HomeUncategorizedಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

ಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

- Advertisement -
- Advertisement -

ಪಂಚರಾಜ್ಯ ಚುನಾವಣೆಗಳ ಪೈಕಿ ಪುದುಚೇರಿ ಚುನಾವಣೆ ಸಹ ತನ್ನದೇ ಆದ ಕಾರಣಕ್ಕಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಪಂಚರಾಜ್ಯಗಳ ಪೈಕಿ ಕೋಲ್ಕತ್ತಾ, ಕೇರಳ, ಅಸ್ಸಾಂ ಹಾಗೂ ತಮಿಳುನಾಡಿಗೆ ೫ ವರ್ಷದ ನಂತರ ಎಂದಿನಂತೆ ವಿಧಾನಸಭೆ ಚುನಾವಣೆ ಎದುರಾಗಿದ್ದರೆ, ಪುದುಚೇರಿಗೆ ಮಾತ್ರ ಆಪರೇಷನ್ ಕಮಲದ ಕಾರಣಕ್ಕೆ ಚುನಾವಣೆ ಎದುರಾಗಿತ್ತು. ಹೀಗಾಗಿ ಪುದುಚೇರಿಯಲ್ಲಿ ಚುನಾವಣೆ ನಂತರ ಮತ್ತೆ ಯಾವ ಸರ್ಕಾರ ಅದಿಕಾರಕ್ಕೆ ಬರಲಿದೆ ಎಂಬ ಬಗ್ಗೆ ರಾಜಕೀಯ ವಠಾರಗಳಲ್ಲಿ ಸಾಮಾನ್ಯ ಕುತೂಹಲವೊಂದು ಮನೆ ಮಾಡಿತ್ತು.

ಅನೇಕ ರಾಜ್ಯಗಳಲ್ಲಿ ಅನೇಕ ಬಾರಿ ಬಿಜೆಪಿ ಚುನಾವಣೆ ಎದುರಿಸಿ ಅಧಿಕಾರ ಹಿಡಿದದ್ದಕ್ಕಿಂತ ಆಪರೇಷನ್ ಕಮಲದ ಸಹಾಯದಿಂದ ಹಿಂಬಾಗಿಲ ಮೂಲಕ ಅಧಿಕಾರವನ್ನು ಹಿಡಿದದ್ದೆ ಹೆಚ್ಚು. ಬಿಜೆಪಿ ಪಕ್ಷದ ಈ ಸಾಂಪ್ರದಾಯಿಕ ಸೂತ್ರಕ್ಕೆ ಈಗ ಪುದುಚೇರಿಯೂ ಬಲಿಯಾಗಿದೆ. ಏಕೆಂದರೆ ಬಿಜೆಪಿ ಪಾಲಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕದ ಹೊರತು ಬೇರೆ ಎಲ್ಲೂ ಭದ್ರ ನೆಲೆ ಇಲ್ಲ. ಹೀಗಾಗಿ ಮತ್ತೊಂದು ಆವಾಸ ಸ್ಥಾನಕ್ಕೆ ಕಾಯ್ದಿದ್ದ ಬಿಜೆಪಿ ಕಣ್ಣಿಗೆ ಬಿದ್ದದ್ದು ತಮಿಳುನಾಡು ಮತ್ತು ಪುದುಚೇರಿ.

224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮತ್ತು ಪೆರಿಯಾರ್ ಚಿಂತನೆಗಳಿಗೆ ಗಟ್ಟಿಯಾಗಿಯೇ ಅಂಟಿಕೊಂಡಿರುವ ದ್ರಾವಿಡ ನಾಡಿನಲ್ಲಿ ಬಿಜೆಪಿಯ ಕೇಸರಿ ರಾಜಕಾರಣದ ಆಟ ನಡೆಯದು ಎಂಬ ವಿಚಾರ ಕಮಲ ಪಾಳಯಕ್ಕೆ ತಿಳಿಯದ ವಿಚಾರ ಏನಲ್ಲ. ಇದೇ ಕಾರಣಕ್ಕೆ ೩೦ ಕ್ಷೇತ್ರಗಳಿರುವ ಪಕ್ಕದ ಪುದುಚೇರಿಯನ್ನು ಹಿಡಿದರೆ, ಹಂತ ಹಂತವಾಗಿ ಹಿಂದುತ್ವದ ಹೆಸರಿನಲ್ಲಿ ತಮಿಳುನಾಡಿನಲ್ಲೂ ಅಧಿಕಾರ ಸಾಧ್ಯ ಎಂಬುದು ಬಿಜೆಪಿಯ ಲೆಕ್ಕಾಚಾರ. ಇದೇ ಕಾರಣಕ್ಕೆ ಕಳೆದ ಜನವರಿಯಲ್ಲಿ ಬಿಜೆಪಿ ನಾಯಕರು ವಿ. ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಬೀಳಿಸಿ ಇದೀಗ ತಮ್ಮ ಜಂಡಾ ಹಾರಿಸಲು ಮುಂದಾಗಿದೆ ಬಿಜೆಪಿ.

