HomeUncategorizedಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

ಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

- Advertisement -
- Advertisement -

ಪಂಚರಾಜ್ಯ ಚುನಾವಣೆಗಳ ಪೈಕಿ ಪುದುಚೇರಿ ಚುನಾವಣೆ ಸಹ ತನ್ನದೇ ಆದ ಕಾರಣಕ್ಕಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಪಂಚರಾಜ್ಯಗಳ ಪೈಕಿ ಕೋಲ್ಕತ್ತಾ, ಕೇರಳ, ಅಸ್ಸಾಂ ಹಾಗೂ ತಮಿಳುನಾಡಿಗೆ ೫ ವರ್ಷದ ನಂತರ ಎಂದಿನಂತೆ ವಿಧಾನಸಭೆ ಚುನಾವಣೆ ಎದುರಾಗಿದ್ದರೆ, ಪುದುಚೇರಿಗೆ ಮಾತ್ರ ಆಪರೇಷನ್ ಕಮಲದ ಕಾರಣಕ್ಕೆ ಚುನಾವಣೆ ಎದುರಾಗಿತ್ತು. ಹೀಗಾಗಿ ಪುದುಚೇರಿಯಲ್ಲಿ ಚುನಾವಣೆ ನಂತರ ಮತ್ತೆ ಯಾವ ಸರ್ಕಾರ ಅದಿಕಾರಕ್ಕೆ ಬರಲಿದೆ ಎಂಬ ಬಗ್ಗೆ ರಾಜಕೀಯ ವಠಾರಗಳಲ್ಲಿ ಸಾಮಾನ್ಯ ಕುತೂಹಲವೊಂದು ಮನೆ ಮಾಡಿತ್ತು.

ಅನೇಕ ರಾಜ್ಯಗಳಲ್ಲಿ ಅನೇಕ ಬಾರಿ ಬಿಜೆಪಿ ಚುನಾವಣೆ ಎದುರಿಸಿ ಅಧಿಕಾರ ಹಿಡಿದದ್ದಕ್ಕಿಂತ ಆಪರೇಷನ್ ಕಮಲದ ಸಹಾಯದಿಂದ ಹಿಂಬಾಗಿಲ ಮೂಲಕ ಅಧಿಕಾರವನ್ನು ಹಿಡಿದದ್ದೆ ಹೆಚ್ಚು. ಬಿಜೆಪಿ ಪಕ್ಷದ ಈ ಸಾಂಪ್ರದಾಯಿಕ ಸೂತ್ರಕ್ಕೆ ಈಗ ಪುದುಚೇರಿಯೂ ಬಲಿಯಾಗಿದೆ. ಏಕೆಂದರೆ ಬಿಜೆಪಿ ಪಾಲಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕದ ಹೊರತು ಬೇರೆ ಎಲ್ಲೂ ಭದ್ರ ನೆಲೆ ಇಲ್ಲ. ಹೀಗಾಗಿ ಮತ್ತೊಂದು ಆವಾಸ ಸ್ಥಾನಕ್ಕೆ ಕಾಯ್ದಿದ್ದ ಬಿಜೆಪಿ ಕಣ್ಣಿಗೆ ಬಿದ್ದದ್ದು ತಮಿಳುನಾಡು ಮತ್ತು ಪುದುಚೇರಿ.

224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮತ್ತು ಪೆರಿಯಾರ್ ಚಿಂತನೆಗಳಿಗೆ ಗಟ್ಟಿಯಾಗಿಯೇ ಅಂಟಿಕೊಂಡಿರುವ ದ್ರಾವಿಡ ನಾಡಿನಲ್ಲಿ ಬಿಜೆಪಿಯ ಕೇಸರಿ ರಾಜಕಾರಣದ ಆಟ ನಡೆಯದು ಎಂಬ ವಿಚಾರ ಕಮಲ ಪಾಳಯಕ್ಕೆ ತಿಳಿಯದ ವಿಚಾರ ಏನಲ್ಲ. ಇದೇ ಕಾರಣಕ್ಕೆ ೩೦ ಕ್ಷೇತ್ರಗಳಿರುವ ಪಕ್ಕದ ಪುದುಚೇರಿಯನ್ನು ಹಿಡಿದರೆ, ಹಂತ ಹಂತವಾಗಿ ಹಿಂದುತ್ವದ ಹೆಸರಿನಲ್ಲಿ ತಮಿಳುನಾಡಿನಲ್ಲೂ ಅಧಿಕಾರ ಸಾಧ್ಯ ಎಂಬುದು ಬಿಜೆಪಿಯ ಲೆಕ್ಕಾಚಾರ. ಇದೇ ಕಾರಣಕ್ಕೆ ಕಳೆದ ಜನವರಿಯಲ್ಲಿ ಬಿಜೆಪಿ ನಾಯಕರು ವಿ. ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಬೀಳಿಸಿ ಇದೀಗ ತಮ್ಮ ಜಂಡಾ ಹಾರಿಸಲು ಮುಂದಾಗಿದೆ ಬಿಜೆಪಿ.

