Homeಕರ್ನಾಟಕಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

ಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

- Advertisement -
- Advertisement -

ಬೆಂಗಳೂರು ನಗರಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ 15 ಲಕ್ಷ ಜನರು ಸ್ಲಂಗಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ಜನರು ರಸ್ತೆ ಬದಿಗಳಲ್ಲಿ ವಾಸಿಸುವಂತಹ ಸ್ಥಿತಿ ಇಂದಿಗೂ ನಗರದಲ್ಲಿದೆ. ಇಂತಹವರಿಗೆ ಸೂರು ನೀಡಲು ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಆದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಇವರ ಹಸಿವನ್ನು ನೀಗಿಸಲು ಮುಂದಾದರು. ಆ ಪ್ರಯತ್ನವೇ ಇಂದಿರಾ ಕ್ಯಾಂಟೀನ್‌ಗಳು. ನಿರಾಶ್ರಿತರು, ಬಡಜನರ ಹಸಿವನ್ನು ನೀಗಿಸುವ ಉತ್ತಮ ಯೋಜನೆ ಇಂದಿರಾ ಕ್ಯಾಂಟಿನ್ ಈಗ ಮುಚ್ಚುವ ಸ್ಥಿತಿ ತಲುಪಿದೆ.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಗೆ ಈ ಹಿಂದೆ ಇದ್ದ ಮೈತ್ರಿ ಸರ್ಕಾರವೂ ಅನುದಾನವನ್ನಷ್ಟೇ ನೀಡಿತ್ತೇ ಹೊರತು, ಸಮರ್ಪಕವಾಗಿ ನಿಭಾಯಿಸುವುದಲ್ಲಿ ಹಿಂದೇಟು ಹಾಕಿತ್ತು. ಕಾಂಗ್ರೆಸ್—ಜೆಡಿಎಸ್‍ ಸರ್ಕಾರಗಳ ಯೋಜನೆಗಳನ್ನು ಬುಡಮೇಲು ಮಾಡುತ್ತಾ, ಹಲವು ಯೋಜನೆಗಳಿಗೆ ತಡೆಯೊಡ್ಡಿರುವ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನವೂ ಇಲ್ಲದೆ ಇಂದಿರಾ ಕ್ಯಾಂಟಿನನ್ನು ಮುಚ್ಚುವ ಸ್ಥಿತಿಗೆ ಬಂದು ನಿಂತಿದೆ. ಹಸಿದವರ ಹಸಿವು ನೀಗಿಸುವ ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಸರ್ಕಾರ ಅನುದಾನ ನೀಡದೇ ಇದ್ದರೂ ಬಿಬಿಎಂಪಿ ಇಂದಿರಾ ಕ್ಯಾಂಟಿನ್‍ ಮುಂದುವರೆಸುತ್ತದೆ ಎಂದು ಮಾಜಿ ಮೇಯರ್ ಗಂಗಾಂಬಿಕೆ ಈ ಹಿಂದೆ ಹೇಳಿದ್ದರು.

ಇದೆಲ್ಲರ ನಡುವೆ ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು. ತೀವ್ರ ವಿರೋಧ ಬಂದ ನಂತರ ಹೆಸರನ್ನೂ ಬದಲಾಯಿಸದೆ ಮುಂದೆವರೆಸುವುದಾಗಿ ಘೋಷಿಸಿದರು. ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಇಲ್ಲದಂತಾಗಿದೆ.

ಬಿಬಿಎಂಪಿಯನ್ನೂ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಳ್ಳಲು ಹವಣಿಸುತ್ತಿದ್ದ ಬಿಜೆಪಿ ಕೊನೆಗೂ, ಬಿಬಿಎಂಪಿಯಲ್ಲೂ ಅಧಿಕಾರ ಗಿಟ್ಟಿಸಿಕೊಂಡಿದೆ. ಮೇಯರ್ ಗದ್ದುಗೆ ಹೇರಿರುವ ಗೌತಮ್‌ ಕುಮಾರ್ ಜೈನ್ ತನ್ನ ಮಂಗತನವನ್ನು ಆರಂಭದಲ್ಲೇ ಪ್ರದರ್ಶಿಸಿದ್ದಾರೆ. ಯಡಿಯೂರಪ್ಪನವರು ಅಕ್ರಮಗಳ ಕಾರಣವನ್ನಿಟ್ಟು ಇಂದಿರಾ ಕ್ಯಾಂಟೀನ್ ಮುಚ್ಚುವ ಮಾತನಾಡಿದರೆ. ಮೇಯರ್ ಮೋಹನ್ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅದರ ನಿರ್ವಹಣೆಯನ್ನು ಧಾರ್ಮಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡಲು ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈಗಾಗಲೇ ಎಲ್ಲವನ್ನೂ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವ ಬಿಜೆಪಿ ಬಡವರ ಹೊಟ್ಟೆಗೂ ಖಾಸಗೀಕರಣದ ಮೂಲಕ ನೇರವಾಗಿ ಕನ್ನ ಹಾಕಲು ಮುಂದಾಗಿದೆ. ಇಂದಿರಾ ಕ್ಯಾಂಟನ್‌ಗಳನ್ನೂ ಧಾರ್ಮಿಕ ಭಜನಾ ಮಂಡಳಿಗಳನ್ನಾಗಿ ಪರಿವರ್ತಿಸುವ ಮತ್ತು ನಿಧಾನಕ್ಕೆ ಅದನ್ನೂ ಮುಚ್ಚುವ ಹುನ್ನಾರವನ್ನು ಹೆಣೆಯುತ್ತಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಹೆಸರಿನಲ್ಲಿ ಧಾರ್ಮಿಕ ಸಂಸ್ಥೆಗಳ ಖಜಾನೆ ತುಂಬಿಸುವ ಮಸಲತ್ತು ಇದರ ಹಿಂದಿರುವುದನ್ನು ಗ್ರಹಿಸಲಾಗದೇ ಇರುವಂತದ್ದೇನೂ ಅಲ್ಲ. ಧಾರ್ಮಿಕ ಸಂಸ್ಥೆಗಳಿಗೆ ವಹಿಸುವುದರಿಂದ ಬಿಬಿಎಂಪಿ ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತದೆ ಹೊರತು, ಮತ್ತೇನನ್ನೂ ಸಾಧಿಸಲಾರದು.

ಸಾಮಾನ್ಯ ಜನರ ಪರವಾದ ಒಂದಾದರೂ ಯೋಜನೆಗಳನ್ನು ಜಾರಿಮಾಡದ, ನೆರೆಯಿಂದ ನೆಲೆ ಕಳೆದುಕೊಂಡವರ ಬದುಕನ್ನು ಕಟ್ಟಿಕೊಡಲಾಗದೆ ದರ್ಪದ ಮಾತುಗಳನ್ನಾಡುತ್ತಾ ಮೆರೆಯುತ್ತಿರುವ ಬಜೆಪಿ ನೇತೃತ್ವದ ಸರ್ಕಾರ ಮತ್ತು ಬಿಬಿಎಂಪಿ ಕನಿಷ್ಟ ಹಸಿದವರಿಗೆ ಅನ್ನ ಹಾಕುವ ಇಂದಿರಾ ಕ್ಯಾಂಟೀನ್‍ ಅನ್ನೂ ಮುಚ್ಚಲು ಹವಣಿಸುತ್ತಿರುವುದು ಈ ಬಿಜೆಪಿಗಳಿಗೆ ಜನರ ಬಗೆಗೆ ಯಾವುದೇ ಕಾಳಜಿ ಇಲ್ಲವೆಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...