HomeUncategorizedಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

ಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

- Advertisement -
- Advertisement -

ಪಂಚರಾಜ್ಯ ಚುನಾವಣೆಗಳ ಪೈಕಿ ಪುದುಚೇರಿ ಚುನಾವಣೆ ಸಹ ತನ್ನದೇ ಆದ ಕಾರಣಕ್ಕಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಪಂಚರಾಜ್ಯಗಳ ಪೈಕಿ ಕೋಲ್ಕತ್ತಾ, ಕೇರಳ, ಅಸ್ಸಾಂ ಹಾಗೂ ತಮಿಳುನಾಡಿಗೆ ೫ ವರ್ಷದ ನಂತರ ಎಂದಿನಂತೆ ವಿಧಾನಸಭೆ ಚುನಾವಣೆ ಎದುರಾಗಿದ್ದರೆ, ಪುದುಚೇರಿಗೆ ಮಾತ್ರ ಆಪರೇಷನ್ ಕಮಲದ ಕಾರಣಕ್ಕೆ ಚುನಾವಣೆ ಎದುರಾಗಿತ್ತು. ಹೀಗಾಗಿ ಪುದುಚೇರಿಯಲ್ಲಿ ಚುನಾವಣೆ ನಂತರ ಮತ್ತೆ ಯಾವ ಸರ್ಕಾರ ಅದಿಕಾರಕ್ಕೆ ಬರಲಿದೆ ಎಂಬ ಬಗ್ಗೆ ರಾಜಕೀಯ ವಠಾರಗಳಲ್ಲಿ ಸಾಮಾನ್ಯ ಕುತೂಹಲವೊಂದು ಮನೆ ಮಾಡಿತ್ತು.

ಅನೇಕ ರಾಜ್ಯಗಳಲ್ಲಿ ಅನೇಕ ಬಾರಿ ಬಿಜೆಪಿ ಚುನಾವಣೆ ಎದುರಿಸಿ ಅಧಿಕಾರ ಹಿಡಿದದ್ದಕ್ಕಿಂತ ಆಪರೇಷನ್ ಕಮಲದ ಸಹಾಯದಿಂದ ಹಿಂಬಾಗಿಲ ಮೂಲಕ ಅಧಿಕಾರವನ್ನು ಹಿಡಿದದ್ದೆ ಹೆಚ್ಚು. ಬಿಜೆಪಿ ಪಕ್ಷದ ಈ ಸಾಂಪ್ರದಾಯಿಕ ಸೂತ್ರಕ್ಕೆ ಈಗ ಪುದುಚೇರಿಯೂ ಬಲಿಯಾಗಿದೆ. ಏಕೆಂದರೆ ಬಿಜೆಪಿ ಪಾಲಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕದ ಹೊರತು ಬೇರೆ ಎಲ್ಲೂ ಭದ್ರ ನೆಲೆ ಇಲ್ಲ. ಹೀಗಾಗಿ ಮತ್ತೊಂದು ಆವಾಸ ಸ್ಥಾನಕ್ಕೆ ಕಾಯ್ದಿದ್ದ ಬಿಜೆಪಿ ಕಣ್ಣಿಗೆ ಬಿದ್ದದ್ದು ತಮಿಳುನಾಡು ಮತ್ತು ಪುದುಚೇರಿ.

224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮತ್ತು ಪೆರಿಯಾರ್ ಚಿಂತನೆಗಳಿಗೆ ಗಟ್ಟಿಯಾಗಿಯೇ ಅಂಟಿಕೊಂಡಿರುವ ದ್ರಾವಿಡ ನಾಡಿನಲ್ಲಿ ಬಿಜೆಪಿಯ ಕೇಸರಿ ರಾಜಕಾರಣದ ಆಟ ನಡೆಯದು ಎಂಬ ವಿಚಾರ ಕಮಲ ಪಾಳಯಕ್ಕೆ ತಿಳಿಯದ ವಿಚಾರ ಏನಲ್ಲ. ಇದೇ ಕಾರಣಕ್ಕೆ ೩೦ ಕ್ಷೇತ್ರಗಳಿರುವ ಪಕ್ಕದ ಪುದುಚೇರಿಯನ್ನು ಹಿಡಿದರೆ, ಹಂತ ಹಂತವಾಗಿ ಹಿಂದುತ್ವದ ಹೆಸರಿನಲ್ಲಿ ತಮಿಳುನಾಡಿನಲ್ಲೂ ಅಧಿಕಾರ ಸಾಧ್ಯ ಎಂಬುದು ಬಿಜೆಪಿಯ ಲೆಕ್ಕಾಚಾರ. ಇದೇ ಕಾರಣಕ್ಕೆ ಕಳೆದ ಜನವರಿಯಲ್ಲಿ ಬಿಜೆಪಿ ನಾಯಕರು ವಿ. ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಬೀಳಿಸಿ ಇದೀಗ ತಮ್ಮ ಜಂಡಾ ಹಾರಿಸಲು ಮುಂದಾಗಿದೆ ಬಿಜೆಪಿ.