ಹಿಂಬಾಗಿಲಲ್ಲಿ ಪುದುಚೇರಿ ಹಿಡಿದ ಬಿಜೆಪಿ
ಪುದುಚೇರಿ ಕೇಂದ್ರಾಡಳಿತ ಪ್ರದೇಶವಾದರೂ ಸಹ ತಮಿಳುನಾಡಿನಿಂದ ಕೂಗಳತೆ ದೂರದಲ್ಲಿರುವ ಈ ಪ್ರದೇಶಕ್ಕೆ ಸಾಂಸ್ಕೃತಿಕ ರೀತಿನೀತಿಗಳಲ್ಲಿ ಹೆಚ್ಚೇನು ವ್ಯತ್ಯಾಸ ಇಲ್ಲ. ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಈ ಎರಡೂ ನಾಡುಗಳಿಗೆ ಸಾಕಷ್ಟು ಹೋಲಿಕೆಗಳಿವೆ. ಈ ಎರಡೂ ಭೂ ಪ್ರದೇಶವನ್ನು ತಮಿಳು ಭಾಷೆ ಬೆಸೆಯುವುದಲ್ಲದೆ, ಪೆರಿಯಾರ್ ಸಿದ್ದಾಂತಗಳ ಪ್ರಭಾವವೂ ಈ ಭಾಗದಲ್ಲಿ ಸಾಕಷ್ಟಿದೆ. ಹೀಗಾಗಿ ತಮಿಳುನಾಡಿನಂತೆಯೇ ಇಲ್ಲಿಯೂ ಬಿಜೆಪಿ ನೆಲೆಯೂರುವುದು ಅಷ್ಟು ಸುಲಭದ ವಿಚಾರವಾಗಿರಲಿಲ್ಲ. ಇದಕ್ಕೆ ಈ ಹಿಂದಿನ ಚುನಾವಣೆಗಳು ಸಾಕಷ್ಟು ಸಾಕ್ಷಿ ಒದಗಿಸುತ್ತವೆ.

ವಿ. ನಾರಾಯಣ ಸ್ವಾಮಿ ಅವರ ಕಾಂಗ್ರೆಸ್ ಸರ್ಕಾರಕ್ಕೆ ಇಕ್ಕಟ್ಟಾದ ಪರಿಸ್ಥಿತಿ ನಿರ್ಮಾಣ ಮಾಡುವ ಸಲುವಾಗಿಯೇ ತಮಿಳುನಾಡಿನ ಬಿಜೆಪಿ ನಾಯಕಿ ತಮಿಳಿಸೈ ಸೌಂದರ್ ರಾಜನ್ ಅವರನ್ನು ಪುದುಚೇರಿಯ ಹೊಸ ಗೌರ್ನರ್ ಆಗಿ ನೇಮಕ ಮಾಡಲಾಗಿತ್ತು. ತಮಿಳಿಸೈ ಸೌಂದರ್ ರಾಜನ್ ಒಂದೆಡೆ ತಮ್ಮ ಅಧಿಕಾರವನ್ನು ಬಳಸಿಕೊಂಡು ವಿ. ನಾರಾಯಣ ಸ್ವಾಮಿ ಸರ್ಕಾರವನ್ನು ಇನ್ನಿಲ್ಲದಂತೆ ಕಾಡಿದರೆ, ಮತ್ತೊಂದೆಡೆ ಬಿಜೆಪಿ ಸದ್ದಿಲ್ಲದೆ ತಮ್ಮ ಎಂದಿನ ಸಾಂಪ್ರದಾಯಿಕ ಆಪರೇಷನ್ ಕಮಲವನ್ನು ಜಾರಿಗೆ ತಂದಿತ್ತು. (ಇದಕ್ಕೂ ಮೊದಲು ರಾಜ್ಯಪಾಲರಾಗಿದ್ದ ಕಿರಣ ಬೇಡಿ ಮತ್ತು ನಾರಾಯಣಸ್ವಾಮಿಯವರ ಸರ್ಕಾರಕ್ಕೂ ಹಲವು ಜಟಾಪಟಿಗಳಾಗಿದ್ದವು). 6ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಕೊಂಡುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಪರಿಣಾಮ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಇದೀಗ ಬಿಜೆಪಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ರುಚಿ ಅನುಭವಿಸಲು ಮುಂದಾಗಿದೆ. ಆದರೆ, ಇದಕ್ಕೂ ಸಹ ಕಾಂಗ್ರೆಸ್ ಪಕ್ಷದ ಎಡವಟ್ಟಿನ ನಿರ್ಣಯಗಳೇ ಕಾರಣ ಎಂದರೆ ತಪ್ಪಾಗಲಾರದು.