ಹಿಂಬಾಗಿಲಲ್ಲಿ ಪುದುಚೇರಿ ಹಿಡಿದ ಬಿಜೆಪಿ
ಪುದುಚೇರಿ ಕೇಂದ್ರಾಡಳಿತ ಪ್ರದೇಶವಾದರೂ ಸಹ ತಮಿಳುನಾಡಿನಿಂದ ಕೂಗಳತೆ ದೂರದಲ್ಲಿರುವ ಈ ಪ್ರದೇಶಕ್ಕೆ ಸಾಂಸ್ಕೃತಿಕ ರೀತಿನೀತಿಗಳಲ್ಲಿ ಹೆಚ್ಚೇನು ವ್ಯತ್ಯಾಸ ಇಲ್ಲ. ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಈ ಎರಡೂ ನಾಡುಗಳಿಗೆ ಸಾಕಷ್ಟು ಹೋಲಿಕೆಗಳಿವೆ. ಈ ಎರಡೂ ಭೂ ಪ್ರದೇಶವನ್ನು ತಮಿಳು ಭಾಷೆ ಬೆಸೆಯುವುದಲ್ಲದೆ, ಪೆರಿಯಾರ್ ಸಿದ್ದಾಂತಗಳ ಪ್ರಭಾವವೂ ಈ ಭಾಗದಲ್ಲಿ ಸಾಕಷ್ಟಿದೆ. ಹೀಗಾಗಿ ತಮಿಳುನಾಡಿನಂತೆಯೇ ಇಲ್ಲಿಯೂ ಬಿಜೆಪಿ ನೆಲೆಯೂರುವುದು ಅಷ್ಟು ಸುಲಭದ ವಿಚಾರವಾಗಿರಲಿಲ್ಲ. ಇದಕ್ಕೆ ಈ ಹಿಂದಿನ ಚುನಾವಣೆಗಳು ಸಾಕಷ್ಟು ಸಾಕ್ಷಿ ಒದಗಿಸುತ್ತವೆ.

ವಿ. ನಾರಾಯಣ ಸ್ವಾಮಿ ಅವರ ಕಾಂಗ್ರೆಸ್ ಸರ್ಕಾರಕ್ಕೆ ಇಕ್ಕಟ್ಟಾದ ಪರಿಸ್ಥಿತಿ ನಿರ್ಮಾಣ ಮಾಡುವ ಸಲುವಾಗಿಯೇ ತಮಿಳುನಾಡಿನ ಬಿಜೆಪಿ ನಾಯಕಿ ತಮಿಳಿಸೈ ಸೌಂದರ್ ರಾಜನ್ ಅವರನ್ನು ಪುದುಚೇರಿಯ ಹೊಸ ಗೌರ್ನರ್ ಆಗಿ ನೇಮಕ ಮಾಡಲಾಗಿತ್ತು. ತಮಿಳಿಸೈ ಸೌಂದರ್ ರಾಜನ್ ಒಂದೆಡೆ ತಮ್ಮ ಅಧಿಕಾರವನ್ನು ಬಳಸಿಕೊಂಡು ವಿ. ನಾರಾಯಣ ಸ್ವಾಮಿ ಸರ್ಕಾರವನ್ನು ಇನ್ನಿಲ್ಲದಂತೆ ಕಾಡಿದರೆ, ಮತ್ತೊಂದೆಡೆ ಬಿಜೆಪಿ ಸದ್ದಿಲ್ಲದೆ ತಮ್ಮ ಎಂದಿನ ಸಾಂಪ್ರದಾಯಿಕ ಆಪರೇಷನ್ ಕಮಲವನ್ನು ಜಾರಿಗೆ ತಂದಿತ್ತು. (ಇದಕ್ಕೂ ಮೊದಲು ರಾಜ್ಯಪಾಲರಾಗಿದ್ದ ಕಿರಣ ಬೇಡಿ ಮತ್ತು ನಾರಾಯಣಸ್ವಾಮಿಯವರ ಸರ್ಕಾರಕ್ಕೂ ಹಲವು ಜಟಾಪಟಿಗಳಾಗಿದ್ದವು). 6ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಕೊಂಡುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಪರಿಣಾಮ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಇದೀಗ ಬಿಜೆಪಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ರುಚಿ ಅನುಭವಿಸಲು ಮುಂದಾಗಿದೆ. ಆದರೆ, ಇದಕ್ಕೂ ಸಹ ಕಾಂಗ್ರೆಸ್ ಪಕ್ಷದ ಎಡವಟ್ಟಿನ ನಿರ್ಣಯಗಳೇ ಕಾರಣ ಎಂದರೆ ತಪ್ಪಾಗಲಾರದು.