ಹಿಂಬಾಗಿಲಲ್ಲಿ ಪುದುಚೇರಿ ಹಿಡಿದ ಬಿಜೆಪಿ
ಪುದುಚೇರಿ ಕೇಂದ್ರಾಡಳಿತ ಪ್ರದೇಶವಾದರೂ ಸಹ ತಮಿಳುನಾಡಿನಿಂದ ಕೂಗಳತೆ ದೂರದಲ್ಲಿರುವ ಈ ಪ್ರದೇಶಕ್ಕೆ ಸಾಂಸ್ಕೃತಿಕ ರೀತಿನೀತಿಗಳಲ್ಲಿ ಹೆಚ್ಚೇನು ವ್ಯತ್ಯಾಸ ಇಲ್ಲ. ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಈ ಎರಡೂ ನಾಡುಗಳಿಗೆ ಸಾಕಷ್ಟು ಹೋಲಿಕೆಗಳಿವೆ. ಈ ಎರಡೂ ಭೂ ಪ್ರದೇಶವನ್ನು ತಮಿಳು ಭಾಷೆ ಬೆಸೆಯುವುದಲ್ಲದೆ, ಪೆರಿಯಾರ್ ಸಿದ್ದಾಂತಗಳ ಪ್ರಭಾವವೂ ಈ ಭಾಗದಲ್ಲಿ ಸಾಕಷ್ಟಿದೆ. ಹೀಗಾಗಿ ತಮಿಳುನಾಡಿನಂತೆಯೇ ಇಲ್ಲಿಯೂ ಬಿಜೆಪಿ ನೆಲೆಯೂರುವುದು ಅಷ್ಟು ಸುಲಭದ ವಿಚಾರವಾಗಿರಲಿಲ್ಲ. ಇದಕ್ಕೆ ಈ ಹಿಂದಿನ ಚುನಾವಣೆಗಳು ಸಾಕಷ್ಟು ಸಾಕ್ಷಿ ಒದಗಿಸುತ್ತವೆ.

ವಿ. ನಾರಾಯಣ ಸ್ವಾಮಿ ಅವರ ಕಾಂಗ್ರೆಸ್ ಸರ್ಕಾರಕ್ಕೆ ಇಕ್ಕಟ್ಟಾದ ಪರಿಸ್ಥಿತಿ ನಿರ್ಮಾಣ ಮಾಡುವ ಸಲುವಾಗಿಯೇ ತಮಿಳುನಾಡಿನ ಬಿಜೆಪಿ ನಾಯಕಿ ತಮಿಳಿಸೈ ಸೌಂದರ್ ರಾಜನ್ ಅವರನ್ನು ಪುದುಚೇರಿಯ ಹೊಸ ಗೌರ್ನರ್ ಆಗಿ ನೇಮಕ ಮಾಡಲಾಗಿತ್ತು. ತಮಿಳಿಸೈ ಸೌಂದರ್ ರಾಜನ್ ಒಂದೆಡೆ ತಮ್ಮ ಅಧಿಕಾರವನ್ನು ಬಳಸಿಕೊಂಡು ವಿ. ನಾರಾಯಣ ಸ್ವಾಮಿ ಸರ್ಕಾರವನ್ನು ಇನ್ನಿಲ್ಲದಂತೆ ಕಾಡಿದರೆ, ಮತ್ತೊಂದೆಡೆ ಬಿಜೆಪಿ ಸದ್ದಿಲ್ಲದೆ ತಮ್ಮ ಎಂದಿನ ಸಾಂಪ್ರದಾಯಿಕ ಆಪರೇಷನ್ ಕಮಲವನ್ನು ಜಾರಿಗೆ ತಂದಿತ್ತು. (ಇದಕ್ಕೂ ಮೊದಲು ರಾಜ್ಯಪಾಲರಾಗಿದ್ದ ಕಿರಣ ಬೇಡಿ ಮತ್ತು ನಾರಾಯಣಸ್ವಾಮಿಯವರ ಸರ್ಕಾರಕ್ಕೂ ಹಲವು ಜಟಾಪಟಿಗಳಾಗಿದ್ದವು). 6ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಕೊಂಡುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಪರಿಣಾಮ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಇದೀಗ ಬಿಜೆಪಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ರುಚಿ ಅನುಭವಿಸಲು ಮುಂದಾಗಿದೆ. ಆದರೆ, ಇದಕ್ಕೂ ಸಹ ಕಾಂಗ್ರೆಸ್ ಪಕ್ಷದ ಎಡವಟ್ಟಿನ ನಿರ್ಣಯಗಳೇ ಕಾರಣ ಎಂದರೆ ತಪ್ಪಾಗಲಾರದು.