ಬಿಜೆಪಿ ವರದಾನವಾದ ಕಾಂಗ್ರೆಸ್ ಎಡವಟ್ಟು
30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪುದುಚೇರಿಯಲ್ಲಿ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ನಂಬರ್ 16. ಈ ಪೈಕಿ ಬಿಜೆಪಿ 6 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ ಮೈತ್ರಿ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ 10ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿ ಮೈತ್ರಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಆದರೆ, ಸ್ಥಳೀಯ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಅಧಿಕಾರಕ್ಕೆ ಏರುತ್ತಿರುವುದು ಇದೇ ಮೊದಲೇನಲ್ಲ. ಎನ್. ರಂಗಸ್ವಾಮಿ ಕಾಂಗ್ರೆಸ್‌ನಿಂದ ಹೊರಬಂದು 2011ರಲ್ಲೇ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಪಕ್ಷ ಕಟ್ಟಿ, ಮೊದಲ ಚುನಾವಣೆಯಲ್ಲೇ ಬಹುಮತಗಳಿಸಿ ಅಧಿಕಾರಕ್ಕೆ ಬಂದಿದ್ದರು. ಇದೀಗ ಐದನೇ ಬಾರಿ ಸಿಎಂ ಪಟ್ಟಕ್ಕೆ ಏರಿದ್ದಾರೆ. ಅವರು ಎನ್‌ಡಿಎ ಮೈತ್ರಿಯ ಭಾಗವಾಗಿರುವ ಕಾರಣವಷ್ಟೆ ಇಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿದಂತಾಗಿದೆ. ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಹೆಸರಿನಲ್ಲಿ ಬಿಜೆಪಿಗೆ ಮತ ಲಭಿಸಿದೆ ಎಂದರೂ ತಪ್ಪಾಗಲಾರದು.

ಅಸಲಿಗೆ ಎನ್. ರಂಗಸ್ವಾಮಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ. ಹಲವು ದಶಕಗಳಿಂದ ಅಧಿಕಾರ ಡಿಎಂಕೆ ಮತ್ತು ಎಡಿಎಂಕೆ ಕೈಲಿದ್ದ ಪುದುಚೇರಿಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎನ್. ರಂಗಸ್ವಾಮಿ ಪ್ರಮುಖ ಕಾರಣಕರ್ತರಾಗಿದ್ದರು. 2001ರಿಂದ 2008ರವರೆಗೆ ಎರಡು ಅವಧಿಗೆ ಸಿಎಂ ಆಗಿದ್ದ ಅವರು ಹಲವು ಜನಪ್ರಿಯ ಯೋಜನೆಗಳ ಮೂಲಕ ಮನೆಮಾತಾಗಿದ್ದರು. ಒಂದು ಹಂತದಲ್ಲಿ ಪುದುಚೇರಿಯ ಕಾಮರಾಜ್, ಜನರ ಸಿಎಂ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಪುದುಚೇರಿ ಮಟ್ಟಿಗೆ ಅವರನ್ನು ಅಜಾತಶತ್ರು ಎಂದೇ ಕರೆಯಲಾಗಿತ್ತು.

ಆದರೆ, 2008ರಲ್ಲಿ ಪಕ್ಷದ ಆಂತರಿಕ ರಾಜಕಾರಣದ ನೆಪ ಹೇಳಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲಾಗಿತ್ತು. ಇದರಿಂದ ಕುಪಿತಗೊಂಡ ರಂಗಸ್ವಾಮಿಯವರು ಆಲ್ ಇಂಡಿಯಾ ಎನ್. ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿ ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ಅಧಿಕಾರ ಹಿಡಿದಿದ್ದು ಇಂದು ಇತಿಹಾಸ. ಈ ಘಟನೆಯ ನಂತರ ಕಾಂಗ್ರೆಸ್‌ನಿಂದ ಶಾಶ್ವತವಾಗಿ ದೂರವಾದ ಎನ್. ರಂಗಸ್ವಾಮಿ ಎನ್‌ಡಿಎ ಜೊತೆ ಮೈತ್ರಿ ಸಾಧಿಸಿದ್ದರು. ಇಂದು ಅವರ ಮೂಲಕವೇ ಕೋಮುವಾದಿ ಬಿಜೆಪಿ ದ್ರಾವಿಡ ನಾಡಿನ ಪಕ್ಕದಲ್ಲೇ ಜಂಡಾ ಹಾರಿಸುವಂತಾದದ್ದು ಮಾತ್ರ ವಿಪರ್ಯಾಸ.


ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...