HomeUncategorizedಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

ಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

- Advertisement -
- Advertisement -

ಪಂಚರಾಜ್ಯ ಚುನಾವಣೆಗಳ ಪೈಕಿ ಪುದುಚೇರಿ ಚುನಾವಣೆ ಸಹ ತನ್ನದೇ ಆದ ಕಾರಣಕ್ಕಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಪಂಚರಾಜ್ಯಗಳ ಪೈಕಿ ಕೋಲ್ಕತ್ತಾ, ಕೇರಳ, ಅಸ್ಸಾಂ ಹಾಗೂ ತಮಿಳುನಾಡಿಗೆ ೫ ವರ್ಷದ ನಂತರ ಎಂದಿನಂತೆ ವಿಧಾನಸಭೆ ಚುನಾವಣೆ ಎದುರಾಗಿದ್ದರೆ, ಪುದುಚೇರಿಗೆ ಮಾತ್ರ ಆಪರೇಷನ್ ಕಮಲದ ಕಾರಣಕ್ಕೆ ಚುನಾವಣೆ ಎದುರಾಗಿತ್ತು. ಹೀಗಾಗಿ ಪುದುಚೇರಿಯಲ್ಲಿ ಚುನಾವಣೆ ನಂತರ ಮತ್ತೆ ಯಾವ ಸರ್ಕಾರ ಅದಿಕಾರಕ್ಕೆ ಬರಲಿದೆ ಎಂಬ ಬಗ್ಗೆ ರಾಜಕೀಯ ವಠಾರಗಳಲ್ಲಿ ಸಾಮಾನ್ಯ ಕುತೂಹಲವೊಂದು ಮನೆ ಮಾಡಿತ್ತು.

ಅನೇಕ ರಾಜ್ಯಗಳಲ್ಲಿ ಅನೇಕ ಬಾರಿ ಬಿಜೆಪಿ ಚುನಾವಣೆ ಎದುರಿಸಿ ಅಧಿಕಾರ ಹಿಡಿದದ್ದಕ್ಕಿಂತ ಆಪರೇಷನ್ ಕಮಲದ ಸಹಾಯದಿಂದ ಹಿಂಬಾಗಿಲ ಮೂಲಕ ಅಧಿಕಾರವನ್ನು ಹಿಡಿದದ್ದೆ ಹೆಚ್ಚು. ಬಿಜೆಪಿ ಪಕ್ಷದ ಈ ಸಾಂಪ್ರದಾಯಿಕ ಸೂತ್ರಕ್ಕೆ ಈಗ ಪುದುಚೇರಿಯೂ ಬಲಿಯಾಗಿದೆ. ಏಕೆಂದರೆ ಬಿಜೆಪಿ ಪಾಲಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕದ ಹೊರತು ಬೇರೆ ಎಲ್ಲೂ ಭದ್ರ ನೆಲೆ ಇಲ್ಲ. ಹೀಗಾಗಿ ಮತ್ತೊಂದು ಆವಾಸ ಸ್ಥಾನಕ್ಕೆ ಕಾಯ್ದಿದ್ದ ಬಿಜೆಪಿ ಕಣ್ಣಿಗೆ ಬಿದ್ದದ್ದು ತಮಿಳುನಾಡು ಮತ್ತು ಪುದುಚೇರಿ.

224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮತ್ತು ಪೆರಿಯಾರ್ ಚಿಂತನೆಗಳಿಗೆ ಗಟ್ಟಿಯಾಗಿಯೇ ಅಂಟಿಕೊಂಡಿರುವ ದ್ರಾವಿಡ ನಾಡಿನಲ್ಲಿ ಬಿಜೆಪಿಯ ಕೇಸರಿ ರಾಜಕಾರಣದ ಆಟ ನಡೆಯದು ಎಂಬ ವಿಚಾರ ಕಮಲ ಪಾಳಯಕ್ಕೆ ತಿಳಿಯದ ವಿಚಾರ ಏನಲ್ಲ. ಇದೇ ಕಾರಣಕ್ಕೆ ೩೦ ಕ್ಷೇತ್ರಗಳಿರುವ ಪಕ್ಕದ ಪುದುಚೇರಿಯನ್ನು ಹಿಡಿದರೆ, ಹಂತ ಹಂತವಾಗಿ ಹಿಂದುತ್ವದ ಹೆಸರಿನಲ್ಲಿ ತಮಿಳುನಾಡಿನಲ್ಲೂ ಅಧಿಕಾರ ಸಾಧ್ಯ ಎಂಬುದು ಬಿಜೆಪಿಯ ಲೆಕ್ಕಾಚಾರ. ಇದೇ ಕಾರಣಕ್ಕೆ ಕಳೆದ ಜನವರಿಯಲ್ಲಿ ಬಿಜೆಪಿ ನಾಯಕರು ವಿ. ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಬೀಳಿಸಿ ಇದೀಗ ತಮ್ಮ ಜಂಡಾ ಹಾರಿಸಲು ಮುಂದಾಗಿದೆ ಬಿಜೆಪಿ.

