Homeಕರ್ನಾಟಕಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

ಭ್ರಷ್ಟಾಚಾರಕ್ಕೆ ಕಡಿವಾಣ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚಲೊರಟ ಬಿಜೆಪಿ & ಬಿಬಿಎಂಪಿ

- Advertisement -
- Advertisement -

ಬೆಂಗಳೂರು ನಗರಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ 15 ಲಕ್ಷ ಜನರು ಸ್ಲಂಗಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ಜನರು ರಸ್ತೆ ಬದಿಗಳಲ್ಲಿ ವಾಸಿಸುವಂತಹ ಸ್ಥಿತಿ ಇಂದಿಗೂ ನಗರದಲ್ಲಿದೆ. ಇಂತಹವರಿಗೆ ಸೂರು ನೀಡಲು ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಆದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಇವರ ಹಸಿವನ್ನು ನೀಗಿಸಲು ಮುಂದಾದರು. ಆ ಪ್ರಯತ್ನವೇ ಇಂದಿರಾ ಕ್ಯಾಂಟೀನ್‌ಗಳು. ನಿರಾಶ್ರಿತರು, ಬಡಜನರ ಹಸಿವನ್ನು ನೀಗಿಸುವ ಉತ್ತಮ ಯೋಜನೆ ಇಂದಿರಾ ಕ್ಯಾಂಟಿನ್ ಈಗ ಮುಚ್ಚುವ ಸ್ಥಿತಿ ತಲುಪಿದೆ.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಗೆ ಈ ಹಿಂದೆ ಇದ್ದ ಮೈತ್ರಿ ಸರ್ಕಾರವೂ ಅನುದಾನವನ್ನಷ್ಟೇ ನೀಡಿತ್ತೇ ಹೊರತು, ಸಮರ್ಪಕವಾಗಿ ನಿಭಾಯಿಸುವುದಲ್ಲಿ ಹಿಂದೇಟು ಹಾಕಿತ್ತು. ಕಾಂಗ್ರೆಸ್—ಜೆಡಿಎಸ್‍ ಸರ್ಕಾರಗಳ ಯೋಜನೆಗಳನ್ನು ಬುಡಮೇಲು ಮಾಡುತ್ತಾ, ಹಲವು ಯೋಜನೆಗಳಿಗೆ ತಡೆಯೊಡ್ಡಿರುವ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನವೂ ಇಲ್ಲದೆ ಇಂದಿರಾ ಕ್ಯಾಂಟಿನನ್ನು ಮುಚ್ಚುವ ಸ್ಥಿತಿಗೆ ಬಂದು ನಿಂತಿದೆ. ಹಸಿದವರ ಹಸಿವು ನೀಗಿಸುವ ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಸರ್ಕಾರ ಅನುದಾನ ನೀಡದೇ ಇದ್ದರೂ ಬಿಬಿಎಂಪಿ ಇಂದಿರಾ ಕ್ಯಾಂಟಿನ್‍ ಮುಂದುವರೆಸುತ್ತದೆ ಎಂದು ಮಾಜಿ ಮೇಯರ್ ಗಂಗಾಂಬಿಕೆ ಈ ಹಿಂದೆ ಹೇಳಿದ್ದರು.

ಇದೆಲ್ಲರ ನಡುವೆ ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು. ತೀವ್ರ ವಿರೋಧ ಬಂದ ನಂತರ ಹೆಸರನ್ನೂ ಬದಲಾಯಿಸದೆ ಮುಂದೆವರೆಸುವುದಾಗಿ ಘೋಷಿಸಿದರು. ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಇಲ್ಲದಂತಾಗಿದೆ.

