Homeಚಳವಳಿನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ಒಂದು ತಿಂಗಳೊಳಗೆ ಮನೆ ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದಿದ್ದಲ್ಲಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು...

- Advertisement -
- Advertisement -

ಇದೇ ಜುಲೈ 26ಕ್ಕೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 2 ವರ್ಷ ತುಂಬಿತ್ತು. ಈ ಸಂಭ್ರಮಕ್ಕಾಗಿ ಬಿಜೆಪಿಯು ಎರಡು ವರ್ಷದ ಸಾಧನೆಯ ಪುಸ್ತಕ ಹೊರತಂದಿತ್ತು. ಎಲ್ಲಾ ಪ್ರಮುಖ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡಿತ್ತು. ಅಲ್ಲದೇ ಎಲ್ಲಾ ವೆಬ್‌ಸೈಟ್‌ಗಳನ್ನು ತಲುಪುವುದಕ್ಕಾಗಿ ಕೋಟ್ಯಾಂತರ ರೂ ಖರ್ಚು ಮಾಡಿ ಗೂಗಲ್ ಜಾಹೀರಾತನ್ನು ಸಹ ನೀಡಿತ್ತು. ಆದರೆ ಈ ಜಾಹೀರಾತು ನೋಡಿದ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಿದರಹಳ್ಳಿ ಗ್ರಾಮದ ನೆರೆ ಸಂತ್ರಸ್ತರು ಕೆಂಡಾಮಂಡಲವಾಗಿದ್ದಾರೆ. ನೆರೆ ಬಂದು ಮನೆ ಕೊಚ್ಚಿ ಎರಡು ವರ್ಷವಾದರೂ ಯಾವುದೇ ಮನೆ ಪಡೆಯದ ಅವರು ಬೀದಿಯಲ್ಲಿದ್ದರೆ ಸರ್ಕಾರ ಮಾತ್ರ ಅವರಿಗೆ ಮನೆ ಕಟ್ಟಿಸಿಕೊಟ್ಟಿರುವುದಾಗಿ ದೊಡ್ಡ ದೊಡ್ಡ ಜಾಹೀರಾತು ಹಾಕಿಕೊಂಡಿರುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ.

2019ರ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾ ಮಳೆಯಿಂದಾಗಿ ಕಬಿನಿ ನದಿ ಪ್ರವಾಹದಿಂದಾಗಿ ಕಬಿನಿ ಜಲಾಶಯದ ಪಕ್ಕದಲ್ಲೇ ಇರುವ ಸರಗೂರು ತಾಲ್ಲೂಕಿನ ಬಿದರಹಳ್ಳಿ ಸರ್ಕಲ್ ಗ್ರಾಮದ ಮನೆಗಳು ಜಲಾವೃತವಾಗಿದ್ದವು. ಬಹುತೇಕ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಕುಸಿದು ಹಾನಿಗೊಳಗಾಗಿದ್ದು, ವಾಸಿಸಲು ಯೋಗ್ಯವಾಗಿಲ್ಲ. ಅಲ್ಲಿನ ಸಂತ್ರಸ್ತರಿಗೆ ಸ್ವಲ್ಪ ದಿನಗಳ ಮಟ್ಟಿಗೆ ಕಾಳಜಿ ಕೇಂದ್ರದಲ್ಲಿ ವಾಸದ ವ್ಯವಸ್ಥೆ ಮಾಡಲಾಗಿದ್ದರೂ ನಂತರ ಅಲ್ಲಿಂದಲೂ ಯಾವುದೇ ಪರಿಹಾರ ನೀಡದೇ ಖಾಲಿ ಮಾಡಿಸಲಾಯಿತು.

ಅಂದಿನ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಸತಿ ಸಚಿವರಾದ ವಿ.ಸೋಮಣ್ಣರವರು ಭೇಟಿ ನೀಡಿ, ತಗ್ಗಿನಲ್ಲಿರುವ ನಮ್ಮ ಊರನ್ನು ಸ್ಥಳಾಂತರಿಸಿ, ಮೂರು ತಿಂಗಳ ಒಳಗಾಗಿ 42 ಹೊಸ ಮನೆಗಳ ನಿರ್ಮಾಣ ಮಾಡಿಕೊಡುವುದಾಗಿ ಹೇಳಿ, ಪರ್ಯಾಯ ಜಾಗವನ್ನೂ ಗುರುತಿಸಿ ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಮ್ಮ ಬದುಕು ಅತಂತ್ರವಾಗಿದೆ. ಇದುವರೆಗೆ ನಮಗೆ ಯಾವುದೇ ಪರಿಹಾರವಾಗಲಿ, ಪುನರ್ವಸತಿಯಾಗಲಿ ದೊರಕಿಲ್ಲ. ಕಾಡುಪ್ರಾಣಿಗಳ, ಹಾವುಗಳ ಭಯದಿಂದ ಸಂಬಂಧಿಕರ ಮನೆಗಳಲ್ಲಿ ದಿನದೂಡುವಂತಾಗಿದೆ. ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದೇವೆ. ಮಳೆಯಿಂದ ರಕ್ಷಿಸಿಕೊಳ್ಳಲು ಟರ್ಪಾಲು, ಷೀಟಿನಂತಹ ತಾತ್ಕಾಲಿಕ ವ್ಯವಸ್ಥೆಯನ್ನೂ ನಾವೇ ಮಾಡಿಕೊಂಡಿದ್ದೇವೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

