Homeಮುಖಪುಟಡಾ. ಮಂಜುನಾಥ್ ಬೆಂಬಲಿಗನ ತೋಟಕ್ಕೆ ಬೆಂಕಿಯಿಟ್ಟ ಆರೋಪ: ಸುಳ್ಳು ಎಂದು ವಿಡಿಯೋ ಹಂಚಿಕೊಂಡ ಕಾಂಗ್ರೆಸ್

ಡಾ. ಮಂಜುನಾಥ್ ಬೆಂಬಲಿಗನ ತೋಟಕ್ಕೆ ಬೆಂಕಿಯಿಟ್ಟ ಆರೋಪ: ಸುಳ್ಳು ಎಂದು ವಿಡಿಯೋ ಹಂಚಿಕೊಂಡ ಕಾಂಗ್ರೆಸ್

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಿಜೆಪಿ (ಮೈತ್ರಿ ಅಭ್ಯರ್ಥಿ) ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ್ ಅವರ ಬೆಂಬಲಿಗ ರೈತನ ತೋಟಕ್ಕೆ ಕಾಂಗ್ರೆಸ್ಸಿಗರು ಅಥವಾ ಡಿ.ಕೆ ಸುರೇಶ್ ಬೆಂಬಲಿಗರು ಬೆಂಕಿಯಿಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಇದನ್ನು ಅಲ್ಲಗಳೆದಿರುವ ಕಾಂಗ್ರೆಸ್‌, ವಿಡಿಯೋ ಹಂಚಿಕೊಂಡಿದೆ.

ಇಂದು (ಏ.16) ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಬಿಜೆಪಿ, “ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಕೊತ್ವಾಲ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ‌. ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಆ ದಿನಗಳ ಗೂಂಡಾಗಳು ಈ ದಿನಗಳಲ್ಲೇ ಬೆಂಕಿ ಹಿಡಿದು ಭಸ್ಮ ಮಾಡಲು ನಿಂತಿದ್ದಾರೆ. ಡಾ. ಸಿ. ಎನ್. ಮಂಜುನಾಥ್ ಅವರನ್ನು ಕುಣಿಗಲ್ ತಾಲೂಕಿನ ರೈತ ಪ್ರೇಮ್ ಕುಮಾರ್ ಬೆಂಬಲಿಸಿದ ಕಾರಣಕ್ಕೆ ತೋಟವನ್ನೇ ಸುಟ್ಟು ಕರಕಲು ಮಾಡಿದ್ದಾರೆ. ಒಂದು ಕಡೆ ಚುನಾವಣಾ ಅಧಿಕಾರಿಗಳಿಂದ ಊಟ ಬಡಿಸಿಕೊಳ್ಳುವ ಉಪಮುಖ್ಯಮಂತ್ರಿಗಳು, ಎಲ್ಲೆಡೆ ಮತದಾರರನ್ನು ಬೆದರಿಸುತ್ತಾ ಧಮ್ಕಿ ಹಾಕಿದ ಪರಿಣಾಮವೇ ಈ ಘಟನೆಗೆ ಕಾರಣ” ಎಂದು ಆರೋಪಿಸಿತ್ತು.

ಈ ಆರೋಪ ಸುಳ್ಳು ಎಂದು ಕಾಂಗ್ರೆಸ್‌ ಮತ್ತೊಂದು ವಿಡಿಯೋ ಹಂಚಿಕೊಂಡಿದೆ. “ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ತನ್ನ ಫೇಕ್ ಫ್ಯಾಕ್ಟರಿಗೆ ಹೆಚ್ಚಿನ ಕೆಲಸ ಕೊಟ್ಟು ಹಗಲೂ ರಾತ್ರಿ ದುಡಿಯುತ್ತಿದೆ. ಬೆಂಕಿ ಹೇಗೆ ಹತ್ತಿದೆ ಎಂದು ಆರೋಪಿಸಿದ ರೈತನಿಗೆ ಗೊತ್ತಿಲ್ಲ, ಬೆಂಕಿ ಯಾರು ಹಚ್ಚಿದರು ಎನ್ನುವುದೂ ಆತನಿಗೆ ಗೊತ್ತಿಲ್ಲ” ಎಂದಿದೆ.