ಬಿಬಿಎಂಪಿಯನ್ನೂ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಳ್ಳಲು ಹವಣಿಸುತ್ತಿದ್ದ ಬಿಜೆಪಿ ಕೊನೆಗೂ, ಬಿಬಿಎಂಪಿಯಲ್ಲೂ ಅಧಿಕಾರ ಗಿಟ್ಟಿಸಿಕೊಂಡಿದೆ. ಮೇಯರ್ ಗದ್ದುಗೆ ಹೇರಿರುವ ಗೌತಮ್‌ ಕುಮಾರ್ ಜೈನ್ ತನ್ನ ಮಂಗತನವನ್ನು ಆರಂಭದಲ್ಲೇ ಪ್ರದರ್ಶಿಸಿದ್ದಾರೆ. ಯಡಿಯೂರಪ್ಪನವರು ಅಕ್ರಮಗಳ ಕಾರಣವನ್ನಿಟ್ಟು ಇಂದಿರಾ ಕ್ಯಾಂಟೀನ್ ಮುಚ್ಚುವ ಮಾತನಾಡಿದರೆ. ಮೇಯರ್ ಮೋಹನ್ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅದರ ನಿರ್ವಹಣೆಯನ್ನು ಧಾರ್ಮಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡಲು ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈಗಾಗಲೇ ಎಲ್ಲವನ್ನೂ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವ ಬಿಜೆಪಿ ಬಡವರ ಹೊಟ್ಟೆಗೂ ಖಾಸಗೀಕರಣದ ಮೂಲಕ ನೇರವಾಗಿ ಕನ್ನ ಹಾಕಲು ಮುಂದಾಗಿದೆ. ಇಂದಿರಾ ಕ್ಯಾಂಟನ್‌ಗಳನ್ನೂ ಧಾರ್ಮಿಕ ಭಜನಾ ಮಂಡಳಿಗಳನ್ನಾಗಿ ಪರಿವರ್ತಿಸುವ ಮತ್ತು ನಿಧಾನಕ್ಕೆ ಅದನ್ನೂ ಮುಚ್ಚುವ ಹುನ್ನಾರವನ್ನು ಹೆಣೆಯುತ್ತಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಹೆಸರಿನಲ್ಲಿ ಧಾರ್ಮಿಕ ಸಂಸ್ಥೆಗಳ ಖಜಾನೆ ತುಂಬಿಸುವ ಮಸಲತ್ತು ಇದರ ಹಿಂದಿರುವುದನ್ನು ಗ್ರಹಿಸಲಾಗದೇ ಇರುವಂತದ್ದೇನೂ ಅಲ್ಲ. ಧಾರ್ಮಿಕ ಸಂಸ್ಥೆಗಳಿಗೆ ವಹಿಸುವುದರಿಂದ ಬಿಬಿಎಂಪಿ ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತದೆ ಹೊರತು, ಮತ್ತೇನನ್ನೂ ಸಾಧಿಸಲಾರದು.

ಸಾಮಾನ್ಯ ಜನರ ಪರವಾದ ಒಂದಾದರೂ ಯೋಜನೆಗಳನ್ನು ಜಾರಿಮಾಡದ, ನೆರೆಯಿಂದ ನೆಲೆ ಕಳೆದುಕೊಂಡವರ ಬದುಕನ್ನು ಕಟ್ಟಿಕೊಡಲಾಗದೆ ದರ್ಪದ ಮಾತುಗಳನ್ನಾಡುತ್ತಾ ಮೆರೆಯುತ್ತಿರುವ ಬಜೆಪಿ ನೇತೃತ್ವದ ಸರ್ಕಾರ ಮತ್ತು ಬಿಬಿಎಂಪಿ ಕನಿಷ್ಟ ಹಸಿದವರಿಗೆ ಅನ್ನ ಹಾಕುವ ಇಂದಿರಾ ಕ್ಯಾಂಟೀನ್‍ ಅನ್ನೂ ಮುಚ್ಚಲು ಹವಣಿಸುತ್ತಿರುವುದು ಈ ಬಿಜೆಪಿಗಳಿಗೆ ಜನರ ಬಗೆಗೆ ಯಾವುದೇ ಕಾಳಜಿ ಇಲ್ಲವೆಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...