Homeಕರ್ನಾಟಕಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

ಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

- Advertisement -
- Advertisement -

ಬೆಂಗಳೂರು ನಗರಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ 15 ಲಕ್ಷ ಜನರು ಸ್ಲಂಗಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ಜನರು ರಸ್ತೆ ಬದಿಗಳಲ್ಲಿ ವಾಸಿಸುವಂತಹ ಸ್ಥಿತಿ ಇಂದಿಗೂ ನಗರದಲ್ಲಿದೆ. ಇಂತಹವರಿಗೆ ಸೂರು ನೀಡಲು ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಆದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಇವರ ಹಸಿವನ್ನು ನೀಗಿಸಲು ಮುಂದಾದರು. ಆ ಪ್ರಯತ್ನವೇ ಇಂದಿರಾ ಕ್ಯಾಂಟೀನ್‌ಗಳು. ನಿರಾಶ್ರಿತರು, ಬಡಜನರ ಹಸಿವನ್ನು ನೀಗಿಸುವ ಉತ್ತಮ ಯೋಜನೆ ಇಂದಿರಾ ಕ್ಯಾಂಟಿನ್ ಈಗ ಮುಚ್ಚುವ ಸ್ಥಿತಿ ತಲುಪಿದೆ.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಗೆ ಈ ಹಿಂದೆ ಇದ್ದ ಮೈತ್ರಿ ಸರ್ಕಾರವೂ ಅನುದಾನವನ್ನಷ್ಟೇ ನೀಡಿತ್ತೇ ಹೊರತು, ಸಮರ್ಪಕವಾಗಿ ನಿಭಾಯಿಸುವುದಲ್ಲಿ ಹಿಂದೇಟು ಹಾಕಿತ್ತು. ಕಾಂಗ್ರೆಸ್—ಜೆಡಿಎಸ್‍ ಸರ್ಕಾರಗಳ ಯೋಜನೆಗಳನ್ನು ಬುಡಮೇಲು ಮಾಡುತ್ತಾ, ಹಲವು ಯೋಜನೆಗಳಿಗೆ ತಡೆಯೊಡ್ಡಿರುವ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನವೂ ಇಲ್ಲದೆ ಇಂದಿರಾ ಕ್ಯಾಂಟಿನನ್ನು ಮುಚ್ಚುವ ಸ್ಥಿತಿಗೆ ಬಂದು ನಿಂತಿದೆ. ಹಸಿದವರ ಹಸಿವು ನೀಗಿಸುವ ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಸರ್ಕಾರ ಅನುದಾನ ನೀಡದೇ ಇದ್ದರೂ ಬಿಬಿಎಂಪಿ ಇಂದಿರಾ ಕ್ಯಾಂಟಿನ್‍ ಮುಂದುವರೆಸುತ್ತದೆ ಎಂದು ಮಾಜಿ ಮೇಯರ್ ಗಂಗಾಂಬಿಕೆ ಈ ಹಿಂದೆ ಹೇಳಿದ್ದರು.

ಇದೆಲ್ಲರ ನಡುವೆ ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು. ತೀವ್ರ ವಿರೋಧ ಬಂದ ನಂತರ ಹೆಸರನ್ನೂ ಬದಲಾಯಿಸದೆ ಮುಂದೆವರೆಸುವುದಾಗಿ ಘೋಷಿಸಿದರು. ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಇಲ್ಲದಂತಾಗಿದೆ.

ಬಿಬಿಎಂಪಿಯನ್ನೂ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಳ್ಳಲು ಹವಣಿಸುತ್ತಿದ್ದ ಬಿಜೆಪಿ ಕೊನೆಗೂ, ಬಿಬಿಎಂಪಿಯಲ್ಲೂ ಅಧಿಕಾರ ಗಿಟ್ಟಿಸಿಕೊಂಡಿದೆ. ಮೇಯರ್ ಗದ್ದುಗೆ ಹೇರಿರುವ ಗೌತಮ್‌ ಕುಮಾರ್ ಜೈನ್ ತನ್ನ ಮಂಗತನವನ್ನು ಆರಂಭದಲ್ಲೇ ಪ್ರದರ್ಶಿಸಿದ್ದಾರೆ. ಯಡಿಯೂರಪ್ಪನವರು ಅಕ್ರಮಗಳ ಕಾರಣವನ್ನಿಟ್ಟು ಇಂದಿರಾ ಕ್ಯಾಂಟೀನ್ ಮುಚ್ಚುವ ಮಾತನಾಡಿದರೆ. ಮೇಯರ್ ಮೋಹನ್ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅದರ ನಿರ್ವಹಣೆಯನ್ನು ಧಾರ್ಮಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡಲು ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈಗಾಗಲೇ ಎಲ್ಲವನ್ನೂ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವ ಬಿಜೆಪಿ ಬಡವರ ಹೊಟ್ಟೆಗೂ ಖಾಸಗೀಕರಣದ ಮೂಲಕ ನೇರವಾಗಿ ಕನ್ನ ಹಾಕಲು ಮುಂದಾಗಿದೆ. ಇಂದಿರಾ ಕ್ಯಾಂಟನ್‌ಗಳನ್ನೂ ಧಾರ್ಮಿಕ ಭಜನಾ ಮಂಡಳಿಗಳನ್ನಾಗಿ ಪರಿವರ್ತಿಸುವ ಮತ್ತು ನಿಧಾನಕ್ಕೆ ಅದನ್ನೂ ಮುಚ್ಚುವ ಹುನ್ನಾರವನ್ನು ಹೆಣೆಯುತ್ತಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಹೆಸರಿನಲ್ಲಿ ಧಾರ್ಮಿಕ ಸಂಸ್ಥೆಗಳ ಖಜಾನೆ ತುಂಬಿಸುವ ಮಸಲತ್ತು ಇದರ ಹಿಂದಿರುವುದನ್ನು ಗ್ರಹಿಸಲಾಗದೇ ಇರುವಂತದ್ದೇನೂ ಅಲ್ಲ. ಧಾರ್ಮಿಕ ಸಂಸ್ಥೆಗಳಿಗೆ ವಹಿಸುವುದರಿಂದ ಬಿಬಿಎಂಪಿ ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತದೆ ಹೊರತು, ಮತ್ತೇನನ್ನೂ ಸಾಧಿಸಲಾರದು.

ಸಾಮಾನ್ಯ ಜನರ ಪರವಾದ ಒಂದಾದರೂ ಯೋಜನೆಗಳನ್ನು ಜಾರಿಮಾಡದ, ನೆರೆಯಿಂದ ನೆಲೆ ಕಳೆದುಕೊಂಡವರ ಬದುಕನ್ನು ಕಟ್ಟಿಕೊಡಲಾಗದೆ ದರ್ಪದ ಮಾತುಗಳನ್ನಾಡುತ್ತಾ ಮೆರೆಯುತ್ತಿರುವ ಬಜೆಪಿ ನೇತೃತ್ವದ ಸರ್ಕಾರ ಮತ್ತು ಬಿಬಿಎಂಪಿ ಕನಿಷ್ಟ ಹಸಿದವರಿಗೆ ಅನ್ನ ಹಾಕುವ ಇಂದಿರಾ ಕ್ಯಾಂಟೀನ್‍ ಅನ್ನೂ ಮುಚ್ಚಲು ಹವಣಿಸುತ್ತಿರುವುದು ಈ ಬಿಜೆಪಿಗಳಿಗೆ ಜನರ ಬಗೆಗೆ ಯಾವುದೇ ಕಾಳಜಿ ಇಲ್ಲವೆಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...