“ಹೇಡಿಯ ಕೊನೆಯ ಅಸ್ತ್ರ ಅಪಪ್ರಚಾರ ಎನ್ನುವಂತೆ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರಿಗಳು ಸೇರಿ ಆತನಿಗೆ ಬೆದರಿಕೆ ಒಡ್ಡಿ ಕಾಂಗ್ರೆಸ್‌ನವರ ಮೇಲೆ, ಗೆಲುವಿನ ಸಮೀಪದಲ್ಲಿರುವ ಡಿ.ಕೆ ಸುರೇಶ್ ಅವರ ಮೇಲೆ, ಡಿ.ಕೆ ಶಿವಕುಮಾರ್ ಅವರ ಮೇಲೆ ನಕಲಿ ಅಸ್ತ್ರ ಪ್ರಯೋಗಿಸಿದ್ದಾರೆ. ಆದರೆ, ಅದೇ ವ್ಯಕ್ತಿಯಿಂದ ಜೆಡಿಎಸ್, ಬಿಜೆಪಿಯ ಕುತಂತ್ರಗಳು ಬಯಲಾಗಿದೆ” ಎಂದು ಹೇಳಿದೆ. “ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಆಧಾರ ರಹಿತ ಸುಳ್ಳು ಆಪಾದನೆಗಳನ್ನು ವ್ಯಾಪಕವಾಗಿ ಮಾಡುತ್ತಿದ್ದರೂ ಕ್ರಮ ಕೈಗೊಳ್ಳದೇ ಸುಮ್ಮನಿರುವುದೇಕೆ?” ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿದೆ.

ಬಿಜೆಪಿ ಹಂಚಿಕೊಂಡ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ತನ್ನ ತೋಟಕ್ಕೆ ಕಾಂಗ್ರೆಸಿಗರು ಬೆಂಕಿ ಹಚ್ಚಿದ್ದಾರೆ ಎಂದು ಹೇಳುವುದನ್ನು ಕೇಳಬಹುದು. ಆದರೆ, ಆ ವ್ಯಕ್ತಿಯ ಮುಖ ಕಾಣುತ್ತಿಲ್ಲ. ಕಾಂಗ್ರೆಸ್‌ ಹಂಚಿಕೊಂಡಿರುವ ವಿಡಿಯೋದಲ್ಲಿ, ಮೊದಲು ವ್ಯಕ್ತಿಯೊಬ್ಬರು ತನ್ನ ತೋಟಕ್ಕೆ ಕಾಂಗ್ರೆಸ್‌ನವರು ಬೆಂಕಿ ಹಚ್ಚಿದ್ದಾರೆ ಎಂದು ಹೇಳಿರುವುದು ಮತ್ತು ಅದೇ ವ್ಯಕ್ತಿ ಜೆಡಿಎಸ್‌ನವರು ಬೆದರಿಸಿ ಹೀಗೆ ಹೇಳಿಸಿದ್ದಾರೆ ಎಂದಿರುವುದು ಇದೆ. ಇಲ್ಲಿ ಸತ್ಯ ಯಾವುದು ಎಂಬುವುದು ಸೂಕ್ತ ತನಿಖೆಯಿಂದ ತಿಳಿದು ಬರಬೇಕಿದೆ.

ಇದನ್ನೂ ಓದಿ : ‘ನಮ್ಮದು ಪ್ರಜಾಪ್ರಭುತ್ವ; ಪ್ರಧಾನಮಂತ್ರಿ ಏಕಚಕ್ರಾಧಿಪತಿ ಅಲ್ಲ..’; ದೇವೇಗೌಡರಿಗೆ ‘ಫೆಡರಲಿಸಂ’ ಪಾಠ ಮಾಡಿದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...