Homeಚಳವಳಿನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ಒಂದು ತಿಂಗಳೊಳಗೆ ಮನೆ ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದಿದ್ದಲ್ಲಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು...

- Advertisement -
- Advertisement -

ಇದೇ ಜುಲೈ 26ಕ್ಕೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 2 ವರ್ಷ ತುಂಬಿತ್ತು. ಈ ಸಂಭ್ರಮಕ್ಕಾಗಿ ಬಿಜೆಪಿಯು ಎರಡು ವರ್ಷದ ಸಾಧನೆಯ ಪುಸ್ತಕ ಹೊರತಂದಿತ್ತು. ಎಲ್ಲಾ ಪ್ರಮುಖ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡಿತ್ತು. ಅಲ್ಲದೇ ಎಲ್ಲಾ ವೆಬ್‌ಸೈಟ್‌ಗಳನ್ನು ತಲುಪುವುದಕ್ಕಾಗಿ ಕೋಟ್ಯಾಂತರ ರೂ ಖರ್ಚು ಮಾಡಿ ಗೂಗಲ್ ಜಾಹೀರಾತನ್ನು ಸಹ ನೀಡಿತ್ತು. ಆದರೆ ಈ ಜಾಹೀರಾತು ನೋಡಿದ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಿದರಹಳ್ಳಿ ಗ್ರಾಮದ ನೆರೆ ಸಂತ್ರಸ್ತರು ಕೆಂಡಾಮಂಡಲವಾಗಿದ್ದಾರೆ. ನೆರೆ ಬಂದು ಮನೆ ಕೊಚ್ಚಿ ಎರಡು ವರ್ಷವಾದರೂ ಯಾವುದೇ ಮನೆ ಪಡೆಯದ ಅವರು ಬೀದಿಯಲ್ಲಿದ್ದರೆ ಸರ್ಕಾರ ಮಾತ್ರ ಅವರಿಗೆ ಮನೆ ಕಟ್ಟಿಸಿಕೊಟ್ಟಿರುವುದಾಗಿ ದೊಡ್ಡ ದೊಡ್ಡ ಜಾಹೀರಾತು ಹಾಕಿಕೊಂಡಿರುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ.

2019ರ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾ ಮಳೆಯಿಂದಾಗಿ ಕಬಿನಿ ನದಿ ಪ್ರವಾಹದಿಂದಾಗಿ ಕಬಿನಿ ಜಲಾಶಯದ ಪಕ್ಕದಲ್ಲೇ ಇರುವ ಸರಗೂರು ತಾಲ್ಲೂಕಿನ ಬಿದರಹಳ್ಳಿ ಸರ್ಕಲ್ ಗ್ರಾಮದ ಮನೆಗಳು ಜಲಾವೃತವಾಗಿದ್ದವು. ಬಹುತೇಕ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಕುಸಿದು ಹಾನಿಗೊಳಗಾಗಿದ್ದು, ವಾಸಿಸಲು ಯೋಗ್ಯವಾಗಿಲ್ಲ. ಅಲ್ಲಿನ ಸಂತ್ರಸ್ತರಿಗೆ ಸ್ವಲ್ಪ ದಿನಗಳ ಮಟ್ಟಿಗೆ ಕಾಳಜಿ ಕೇಂದ್ರದಲ್ಲಿ ವಾಸದ ವ್ಯವಸ್ಥೆ ಮಾಡಲಾಗಿದ್ದರೂ ನಂತರ ಅಲ್ಲಿಂದಲೂ ಯಾವುದೇ ಪರಿಹಾರ ನೀಡದೇ ಖಾಲಿ ಮಾಡಿಸಲಾಯಿತು.

ಅಂದಿನ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಸತಿ ಸಚಿವರಾದ ವಿ.ಸೋಮಣ್ಣರವರು ಭೇಟಿ ನೀಡಿ, ತಗ್ಗಿನಲ್ಲಿರುವ ನಮ್ಮ ಊರನ್ನು ಸ್ಥಳಾಂತರಿಸಿ, ಮೂರು ತಿಂಗಳ ಒಳಗಾಗಿ 42 ಹೊಸ ಮನೆಗಳ ನಿರ್ಮಾಣ ಮಾಡಿಕೊಡುವುದಾಗಿ ಹೇಳಿ, ಪರ್ಯಾಯ ಜಾಗವನ್ನೂ ಗುರುತಿಸಿ ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಮ್ಮ ಬದುಕು ಅತಂತ್ರವಾಗಿದೆ. ಇದುವರೆಗೆ ನಮಗೆ ಯಾವುದೇ ಪರಿಹಾರವಾಗಲಿ, ಪುನರ್ವಸತಿಯಾಗಲಿ ದೊರಕಿಲ್ಲ. ಕಾಡುಪ್ರಾಣಿಗಳ, ಹಾವುಗಳ ಭಯದಿಂದ ಸಂಬಂಧಿಕರ ಮನೆಗಳಲ್ಲಿ ದಿನದೂಡುವಂತಾಗಿದೆ. ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದೇವೆ. ಮಳೆಯಿಂದ ರಕ್ಷಿಸಿಕೊಳ್ಳಲು ಟರ್ಪಾಲು, ಷೀಟಿನಂತಹ ತಾತ್ಕಾಲಿಕ ವ್ಯವಸ್ಥೆಯನ್ನೂ ನಾವೇ ಮಾಡಿಕೊಂಡಿದ್ದೇವೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

