Homeಕರ್ನಾಟಕಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

ಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

- Advertisement -
- Advertisement -

ಬೆಂಗಳೂರು ನಗರಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ 15 ಲಕ್ಷ ಜನರು ಸ್ಲಂಗಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ಜನರು ರಸ್ತೆ ಬದಿಗಳಲ್ಲಿ ವಾಸಿಸುವಂತಹ ಸ್ಥಿತಿ ಇಂದಿಗೂ ನಗರದಲ್ಲಿದೆ. ಇಂತಹವರಿಗೆ ಸೂರು ನೀಡಲು ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಆದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಇವರ ಹಸಿವನ್ನು ನೀಗಿಸಲು ಮುಂದಾದರು. ಆ ಪ್ರಯತ್ನವೇ ಇಂದಿರಾ ಕ್ಯಾಂಟೀನ್‌ಗಳು. ನಿರಾಶ್ರಿತರು, ಬಡಜನರ ಹಸಿವನ್ನು ನೀಗಿಸುವ ಉತ್ತಮ ಯೋಜನೆ ಇಂದಿರಾ ಕ್ಯಾಂಟಿನ್ ಈಗ ಮುಚ್ಚುವ ಸ್ಥಿತಿ ತಲುಪಿದೆ.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಗೆ ಈ ಹಿಂದೆ ಇದ್ದ ಮೈತ್ರಿ ಸರ್ಕಾರವೂ ಅನುದಾನವನ್ನಷ್ಟೇ ನೀಡಿತ್ತೇ ಹೊರತು, ಸಮರ್ಪಕವಾಗಿ ನಿಭಾಯಿಸುವುದಲ್ಲಿ ಹಿಂದೇಟು ಹಾಕಿತ್ತು. ಕಾಂಗ್ರೆಸ್—ಜೆಡಿಎಸ್‍ ಸರ್ಕಾರಗಳ ಯೋಜನೆಗಳನ್ನು ಬುಡಮೇಲು ಮಾಡುತ್ತಾ, ಹಲವು ಯೋಜನೆಗಳಿಗೆ ತಡೆಯೊಡ್ಡಿರುವ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನವೂ ಇಲ್ಲದೆ ಇಂದಿರಾ ಕ್ಯಾಂಟಿನನ್ನು ಮುಚ್ಚುವ ಸ್ಥಿತಿಗೆ ಬಂದು ನಿಂತಿದೆ. ಹಸಿದವರ ಹಸಿವು ನೀಗಿಸುವ ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಸರ್ಕಾರ ಅನುದಾನ ನೀಡದೇ ಇದ್ದರೂ ಬಿಬಿಎಂಪಿ ಇಂದಿರಾ ಕ್ಯಾಂಟಿನ್‍ ಮುಂದುವರೆಸುತ್ತದೆ ಎಂದು ಮಾಜಿ ಮೇಯರ್ ಗಂಗಾಂಬಿಕೆ ಈ ಹಿಂದೆ ಹೇಳಿದ್ದರು.

ಇದೆಲ್ಲರ ನಡುವೆ ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು. ತೀವ್ರ ವಿರೋಧ ಬಂದ ನಂತರ ಹೆಸರನ್ನೂ ಬದಲಾಯಿಸದೆ ಮುಂದೆವರೆಸುವುದಾಗಿ ಘೋಷಿಸಿದರು. ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಇಲ್ಲದಂತಾಗಿದೆ.

ಬಿಬಿಎಂಪಿಯನ್ನೂ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಳ್ಳಲು ಹವಣಿಸುತ್ತಿದ್ದ ಬಿಜೆಪಿ ಕೊನೆಗೂ, ಬಿಬಿಎಂಪಿಯಲ್ಲೂ ಅಧಿಕಾರ ಗಿಟ್ಟಿಸಿಕೊಂಡಿದೆ. ಮೇಯರ್ ಗದ್ದುಗೆ ಹೇರಿರುವ ಗೌತಮ್‌ ಕುಮಾರ್ ಜೈನ್ ತನ್ನ ಮಂಗತನವನ್ನು ಆರಂಭದಲ್ಲೇ ಪ್ರದರ್ಶಿಸಿದ್ದಾರೆ. ಯಡಿಯೂರಪ್ಪನವರು ಅಕ್ರಮಗಳ ಕಾರಣವನ್ನಿಟ್ಟು ಇಂದಿರಾ ಕ್ಯಾಂಟೀನ್ ಮುಚ್ಚುವ ಮಾತನಾಡಿದರೆ. ಮೇಯರ್ ಮೋಹನ್ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅದರ ನಿರ್ವಹಣೆಯನ್ನು ಧಾರ್ಮಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡಲು ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈಗಾಗಲೇ ಎಲ್ಲವನ್ನೂ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವ ಬಿಜೆಪಿ ಬಡವರ ಹೊಟ್ಟೆಗೂ ಖಾಸಗೀಕರಣದ ಮೂಲಕ ನೇರವಾಗಿ ಕನ್ನ ಹಾಕಲು ಮುಂದಾಗಿದೆ. ಇಂದಿರಾ ಕ್ಯಾಂಟನ್‌ಗಳನ್ನೂ ಧಾರ್ಮಿಕ ಭಜನಾ ಮಂಡಳಿಗಳನ್ನಾಗಿ ಪರಿವರ್ತಿಸುವ ಮತ್ತು ನಿಧಾನಕ್ಕೆ ಅದನ್ನೂ ಮುಚ್ಚುವ ಹುನ್ನಾರವನ್ನು ಹೆಣೆಯುತ್ತಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಹೆಸರಿನಲ್ಲಿ ಧಾರ್ಮಿಕ ಸಂಸ್ಥೆಗಳ ಖಜಾನೆ ತುಂಬಿಸುವ ಮಸಲತ್ತು ಇದರ ಹಿಂದಿರುವುದನ್ನು ಗ್ರಹಿಸಲಾಗದೇ ಇರುವಂತದ್ದೇನೂ ಅಲ್ಲ. ಧಾರ್ಮಿಕ ಸಂಸ್ಥೆಗಳಿಗೆ ವಹಿಸುವುದರಿಂದ ಬಿಬಿಎಂಪಿ ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತದೆ ಹೊರತು, ಮತ್ತೇನನ್ನೂ ಸಾಧಿಸಲಾರದು.

ಸಾಮಾನ್ಯ ಜನರ ಪರವಾದ ಒಂದಾದರೂ ಯೋಜನೆಗಳನ್ನು ಜಾರಿಮಾಡದ, ನೆರೆಯಿಂದ ನೆಲೆ ಕಳೆದುಕೊಂಡವರ ಬದುಕನ್ನು ಕಟ್ಟಿಕೊಡಲಾಗದೆ ದರ್ಪದ ಮಾತುಗಳನ್ನಾಡುತ್ತಾ ಮೆರೆಯುತ್ತಿರುವ ಬಜೆಪಿ ನೇತೃತ್ವದ ಸರ್ಕಾರ ಮತ್ತು ಬಿಬಿಎಂಪಿ ಕನಿಷ್ಟ ಹಸಿದವರಿಗೆ ಅನ್ನ ಹಾಕುವ ಇಂದಿರಾ ಕ್ಯಾಂಟೀನ್‍ ಅನ್ನೂ ಮುಚ್ಚಲು ಹವಣಿಸುತ್ತಿರುವುದು ಈ ಬಿಜೆಪಿಗಳಿಗೆ ಜನರ ಬಗೆಗೆ ಯಾವುದೇ ಕಾಳಜಿ ಇಲ್ಲವೆಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...