ಪತ್ರಿಕೆಗಳಲ್ಲಿ ಸರ್ಕಾರ ನೀಡಿರುವ ಜಾಹೀರಾತು

ಕಳೆದ ಎರಡು ವರ್ಷದ ಅವಧಿಯಲ್ಲಿ ನಾವು ಸಲ್ಲಿಸಿದ ಮನವಿಗಳಿಗೆ ಲೆಕ್ಕವಿಲ್ಲ. ಸರಗೂರಿನ ತಹಶೀಲ್ದಾರರಿಗೆ, ಅಂದಿನ ಜಿಲ್ಲಾಧಿಕಾರಿಗಳಿಗೆ, ಸ್ಥಳೀಯ ಶಾಸಕರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಕಳೆದ ವರ್ಷ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದೇವೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿ ಸಮಸ್ಯೆ ಹೇಳಿಕೊಂಡಿದ್ದೇವೆ. ಅಂದಿನ ನೀರಾವರಿ ಸಚಿವರಿಗೂ ಅಹವಾಲು ಸಲ್ಲಿಸಿದ್ದೇವೆ. ಆದರೆ ಇದುವರೆಗೆ ನಮಗೆ ಮನೆ ಸಿಕ್ಕಿಲ್ಲ. ನಮ್ಮ ಪುನರ್ವಸತಿಗೆ ಗುರುತಿಸಿರುವ ಕಪಿಲೇಶ್ವರ ಕಾಲೊನಿಯ ಜಾಗ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದು, ಅದು ಕಂದಾಯ ಇಲಾಖೆಗೆ ಹಸ್ತಾಂತರಗೊಳ್ಳದಿರುವುದರಿಂದ ನಾವು ಕಷ್ಟ ಅನುಭವಿಸಬೇಕಾಗಿದೆ ಎಂದು ಸಂತ್ರಸ್ತರು ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ಕಬಿನಿ ಅಣೆಕಟ್ಟು ಕಟ್ಟಲು ಆಗಮಿಸಿದ್ದ ನಮ್ಮ ಪೂರ್ವಜರು 50 ವರ್ಷಗಳ ಹಿಂದೆ ಇಲ್ಲೇ ನೆಲೆಸಿದರು. ನೀರಾವರಿ ಯೋಜನೆಗೆ ಬೆವರು ಸುರಿಸಿದ ನಮ್ಮ ಕುಟುಂಬಗಳನ್ನು ನೀರಾವರಿ ಇಲಾಖೆಯೇ ಅಕ್ಷರಶ ನಡುನೀರಿನಲ್ಲಿ ಕೈಬಿಟ್ಟಿದೆ. ಕೂಲಿಕಾರರಾದ ನಾವು ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಸರಿಯಾದ ಉದ್ಯೋಗವೂ ಲಭಿಸದೆ ಕಂಗಾಲಾಗಿದ್ದೇವೆ.
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಗಳ ಬಗ್ಗೆ ಇದೇ ಜುಲೈ 26ರಂದು ಪ್ರಕಟವಾಗಿದ್ದ ಜಾಹೀರಾತಿನಲ್ಲಿ ನೆರೆ ಸಂತ್ರಸ್ತರ ಪರಿಹಾರ, ಪುನರ್ವಸತಿ ಪೂರ್ಣಗೊಂಡಿರುವ ಊರುಗಳ ಪಟ್ಟಿಯಲ್ಲಿ ಬಿದರಹಳ್ಳಿಯ ಹೆಸರೂ ಇರುವುದನ್ನು ಕಂಡು ನಮಗೆ ದಿಗ್ಭ್ರಮೆಯಾಗಿದೆ” ಎನ್ನುತ್ತಾರೆ ನೆರೆಯಿಂದಾಗಿ ಮನೆ ಕಳೆದುಕೊಂಡ ಚೆಲುವಿ.

ಬಿದರಹಳ್ಳಿ ಪಕ್ಕದ ಕಪಿಲೇಶ್ವರ ಕಾಲೊನಿಯಲ್ಲಿ ಪುನರ್ವಸತಿಯ 42 ಮನೆಗಳ ಕಾಮಗಾರಿಯನ್ನು ತಕ್ಷಣವೇ ಆರಂಭಿಸಿ ಆರು ತಿಂಗಳೊಳಗೆ ಮನೆ ಕಟ್ಟಿಕೊಡಬೇಕು. ನೊಂದ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಮೈಸೂರಿನ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಸರ್ಕಾರ ಕೂಡಲೇ ಇತ್ತ ಗಮನೆ ಸೆಳೆಯಬೇಕೆಂದು ಆಗ್ರಹಿಸಲಾಗಿದೆ.

ಕೋವಿಡ್ ನಿಯಂತ್ರಣದ ತುರ್ತು ಕೆಲಸಗಳಲ್ಲಿ ಜಿಲ್ಲಾಡಳಿತ ಮುಳುಗಿ ಹೋಗಿದ್ದರಿಂದ ನಾವು ಇಷ್ಟು ಕಾಲ ಸಹನೆಯಿಂದ ಕಾದಿದ್ದೇವೆ. ಇನ್ನಾದರೂ ವಿಳಂಬ ಮಾಡದೆ ತಕ್ಷಣವೇ ನಮಗೆ ಪುನರ್ವಸತಿ ಒದಗಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇನ್ನು ಒಂದು ತಿಂಗಳ ಒಳಗೆ ಮನೆಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದೇ ಹೋದಲ್ಲಿ ನೆರೆ ಸಂತ್ರಸ್ತರ ಕುಟುಂಬಗಳ ಸಮೇತ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ರವಿ ಆಗ್ರಹಿಸಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ಸಂತ್ರಸ್ತರಾದ ಚೆಲುವಿ, ಪದ್ಮ, ಸತ್ಯಮೂರ್ತಿ ಮತ್ತು ಎಸ್‌ಯುಸಿಐನ ಮುಖಂಡರಾದ ಚಂದ್ರಶೇಖರ್ ಮೇಟಿ, ಸುನೀಲ್ ಟಿ ಆರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...