ಪತ್ರಿಕೆಗಳಲ್ಲಿ ಸರ್ಕಾರ ನೀಡಿರುವ ಜಾಹೀರಾತು

ಕಳೆದ ಎರಡು ವರ್ಷದ ಅವಧಿಯಲ್ಲಿ ನಾವು ಸಲ್ಲಿಸಿದ ಮನವಿಗಳಿಗೆ ಲೆಕ್ಕವಿಲ್ಲ. ಸರಗೂರಿನ ತಹಶೀಲ್ದಾರರಿಗೆ, ಅಂದಿನ ಜಿಲ್ಲಾಧಿಕಾರಿಗಳಿಗೆ, ಸ್ಥಳೀಯ ಶಾಸಕರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಕಳೆದ ವರ್ಷ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದೇವೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿ ಸಮಸ್ಯೆ ಹೇಳಿಕೊಂಡಿದ್ದೇವೆ. ಅಂದಿನ ನೀರಾವರಿ ಸಚಿವರಿಗೂ ಅಹವಾಲು ಸಲ್ಲಿಸಿದ್ದೇವೆ. ಆದರೆ ಇದುವರೆಗೆ ನಮಗೆ ಮನೆ ಸಿಕ್ಕಿಲ್ಲ. ನಮ್ಮ ಪುನರ್ವಸತಿಗೆ ಗುರುತಿಸಿರುವ ಕಪಿಲೇಶ್ವರ ಕಾಲೊನಿಯ ಜಾಗ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದು, ಅದು ಕಂದಾಯ ಇಲಾಖೆಗೆ ಹಸ್ತಾಂತರಗೊಳ್ಳದಿರುವುದರಿಂದ ನಾವು ಕಷ್ಟ ಅನುಭವಿಸಬೇಕಾಗಿದೆ ಎಂದು ಸಂತ್ರಸ್ತರು ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ಕಬಿನಿ ಅಣೆಕಟ್ಟು ಕಟ್ಟಲು ಆಗಮಿಸಿದ್ದ ನಮ್ಮ ಪೂರ್ವಜರು 50 ವರ್ಷಗಳ ಹಿಂದೆ ಇಲ್ಲೇ ನೆಲೆಸಿದರು. ನೀರಾವರಿ ಯೋಜನೆಗೆ ಬೆವರು ಸುರಿಸಿದ ನಮ್ಮ ಕುಟುಂಬಗಳನ್ನು ನೀರಾವರಿ ಇಲಾಖೆಯೇ ಅಕ್ಷರಶ ನಡುನೀರಿನಲ್ಲಿ ಕೈಬಿಟ್ಟಿದೆ. ಕೂಲಿಕಾರರಾದ ನಾವು ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಸರಿಯಾದ ಉದ್ಯೋಗವೂ ಲಭಿಸದೆ ಕಂಗಾಲಾಗಿದ್ದೇವೆ.
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಗಳ ಬಗ್ಗೆ ಇದೇ ಜುಲೈ 26ರಂದು ಪ್ರಕಟವಾಗಿದ್ದ ಜಾಹೀರಾತಿನಲ್ಲಿ ನೆರೆ ಸಂತ್ರಸ್ತರ ಪರಿಹಾರ, ಪುನರ್ವಸತಿ ಪೂರ್ಣಗೊಂಡಿರುವ ಊರುಗಳ ಪಟ್ಟಿಯಲ್ಲಿ ಬಿದರಹಳ್ಳಿಯ ಹೆಸರೂ ಇರುವುದನ್ನು ಕಂಡು ನಮಗೆ ದಿಗ್ಭ್ರಮೆಯಾಗಿದೆ” ಎನ್ನುತ್ತಾರೆ ನೆರೆಯಿಂದಾಗಿ ಮನೆ ಕಳೆದುಕೊಂಡ ಚೆಲುವಿ.

ಬಿದರಹಳ್ಳಿ ಪಕ್ಕದ ಕಪಿಲೇಶ್ವರ ಕಾಲೊನಿಯಲ್ಲಿ ಪುನರ್ವಸತಿಯ 42 ಮನೆಗಳ ಕಾಮಗಾರಿಯನ್ನು ತಕ್ಷಣವೇ ಆರಂಭಿಸಿ ಆರು ತಿಂಗಳೊಳಗೆ ಮನೆ ಕಟ್ಟಿಕೊಡಬೇಕು. ನೊಂದ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಮೈಸೂರಿನ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಸರ್ಕಾರ ಕೂಡಲೇ ಇತ್ತ ಗಮನೆ ಸೆಳೆಯಬೇಕೆಂದು ಆಗ್ರಹಿಸಲಾಗಿದೆ.

ಕೋವಿಡ್ ನಿಯಂತ್ರಣದ ತುರ್ತು ಕೆಲಸಗಳಲ್ಲಿ ಜಿಲ್ಲಾಡಳಿತ ಮುಳುಗಿ ಹೋಗಿದ್ದರಿಂದ ನಾವು ಇಷ್ಟು ಕಾಲ ಸಹನೆಯಿಂದ ಕಾದಿದ್ದೇವೆ. ಇನ್ನಾದರೂ ವಿಳಂಬ ಮಾಡದೆ ತಕ್ಷಣವೇ ನಮಗೆ ಪುನರ್ವಸತಿ ಒದಗಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇನ್ನು ಒಂದು ತಿಂಗಳ ಒಳಗೆ ಮನೆಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದೇ ಹೋದಲ್ಲಿ ನೆರೆ ಸಂತ್ರಸ್ತರ ಕುಟುಂಬಗಳ ಸಮೇತ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ರವಿ ಆಗ್ರಹಿಸಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ಸಂತ್ರಸ್ತರಾದ ಚೆಲುವಿ, ಪದ್ಮ, ಸತ್ಯಮೂರ್ತಿ ಮತ್ತು ಎಸ್‌ಯುಸಿಐನ ಮುಖಂಡರಾದ ಚಂದ್ರಶೇಖರ್ ಮೇಟಿ, ಸುನೀಲ್ ಟಿ ಆರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....