ಹಿಂಬಾಗಿಲಲ್ಲಿ ಪುದುಚೇರಿ ಹಿಡಿದ ಬಿಜೆಪಿ
ಪುದುಚೇರಿ ಕೇಂದ್ರಾಡಳಿತ ಪ್ರದೇಶವಾದರೂ ಸಹ ತಮಿಳುನಾಡಿನಿಂದ ಕೂಗಳತೆ ದೂರದಲ್ಲಿರುವ ಈ ಪ್ರದೇಶಕ್ಕೆ ಸಾಂಸ್ಕೃತಿಕ ರೀತಿನೀತಿಗಳಲ್ಲಿ ಹೆಚ್ಚೇನು ವ್ಯತ್ಯಾಸ ಇಲ್ಲ. ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಈ ಎರಡೂ ನಾಡುಗಳಿಗೆ ಸಾಕಷ್ಟು ಹೋಲಿಕೆಗಳಿವೆ. ಈ ಎರಡೂ ಭೂ ಪ್ರದೇಶವನ್ನು ತಮಿಳು ಭಾಷೆ ಬೆಸೆಯುವುದಲ್ಲದೆ, ಪೆರಿಯಾರ್ ಸಿದ್ದಾಂತಗಳ ಪ್ರಭಾವವೂ ಈ ಭಾಗದಲ್ಲಿ ಸಾಕಷ್ಟಿದೆ. ಹೀಗಾಗಿ ತಮಿಳುನಾಡಿನಂತೆಯೇ ಇಲ್ಲಿಯೂ ಬಿಜೆಪಿ ನೆಲೆಯೂರುವುದು ಅಷ್ಟು ಸುಲಭದ ವಿಚಾರವಾಗಿರಲಿಲ್ಲ. ಇದಕ್ಕೆ ಈ ಹಿಂದಿನ ಚುನಾವಣೆಗಳು ಸಾಕಷ್ಟು ಸಾಕ್ಷಿ ಒದಗಿಸುತ್ತವೆ.

ವಿ. ನಾರಾಯಣ ಸ್ವಾಮಿ ಅವರ ಕಾಂಗ್ರೆಸ್ ಸರ್ಕಾರಕ್ಕೆ ಇಕ್ಕಟ್ಟಾದ ಪರಿಸ್ಥಿತಿ ನಿರ್ಮಾಣ ಮಾಡುವ ಸಲುವಾಗಿಯೇ ತಮಿಳುನಾಡಿನ ಬಿಜೆಪಿ ನಾಯಕಿ ತಮಿಳಿಸೈ ಸೌಂದರ್ ರಾಜನ್ ಅವರನ್ನು ಪುದುಚೇರಿಯ ಹೊಸ ಗೌರ್ನರ್ ಆಗಿ ನೇಮಕ ಮಾಡಲಾಗಿತ್ತು. ತಮಿಳಿಸೈ ಸೌಂದರ್ ರಾಜನ್ ಒಂದೆಡೆ ತಮ್ಮ ಅಧಿಕಾರವನ್ನು ಬಳಸಿಕೊಂಡು ವಿ. ನಾರಾಯಣ ಸ್ವಾಮಿ ಸರ್ಕಾರವನ್ನು ಇನ್ನಿಲ್ಲದಂತೆ ಕಾಡಿದರೆ, ಮತ್ತೊಂದೆಡೆ ಬಿಜೆಪಿ ಸದ್ದಿಲ್ಲದೆ ತಮ್ಮ ಎಂದಿನ ಸಾಂಪ್ರದಾಯಿಕ ಆಪರೇಷನ್ ಕಮಲವನ್ನು ಜಾರಿಗೆ ತಂದಿತ್ತು. (ಇದಕ್ಕೂ ಮೊದಲು ರಾಜ್ಯಪಾಲರಾಗಿದ್ದ ಕಿರಣ ಬೇಡಿ ಮತ್ತು ನಾರಾಯಣಸ್ವಾಮಿಯವರ ಸರ್ಕಾರಕ್ಕೂ ಹಲವು ಜಟಾಪಟಿಗಳಾಗಿದ್ದವು). 6ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಕೊಂಡುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಪರಿಣಾಮ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಇದೀಗ ಬಿಜೆಪಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ರುಚಿ ಅನುಭವಿಸಲು ಮುಂದಾಗಿದೆ. ಆದರೆ, ಇದಕ್ಕೂ ಸಹ ಕಾಂಗ್ರೆಸ್ ಪಕ್ಷದ ಎಡವಟ್ಟಿನ ನಿರ್ಣಯಗಳೇ ಕಾರಣ ಎಂದರೆ ತಪ್ಪಾಗಲಾರದು.

