು ಟರ್ಪಾಲು, ಷೀಟಿನಂತಹ ತಾತ್ಕಾಲಿಕ ವ್ಯವಸ್ಥೆಯನ್ನೂ ನಾವೇ ಮಾಡಿಕೊಂಡಿದ್ದೇವೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

ಪತ್ರಿಕೆಗಳಲ್ಲಿ ಸರ್ಕಾರ ನೀಡಿರುವ ಜಾಹೀರಾತು

ಕಳೆದ ಎರಡು ವರ್ಷದ ಅವಧಿಯಲ್ಲಿ ನಾವು ಸಲ್ಲಿಸಿದ ಮನವಿಗಳಿಗೆ ಲೆಕ್ಕವಿಲ್ಲ. ಸರಗೂರಿನ ತಹಶೀಲ್ದಾರರಿಗೆ, ಅಂದಿನ ಜಿಲ್ಲಾಧಿಕಾರಿಗಳಿಗೆ, ಸ್ಥಳೀಯ ಶಾಸಕರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಕಳೆದ ವರ್ಷ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದೇವೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿ ಸಮಸ್ಯೆ ಹೇಳಿಕೊಂಡಿದ್ದೇವೆ. ಅಂದಿನ ನೀರಾವರಿ ಸಚಿವರಿಗೂ ಅಹವಾಲು ಸಲ್ಲಿಸಿದ್ದೇವೆ. ಆದರೆ ಇದುವರೆಗೆ ನಮಗೆ ಮನೆ ಸಿಕ್ಕಿಲ್ಲ. ನಮ್ಮ ಪುನರ್ವಸತಿಗೆ ಗುರುತಿಸಿರುವ ಕಪಿಲೇಶ್ವರ ಕಾಲೊನಿಯ ಜಾಗ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದು, ಅದು ಕಂದಾಯ ಇಲಾಖೆಗೆ ಹಸ್ತಾಂತರಗೊಳ್ಳದಿರುವುದರಿಂದ ನಾವು ಕಷ್ಟ ಅನುಭವಿಸಬೇಕಾಗಿದೆ ಎಂದು ಸಂತ್ರಸ್ತರು ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ಕಬಿನಿ ಅಣೆಕಟ್ಟು ಕಟ್ಟಲು ಆಗಮಿಸಿದ್ದ ನಮ್ಮ ಪೂರ್ವಜರು 50 ವರ್ಷಗಳ ಹಿಂದೆ ಇಲ್ಲೇ ನೆಲೆಸಿದರು. ನೀರಾವರಿ ಯೋಜನೆಗೆ ಬೆವರು ಸುರಿಸಿದ ನಮ್ಮ ಕುಟುಂಬಗಳನ್ನು ನೀರಾವರಿ ಇಲಾಖೆಯೇ ಅಕ್ಷರಶ ನಡುನೀರಿನಲ್ಲಿ ಕೈಬಿಟ್ಟಿದೆ. ಕೂಲಿಕಾರರಾದ ನಾವು ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಸರಿಯಾದ ಉದ್ಯೋಗವೂ ಲಭಿಸದೆ ಕಂಗಾಲಾಗಿದ್ದೇವೆ.
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಗಳ ಬಗ್ಗೆ ಇದೇ ಜುಲೈ 26ರಂದು ಪ್ರಕಟವಾಗಿದ್ದ ಜಾಹೀರಾತಿನಲ್ಲಿ ನೆರೆ ಸಂತ್ರಸ್ತರ ಪರಿಹಾರ, ಪುನರ್ವಸತಿ ಪೂರ್ಣಗೊಂಡಿರುವ ಊರುಗಳ ಪಟ್ಟಿಯಲ್ಲಿ ಬಿದರಹಳ್ಳಿಯ ಹೆಸರೂ ಇರುವುದನ್ನು ಕಂಡು ನಮಗೆ ದಿಗ್ಭ್ರಮೆಯಾಗಿದೆ” ಎನ್ನುತ್ತಾರೆ ನೆರೆಯಿಂದಾಗಿ ಮನೆ ಕಳೆದುಕೊಂಡ ಚೆಲುವಿ.

ಬಿದರಹಳ್ಳಿ ಪಕ್ಕದ ಕಪಿಲೇಶ್ವರ ಕಾಲೊನಿಯಲ್ಲಿ ಪುನರ್ವಸತಿಯ 42 ಮನೆಗಳ ಕಾಮಗಾರಿಯನ್ನು ತಕ್ಷಣವೇ ಆರಂಭಿಸಿ ಆರು ತಿಂಗಳೊಳಗೆ ಮನೆ ಕಟ್ಟಿಕೊಡಬೇಕು. ನೊಂದ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಮೈಸೂರಿನ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಸರ್ಕಾರ ಕೂಡಲೇ ಇತ್ತ ಗಮನೆ ಸೆಳೆಯಬೇಕೆಂದು ಆಗ್ರಹಿಸಲಾಗಿದೆ.

ಕೋವಿಡ್ ನಿಯಂತ್ರಣದ ತುರ್ತು ಕೆಲಸಗಳಲ್ಲಿ ಜಿಲ್ಲಾಡಳಿತ ಮುಳುಗಿ ಹೋಗಿದ್ದರಿಂದ ನಾವು ಇಷ್ಟು ಕಾಲ ಸಹನೆಯಿಂದ ಕಾದಿದ್ದೇವೆ. ಇನ್ನಾದರೂ ವಿಳಂಬ ಮಾಡದೆ ತಕ್ಷಣವೇ ನಮಗೆ ಪುನರ್ವಸತಿ ಒದಗಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇನ್ನು ಒಂದು ತಿಂಗಳ ಒಳಗೆ ಮನೆಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದೇ ಹೋದಲ್ಲಿ ನೆರೆ ಸಂತ್ರಸ್ತರ ಕುಟುಂಬಗಳ ಸಮೇತ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ರವಿ ಆಗ್ರಹಿಸಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ಸಂತ್ರಸ್ತರಾದ ಚೆಲುವಿ, ಪದ್ಮ, ಸತ್ಯಮೂರ್ತಿ ಮತ್ತು ಎಸ್‌ಯುಸಿಐನ ಮುಖಂಡರಾದ ಚಂದ್ರಶೇಖರ್ ಮೇಟಿ, ಸುನೀಲ್ ಟಿ ಆರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...