Homeಕರ್ನಾಟಕಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

ಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

- Advertisement -
- Advertisement -

ಬೆಂಗಳೂರು ನಗರಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ 15 ಲಕ್ಷ ಜನರು ಸ್ಲಂಗಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ಜನರು ರಸ್ತೆ ಬದಿಗಳಲ್ಲಿ ವಾಸಿಸುವಂತಹ ಸ್ಥಿತಿ ಇಂದಿಗೂ ನಗರದಲ್ಲಿದೆ. ಇಂತಹವರಿಗೆ ಸೂರು ನೀಡಲು ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಆದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಇವರ ಹಸಿವನ್ನು ನೀಗಿಸಲು ಮುಂದಾದರು. ಆ ಪ್ರಯತ್ನವೇ ಇಂದಿರಾ ಕ್ಯಾಂಟೀನ್‌ಗಳು. ನಿರಾಶ್ರಿತರು, ಬಡಜನರ ಹಸಿವನ್ನು ನೀಗಿಸುವ ಉತ್ತಮ ಯೋಜನೆ ಇಂದಿರಾ ಕ್ಯಾಂಟಿನ್ ಈಗ ಮುಚ್ಚುವ ಸ್ಥಿತಿ ತಲುಪಿದೆ.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಗೆ ಈ ಹಿಂದೆ ಇದ್ದ ಮೈತ್ರಿ ಸರ್ಕಾರವೂ ಅನುದಾನವನ್ನಷ್ಟೇ ನೀಡಿತ್ತೇ ಹೊರತು, ಸಮರ್ಪಕವಾಗಿ ನಿಭಾಯಿಸುವುದಲ್ಲಿ ಹಿಂದೇಟು ಹಾಕಿತ್ತು. ಕಾಂಗ್ರೆಸ್—ಜೆಡಿಎಸ್‍ ಸರ್ಕಾರಗಳ ಯೋಜನೆಗಳನ್ನು ಬುಡಮೇಲು ಮಾಡುತ್ತಾ, ಹಲವು ಯೋಜನೆಗಳಿಗೆ ತಡೆಯೊಡ್ಡಿರುವ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನವೂ ಇಲ್ಲದೆ ಇಂದಿರಾ ಕ್ಯಾಂಟಿನನ್ನು ಮುಚ್ಚುವ ಸ್ಥಿತಿಗೆ ಬಂದು ನಿಂತಿದೆ. ಹಸಿದವರ ಹಸಿವು ನೀಗಿಸುವ ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಸರ್ಕಾರ ಅನುದಾನ ನೀಡದೇ ಇದ್ದರೂ ಬಿಬಿಎಂಪಿ ಇಂದಿರಾ ಕ್ಯಾಂಟಿನ್‍ ಮುಂದುವರೆಸುತ್ತದೆ ಎಂದು ಮಾಜಿ ಮೇಯರ್ ಗಂಗಾಂಬಿಕೆ ಈ ಹಿಂದೆ ಹೇಳಿದ್ದರು.

ಇದೆಲ್ಲರ ನಡುವೆ ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು. ತೀವ್ರ ವಿರೋಧ ಬಂದ ನಂತರ ಹೆಸರನ್ನೂ ಬದಲಾಯಿಸದೆ ಮುಂದೆವರೆಸುವುದಾಗಿ ಘೋಷಿಸಿದರು. ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಇಲ್ಲದಂತಾಗಿದೆ.

ಬಿಬಿಎಂಪಿಯನ್ನೂ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಳ್ಳಲು ಹವಣಿಸುತ್ತಿದ್ದ ಬಿಜೆಪಿ ಕೊನೆಗೂ, ಬಿಬಿಎಂಪಿಯಲ್ಲೂ ಅಧಿಕಾರ ಗಿಟ್ಟಿಸಿಕೊಂಡಿದೆ. ಮೇಯರ್ ಗದ್ದುಗೆ ಹೇರಿರುವ ಗೌತಮ್‌ ಕುಮಾರ್ ಜೈನ್ ತನ್ನ ಮಂಗತನವನ್ನು ಆರಂಭದಲ್ಲೇ ಪ್ರದರ್ಶಿಸಿದ್ದಾರೆ. ಯಡಿಯೂರಪ್ಪನವರು ಅಕ್ರಮಗಳ ಕಾರಣವನ್ನಿಟ್ಟು ಇಂದಿರಾ ಕ್ಯಾಂಟೀನ್ ಮುಚ್ಚುವ ಮಾತನಾಡಿದರೆ. ಮೇಯರ್ ಮೋಹನ್ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅದರ ನಿರ್ವಹಣೆಯನ್ನು ಧಾರ್ಮಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡಲು ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈಗಾಗಲೇ ಎಲ್ಲವನ್ನೂ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವ ಬಿಜೆಪಿ ಬಡವರ ಹೊಟ್ಟೆಗೂ ಖಾಸಗೀಕರಣದ ಮೂಲಕ ನೇರವಾಗಿ ಕನ್ನ ಹಾಕಲು ಮುಂದಾಗಿದೆ. ಇಂದಿರಾ ಕ್ಯಾಂಟನ್‌ಗಳನ್ನೂ ಧಾರ್ಮಿಕ ಭಜನಾ ಮಂಡಳಿಗಳನ್ನಾಗಿ ಪರಿವರ್ತಿಸುವ ಮತ್ತು ನಿಧಾನಕ್ಕೆ ಅದನ್ನೂ ಮುಚ್ಚುವ ಹುನ್ನಾರವನ್ನು ಹೆಣೆಯುತ್ತಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಹೆಸರಿನಲ್ಲಿ ಧಾರ್ಮಿಕ ಸಂಸ್ಥೆಗಳ ಖಜಾನೆ ತುಂಬಿಸುವ ಮಸಲತ್ತು ಇದರ ಹಿಂದಿರುವುದನ್ನು ಗ್ರಹಿಸಲಾಗದೇ ಇರುವಂತದ್ದೇನೂ ಅಲ್ಲ. ಧಾರ್ಮಿಕ ಸಂಸ್ಥೆಗಳಿಗೆ ವಹಿಸುವುದರಿಂದ ಬಿಬಿಎಂಪಿ ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತದೆ ಹೊರತು, ಮತ್ತೇನನ್ನೂ ಸಾಧಿಸಲಾರದು.

ಸಾಮಾನ್ಯ ಜನರ ಪರವಾದ ಒಂದಾದರೂ ಯೋಜನೆಗಳನ್ನು ಜಾರಿಮಾಡದ, ನೆರೆಯಿಂದ ನೆಲೆ ಕಳೆದುಕೊಂಡವರ ಬದುಕನ್ನು ಕಟ್ಟಿಕೊಡಲಾಗದೆ ದರ್ಪದ ಮಾತುಗಳನ್ನಾಡುತ್ತಾ ಮೆರೆಯುತ್ತಿರುವ ಬಜೆಪಿ ನೇತೃತ್ವದ ಸರ್ಕಾರ ಮತ್ತು ಬಿಬಿಎಂಪಿ ಕನಿಷ್ಟ ಹಸಿದವರಿಗೆ ಅನ್ನ ಹಾಕುವ ಇಂದಿರಾ ಕ್ಯಾಂಟೀನ್‍ ಅನ್ನೂ ಮುಚ್ಚಲು ಹವಣಿಸುತ್ತಿರುವುದು ಈ ಬಿಜೆಪಿಗಳಿಗೆ ಜನರ ಬಗೆಗೆ ಯಾವುದೇ ಕಾಳಜಿ ಇಲ್ಲವೆಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...