ಬಿಜೆಪಿ ವರದಾನವಾದ ಕಾಂಗ್ರೆಸ್ ಎಡವಟ್ಟು
30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪುದುಚೇರಿಯಲ್ಲಿ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ನಂಬರ್ 16. ಈ ಪೈಕಿ ಬಿಜೆಪಿ 6 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ ಮೈತ್ರಿ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ 10ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿ ಮೈತ್ರಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಆದರೆ, ಸ್ಥಳೀಯ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಅಧಿಕಾರಕ್ಕೆ ಏರುತ್ತಿರುವುದು ಇದೇ ಮೊದಲೇನಲ್ಲ. ಎನ್. ರಂಗಸ್ವಾಮಿ ಕಾಂಗ್ರೆಸ್‌ನಿಂದ ಹೊರಬಂದು 2011ರಲ್ಲೇ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಪಕ್ಷ ಕಟ್ಟಿ, ಮೊದಲ ಚುನಾವಣೆಯಲ್ಲೇ ಬಹುಮತಗಳಿಸಿ ಅಧಿಕಾರಕ್ಕೆ ಬಂದಿದ್ದರು. ಇದೀಗ ಐದನೇ ಬಾರಿ ಸಿಎಂ ಪಟ್ಟಕ್ಕೆ ಏರಿದ್ದಾರೆ. ಅವರು ಎನ್‌ಡಿಎ ಮೈತ್ರಿಯ ಭಾಗವಾಗಿರುವ ಕಾರಣವಷ್ಟೆ ಇಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿದಂತಾಗಿದೆ. ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಹೆಸರಿನಲ್ಲಿ ಬಿಜೆಪಿಗೆ ಮತ ಲಭಿಸಿದೆ ಎಂದರೂ ತಪ್ಪಾಗಲಾರದು.

ಅಸಲಿಗೆ ಎನ್. ರಂಗಸ್ವಾಮಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ. ಹಲವು ದಶಕಗಳಿಂದ ಅಧಿಕಾರ ಡಿಎಂಕೆ ಮತ್ತು ಎಡಿಎಂಕೆ ಕೈಲಿದ್ದ ಪುದುಚೇರಿಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎನ್. ರಂಗಸ್ವಾಮಿ ಪ್ರಮುಖ ಕಾರಣಕರ್ತರಾಗಿದ್ದರು. 2001ರಿಂದ 2008ರವರೆಗೆ ಎರಡು ಅವಧಿಗೆ ಸಿಎಂ ಆಗಿದ್ದ ಅವರು ಹಲವು ಜನಪ್ರಿಯ ಯೋಜನೆಗಳ ಮೂಲಕ ಮನೆಮಾತಾಗಿದ್ದರು. ಒಂದು ಹಂತದಲ್ಲಿ ಪುದುಚೇರಿಯ ಕಾಮರಾಜ್, ಜನರ ಸಿಎಂ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಪುದುಚೇರಿ ಮಟ್ಟಿಗೆ ಅವರನ್ನು ಅಜಾತಶತ್ರು ಎಂದೇ ಕರೆಯಲಾಗಿತ್ತು.

ಆದರೆ, 2008ರಲ್ಲಿ ಪಕ್ಷದ ಆಂತರಿಕ ರಾಜಕಾರಣದ ನೆಪ ಹೇಳಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲಾಗಿತ್ತು. ಇದರಿಂದ ಕುಪಿತಗೊಂಡ ರಂಗಸ್ವಾಮಿಯವರು ಆಲ್ ಇಂಡಿಯಾ ಎನ್. ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿ ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ಅಧಿಕಾರ ಹಿಡಿದಿದ್ದು ಇಂದು ಇತಿಹಾಸ. ಈ ಘಟನೆಯ ನಂತರ ಕಾಂಗ್ರೆಸ್‌ನಿಂದ ಶಾಶ್ವತವಾಗಿ ದೂರವಾದ ಎನ್. ರಂಗಸ್ವಾಮಿ ಎನ್‌ಡಿಎ ಜೊತೆ ಮೈತ್ರಿ ಸಾಧಿಸಿದ್ದರು. ಇಂದು ಅವರ ಮೂಲಕವೇ ಕೋಮುವಾದಿ ಬಿಜೆಪಿ ದ್ರಾವಿಡ ನಾಡಿನ ಪಕ್ಕದಲ್ಲೇ ಜಂಡಾ ಹಾರಿಸುವಂತಾದದ್ದು ಮಾತ್ರ ವಿಪರ್ಯಾಸ.


ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....