Homeಕರ್ನಾಟಕಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

ಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

- Advertisement -
- Advertisement -

ಬೆಂಗಳೂರು ನಗರಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ 15 ಲಕ್ಷ ಜನರು ಸ್ಲಂಗಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ಜನರು ರಸ್ತೆ ಬದಿಗಳಲ್ಲಿ ವಾಸಿಸುವಂತಹ ಸ್ಥಿತಿ ಇಂದಿಗೂ ನಗರದಲ್ಲಿದೆ. ಇಂತಹವರಿಗೆ ಸೂರು ನೀಡಲು ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಆದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಇವರ ಹಸಿವನ್ನು ನೀಗಿಸಲು ಮುಂದಾದರು. ಆ ಪ್ರಯತ್ನವೇ ಇಂದಿರಾ ಕ್ಯಾಂಟೀನ್‌ಗಳು. ನಿರಾಶ್ರಿತರು, ಬಡಜನರ ಹಸಿವನ್ನು ನೀಗಿಸುವ ಉತ್ತಮ ಯೋಜನೆ ಇಂದಿರಾ ಕ್ಯಾಂಟಿನ್ ಈಗ ಮುಚ್ಚುವ ಸ್ಥಿತಿ ತಲುಪಿದೆ.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಗೆ ಈ ಹಿಂದೆ ಇದ್ದ ಮೈತ್ರಿ ಸರ್ಕಾರವೂ ಅನುದಾನವನ್ನಷ್ಟೇ ನೀಡಿತ್ತೇ ಹೊರತು, ಸಮರ್ಪಕವಾಗಿ ನಿಭಾಯಿಸುವುದಲ್ಲಿ ಹಿಂದೇಟು ಹಾಕಿತ್ತು. ಕಾಂಗ್ರೆಸ್—ಜೆಡಿಎಸ್‍ ಸರ್ಕಾರಗಳ ಯೋಜನೆಗಳನ್ನು ಬುಡಮೇಲು ಮಾಡುತ್ತಾ, ಹಲವು ಯೋಜನೆಗಳಿಗೆ ತಡೆಯೊಡ್ಡಿರುವ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನವೂ ಇಲ್ಲದೆ ಇಂದಿರಾ ಕ್ಯಾಂಟಿನನ್ನು ಮುಚ್ಚುವ ಸ್ಥಿತಿಗೆ ಬಂದು ನಿಂತಿದೆ. ಹಸಿದವರ ಹಸಿವು ನೀಗಿಸುವ ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಸರ್ಕಾರ ಅನುದಾನ ನೀಡದೇ ಇದ್ದರೂ ಬಿಬಿಎಂಪಿ ಇಂದಿರಾ ಕ್ಯಾಂಟಿನ್‍ ಮುಂದುವರೆಸುತ್ತದೆ ಎಂದು ಮಾಜಿ ಮೇಯರ್ ಗಂಗಾಂಬಿಕೆ ಈ ಹಿಂದೆ ಹೇಳಿದ್ದರು.

ಇದೆಲ್ಲರ ನಡುವೆ ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು. ತೀವ್ರ ವಿರೋಧ ಬಂದ ನಂತರ ಹೆಸರನ್ನೂ ಬದಲಾಯಿಸದೆ ಮುಂದೆವರೆಸುವುದಾಗಿ ಘೋಷಿಸಿದರು. ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಇಲ್ಲದಂತಾಗಿದೆ.

ಬಿಬಿಎಂಪಿಯನ್ನೂ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಳ್ಳಲು ಹವಣಿಸುತ್ತಿದ್ದ ಬಿಜೆಪಿ ಕೊನೆಗೂ, ಬಿಬಿಎಂಪಿಯಲ್ಲೂ ಅಧಿಕಾರ ಗಿಟ್ಟಿಸಿಕೊಂಡಿದೆ. ಮೇಯರ್ ಗದ್ದುಗೆ ಹೇರಿರುವ ಗೌತಮ್‌ ಕುಮಾರ್ ಜೈನ್ ತನ್ನ ಮಂಗತನವನ್ನು ಆರಂಭದಲ್ಲೇ ಪ್ರದರ್ಶಿಸಿದ್ದಾರೆ. ಯಡಿಯೂರಪ್ಪನವರು ಅಕ್ರಮಗಳ ಕಾರಣವನ್ನಿಟ್ಟು ಇಂದಿರಾ ಕ್ಯಾಂಟೀನ್ ಮುಚ್ಚುವ ಮಾತನಾಡಿದರೆ. ಮೇಯರ್ ಮೋಹನ್ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅದರ ನಿರ್ವಹಣೆಯನ್ನು ಧಾರ್ಮಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡಲು ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈಗಾಗಲೇ ಎಲ್ಲವನ್ನೂ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವ ಬಿಜೆಪಿ ಬಡವರ ಹೊಟ್ಟೆಗೂ ಖಾಸಗೀಕರಣದ ಮೂಲಕ ನೇರವಾಗಿ ಕನ್ನ ಹಾಕಲು ಮುಂದಾಗಿದೆ. ಇಂದಿರಾ ಕ್ಯಾಂಟನ್‌ಗಳನ್ನೂ ಧಾರ್ಮಿಕ ಭಜನಾ ಮಂಡಳಿಗಳನ್ನಾಗಿ ಪರಿವರ್ತಿಸುವ ಮತ್ತು ನಿಧಾನಕ್ಕೆ ಅದನ್ನೂ ಮುಚ್ಚುವ ಹುನ್ನಾರವನ್ನು ಹೆಣೆಯುತ್ತಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಹೆಸರಿನಲ್ಲಿ ಧಾರ್ಮಿಕ ಸಂಸ್ಥೆಗಳ ಖಜಾನೆ ತುಂಬಿಸುವ ಮಸಲತ್ತು ಇದರ ಹಿಂದಿರುವುದನ್ನು ಗ್ರಹಿಸಲಾಗದೇ ಇರುವಂತದ್ದೇನೂ ಅಲ್ಲ. ಧಾರ್ಮಿಕ ಸಂಸ್ಥೆಗಳಿಗೆ ವಹಿಸುವುದರಿಂದ ಬಿಬಿಎಂಪಿ ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತದೆ ಹೊರತು, ಮತ್ತೇನನ್ನೂ ಸಾಧಿಸಲಾರದು.

ಸಾಮಾನ್ಯ ಜನರ ಪರವಾದ ಒಂದಾದರೂ ಯೋಜನೆಗಳನ್ನು ಜಾರಿಮಾಡದ, ನೆರೆಯಿಂದ ನೆಲೆ ಕಳೆದುಕೊಂಡವರ ಬದುಕನ್ನು ಕಟ್ಟಿಕೊಡಲಾಗದೆ ದರ್ಪದ ಮಾತುಗಳನ್ನಾಡುತ್ತಾ ಮೆರೆಯುತ್ತಿರುವ ಬಜೆಪಿ ನೇತೃತ್ವದ ಸರ್ಕಾರ ಮತ್ತು ಬಿಬಿಎಂಪಿ ಕನಿಷ್ಟ ಹಸಿದವರಿಗೆ ಅನ್ನ ಹಾಕುವ ಇಂದಿರಾ ಕ್ಯಾಂಟೀನ್‍ ಅನ್ನೂ ಮುಚ್ಚಲು ಹವಣಿಸುತ್ತಿರುವುದು ಈ ಬಿಜೆಪಿಗಳಿಗೆ ಜನರ ಬಗೆಗೆ ಯಾವುದೇ ಕಾಳಜಿ ಇಲ್ಲವೆಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...