ಬಿಜೆಪಿ ವರದಾನವಾದ ಕಾಂಗ್ರೆಸ್ ಎಡವಟ್ಟು
30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪುದುಚೇರಿಯಲ್ಲಿ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ನಂಬರ್ 16. ಈ ಪೈಕಿ ಬಿಜೆಪಿ 6 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ ಮೈತ್ರಿ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ 10ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿ ಮೈತ್ರಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಆದರೆ, ಸ್ಥಳೀಯ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಅಧಿಕಾರಕ್ಕೆ ಏರುತ್ತಿರುವುದು ಇದೇ ಮೊದಲೇನಲ್ಲ. ಎನ್. ರಂಗಸ್ವಾಮಿ ಕಾಂಗ್ರೆಸ್‌ನಿಂದ ಹೊರಬಂದು 2011ರಲ್ಲೇ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಪಕ್ಷ ಕಟ್ಟಿ, ಮೊದಲ ಚುನಾವಣೆಯಲ್ಲೇ ಬಹುಮತಗಳಿಸಿ ಅಧಿಕಾರಕ್ಕೆ ಬಂದಿದ್ದರು. ಇದೀಗ ಐದನೇ ಬಾರಿ ಸಿಎಂ ಪಟ್ಟಕ್ಕೆ ಏರಿದ್ದಾರೆ. ಅವರು ಎನ್‌ಡಿಎ ಮೈತ್ರಿಯ ಭಾಗವಾಗಿರುವ ಕಾರಣವಷ್ಟೆ ಇಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿದಂತಾಗಿದೆ. ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಹೆಸರಿನಲ್ಲಿ ಬಿಜೆಪಿಗೆ ಮತ ಲಭಿಸಿದೆ ಎಂದರೂ ತಪ್ಪಾಗಲಾರದು.

ಅಸಲಿಗೆ ಎನ್. ರಂಗಸ್ವಾಮಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ. ಹಲವು ದಶಕಗಳಿಂದ ಅಧಿಕಾರ ಡಿಎಂಕೆ ಮತ್ತು ಎಡಿಎಂಕೆ ಕೈಲಿದ್ದ ಪುದುಚೇರಿಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎನ್. ರಂಗಸ್ವಾಮಿ ಪ್ರಮುಖ ಕಾರಣಕರ್ತರಾಗಿದ್ದರು. 2001ರಿಂದ 2008ರವರೆಗೆ ಎರಡು ಅವಧಿಗೆ ಸಿಎಂ ಆಗಿದ್ದ ಅವರು ಹಲವು ಜನಪ್ರಿಯ ಯೋಜನೆಗಳ ಮೂಲಕ ಮನೆಮಾತಾಗಿದ್ದರು. ಒಂದು ಹಂತದಲ್ಲಿ ಪುದುಚೇರಿಯ ಕಾಮರಾಜ್, ಜನರ ಸಿಎಂ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಪುದುಚೇರಿ ಮಟ್ಟಿಗೆ ಅವರನ್ನು ಅಜಾತಶತ್ರು ಎಂದೇ ಕರೆಯಲಾಗಿತ್ತು.

ಆದರೆ, 2008ರಲ್ಲಿ ಪಕ್ಷದ ಆಂತರಿಕ ರಾಜಕಾರಣದ ನೆಪ ಹೇಳಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲಾಗಿತ್ತು. ಇದರಿಂದ ಕುಪಿತಗೊಂಡ ರಂಗಸ್ವಾಮಿಯವರು ಆಲ್ ಇಂಡಿಯಾ ಎನ್. ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿ ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ಅಧಿಕಾರ ಹಿಡಿದಿದ್ದು ಇಂದು ಇತಿಹಾಸ. ಈ ಘಟನೆಯ ನಂತರ ಕಾಂಗ್ರೆಸ್‌ನಿಂದ ಶಾಶ್ವತವಾಗಿ ದೂರವಾದ ಎನ್. ರಂಗಸ್ವಾಮಿ ಎನ್‌ಡಿಎ ಜೊತೆ ಮೈತ್ರಿ ಸಾಧಿಸಿದ್ದರು. ಇಂದು ಅವರ ಮೂಲಕವೇ ಕೋಮುವಾದಿ ಬಿಜೆಪಿ ದ್ರಾವಿಡ ನಾಡಿನ ಪಕ್ಕದಲ್ಲೇ ಜಂಡಾ ಹಾರಿಸುವಂತಾದದ್ದು ಮಾತ್ರ ವಿಪರ್ಯಾಸ.


ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...