Homeಕರ್ನಾಟಕಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

ಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

- Advertisement -
- Advertisement -

ಬೆಂಗಳೂರು ನಗರಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ 15 ಲಕ್ಷ ಜನರು ಸ್ಲಂಗಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ಜನರು ರಸ್ತೆ ಬದಿಗಳಲ್ಲಿ ವಾಸಿಸುವಂತಹ ಸ್ಥಿತಿ ಇಂದಿಗೂ ನಗರದಲ್ಲಿದೆ. ಇಂತಹವರಿಗೆ ಸೂರು ನೀಡಲು ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಆದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಇವರ ಹಸಿವನ್ನು ನೀಗಿಸಲು ಮುಂದಾದರು. ಆ ಪ್ರಯತ್ನವೇ ಇಂದಿರಾ ಕ್ಯಾಂಟೀನ್‌ಗಳು. ನಿರಾಶ್ರಿತರು, ಬಡಜನರ ಹಸಿವನ್ನು ನೀಗಿಸುವ ಉತ್ತಮ ಯೋಜನೆ ಇಂದಿರಾ ಕ್ಯಾಂಟಿನ್ ಈಗ ಮುಚ್ಚುವ ಸ್ಥಿತಿ ತಲುಪಿದೆ.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಗೆ ಈ ಹಿಂದೆ ಇದ್ದ ಮೈತ್ರಿ ಸರ್ಕಾರವೂ ಅನುದಾನವನ್ನಷ್ಟೇ ನೀಡಿತ್ತೇ ಹೊರತು, ಸಮರ್ಪಕವಾಗಿ ನಿಭಾಯಿಸುವುದಲ್ಲಿ ಹಿಂದೇಟು ಹಾಕಿತ್ತು. ಕಾಂಗ್ರೆಸ್—ಜೆಡಿಎಸ್‍ ಸರ್ಕಾರಗಳ ಯೋಜನೆಗಳನ್ನು ಬುಡಮೇಲು ಮಾಡುತ್ತಾ, ಹಲವು ಯೋಜನೆಗಳಿಗೆ ತಡೆಯೊಡ್ಡಿರುವ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನವೂ ಇಲ್ಲದೆ ಇಂದಿರಾ ಕ್ಯಾಂಟಿನನ್ನು ಮುಚ್ಚುವ ಸ್ಥಿತಿಗೆ ಬಂದು ನಿಂತಿದೆ. ಹಸಿದವರ ಹಸಿವು ನೀಗಿಸುವ ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಸರ್ಕಾರ ಅನುದಾನ ನೀಡದೇ ಇದ್ದರೂ ಬಿಬಿಎಂಪಿ ಇಂದಿರಾ ಕ್ಯಾಂಟಿನ್‍ ಮುಂದುವರೆಸುತ್ತದೆ ಎಂದು ಮಾಜಿ ಮೇಯರ್ ಗಂಗಾಂಬಿಕೆ ಈ ಹಿಂದೆ ಹೇಳಿದ್ದರು.

ಇದೆಲ್ಲರ ನಡುವೆ ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು. ತೀವ್ರ ವಿರೋಧ ಬಂದ ನಂತರ ಹೆಸರನ್ನೂ ಬದಲಾಯಿಸದೆ ಮುಂದೆವರೆಸುವುದಾಗಿ ಘೋಷಿಸಿದರು. ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಇಲ್ಲದಂತಾಗಿದೆ.

ಬಿಬಿಎಂಪಿಯನ್ನೂ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಳ್ಳಲು ಹವಣಿಸುತ್ತಿದ್ದ ಬಿಜೆಪಿ ಕೊನೆಗೂ, ಬಿಬಿಎಂಪಿಯಲ್ಲೂ ಅಧಿಕಾರ ಗಿಟ್ಟಿಸಿಕೊಂಡಿದೆ. ಮೇಯರ್ ಗದ್ದುಗೆ ಹೇರಿರುವ ಗೌತಮ್‌ ಕುಮಾರ್ ಜೈನ್ ತನ್ನ ಮಂಗತನವನ್ನು ಆರಂಭದಲ್ಲೇ ಪ್ರದರ್ಶಿಸಿದ್ದಾರೆ. ಯಡಿಯೂರಪ್ಪನವರು ಅಕ್ರಮಗಳ ಕಾರಣವನ್ನಿಟ್ಟು ಇಂದಿರಾ ಕ್ಯಾಂಟೀನ್ ಮುಚ್ಚುವ ಮಾತನಾಡಿದರೆ. ಮೇಯರ್ ಮೋಹನ್ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅದರ ನಿರ್ವಹಣೆಯನ್ನು ಧಾರ್ಮಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡಲು ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈಗಾಗಲೇ ಎಲ್ಲವನ್ನೂ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವ ಬಿಜೆಪಿ ಬಡವರ ಹೊಟ್ಟೆಗೂ ಖಾಸಗೀಕರಣದ ಮೂಲಕ ನೇರವಾಗಿ ಕನ್ನ ಹಾಕಲು ಮುಂದಾಗಿದೆ. ಇಂದಿರಾ ಕ್ಯಾಂಟನ್‌ಗಳನ್ನೂ ಧಾರ್ಮಿಕ ಭಜನಾ ಮಂಡಳಿಗಳನ್ನಾಗಿ ಪರಿವರ್ತಿಸುವ ಮತ್ತು ನಿಧಾನಕ್ಕೆ ಅದನ್ನೂ ಮುಚ್ಚುವ ಹುನ್ನಾರವನ್ನು ಹೆಣೆಯುತ್ತಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಹೆಸರಿನಲ್ಲಿ ಧಾರ್ಮಿಕ ಸಂಸ್ಥೆಗಳ ಖಜಾನೆ ತುಂಬಿಸುವ ಮಸಲತ್ತು ಇದರ ಹಿಂದಿರುವುದನ್ನು ಗ್ರಹಿಸಲಾಗದೇ ಇರುವಂತದ್ದೇನೂ ಅಲ್ಲ. ಧಾರ್ಮಿಕ ಸಂಸ್ಥೆಗಳಿಗೆ ವಹಿಸುವುದರಿಂದ ಬಿಬಿಎಂಪಿ ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತದೆ ಹೊರತು, ಮತ್ತೇನನ್ನೂ ಸಾಧಿಸಲಾರದು.

ಸಾಮಾನ್ಯ ಜನರ ಪರವಾದ ಒಂದಾದರೂ ಯೋಜನೆಗಳನ್ನು ಜಾರಿಮಾಡದ, ನೆರೆಯಿಂದ ನೆಲೆ ಕಳೆದುಕೊಂಡವರ ಬದುಕನ್ನು ಕಟ್ಟಿಕೊಡಲಾಗದೆ ದರ್ಪದ ಮಾತುಗಳನ್ನಾಡುತ್ತಾ ಮೆರೆಯುತ್ತಿರುವ ಬಜೆಪಿ ನೇತೃತ್ವದ ಸರ್ಕಾರ ಮತ್ತು ಬಿಬಿಎಂಪಿ ಕನಿಷ್ಟ ಹಸಿದವರಿಗೆ ಅನ್ನ ಹಾಕುವ ಇಂದಿರಾ ಕ್ಯಾಂಟೀನ್‍ ಅನ್ನೂ ಮುಚ್ಚಲು ಹವಣಿಸುತ್ತಿರುವುದು ಈ ಬಿಜೆಪಿಗಳಿಗೆ ಜನರ ಬಗೆಗೆ ಯಾವುದೇ ಕಾಳಜಿ ಇಲ್ಲವೆಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...