ಬಿಜೆಪಿ ವರದಾನವಾದ ಕಾಂಗ್ರೆಸ್ ಎಡವಟ್ಟು
30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪುದುಚೇರಿಯಲ್ಲಿ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ನಂಬರ್ 16. ಈ ಪೈಕಿ ಬಿಜೆಪಿ 6 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ ಮೈತ್ರಿ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ 10ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿ ಮೈತ್ರಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಆದರೆ, ಸ್ಥಳೀಯ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಅಧಿಕಾರಕ್ಕೆ ಏರುತ್ತಿರುವುದು ಇದೇ ಮೊದಲೇನಲ್ಲ. ಎನ್. ರಂಗಸ್ವಾಮಿ ಕಾಂಗ್ರೆಸ್‌ನಿಂದ ಹೊರಬಂದು 2011ರಲ್ಲೇ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಪಕ್ಷ ಕಟ್ಟಿ, ಮೊದಲ ಚುನಾವಣೆಯಲ್ಲೇ ಬಹುಮತಗಳಿಸಿ ಅಧಿಕಾರಕ್ಕೆ ಬಂದಿದ್ದರು. ಇದೀಗ ಐದನೇ ಬಾರಿ ಸಿಎಂ ಪಟ್ಟಕ್ಕೆ ಏರಿದ್ದಾರೆ. ಅವರು ಎನ್‌ಡಿಎ ಮೈತ್ರಿಯ ಭಾಗವಾಗಿರುವ ಕಾರಣವಷ್ಟೆ ಇಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿದಂತಾಗಿದೆ. ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಹೆಸರಿನಲ್ಲಿ ಬಿಜೆಪಿಗೆ ಮತ ಲಭಿಸಿದೆ ಎಂದರೂ ತಪ್ಪಾಗಲಾರದು.

ಅಸಲಿಗೆ ಎನ್. ರಂಗಸ್ವಾಮಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ. ಹಲವು ದಶಕಗಳಿಂದ ಅಧಿಕಾರ ಡಿಎಂಕೆ ಮತ್ತು ಎಡಿಎಂಕೆ ಕೈಲಿದ್ದ ಪುದುಚೇರಿಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎನ್. ರಂಗಸ್ವಾಮಿ ಪ್ರಮುಖ ಕಾರಣಕರ್ತರಾಗಿದ್ದರು. 2001ರಿಂದ 2008ರವರೆಗೆ ಎರಡು ಅವಧಿಗೆ ಸಿಎಂ ಆಗಿದ್ದ ಅವರು ಹಲವು ಜನಪ್ರಿಯ ಯೋಜನೆಗಳ ಮೂಲಕ ಮನೆಮಾತಾಗಿದ್ದರು. ಒಂದು ಹಂತದಲ್ಲಿ ಪುದುಚೇರಿಯ ಕಾಮರಾಜ್, ಜನರ ಸಿಎಂ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಪುದುಚೇರಿ ಮಟ್ಟಿಗೆ ಅವರನ್ನು ಅಜಾತಶತ್ರು ಎಂದೇ ಕರೆಯಲಾಗಿತ್ತು.

ಆದರೆ, 2008ರಲ್ಲಿ ಪಕ್ಷದ ಆಂತರಿಕ ರಾಜಕಾರಣದ ನೆಪ ಹೇಳಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲಾಗಿತ್ತು. ಇದರಿಂದ ಕುಪಿತಗೊಂಡ ರಂಗಸ್ವಾಮಿಯವರು ಆಲ್ ಇಂಡಿಯಾ ಎನ್. ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿ ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ಅಧಿಕಾರ ಹಿಡಿದಿದ್ದು ಇಂದು ಇತಿಹಾಸ. ಈ ಘಟನೆಯ ನಂತರ ಕಾಂಗ್ರೆಸ್‌ನಿಂದ ಶಾಶ್ವತವಾಗಿ ದೂರವಾದ ಎನ್. ರಂಗಸ್ವಾಮಿ ಎನ್‌ಡಿಎ ಜೊತೆ ಮೈತ್ರಿ ಸಾಧಿಸಿದ್ದರು. ಇಂದು ಅವರ ಮೂಲಕವೇ ಕೋಮುವಾದಿ ಬಿಜೆಪಿ ದ್ರಾವಿಡ ನಾಡಿನ ಪಕ್ಕದಲ್ಲೇ ಜಂಡಾ ಹಾರಿಸುವಂತಾದದ್ದು ಮಾತ್ರ ವಿಪರ್ಯಾಸ.


ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...